Homeಮುಖಪುಟಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

ಬಿಜೆಪಿ ಕೌನ್ಸಿಲರ್ ದೆಹಲಿ ಗಲಭೆಯನ್ನು ಮುನ್ನೆಡೆಸಿದ್ದರು: ಪ್ರತ್ಯಕ್ಷದರ್ಶಿಯ ದೂರು

- Advertisement -
- Advertisement -

ಮುಸ್ಲಿಮರನ್ನು ತೊಡೆದುಹಾಕಿ ಎಂದು ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಈಶಾನ್ಯ ದೆಹಲಿಯ ಭಾಗೀರಥಿ ವಿಹಾರ್‌ನಲ್ಲಿ ನಡೆದ ಕೋಮು ಹಿಂಸಾಚಾರದ ಸಂದರ್ಭದಲ್ಲಿ ಆದೇಶ ನೀಡಿದ್ದರು. ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂದು ಆ ಪ್ರದೇಶದ ನಿವಾಸಿಗಳೊಬ್ಬರು ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ವರ್ಷದ ಫೆಬ್ರವರಿ ಕೊನೆಯ ವಾರದಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗಳ ಕುರಿತ ಚಾರ್ಜ್‌‌ಶೀಟ್‌ಗಳಲ್ಲಿ ಬಿಜೆಪಿ ಮುಖಂಡರನ್ನು ಹೊರತುಪಡಿಸಿ ಉಳಿದವರನ್ನು ಸೇರಿಸುತ್ತಿರುವ ಪೊಲೀಸರ ಕ್ರಮಕ್ಕೆ ತದ್ವಿರುದ್ಧವಾಗಿ ಈ ದೂರು ದನಿಯೆತ್ತಿದೆ.

ಸ್ಥಳೀಯ ಬಿಜೆಪಿ ಮುಖಂಡರು ಗಲಭೆಗೆ ಕುಮ್ಮಕ್ಕು ನೀಡಿದ್ದರು ಎಂದು ಸ್ಥಳೀಯ ನಿವಾಸಿಗಳು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಲವು ದೂರುಗಳಲ್ಲಿ ಬಿಜೆಪಿ ನಾಯಕರಾದ ಕರವಾಲ್ ನಗರ ಶಾಸಕ ಮೋಹನ್ ಸಿಂಗ್ ಬಿಶ್ತ್, ಮುಸ್ತಾಬಾದ್ ಮಾಜಿ ಶಾಸಕ ಜಗದೀಶ್ ಪ್ರಧಾನ್, ಉತ್ತರ ಪ್ರದೇಶದ ಶಾಸಕ ನಂದ್ ಕಿಶೋರ್ ಗುಜ್ಜರ್, ದೆಹಲಿ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಮತ್ತು ಸ್ವಯಂ ಘೋಷಿತ ಹಿಂದುತ್ವ ನಾಯಕಿ ರಾಗಿಣಿ ತಿವಾರಿ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ದೆಹಲಿ ಪೊಲೀಸರ ಚಾರ್ಜ್‌ಶೀಟ್‌ಗಳು ಕಪಿಲ್ ಮಿಶ್ರಾ ಅವರ ಹೆಸರನ್ನು ಹೇಗೆ ಬಿಟ್ಟುಬಿಟ್ಟಿವೆ ಎಂಬುದರ ಬಗ್ಗೆ ಈಗಾಗಲೇ ಸಾಕಷ್ಟು ವರದಿಯಾಗಿದೆ. ರಾಗಿಣಿ ತಿವಾರಿ ಅವರು ಗುಂಡುಗಳನ್ನು ಹಾರಿಸಿದರು ಮತ್ತು ಜನಸಮೂಹವನ್ನು ಹೇಗೆ ಪ್ರಚೋದಿಸಿದರು ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ತಿಳಿಸಿದ್ದಾರೆ.


ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌


ಈ ಭಾಗವಾಗಿ, ಗಲಭೆಯ ಸಂದರ್ಭದಲ್ಲಿ ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಜೋಹ್ರಿಪುರದ ಬಿಜೆಪಿ ಕೌನ್ಸಿಲರ್ ಕನ್ಹಯ್ಯ ಲಾಲ್ ಗಲಭೆಯನ್ನು ಮುನ್ನೆಡಿಸಿದ್ದರು ಎಂದು ದೂರಲಾಗಿದೆ. ಈ ಕುರಿತು ಮಾರ್ಚ್ 11 ರಂದು ಗೋಕುಲ್ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹಿಂಸಾಚಾರದ ಮೊದಲ ದಿನವಾದ ಫೆಬ್ರವರಿ 24 ರಂದು ಭಾಗೀರತಿ ವಿಹಾರ್‌ನ ಗಾಲಿ ಸಂಖ್ಯೆ 1/3 ರಲ್ಲಿ “ಜೈ ಶ್ರೀ ರಾಮ್”, “ಆಗ್ ಲಾಗಾವೊ” “ಮಾರೊ” ಎಂದು ಘೋಷಣೆಗಳನ್ನು ಕೂಗುತ್ತಾ ಕನ್ಹಯ್ಯ ಲಾಲ್ ಜನರನ್ನು ಪ್ರಚೋದಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ತಿಳಿಸಿದ್ದಾರೆ.

