Homeಮುಖಪುಟತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

- Advertisement -
- Advertisement -

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಹುದ್ದೆ ಮಾಜಿ ಶಾಸಕ ಬಿ. ಸುರೇಶ್ ಗೌಡ ಅವರಿಗೆ ದಕ್ಕಿದೆ. ರಾಜ್ಯಾಧ್ಯಕ್ಷರರಾದ ನಳೀನ್ ಕುಮಾರ್ ಕಟೀಲ್‌ರವರು ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಅಧ್ಯಕ್ಷ ಹುದ್ದೆ ನೀಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದ ಹೆಬ್ಬಾಕ ರವಿಗೆ ಜಿಲ್ಲಾ ಬಿಜೆಪಿ ಹುದ್ದೆ ಕೈತಪ್ಪಿದ್ದು ಸಂಸದ ಜಿ.ಎಸ್. ಬಸವರಾಜು ಮತ್ತು ಬೆಂಬಲಿಗರಿಗೆ ತೀವ್ರ ಹಿನ್ನಡೆಯಾಡಿದೆ.

ಅವಿಭಜಿತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೆನೆಟ್ ಮತ್ತು ಸಿಂಡಿಕೇಟ್ ಕೆಲಸ ನಿರ್ವಹಿಸಿದ್ದ ಬಿ.ಸುರೇಶ್ ಜೀವರಾಜ್ ಆಳ್ವ ಮೂಲಕ ಬಿಜೆಪಿಗೆ ಬಂದವರು. ಸೆನೆಟ್  ಹಾಗೂ ಸಿಂಡಿಕೇಟ್‌ ಸದಸ್ಯರಾಗಿದ್ದ ವೇಳೆ ಸುರೇಶ್ ಮೇಲೆ ಅಂಕಪಟ್ಟಿ ಹಗರಣದ ಆಪಾದನೆ ಇತ್ತು. ರಾಜಕೀಯ ಪ್ರವೇಶದ ನಂತರ ಆ ಆರೋಪಗಳು ಹಿನ್ನೆಲೆಗೆ ಸರಿದವು.

ಬಿಜೆಪಿ ಸೇರ್ಪಡೆಯಾದ ಮೇಲೆ ಬಿ.ಸುರೇಶ್ ಜೊತೆ ಗೌಡ ಹೆಸರು ಸೇರಿಕೊಂಡಿತು. ಬೆಂಗಳೂರಿನಿಂದ ನೇರ ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಬಂದರು. ದೇವಾಲಯಗಳ ನಿರ್ಮಾಣಕ್ಕೆ ಹಣ ಸುರಿದರು. ಎಲ್ಲಾ ಹಳ್ಳಿ- ಗ್ರಾಮಗಳಿಗೆ ತೆರಳಿ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದರು. ಜನರು ಕೂಡ ಸುರೇಶ್ ಗೌಡ ಹಣ ಸುರಿಯುತ್ತಿರುವುದನ್ನು ನೋಡಿ ತಮ್ಮತಮ್ಮ ಊರುಗಳಿಗೆ ಕರೆಸಿಕೊಂಡರು.

ಹಣ ಎಲ್ಲಿಂದ ಬಂತು?  ಹೇಗೆ ಸಂಪಾದನೆ ಮಾಡಿದರು? ಎಂದು ಯಾರೂ ಪ್ರಶ್ನಿಸಲಿಲ್ಲ. ಕುಣಿಗಲ್ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬಹುತೇಕ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿದರು. ಮುಂದಿನ ಚುನಾವಣೆಗೆ ವೇದಿಕೆ ಸಿದ್ದಮಾಡಿಕೊಂಡರು. ಹಣ ಇರುವಲ್ಲಿ ಜನ ಎಂಬಂತಹ ಪರಿಸ್ಥಿತಿ ನಿರ್ಮಾಣವಾಯಿತು. ಸುರೇಶ್ ಗೌಡ ಅಂದರೆ ಕೊಡುಗೈ ದಾನಿ ಎಂಬಷ್ಟರ ಮಟ್ಟಿಗೆ ಹೆಸರಾದರು.

2003ರಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಸೋಲು ಕಂಡ ಸುರೇಶ್ ಗೌಡ ಮತ್ತೆ ದೇವಾಲಯಗಳಿಗೆ ಹಣ ನೀಡುವುದನ್ನು ಮುಂದುವರಿಸಿದರು. ಕ್ಷೇತ್ರಾದ್ಯಂತ ಸುತ್ತಿದರು. ಪ್ರಚಾರವನ್ನು ಮುಂದುವರಿಸಿದರು; ಅಷ್ಟುಹೊತ್ತಿಗೆ ಕ್ಷೇತ್ರ ಪುನರ್ ವಿಂಗಡಣೆಯಾಗಿ ತುಮಕೂರು ಗ್ರಾಮಾಂತರ ಕ್ಷೇತ್ರ ಹೊಸದಾಗಿ ಅಸ್ತಿತ್ವಕ್ಕೆ ಬಂತು. ಇದು ಸುರೇಶ್ ಗೌಡರ ಗೆಲುವಿಗೆ ಕಾರಣವಾಯಿತು.

