Homeಮುಖಪುಟ'She Man': ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

- Advertisement -
- Advertisement -

ಟ್ರಾನ್ಸ್‌ಜೆಂಡರ್ ಹಕ್ಕುಗಳನ್ನು ಉತ್ತೇಜಿಸುವ ಉದ್ದೇಶದಿಂದ, ನೋಯ್ಡಾ ಮೆಟ್ರೋ ರೈಲು ನಿಗಮವು ಆಕ್ವಾ ಸಾಲಿನಲ್ಲಿರುವ ಸೆಕ್ಟರ್ 50 ನಿಲ್ದಾಣವನ್ನು ‘She Man’ ಎಂದು ಮರುನಾಮಕರಣ ಮಾಡುವುದಾಗಿ ಇತ್ತೀಚೆಗೆ ಘೋಷಿಸಿತು.

ಆದರೆ ದೆಹಲಿ-ಎನ್‌ಸಿಆರ್ ಪ್ರದೇಶದ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಮೆಟ್ರೊ ನಿಗಮವು ತನ್ನ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದು, ಇದನ್ನು “ಟ್ರಾನ್ಸ್‌ಫೋಬಿಕ್” ಮತ್ತು “ಸಂವೇದನೆಯಿಲ್ಲದ” ಕ್ರಮ ಎಂದು ದೂರಲಾಗಿದೆ.

ಡಾ. ಅಕ್ಸಾ ಶೇಖ್, ತನ್ನನ್ನು ತಾನು ಟ್ರಾನ್ಸ್ ಮಹಿಳೆ ಎಂದು ಗುರುತಿಸಿಕೊಳ್ಳುತ್ತಾಳೆ, ಮೆಟ್ರೊ ನಿಲ್ದಾಣವನ್ನು ‘She Man’ ಎಂದು ಮರುನಾಮಕರಣ ಮಾಡುವ ನಿರ್ಧಾರವು ಸಮುದಾಯಕ್ಕೆ ಅವಹೇಳನಕಾರಿ ಎಂಬುದು ಅವರ ಅಭಿಪ್ರಾಯವಾಗಿದೆ.

She Man ಎಂಬ ಪದವು ಅವಹೇಳನಕಾರಿಯಾಗಿದೆ. ಇದರರ್ಥ ಗಂಡು ಮತ್ತು ಹೆಣ್ಣಿನ ಮಿಶ್ರಣವಾಗಿರುವವರು ಎಂಬುದಾಗಿದೆ. ಅರ್ಧ ಗಂಡು ಮತ್ತು ಅರ್ಧ ಹೆಣ್ಣು ಎನ್ನುವುದು ಸರಿಯಲ್ಲ. ಮತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ತಮ್ಮನ್ನು ಹೇಗೆ ವ್ಯಾಖ್ಯಾನಿಸಲು ಬಯಸುತ್ತಾರೆ ಎಂಬ ಮನೋಭಾವಕ್ಕೆ ವಿರುದ್ಧವಾಗಿದೆ ಎನ್ನುತ್ತಾರೆ ಡಾ.ಅಕ್ಸಾ ಶೇಖ್.

She Male, She Man, Lady Boy ನಂತಹ ಪದಗಳನ್ನು ಸಮುದಾಯದ ಸದಸ್ಯರ ವಿರುದ್ಧ ಅಸಭ್ಯವಾಗಿ ಬಳಸಲಾಗುತ್ತಿದೆ. ಸರಳವಾದ ಗೂಗಲ್ ಹುಡುಕಾಟವು ಇದನ್ನು ಯಾರಿಗಾದರೂ ತಿಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಒಮ್ಮೆ ದಕ್ಷಿಣ ಭಾರತದಲ್ಲಿ ಸಮುದಾಯವು ಅಂಗೀಕರಿಸಿದ್ದ ತಿರುನಂಗೈ (ಪುರುಷ ಮತ್ತು ಮಹಿಳೆ) ಎಂಬ ಪದವನ್ನು 2019 ರಲ್ಲಿ ಹಿಂತೆಗೆದುಕೊಳ್ಳಲಾಯಿತು. ಹಿಂದಿ ಅನುವಾದವು ‘ಉಭೈಲಿಂಗಿ’ ಪದವನ್ನು ಬಳಸುತ್ತದೆ. ಇದು ಇಂಟರ್‌ಸೆಕ್ಸ್ ವ್ಯಕ್ತಿಗಳಿಗೆ ಸೂಕ್ತವಾಗಬಹುದು ಆದರೆ ಖಂಡಿತವಾಗಿಯೂ ಇಡೀ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಅಲ್ಲ ಎಂಬುದು ಅವರ ಅಭಿಪ್ರಾಯ.

ನಿಲ್ದಾಣವನ್ನು ಮರುಹೆಸರಿಸುವ ಉದ್ದೇಶವೇನು?

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ನೋಯ್ಡಾ ಮೆಟ್ರೋ ಅಧಿಕಾರಿಗಳು, “ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ” ಸಂಬಂಧಿಸಿದಂತೆ ನಿಲ್ದಾಣದ ಸಿಬ್ಬಂದಿಗೆ ಸಂವೇದನೆ ಮತ್ತು ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

“2011 ರ ಜನಗಣತಿ ಪ್ರಕಾರ ಭಾರತದಲ್ಲಿ 4.9 ಲಕ್ಷ ಟ್ರಾನ್ಸ್‌ಜೆಂಡರ್‌ಗಳಿದ್ದಾರೆ. ಅದರಲ್ಲಿ 30,000-35,000 ಜನರು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಉಳಿದಿದ್ದಾರೆ. ಟ್ರಾನ್ಸ್‌ಜೆಂಡರ್ ಸಮುದಾಯದ ಅರ್ಥಪೂರ್ಣ ಸೇರ್ಪಡೆ ಮತ್ತು ಭಾಗವಹಿಸುವಿಕೆಯನ್ನು ನೀಡುವಲ್ಲಿ ಈ ಕ್ರಮವು ಒಂದು ಪ್ರಮುಖ ಹೆಜ್ಜೆಯಾಗಿದೆ. ನಿಲ್ದಾಣದ ಹೆಸರಿಡುವುದು ಜಾಗೃತಿ ಮತ್ತು ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ”ಎಂದು ಎನ್‌ಎಂಆರ್‌ಸಿಯ ಎಂಡಿ ರಿತು ಮಹೇಶ್ವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಸರಿನ ಬಗ್ಗೆ ಕೇಳಿದಾಗ, ‘She Man’ ಎಂಬ ಪದವನ್ನು ನಿರ್ದೇಶಕರ ಮಂಡಳಿ ಮತ್ತು ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಎನ್‌ಜಿಒಗಳು ಸೇರಿದಂತೆ ಹಲವರಿಂದ ಸೂಚಿಸಲ್ಪಟ್ಟಿದೆ ಎಂದು ಹೇಳಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ; ಸಫೂರಾ ಜರ್ಗರ್: ಗರ್ಭಿಣಿ ಮಾನದಂಡದಡಿ ಜಾಮೀನು ನೀಡಲಾಗುವುದಿಲ್ಲವೆಂದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...