“24.02.2020 ರಂದು ನಾನು ನನ್ನ ಮನೆಯಲ್ಲಿದ್ದೆ. ರಾತ್ರಿ 8-9 ರ ಸುಮಾರಿಗೆ ನಾನು ದೊಡ್ಡ ಶಬ್ದ ಮತ್ತು ಗದ್ದಲವನ್ನು ಕೇಳಿ ಮನೆಯಿಂದ ಹೊರಬಂದೆ. ಪಾಲ್ ಚೌಕ್‌ನ ಶಿವ ಮಂದಿರದ ಕಡೆಗೆ ಸುಮಾರು 100-150 ಜನರು ‘ಜೈ ಶ್ರೀ ರಾಮ್’, ‘ಕಾ ** ಒ ಕೋ ಸಬಕ್ ಸಿಖಾವೊ’ (ಮುಸ್ಲಿಮರಿಗೆ ಪಾಠ ಕಲಿಸಿ) ‘ಆಗ್ ಲಗಾವೊ (ಬೆಂಕಿ ಹಚ್ಚಿ)’ ಎಂದು ಜಪಿಸುತ್ತಿರುವುದನ್ನು ನಾನು ನೋಡಿದೆ. ‘ಮಾರೊ (ಕೊಲ್ಲು)’ ಎಂದು ಕೂಗುತ್ತಾ
ಜನಸಮೂಹವು ಕತ್ತಿಗಳು, ತ್ರಿಶೂಲಗಳು, ದೊಡ್ಡ ಕೊಡಲಿಗಳು ಮತ್ತು ಪಿಸ್ತೂಲ್‌ಗಳನ್ನು ಹೊತ್ತೊಯ್ಯುತ್ತಿತ್ತು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಜನಸಮೂಹವನ್ನು ಮುನ್ನಡೆಸುತ್ತಿದ್ದ ಯೋಗೇಂದ್ರ ಜೀನ್ಸ್ವಾಲಾ ಮತ್ತು ಕೌನ್ಸಿಲರ್ ಕನ್ಹಯ್ಯ ಲಾಲ್ ಅವರನ್ನು ನಾನು ನೋಡಿದಾಗ ಕನ್ಹಯ್ಯ ಲಾಲ್ ಜನಸಮೂಹವನ್ನು ಯೋಗೇಂದ್ರ ಜೀನ್ಸ್ವಾಲಾ ಅವರ ಅಂಗಡಿಯ ಕಡೆಗೆ ಕರೆತಂದರು ಮತ್ತು ಅವರು ಅಲ್ಲಿಯೇ ನಿಲ್ಲಿಸಿದರು. ಇಡೀ ಜನಸಮೂಹ ಜೋರಾಗಿ ಘೋಷಣೆಗಳನ್ನು ಕೂಗಲಾರಂಭಿಸಿತು. ತಮ್ಮ ಬೀದಿಯ ನಿವಾಸಿಗಳು ತಮ್ಮ ಮನೆಗಳನ್ನು ರಕ್ಷಿಸಲು ರಾತ್ರಿಯಿಡೀ ಕಾವಲು ಕಾಯುತ್ತಿದ್ದರು ಎಂದು ದೂರುದಾರ ನೆನಪಿಸಿಕೊಳ್ಳುತ್ತಾರೆ.

ಆದರೆ ಮಾರ್ಚ್‌ 11 ರಂದೇ ಭಾಗೀರಥಿ ವಿಹಾರ್‌ನ ಸ್ಥಳೀಯ ನಿವಾಸಿಗಳು ದೂರು ಸಲ್ಲಿಸಿದರೂ ಈ ಕುರಿತು ತನಿಖೆಯಾಗಲಿ, ಚಾರ್ಜ್‌‌ಶೀಟ್‌ನಲ್ಲಿ ಬಿಜೆಪಿ ಮುಖಂಡರ ಹೆಸರನ್ನಾಗಲಿ ಪೊಲೀಸರು ಕೈಬಿಟ್ಟಿದ್ದು ಆಶ್ಚರ್‍ಯ ಮೂಡಿಸುತ್ತಿದ್ದು, ಪೊಲೀಸರು ಸ್ಪಷ್ಟವಾಗಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ದೆಹಲಿ ಚುನಾವಣೆ: ಬಿಜೆಪಿಯ ಕಪಿಲ್ ಮಿಶ್ರಾಗೆ 48 ಗಂಟೆಗಳ ಕಾಲ ಪ್ರಚಾರ ನಿಷೇಧ ಮಾಡಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...