Homeಮುಖಪುಟಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

- Advertisement -
- Advertisement -

ಬೋರ್‌ವೆಲ್ ಕೊರೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ಸವರ್ಣೀಯರ ಕುಟುಂಬವೊಂದು ಹಲ್ಲೆ ನಡೆಸಿರುವ ಪ್ರಕರಣ ಹೊಸ ತಿರುವುದು ಪಡೆದುಕೊಂಡಿದೆ. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ರಕ್ಷಣೆಗೆ ಬರಬೇಕಿದ್ದ ಪೊಲೀಸರು ಆರೋಪಿಗಳನ್ನೇ ರಕ್ಷಿಸುವ ಯತ್ನ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಹನುಮಂತಪ್ಪನ ಇಬ್ಬರು ಮಕ್ಕಳನ್ನೂ ಬಂಧಿಸಿದ್ದಾರೆ. ಜಿಲ್ಲೆಯ ಪ್ರಬಲ ರಾಜಕಾರಣಿಯೊಬ್ಬರು ಆರೋಪಿಗಳ ಬೆಂಬಲಕ್ಕೆ ನಿಂತಿರುವುದೇ ಇದಕ್ಕೆ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರದ ದಲಿತ ವ್ಯಕ್ತಿ ಹನುಮಂತಪ್ಪ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ನೀರು ಚನ್ನಾಗಿಯೇ ಸಿಕ್ಕಿತ್ತು. ಇದಾದ ಕೆಲವು ದಿನಗಳ ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ವತ್ಥಪ್ಪ ಕೂಡ ಅದೇ ಬೋರ್‌ವೆಲ್‌ಗೆ ಸಮಾನಾಂತರವಾಗಿ ಪಕ್ಕದ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ಆದರೆ ನಿರೀಕ್ಷೆಯಷ್ಟು ನೀರು ಸಿಗಲಿಲ್ಲ. ತನಗೆ ನೀರು ಸಿಗದಿದ್ದುದ್ದಕ್ಕೆ ಹನುಮಂತಪ್ಪನೇ ಕಾರಣ ಎಂದು ಗ್ರಾ.ಪಂ ಅಧ್ಯಕ್ಷ ಅಶ್ವತ್ಥಪ್ಪ ಬಗೆದಿದ್ದಾರೆ.

ಇದನ್ನೇ ನೆಪಮಾಡಿಕೊಂಡು ಸವರ್ಣೀಯರಾದ ಆಶ್ವತ್ಥಪ್ಪ ಮತ್ತು ಆತನ ಸೋದರ ನರಸಿಂಹಮೂರ್ತಿ ಜಮೀನಿನಿಂದ ಮನೆಗೆ ಮರಳುತ್ತಿದ್ದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ದಾಳಿ ನಡೆಸಿದ್ದರು. ನುಮಂತಪ್ಪರ ಕೈ ಮುರಿದು ಹಾಕಿದ್ದರು. ಈ ಕುರಿತು ಹನುಮಂತಪ್ಪ ಪುತ್ರ, ತಮ್ಮ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ದೂರು ನೀಡಿದ್ದರು.

ಮಧುಗಿರಿ ಪೊಲೀಸರು ಆರಂಭದಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆ ಹಿಂದೇಟು ಹಾಕಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಯಿಂದ ಒತ್ತಡ ಬಂದ ಮೇಲೆ ಅನಿವಾರ್ಯವಾಗಿ ಸವರ್ಣೀಯರಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿ ಮೇಲೆ ಎಫ್.ಐ.ಆರ್ ದಾಖಲಿಸಲಾಯಿತು. ತದನಂತರ ಹನುಮಂತಪ್ಪ ಮತ್ತು ಅವರ ಪುತ್ರರ ವಿರುದ್ಧ ಕೌಂಟರ್ ಎಫ್ಐಆರ್ ದಾಖಲಿಸಲಾಗಿದೆ!

ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣದಲ್ಲಿ ಕೌಂಟರ್ ಎಫ್ಐಆರ್ ದಾಖಲಿಸಲು ಅವಕಾಶ ಇರಲಿಲ್ಲ. ತುಮಕೂರಿನ ಪ್ರಬಲ ರಾಜಕಾರಣಿ ಕೆ.ಎನ್‌ ರಾಜಣ್ಣನವರು ಪೊಲೀಸರ ಮೇಲೆ ಒತ್ತಡ ಹಾಕಿ ದೌರ್ಜನ್ಯಕ್ಕೆ ಒಳಗಾದವರ ವಿರುದ್ಧವೇ ದೂರು ದಾಖಲಿಸುವಂತೆ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ.

