Homeನಿಜವೋ ಸುಳ್ಳೋಗಡಿ ವಿವಾದ: ವಾಟ್ಸಾಪ್‌ ಮೆಸೇಜನ್ನು ನಂಬಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’

ಗಡಿ ವಿವಾದ: ವಾಟ್ಸಾಪ್‌ ಮೆಸೇಜನ್ನು ನಂಬಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’

- Advertisement -
- Advertisement -

ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿಕನಿಷ್ಠ 30 ಚೀನೀ ಸೈನಿಕರು ಕೊಲ್ಲಲ್ಪಟ್ಟಿದ್ದಾರೆ ಎಂಬ ವಾಟ್ಸಾಪ್ ಫಾರ್ವರ್ಡ್ ಮೆಸೇಜಿನ ಸುದ್ದಿ ಮೂಲವನ್ನು ಇಟ್ಟುಕೊಂಡು ಇಂಗ್ಲಿಷ್ ಸುದ್ದಿ ಚಾನೆಲ್ “ಟೈಮ್ಸ್ ನೌ” ಸುದ್ದಿ ಮಾಡಿದೆ.

ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್ ಕೊಲ್ಲಲ್ಪಟ್ಟ ಚೀನೀ ಸೈನಿಕರ ಹೆಸರು ಹಾಗೂ ಸಾವಿಗೀಡಾದ ಸೈನಿಕರನ್ನು ಹೇಳಿದೆ ಎಂದು ಈ ಸುದ್ದಿಯೂ ಉಲ್ಲೇಖಿಸಿದೆ.

ಆದರೆ ಗ್ಲೋಬಲ್ ಟೈಮ್ಸ್‌ ಪತ್ರಿಕೆಯ ಪ್ರಧಾನ ಸಂಪಾದಕ ಚೀನೀ ಸೇನೆಗೆ ಸಾವುನೋವುಗಳಾಗಿದೆ ಎಂದು ದೃಪಡಿಸಿದ್ದಾರಾದರೂ ಯಾವುದೆ ಹೆಸರು ಮತ್ತು ಸಾವುನೋವುಗಳ ಸಂಖ್ಯೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ.

ನಂತರ ಎಚ್ಚೆತ್ತ ಟೈಮ್ಸ್ ನೌ ಚಾನೆಲ್ ”ಬಹುಶಃ ಮಾಹಿತಿಯು ’ನಕಲಿ ಫಾರ್ವರ್ಡ್’ ಆಗಿರಬಹುದು ಎಂದು ಉಲ್ಲೇಖಿಸಿದೆ.

ಆಗಿದ್ದೇನು?

ವೈರಲಾದ ಸಂದೇಶದಲ್ಲಿ ಗ್ಲೋಬಲ್ ಟೈಮ್ಸ್ ಈ ಲೇಖನವನ್ನು ಬುಧವಾರ 0:57:25 ಕ್ಕೆ ಪ್ರಕಟಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.

“ಭಾರತದೊಂದಿಗಿನ ಚೀನಾದ ಗಡಿಯ ರಕ್ಷಣೆಯನ್ನು ನೋಡಿಕೊಳ್ಳುವ ವೆಸ್ಟರ್ನ್ ಥಿಯೇಟರ್ ಕಮಾಂಡ್‌ನ ವಕ್ತಾರರು ಭಾರತೀಯ ಸೈನ್ಯದಿಂದ ಕೊಲ್ಲಲ್ಪಟ್ಟ 30 ಚೀನೀ ಸೈನಿಕರ ಹೆಸರನ್ನು ಬಿಡುಗಡೆ ಮಾಡಿದ್ದಾರೆ” ಎಂದು ಸಂದೇಶದಲ್ಲಿ ಬರೆಯಲಾಗಿದೆ.

ಈ ಸಂದೇಶವನ್ನು ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ವೈರಲಾದ ಸಂದೇಶದಲ್ಲಿ ಇರುವಂತೆ ಗ್ಲೋಬಲ್ ಟೈಮ್ಸ್ ಪತ್ರಿಕೆಯೂ ಈ ರೀತಿಯ ಯಾವುದೇ  ಸುದ್ದಿಯನ್ನು ಮಾಡಲಿಲ್ಲ ಎಂದು ಪತ್ರಿಕೆಯ ವೆಬ್‌ಸೈಟ್‌ನಲ್ಲಿ ನಮಗೆ ನೋಡಬಹುದಾಗಿದೆ. ಅಲ್ಲದೆ ಈ ಪತ್ರಿಕೆಯ ಟ್ವಿಟ್ಟರ್ ಖಾತೆಯಲ್ಲೂ ಅಂತಹ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಗ್ಲೋಬಲ್ ಟೈಮ್ಸ್‌ನ ಪ್ರಧಾನ ಸಂಪಾದಕ ಹೂ ಕ್ಸಿಜಿನ್ ಜೂನ್ 16 ರ ಮಂಗಳವಾರ ಟ್ವೀಟ್ ಮಾಡಿ “ಈ ಘಟನೆಯಲ್ಲಿ ಸಂಭವಿಸಿದ ಸಾವುನೋವುಗಳ ಅಧಿಕೃತ ಸಂಖ್ಯೆಯನ್ನು ಚೀನಾ ಸರ್ಕಾರ ಬಿಡುಗಡೆ ಮಾಡಿಲ್ಲ” ಎಂದು ಉಲ್ಲೇಖಿಸಿದ್ದಾರೆ.

ಟ್ವಿಟ್ಟರ್ ಆರ್ಕೈವ್‌ನಲ್ಲೂ ಗ್ಲೋಬಲ್‌ ಟೈಮ್ಸ್‌ ಈ ಸುದ್ದಿ ಹಾಕಿರುವ ದಾಖಲೆಗಳು ಲಭ್ಯವಿಲ್ಲ. ಆದರೆ ಪ್ರತೀ ಖಾತೆಯ ಪ್ರತೀ ವಿಷಯವೂ ಈ ಆರ್ಕೈವ್‌ನಲ್ಲಿ ದಾಖಲಾಗಿ ಇರುವುದಿಲ್ಲ ಎಂಬುವುದನ್ನು ನಾವು ಇಲ್ಲಿ ನೆನಪಿಟ್ಟುಕೊಳ್ಳಬೇಕಾಗಿದೆ.

ಘಟನೆಯಲ್ಲಿ ಇಂತಿಷ್ಟು ಚೀನಾ ಸೈನಿಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೂಡಾ ಇತರ ಸುದ್ದಿ ಮೂಲದಿಂದಾಗಿದೆ, ಇದಕ್ಕೆ ಯಾವುದೇ ಯಾವುದೇ ಅಧಿಕೃತ ಅಂಕಿ ಅಂಶಗಳಿರುವ ಸುದ್ದಿ ಮೂಲಗಳಿಲ್ಲ.


ಓದಿ: ಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...