Homeಮುಖಪುಟಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

ಶೇ.50 ರಷ್ಟು ಬೆಲೆ ಕುಸಿತದಿಂದ ಸಂಕಷ್ಟದಲ್ಲಿ ರೇಷ್ಮೆ ಬೆಳೆಗಾರರು: ತಿರುಗಿ ನೋಡದ ಸರ್ಕಾರ

- Advertisement -
- Advertisement -

ಪ್ರಪಂಚದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಷ್ಟ್ರಗಳಲ್ಲಿ ಭಾರತಕ್ಕೆ ಎರಡನೇ ಸ್ಥಾನ. ಇನ್ನು ಭಾರತದಲ್ಲಿಯೇ ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ರಾಜ್ಯ ಕರ್ನಾಟವಾಗಿದೆ. 2018-19ರಲ್ಲಿ ಉತ್ಪಾದನೆಯಾದ 35,261 ಮೆಟ್ರಿಕ್ ಟನ್ ರೇಷ್ಮೆಯಲ್ಲಿ ಭಾರತದ ಶೇಕಡಾ 32 ರಷ್ಟು ಕೊಡುಗೆಯನ್ನು ಕರ್ನಾಟಕವೇ ನೀಡಿದೆ. ಅದೇ ರೀತಿ ಏಷ್ಯಾದಲ್ಲಿಯೇ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಕರ್ನಾಟಕದ ರಾಮನಗರದಲ್ಲಿದೆ. ಸಾವಿರಾರು ರೈತರಿಗೆ ಆಸೆಯಾಗಿದ್ದು ಅದು ಈಗ ಕಣ್ಣೀರಿನ ಕತೆ ಹೇಳುತ್ತಿದೆ.

ಹಾವೇರಿ ಜಿಲ್ಲೆಯ ಹಂದಿಗನೂರಿನ ನಿಖಿರಪ್ಪ ಗಡಿಯಪ್ಪ ಅವರು ಮೇ ತಿಂಗಳ ಕೊನೆಯಲ್ಲಿ ಸುಮಾರು 250 ಕೆಜಿ ರೇಷ್ಮೆ ತೆಗೆದುಕೊಂಡು ಟೆಂಪೊದಲ್ಲಿ ರಾಮನಗರಕ್ಕೆ ಪ್ರಯಾಣ ಬೆಳೆಸಿದರು. ಸತತ 11 ಗಂಟೆಗಳ ತಡೆರಹಿತ 370 ಕಿಲೋಮೀಟರ್ ಪ್ರಯಾಣದ ಸಮಯದಲ್ಲಿ ಲಾಕ್‌ಡೌನ್‌ ಕಾರಣಕ್ಕೆ ಅವರಿಗೆ ದಾರಿಯುದ್ದಕ್ಕೂ ಆಹಾರ ಸಿಗಲಿಲ್ಲ. ಆದರೆ ಅವರ ಚಿಂತೆ ಆಹಾರದ್ದಾಗಿರಲಿಲ್ಲ ಬದಲಿಗೆ ರೇಷ್ಮೆಗೆ ಬೆಲೆ ಕಡಿಮೆಯಾಗಿದ್ದರೆ? ಎನ್ನುವ ಚಿಂತೆ ಅವರನ್ನು ಕಾಡುತ್ತಿತ್ತು.

ಕೊನೆಗೂ ಅವರ ಆತಂಕ ನಿಜವಾಯಿತು. ಅವರ ಕನಸುಗಳು ಕಮರಿ ಹೋದವು. ಏಕೆಂದರೆ ಅಷ್ಟೆಲ್ಲ ಕಷ್ಟಪಟ್ಟರೂ ಸಹ ಕೊನೆಗೆ ಅವರಿಗೆ ಸಿಕ್ಕಿದ್ದು ಪ್ರತಿ ಕೆಜಿಗೆ 270 ರೂನಂತೆ ಕೇವಲ 67,500 ರೂ ಮಾತ್ರ.

ಮಾರ್ಚ್ ಆರಂಭದಲ್ಲಿ, ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 550 ರೂ, ಮತ್ತು ಅಡ್ಡ-ತಳಿ ರೇಷ್ಮೆಗೆ ಸರಾಸರಿ 480 ರೂ ಇತ್ತು. ಮದುವೆಯ ಋತುವನ್ನು ಹೊರತುಪಡಿಸಿ ಸಾಮಾನ್ಯವಾಗಿ ಕೆಜಿ ಬಿವೊಲ್ಟೈನ್ ರೇಷ್ಮೆಗೆ ಸುಮಾರು 450-500 ರೂ ಮತ್ತು ಡ್ಡ-ತಳಿ ರೇಷ್ಮೆಗೆ ಸರಾಸರಿ 380-420 ರೂ ಇತ್ತು.