ದಲಿತ ವ್ಯಕ್ತಿ ಹನುಮಂತಪ್ಪ ಅವರ ಪುತ್ರರಾದ ಅಶೋಕ್ ಮತ್ತು ಮಂಜುನಾಥ್ ವಿರುದ್ಧ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಕೇಸು ಸೇರಿದಂತೆ ಆರು ಕೇಸುಗಳನ್ನು ಹಾಕಲಾಗಿದೆ. ತಮ್ಮ ತಂದೆಯನ್ನು ಹಲ್ಲೆಕೋರರಿಂದ ಬಿಡಿಸಿಕೊಳ್ಳಲು ಹೋಗಿದ್ದ ಮಂಜುನಾಥ್ ಮತ್ತು ಅಶೋಕ್ ನ್ಯಾಯಾಂಗ ಬಂಧನದಲ್ಲಿರಬೇಕಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನಪರ ಚಿಂತಕ, ಮತ್ತು ಹೋರಾಟಗಾರ ಕೆ.ದೊರೈರಾಜ್, “ಅಟ್ರಾಸಿಟಿ ಕೇಸ್‌ನಲ್ಲಿ ಕೌಂಟರ್ ಕೇಸು ಹಾಕಲು ಬರುವುದಿಲ್ಲ. ಆದರೆ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಕೇಸನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೌಂಟರ್ ಕೇಸ್ ದಾಖಲಿಸಿ ದೌರ್ಜನ್ಯಕ್ಕೊಳಗಾದವರನ್ನೇ ಜೈಲಿಗೆ ಕಳಿಸಿದ್ದಾರೆ. ಇದು ಪೊಲೀಸರು ಕಾನೂನಿನ ಮೂಲಕ ದೌರ್ಜನ್ಯ ನಡೆಸುವುದಾಗಿದೆ. ಇಂತಹ ಪ್ರಕರಣಗಳಲ್ಲಿ ಕೌಂಟರ್ ಕೇಸ್ ಹಾಕಲಿರುವ ನಿಯಮಾವಳಿಗಳನ್ನು ಪರಿಶೀಲಿಸುವಂತೆ ಎಸ್.ಸಿ ಎಸ್.ಟಿ ಕಮೀಷನ್ ಮತ್ತು ಮಾನವ ಹಕ್ಕುಗಳ ಆಯೋಗವನ್ನು ಒತ್ತಾಯಿಸುತ್ತೇನೆ” ಎಂದರು.

ಮಧುಗಿರಿಯಲ್ಲಿ ಸಭೆ ಸೇರಿದ ದಲಿತ ಸಂಘಟನೆಗಳ ಮುಖಂಡರು ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹನುಮಂತಪ್ಪಗೆ ನ್ಯಾಯ ದೊರೆಯದ್ದರೆ ಹೋರಾಟ ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಪೊಲೀಸರು ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಅಟ್ರಾಸಿಟಿ ಕೇಸನ್ನು ದುರ್ಬಲಗೊಳಿಸುವ ಯತ್ನ ನಡೆಯುತ್ತಿದೆ. ಇದು ಸರಿಯಲ್ಲ ಎಂದು ದಲಿತ ಮುಖಂಡ ಬಾಲು ದೂರವಾಣಿ ಮೂಲಕ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ವಿಡಿಯೋ ವರದಿ ನೋಡಿ. ಕೃಪೆ: ಬೆವರ ಹನಿ ಮೀಡಿಯಾ

ದಲಿತ ಸಂಘಟನೆಗಳ ಕಣ್ಣೊರೆಸುವ ಕಾರಣಕ್ಕೆ ಆರೋಪಿಗಳಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿಯನ್ನು ಬಂಧಿಸಲಾಗಿದೆ. ಆರೋಪಿಗಳ ಬೆಂಬಲಕ್ಕೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಿಂತಿದ್ದಾರೆ. ಪೊಲೀಸರ ಮೇಲೆ ಕ್ರಮ ಕೈಗೊಳ್ಳದಂತೆ ಒತ್ತಡ ಹಾಕುತ್ತಿದ್ದಾರೆ. ದೌರ್ಜನ್ಯಕ್ಕೊಳಕಾದವರ ಪರ ನಿಲ್ಲಬೇಕಾದ ರಾಜಣ್ಣ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...