Homeಮುಖಪುಟನಾವು ನಂಬರ್ ಒನ್... ಯಾವುದರಲ್ಲಿ - ದೇಶ ಮಾರುವುದರಲ್ಲಿ?

ನಾವು ನಂಬರ್ ಒನ್… ಯಾವುದರಲ್ಲಿ – ದೇಶ ಮಾರುವುದರಲ್ಲಿ?

- Advertisement -
- Advertisement -

ನಮ್ಮ ಹುಬ್ಬಳ್ಳಿ ಹುಡುಗರಿಗೆ ರೋಮಾಂಚನ ಆಗೋವಂಥ ಸುದ್ದಿಯೊಂದು ಕಂಪ್ಯೂಟರ್ ಕ್ಲೌಡು ಎಂಬೋ ನೀಲ ಗಗನದೊಳಗ ಓಡಾಡತಾ ಐತಿ.

ಅದು ಏನಪಾ ಅಂದ್ರ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿ ಹುಡುಗ ಪ್ರಹ್ಲಾದ ಜೋಶಿ ಅವರಿಗೆ ಅಭಿನಂದನೆ ಹೇಳಿದ ವಿಡಿಯೋ.

ನನ್ಯ ಸಚಿವ ಸಂಪುಟದ ಸದಸ್ಯರಾದ ಪ್ರಹ್ಲಾದಜೀ ಅವರು ಈ ಲಾಕ್‍ಡೌನ್ ಸಮಯವನ್ನು ಸದುಪಯೋಗಪಡಿಸಿಕೊಂಡು, ಕಲ್ಲಿದ್ದಲು ತಯಾರಿ ಕ್ಷೇತ್ರದಲ್ಲಿ ಭಾರತ ಮಹತ್ವಪೂರ್ಣ ಹೆಜ್ಜೆಗಳನ್ನು ಇಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಲಾಕ್‍ಡೌನ್‍ನಲ್ಲಿ ಕಲ್ಲಿದ್ದಲಿಗೆ ಸಂಬಂಧಪಟ್ಟ ಎಲ್ಲ ಕಾನೂನುಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿ ನಮಗೆ ಹೊಸ ದಾರಿ ತೋರಿಸಿದ್ದಾರೆ. ಸಚಿವರು ಹಾಗೂ ಅವರ ಸಿಬ್ಬಂದಿಗೆ ನಾವು ಏನು ಅಂತಹ ದೊಡ್ಡ ಕೆಲಸ ಮಾಡಿಲ್ಲ ಅಂತ ಅನ್ನಿಸಬಹುದು, ಆದರೆ ನಾನು ಹೇಳುತ್ತೇನೆ. ನೀವು ಮಾಡಿದ್ದು ಅತ್ಯಂತ ಮಹತ್ವಪೂರ್ಣ ಕೆಲಸ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ಅಂತ ಎರಡು ಸರತೆ ಚಪ್ಪಾಳೆ ಬಾರಿಸಿದ್ದಾರೆ.

ಇದನ್ನು ಕಲ್ಲಿದ್ದಲು ಸಚಿವರ ಹಿಂಬಾಲಕರು, ವಿರೋಧಿಗಳು ಎಲ್ಲರೂ ಸೇರಿ ಸಾವಿರಾರು ಸಲ ಹಂಚಿಕೊಂಡಾರ. ಇನ್ನ ನಮ್ಮ ಜೋಶಿ ಸಾಹೇಬರಿಗೆ ಟಿಕೆಟ್ ತಪ್ಪಿಸೋರು ಯಾರೂ ಇಲ್ಲಾ, ಅವರ ಕುರ್ಚಿ ಕಾಯಂ, ಇನ್ನೂ ಸ್ವಲ್ಪ ದಿವಸ ಆದರ ಅವರು ಪ್ರಧಾನಿ ಆಗಬಹುದು, ಉಪ ರಾಷ್ಟ್ರಪತಿ – ರಾಷ್ಟ್ರಪತಿನೂ ಆಗೋ ಛಾನ್ಸ್ ಅದ ಅಂತ ಹೇಳಿ ಅವರ ಬೆಂಬಲಿಗರು ಹೇಳಿಕೊಂಡು ಕುಣದಾಡಲಿಕ್ಕೆ ಹತ್ತಿದಾರು.

ಪ್ರಧಾನಿಯವರು ತಮ್ಮ ಎಂದಿನ ರೂಢಿಯಂತೆ, ಬರೀ ಒಳ್ಳೆ ಸುದ್ದಿ ಹೇಳುವ, ಹುರಿದುಂಬಿಸುವ, ಧನಾತ್ಮಕ ವಿಷಯವನ್ನೇ ತಿಳಿಸುವ ತಮ್ಮ ಇಮೇಜಿಗೆ ತಕ್ಕುದಾಗಿ ಯಾವ ಸಣ್ಣ ಮಾಹಿತಿಯನ್ನೂ ಕೊಡದಂತೆ, ಇದು ಒಳ್ಳೆಯದು ಅಂತ ಅಪ್ಪಣೆ ಕೊಟ್ಟಿದ್ದಾರೆ. ಅವರು ಯಾವ ಅಧ್ಯಯನ ಮಾಡಿದರು, ಅವರ ಯಾವ ನಡೆಗಳು ಭಾರತದ ಭವಿಷ್ಯವನ್ನು ನಿರ್ಧರಿಸುತ್ತವೆ, ಅದರಿಂದ ಈ ದೇಶದ ಜನರಿಗೆ ಯಾವ ರೀತಿಯಲ್ಲಿ ಅನುಕೂಲ ಆಗುತ್ತದೆ ಅಂತ ಅವರು ತಿಳಿಸಿ ಹೇಳಲಿಲ್ಲ.