ನಮ್ಮ ಮನೆಯ ಹತ್ತು ಜನರು ರೇಷ್ಮೆ ಬೆಳೆಯಲು ತೊಡಗಿಸಿಕೊಂಡಿದ್ದೇವೆ. ಈಗ ಕೂಲಿ, ರೇಷ್ಮೆ ಹುಳು, ರಸಗೊಬ್ಬರ, ಸಾರಿಗೆ ಮತ್ತು ನಿರ್ವಹಣೆ ಸೇರಿ 48,000 ರೂ ಖರ್ಚು ಮಾಡಿದ್ದೆ. ಎಲ್ಲಾ ಕಳೆದರೆ ನಾನು ಕೇವಲ ರೂ. 20,000 ರೂ ಉಳಿಸುತ್ತೇನೆ ಅಷ್ಟೆ. “ನಾನು 2014 ರಿಂದ ಹಿಪ್ಪುನೇರಳೆ ಬೆಳೆಯಲು ಪ್ರಾರಂಭಿಸಿದೆ. ಈಗ ತೀವ್ರ ನಷ್ಟವಾದ್ದರಿಂದ ನಾನು ಪಡೆದಿರುವ ಸಾಲಗಳನ್ನು ಹೇಗೆ ಮರುಪಾವತಿಸುತ್ತೇನೆ ಎಂದು ನನಗೆ ತಿಳಿದಿಲ್ಲ”ಎಂದು 42 ವರ್ಷದ ಗಡಿಯಪ್ಪ ಹೇಳುತ್ತಾರೆ.

ಕೋವಿಡ್ -19 ಲಾಕ್‌ಡೌನ್ ರೇಷ್ಮೆ ಉದ್ಯಮವನ್ನು ತೀವ್ರವಾಗಿ ಬಾಧಿಸಿದೆ. ಬೆಲೆಗಳ ಕುಸಿತಕ್ಕೆ ಒಂದು ಕಾರಣವೆಂದರೆ ಸಂಪೂರ್ಣ ಬೇಡಿಕೆ-ಪೂರೈಕೆ ಸರಪಳಿಯ ಕಡಿತವಾಗಿದೆ. ಈ ಅವಧಿಯಲ್ಲಿ ಅನೇಕ ವಿವಾಹಗಳನ್ನು ಮುಂದೂಡಲಾಗಿದೆ, ಕಾರ್ಯಕ್ರಮಗಳು ರದ್ದಾಗಿವೆ ಮತ್ತು ಉಡುಪು ಮಳಿಗೆಗಳು ಸ್ಥಗಿತಗೊಂಡಿವೆ. ಆದ್ದರಿಂದ ರೇಷ್ಮೆಯ ಬೇಡಿಕೆ ತೀವ್ರವಾಗಿ ಕಡಿಮೆಯಾಗಿದೆ ಎಂದು ಮಾರುಕಟ್ಟೆ ಅಧಿಕಾರಿಗಳು ಮತ್ತು ಇತರರು ಹೇಳುತ್ತಾರೆ. ಆದರೆ ರೈತರು ಕಾಯಲು ಸಾಧ್ಯವಿಲ್ಲ. ಅವರು ಹಾಳಾಗುವ ಮುನ್ನವೇ ರೇಷ್ಮೆಯನ್ನು ಸಮಯಕ್ಕೆ ಸರಿಯಾಗಿ ಮಾರಾಟ ಮಾಡಬೇಕು.

ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ರಾಮನಗರ ಮಾರುಕಟ್ಟೆಯು ಮಾರ್ಚ್ 25 ರಿಂದ ಏಪ್ರಿಲ್ 1 ರವರೆಗೆ ಒಂದು ವಾರದವರೆಗೆ ಸ್ಥಗಿತಗೊಂಡಿತ್ತು ಎಂದು ಅಧಿಕಾರಿಗಳು ಹೇಳುತ್ತಾರೆ. ಇದು ಮತ್ತೆ ತೆರೆದ ನಂತರ, ಬಿವೊಲ್ಟೈನ್ ರೇಷ್ಮೆಯ ಸರಾಸರಿ ಬೆಲೆ ರೂ. ಪ್ರತಿ ಕಿಲೋಗ್ರಾಂಗೆ 330 ರೂ., ಮತ್ತು ಅಡ್ಡ-ತಳಿ ರೇಷ್ಮೆ ರೂ. ಪ್ರತಿ ಕಿಲೋಗೆ 310 ರೂ ಇತ್ತು.

