Homeಮುಖಪುಟದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

- Advertisement -
- Advertisement -

ಭಾರತದ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಮತ್ತು ಪತ್ರಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ (ಯುಬಿಸಿ) ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ತೀಸ್ತಾ ಸೆಟಲ್ವಾಡ್ ಅವರು ನಾಗರಿಕರ ನ್ಯಾಯ ಮತ್ತು ಶಾಂತಿ (ಸಿಜೆಪಿ) ವೇದಿಕೆಯ ಕಾರ್ಯದರ್ಶಿಯಾಗಿದ್ದಾರೆ. ಸಿಜೆಪಿ 2002 ರಲ್ಲಿ ಗುಜರಾತ್ ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ಒಳಗಾದವರಿಗೆ ನ್ಯಾಯಕ್ಕಾಗಿ ಹೋರಾಡಲು ರಚಿಸಲಾದ ಒಂದು ಸಂಘಟನೆಯಾಗಿದೆ. 2002 ರ ಗುಜರಾತ್‌ ಗಲಭೆ ಕುರಿತು ಸಿಜೆಪಿ ಸಹ-ಅರ್ಜಿದಾರರಾಗಿದ್ದು, ನರೇಂದ್ರ ಮೋದಿ ಮತ್ತು ಇತರ ಅರವತ್ತೆರಡು ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಬೇಕೆಂದು ಕೋರಿದೆ.

ತೀಸ್ತಾ ತನ್ನ ಪತಿ ಜಾವೇದ್ ಆನಂದ್ ಅವರೊಂದಿಗೆ Cammunalisam cambat ನಿಯತಕಾಲಿಕದ ಸಹ-ಸ್ಥಾಪಕ ಮತ್ತು ಸಹ ಸಂಪಾದಕರಾಗಿದ್ದಾರೆ. ಇದು ಕೋಮು ಹಿಂಸಾಚಾರವನ್ನು ಉತ್ತೇಜಿಸುವ ಘಟಕಗಳ ಮೇಲೆ ಆಕ್ರಮಣ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಬೆಳೆಸುತ್ತದೆ. ಅವರು ಪೀಪಲ್ಸ್ ಯೂನಿಯನ್ ಫಾರ್ ಹ್ಯೂಮನ್ ರೈಟ್ಸ್ (ಪಿಯುಹೆಚ್ಆರ್) ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ತೀಸ್ತಾರವರು ಬರೆದ Foot Soldier of the Constitution ಪುಸ್ತಕವು ಬಹಳಷ್ಟು ಜನರ ಗಮನಸೆಳೆದಿದ್ದು ಕನ್ನಡ ಸೇರಿದಂತೆ ಹತ್ತಾರು ಭಾಷೆಗಳಿಗೆ ಅನುವಾದಗೊಂಡಿದೆ.

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

2020 ರಲ್ಲಿ ಈ ಗೌರವ ಡಾಕ್ಟರೇಟ್ ಪಡೆದ 10 ಪ್ರಮುಖ ವ್ಯಕ್ತಿಗಳಲ್ಲಿ ತೀಸ್ತಾ ಒಬ್ಬರಾಗಿದ್ದಾರೆ. ಕೋವಿಡ್ -19 ಸಾಂಕ್ರಾಮಿಕದ ಮಧ್ಯೆ ಮೇ ಕೊನೆಯಲ್ಲಿ ವ್ಯಾಂಕೋವರ್‌ನಲ್ಲಿ ನಡೆಯಬೇಕಿದ್ದ ಸಮಾರಂಭವನ್ನು ಮುಂದೂಡಲಾಗಿದೆ.

ಲೇಖಕಿ ತೀಸ್ತಾ ಸೆಟಲ್ವಾಡ್ ಅವರು “ನಾಗರಿಕ ಹಕ್ಕುಗಳ ಹೋರಾಟಗಾರ್ತಿಯಾಗಿದ್ದು, ಗುಜರಾತ್ ರಾಜ್ಯದಲ್ಲಿ 2002 ರ ಸಾವಿರಾರು ಮುಸ್ಲಿಮರ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾತ್ಯತೀತವಾದಿಯಾಗಿ, ಅವರು ಭಾರತದಲ್ಲಿ ಮತ್ತು ವಿಶ್ವದ ಇತರ ಭಾಗಗಳಲ್ಲಿ ಬಹುಸಂಖ್ಯಾತತೆ ಮತ್ತು ಧಾರ್ಮಿಕ ಮತಾಂಧತೆಯನ್ನು ಬಹಿರಂಗಪಡಿಸಲು ಮಾನವ ಹಕ್ಕುಗಳು ಮತ್ತು ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು, LGBTQ ಸಮುದಾಯ, ಸ್ಥಳೀಯರ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇದುವರೆಗೂ ಪಿಯುಸಿಎಲ್ ಜರ್ನಲಿಸಮ್ ಫಾರ್ ಹ್ಯೂಮನ್ ರೈಟ್ಸ್ ಅವಾರ್ಡ್ 1993, ಅತ್ಯುತ್ತಮ ಮಹಿಳಾ ಮಾಧ್ಯಮ ವ್ಯಕ್ತಿ, 1993 ರ ಚಮೇಲಿ ದೇವಿ ಜೈನ್ ಪ್ರಶಸ್ತಿ ಜೊತೆಗೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ವ್ಯವಹಾರಕ್ಕಾಗಿ ಭಾರತ ಸರ್ಕಾರದಿಂದ 2007 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.

ಕೋಮುವಾದದ ವಿರುದ್ಧ, ಸೌಹಾರ್ದತೆಯ ಪರ ಸದಾ ದುಡಿಯುತ್ತಿರುವ ತೀಸ್ತಾ ಸೆಟಲ್ವಾದ್‌ ಮೇಲೆ ಪ್ರಭುತ್ವ ಕೆಂಗಣ್ಣು ಬೀರಿದೆ. ಅವರ ವಿರುದ್ಧ ಹತ್ತಾರು ಪ್ರಕರಣಗಳನ್ನು ದಾಖಲಿಸಿ ಹೋರಾತ ಹತ್ತಿಕ್ಕಲು ಯತ್ನಿಸುತ್ತಿದ್ದರೂ ಸಹ ಅದನ್ನು ಅವರು ದಿಟ್ಟವಾಗಿ ಎದುರಿಸುತ್ತಿದ್ದಾರೆ. ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನವಾಗುತ್ತಿರುವ ಸಂದರ್ಭದಲ್ಲಿ ನೂರಾರು ಹೋರಾಟಗಾರರು ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಜರ್ಮನ್ ಬುಕ್‌ ಟ್ರೇಡ್‌ನ ಶಾಂತಿ ಪ್ರಶಸ್ತಿ ಗೆದ್ದ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ 

Also Read: UBC honors Teesta Setalvad, among nine others with honorary doctorate

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...