Homeಮುಖಪುಟದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

- Advertisement -
- Advertisement -

ಭಾರತದ ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಮತ್ತು ಪತ್ರಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ (ಯುಬಿಸಿ) ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ತೀಸ್ತಾ ಸೆಟಲ್ವಾಡ್ ಅವರು ನಾಗರಿಕರ ನ್ಯಾಯ ಮತ್ತು ಶಾಂತಿ (ಸಿಜೆಪಿ) ವೇದಿಕೆಯ ಕಾರ್ಯದರ್ಶಿಯಾಗಿದ್ದಾರೆ. ಸಿಜೆಪಿ 2002 ರಲ್ಲಿ ಗುಜರಾತ್ ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ಒಳಗಾದವರಿಗೆ ನ್ಯಾಯಕ್ಕಾಗಿ ಹೋರಾಡಲು ರಚಿಸಲಾದ ಒಂದು ಸಂಘಟನೆಯಾಗಿದೆ. 2002 ರ ಗುಜರಾತ್‌ ಗಲಭೆ ಕುರಿತು ಸಿಜೆಪಿ ಸಹ-ಅರ್ಜಿದಾರರಾಗಿದ್ದು, ನರೇಂದ್ರ ಮೋದಿ ಮತ್ತು ಇತರ ಅರವತ್ತೆರಡು ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಬೇಕೆಂದು ಕೋರಿದೆ.

ತೀಸ್ತಾ ತನ್ನ ಪತಿ ಜಾವೇದ್ ಆನಂದ್ ಅವರೊಂದಿಗೆ Cammunalisam cambat ನಿಯತಕಾಲಿಕದ ಸಹ-ಸ್ಥಾಪಕ ಮತ್ತು ಸಹ ಸಂಪಾದಕರಾಗಿದ್ದಾರೆ. ಇದು ಕೋಮು ಹಿಂಸಾಚಾರವನ್ನು ಉತ್ತೇಜಿಸುವ ಘಟಕಗಳ ಮೇಲೆ ಆಕ್ರಮಣ ಮಾಡುವ ಮೂಲಕ ಕೋಮು ಸೌಹಾರ್ದತೆಯನ್ನು ಬೆಳೆಸುತ್ತದೆ. ಅವರು ಪೀಪಲ್ಸ್ ಯೂನಿಯನ್ ಫಾರ್ ಹ್ಯೂಮನ್ ರೈಟ್ಸ್ (ಪಿಯುಹೆಚ್ಆರ್) ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ತೀಸ್ತಾರವರು ಬರೆದ Foot Soldier of the Constitution ಪುಸ್ತಕವು ಬಹಳಷ್ಟು ಜನರ ಗಮನಸೆಳೆದಿದ್ದು ಕನ್ನಡ ಸೇರಿದಂತೆ ಹತ್ತಾರು ಭಾಷೆಗಳಿಗೆ ಅನುವಾದಗೊಂಡಿದೆ.

ತೀಸ್ತಾ ಸೆಟಲ್ವಾಡ್‌ರವರು ಕರ್ನಾಟಕದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಗೌರಿ ಲಂಕೇಶ್‌ರವರ ನಿಕಟವರ್ತಿಯಾಗಿದ್ದ ಇವರು ಕಳೆದ ವರ್ಷ ಖ್ಯಾತ ಪತ್ರಕರ್ತ ರವೀಶ್‌ ಕುಮಾರ್‌ರವರಿಗೆ ’ಗೌರಿ ಲಂಕೇಶ್‌’ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.

2020 ರಲ್ಲಿ ಈ ಗೌರವ ಡಾಕ್ಟರೇಟ್ ಪಡೆದ 10 ಪ್ರಮುಖ ವ್ಯಕ್ತಿಗಳಲ್ಲಿ ತೀಸ್ತಾ ಒಬ್ಬರಾಗಿದ್ದಾರೆ. ಕೋವಿಡ್ -19 ಸಾಂಕ್ರಾಮಿಕದ ಮಧ್ಯೆ ಮೇ ಕೊನೆಯಲ್ಲಿ ವ್ಯಾಂಕೋವರ್‌ನಲ್ಲಿ ನಡೆಯಬೇಕಿದ್ದ ಸಮಾರಂಭವನ್ನು ಮುಂದೂಡಲಾಗಿದೆ.