ದೇಶಾದ್ಯಂತ ಲಾಕ್‌ಡೌನ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸಿದಾಗ ರೈತರು ರೇಷ್ಮೆ  ಬೆಲೆಗಳು ಮತ್ತೆ ಪುಟಿಯುವ ನಿರೀಕ್ಷೆಯಲ್ಲಿದ್ದರು. ಆದರೆ ಬೆಲೆಗಳು ಮತ್ತಷ್ಟು ಕಡಿಮೆಯಾದವು. ಮೇ ಕೊನೆಯ ವಾರದ ವೇಳೆಗೆ ಬಿವೊಲ್ಟೈನ್ ರೇಷ್ಮೆ ಸರಾಸರಿ ಬೆಲೆ ರೂ. 250 ಮತ್ತು ಕ್ರಾಸ್‌ಬ್ರೀಡ್ ಬೆಲೆ ಸರಿಸುಮಾರು ರೂ. 200ರೂ ಕುಸಿದಿದೆ.

ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಕರ್ನಾಟಕದಿಂದ ರೇಷ್ಮೆ ಸರಬರಾಜು ಆಗುತ್ತಿತ್ತು. ಆದರೆ ಲಾಕ್‌ಡೌನ್‌ ಕಾರಣದಿಂದ ಸಾರಿಗೆ ವ್ಯವಸ್ಥೆ ವ್ಯತ್ಯಯವಾದ್ದರಿಂದ ಬೇಡಿಕೆಯಲ್ಲಿ ಕುಸಿತವಾಗಿದೆ. ಅದರಿಂದ ಸಹಜವಾಗಿ ಬೆಲೆ ಕುಸಿದಿದೆ ಎಂದು ಉಪ ನಿರ್ದೇಶಕ ಮುನ್ಶಿ ಬಸಯ್ಯ ಹೇಳಿದ್ದಾರೆ.

“ಬೆಲೆಗಳು ಕಡಿಮೆ ಇರುವುದರಿಂದ ನಾನು ಒಂದು ದಿನವೂ ಕೆಲಸವನ್ನು ನಿಲ್ಲಿಸಲು ಸಾಧ್ಯವಿಲ್ಲ. ನನ್ನ ಕುಟುಂಬವನ್ನು ನಾನು ಹೇಗೆ ಪೋಷಿಸುತ್ತೇನೆ?” ಎಂದು ಗಡಿಯಪ್ಪ ಪ್ರಶ್ನಿಸುತ್ತಾರೆ. ಮುಂದಿನ ಬ್ಯಾಚ್‌ನ ರೇಷ್ಮೆ ತಯಾರಿಸಲು ಅವರೀಗ ಮತ್ತೆ ಸಾಲದ ಮೊರೆ ಹೋಗಬೇಕಾಗಿದೆ. 2019 ರಲ್ಲಿ ಶೇ 12 ರಷ್ಟು ಬಡ್ಡಿದರದಲ್ಲಿ ಸಹಕಾರಿ ಬ್ಯಾಂಕಿನಿಂದ 3.5 ಲಕ್ಷ ರೂ ಮತ್ತು ನಾಲ್ಕು ವರ್ಷಗಳ ಹಿಂದೆ ವಿಜಯ ಬ್ಯಾಂಕಿನಿಂದ ತೆಗೆದುಕೊಂಡ  ಶೇ 7 ರಷ್ಟು ಬಡ್ಡಿಗೆ 1.5 ಲಕ್ಷ ರೂ ಸಾಲವನ್ನು ಇನ್ನೂ ತೀರಿಸಿಲ್ಲಿ ಎಂದು ಅವರು ಹೇಳುತ್ತಾರೆ.

ಸರ್ಕಾರ ಏನದರೂ ಮಧ್ಯಪ್ರವೇಶಿಸಿದೆಯೇ? ಈ ರೈತರು ಏನು ಮಾಡಬೇಕು? ಈ ಪರಿಸ್ಥಿತಿ ಯಾವಾಗ ಸುಧಾರಿಸುತ್ತದೆ? ಈ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು?

ಕೃಪೆ: ರೂರಲ್‌ಇಂಡಿಯಾಆನ್‌ಲೈನ್‌.ಆರ್ಗ್‌


ಇದನ್ನೂ ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...