2008ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಸುರೇಶ್‌ಗೌಡ ಗೆದ್ದರು. ತುಮಕೂರು ನಗರದಿಂದ ಸೊಗಡು ಶಿವಣ್ಣ ಅಯ್ಕೆಯಾದರು. ತಿಪಟೂರಿನ ಬಿ.ಸಿ.ನಾಗೇಶ್ ಸೋತರು.. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸುರೇಶ್‌ಗೌಡ ಅವರದ್ದೇ ಸದ್ದು. 2013ರ ಚುನಾವಣೆಯಲ್ಲೂ ಸುರೇಶ್ ಗೌಡ ಗೆದ್ದು ಬಂದರು. ರಸ್ತೆಗಳ ಅಭಿವೃದ್ಧಿ ಮಾಡಿದರು. ಜಿದ್ದಿನ ರಾಜಕಾರಣಕ್ಕೂ ನಾಂದಿ ಹಾಡಿದರು.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೌರಿಶಂಕರ್ ವಿರುದ್ದ ಸುರೇಶ್‌ಗೌಡ ಸೋಲು ಅನುಭವಿಸಿದರು. 2008ರಿಂದಲೇ ಆರಂಭವಾದ ಜಿದ್ದಾಜಿದ್ದಿನ ರಾಜಕಾರಣದಲ್ಲಿ ಸುರೇಶ್ ಗೌಡ ಮತ್ತು ಬಿ.ಸಿ.ಗೌರಿಶಂಕರ್ ನಡುವೆ ತೀವ್ರ ಪೈಪೋಟಿ ಶುರವಾಗಿದ್ದು ಇಂದಿಗೂ ನಿಂತಿಲ್ಲ. ಜೆಡಿಎಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಆರೋಪ-ಪ್ರತ್ಯಾರೋಪಗಳು ಮಾತ್ರ ನಿಂತಿಲ್ಲ.

ಇಂಥ ಹೊತ್ತಿನಲ್ಲಿ ಜಿಲ್ಲಾ ಬಿಜೆಪಿಗೆ ಸುರೇಶ್ ಗೌಡರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ದುಸ್ಸಾಹಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರು ತೀರ್ಮಾನ ಮಾಡಿದಂತಿದೆ. ಒಂದು ಕಡೆ ಕಾಂಗ್ರೆಸ್ ನಿಂದ ವಲಸೆ ಬಂದಿರುವ ಸಂಸದ ಜಿ.ಎಸ್. ಬಸವರಾಜು ಅವರ ಬಲ ಕುಸಿಯುವಂತೆ ಮಾಡುವುದು ಮತ್ತು ಜೆಡಿಎಸ್ ಶಾಸಕ ಗೌರಿಶಂಕರ್ ಬೆಳವಣಿಗೆಯನ್ನು ನಿಯಂತ್ರಿಸುವುದು ಸುರೇಶ್‌ಗೌಡ ನೇಮಕದ ಉದ್ದೇಶ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾಜಿ ಸಚಿವ ಸೊಗಡು ಶಿವಣ್ಣ ಜೊತೆಗೆ ಗುರುತಿಸಿಕೊಂಡಿದ್ದ ಬಿ.ಸುರೇಶ್‌ಗೌಡ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿರುವುದು ಸಂಸದ ಬಸವರಾಜು ಬೆಂಬಲಿಗರಿಗೆ ನುಂಗಲಾರದ ತುತ್ತಾಗಿದೆ. ಇದು ಒಂದು ರೀತಿಯಲ್ಲಿ ಸೊಗಡು ಶಿವಣ್ಣಗೆ ಗೆಲುವು ತಂದುಕೊಟ್ಟಂತಾಗಿದೆ. ರಾಜ್ಯ ಬಿಜೆಪಿ ಉರುಳಿಸಿರುವ ಈ ದಾಳ ಯಾರನ್ನು ಕಟ್ಟಿಹಾಕಲಿದೆಯೋ ನೋಡಬೇಕು.


ಇದನ್ನೂ ಓದಿ: ಸಹಪಂಕ್ತಿ ಭೋಜನ ಮಾಡಿ – ಬಿಜೆಪಿ ಮುಖಂಡ ಸೊಗಡು ಶಿವಣ್ಣಗೆ ಕುರುಬ ಸಮುದಾಯದ ಸವಾಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...