ಲೇಖಕಿ ತೀಸ್ತಾ ಸೆಟಲ್ವಾಡ್ ಅವರು “ನಾಗರಿಕ ಹಕ್ಕುಗಳ ಹೋರಾಟಗಾರ್ತಿಯಾಗಿದ್ದು, ಗುಜರಾತ್ ರಾಜ್ಯದಲ್ಲಿ 2002 ರ ಸಾವಿರಾರು ಮುಸ್ಲಿಮರ ಹತ್ಯಾಕಾಂಡದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾತ್ಯತೀತವಾದಿಯಾಗಿ, ಅವರು ಭಾರತದಲ್ಲಿ ಮತ್ತು ವಿಶ್ವದ ಇತರ ಭಾಗಗಳಲ್ಲಿ ಬಹುಸಂಖ್ಯಾತತೆ ಮತ್ತು ಧಾರ್ಮಿಕ ಮತಾಂಧತೆಯನ್ನು ಬಹಿರಂಗಪಡಿಸಲು ಮಾನವ ಹಕ್ಕುಗಳು ಮತ್ತು ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಮಹಿಳೆಯರು, ಧಾರ್ಮಿಕ ಅಲ್ಪಸಂಖ್ಯಾತರು, LGBTQ ಸಮುದಾಯ, ಸ್ಥಳೀಯರ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಇದುವರೆಗೂ ಪಿಯುಸಿಎಲ್ ಜರ್ನಲಿಸಮ್ ಫಾರ್ ಹ್ಯೂಮನ್ ರೈಟ್ಸ್ ಅವಾರ್ಡ್ 1993, ಅತ್ಯುತ್ತಮ ಮಹಿಳಾ ಮಾಧ್ಯಮ ವ್ಯಕ್ತಿ, 1993 ರ ಚಮೇಲಿ ದೇವಿ ಜೈನ್ ಪ್ರಶಸ್ತಿ ಜೊತೆಗೆ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ವ್ಯವಹಾರಕ್ಕಾಗಿ ಭಾರತ ಸರ್ಕಾರದಿಂದ 2007 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.

ಕೋಮುವಾದದ ವಿರುದ್ಧ, ಸೌಹಾರ್ದತೆಯ ಪರ ಸದಾ ದುಡಿಯುತ್ತಿರುವ ತೀಸ್ತಾ ಸೆಟಲ್ವಾದ್‌ ಮೇಲೆ ಪ್ರಭುತ್ವ ಕೆಂಗಣ್ಣು ಬೀರಿದೆ. ಅವರ ವಿರುದ್ಧ ಹತ್ತಾರು ಪ್ರಕರಣಗಳನ್ನು ದಾಖಲಿಸಿ ಹೋರಾತ ಹತ್ತಿಕ್ಕಲು ಯತ್ನಿಸುತ್ತಿದ್ದರೂ ಸಹ ಅದನ್ನು ಅವರು ದಿಟ್ಟವಾಗಿ ಎದುರಿಸುತ್ತಿದ್ದಾರೆ. ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನವಾಗುತ್ತಿರುವ ಸಂದರ್ಭದಲ್ಲಿ ನೂರಾರು ಹೋರಾಟಗಾರರು ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಜರ್ಮನ್ ಬುಕ್‌ ಟ್ರೇಡ್‌ನ ಶಾಂತಿ ಪ್ರಶಸ್ತಿ ಗೆದ್ದ ಭಾರತೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ 

Also Read: UBC honors Teesta Setalvad, among nine others with honorary doctorate

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...