ಬರೀ ಒಳ್ಳೆ ಮಾತಾಡುವ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರದ ಕೋಚ್ ಗೋಡ್ಬೋಲೆ (ಸವಿ ಮಾತಾಡುವ) ಅವರಂತೆ `ನಾ ಬ್ರೂಯಾತ ಅಪ್ರಿಯಂ ಸತ್ಯಂ’ ಅಂತ ಕೆಲವು ವಿಷಯ ಹೇಳದೇ ಬಿಟ್ಟರು, ನಾವು `ಇದಮಿತ್ಥಂ’ ಅಂತ ನಂಬಿಬಿಟ್ಟಿವಿ.

ಹಂಗಾರ ನಮ್ಮ ಸಚಿವರು ಮಾಡಿದ್ದಾದರೂ ಏನು ?

ಅದನ್ನು ಕಂಡುಹಿಡಿಯುವುದು ಅಷ್ಟೇನೂ ಕಷ್ಟವಿಲ್ಲ. ಈ ಅಭಿನಂದನೆ ನೀಡಿದ ಸಭೆಯಲ್ಲಿಯೇ ಅವರು ಒಂದು ಘೋಷಣೆ ಮಾಡಿದರು. ಭಾರತ ವಿಶ್ವದ ಎರಡನೇ ಅತಿ ದೊಡ್ಡ ಕಲ್ಲಿದ್ದಲು ಉತ್ಪಾದಕ ರಾಷ್ಟ್ರ. ನಾವು ಎರಡನೇ ಸ್ಥಾನದಲ್ಲಿ ಯಾಕೆ ಇರಬೇಕು? ಮೊದಲನೇ ಸ್ಥಾನದಲ್ಲಿ ಯಾಕ ಇರಬಾರದು? ಅಂತ ಪ್ರಶ್ನೆ ಕೇಳಿದರು.

ಜೋಶಿಜಿ ಅವರು ಆ ಮೊದಲನೇ ಸ್ಥಾನದ ದಾರಿ ತೋರಿಸಿಕೊಟ್ಟರು.

ಜೂನ್ ತಿಂಗಳ ಲಾಕ್‍ಡೌನ್‍ದಾಗ, ಲೋಕಸಭೆ- ರಾಜ್ಯಸಭೆ ಎರಡೂ ನಡೆಯದಾಗ, ರಾಜ್ಯಗಗಳ ವಿಧಾನ ಸಭೆ -ವಿಧಾನ ಪರಿಷತ್ತು ಬಂದ್ ಆದಾಗ, ಕೇಂದ್ರ ಸರಕಾರ ಈ ದೇಶದ 41 ಕಡೆಗಳಲ್ಲಿ ಭೂ ಗರ್ಭದಾಗ ಇರೋ ಕಲ್ಲಿದ್ದಲು ಗಣಿಗಳನ್ನು ಖಾಸಗಿಕರಣ ಮಾಡೋ ನಿರ್ಧಾರ ತೊಗೋಂಡಿತು. ಅದಕ್ಕ ಬೇಕಾದ ಪರಿಸರ ಇಲಾಖೆ, ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಇಲಾಖೆ ಸಮ್ಮತಿಯನ್ನು ಗಡಿಬಿಡಿಯಿಂದ ತೊಗೊಂಡು ಇನ್ನೂ ಗಡಿಬಿಡಿಯಿಂದ ಘೋಷಿಸಿತು.

ಇವುಗಳಲ್ಲಿ ಶೇಕಡಾ 80 ರಷ್ಟು ಆದಿವಾಸಿಗಳು ಇರೋ ಪ್ರದೇಶಗಳು. ಆದರೆ ಅಲ್ಲಿನ ಜನರನ್ನ ಕೇಳಲಿಲ್ಲ. ಅವರ ಗ್ರಾಮಸಭೆ, ಗ್ರಾಮ ಅರಣ್ಯ ಸಮಿತಿ ಸಭೆ ನಡೆಸಲಿಲ್ಲ. ಸುಪ್ರೀಂ ಕೋರ್ಟ್‍ನ ಹಲವಾರು ಆದೇಶಗಳನ್ನು ಅಡವಿಯ ಕುಳಿರ್ ಗಾಳಿಗೆ ತೂರಿ ಬಿಟ್ಟು, ಟೆಂಡರ್ ಕರೆಯಲು ಸಜ್ಜಾದರು.

ಕಳೆದ ನೇಹರೂವಿನ್ ದಶಕಗಳಲ್ಲಿ, ಸುಮಾರು ಆರು ಕೋಟಿ ಆದಿವಾಸಿಗಳನ್ನು ಒಕ್ಕಲು ಎಬ್ಬಿಸಲಾಗಿದೆ. ಅವರಲ್ಲಿ ಸುಮಾರು 25 ಶೇಕಡಾ ಜನರಿಗೆ ಪರಿಹಾರ ಸಿಕ್ಕರೂ ಅವರ ಪುನರ್ವಸತಿ ಸರಿಯಾಗಿ ಆಗಿಲ್ಲ. ಅಲ್ಲಿನ ಜಲಮೂಲ, ವನ್ಯ ಜೀವಿ, ಹಕ್ಕಿ, ಇತರ ಪರಿಸರ ಕಲುಷಿತ ಆದ ನಂತರ ಅರಣ್ಯ ಪ್ರದೇಶದ ಯೋಜನೆಗಳಿಗೆ ಒಪ್ಪಿಗೆ ಕೊಡೋ ವೇಗ ಕಮ್ಮಿ ಆಯಿತು.

ಆಗಿನ ಸರ್ಕಾರಗಳು ತಮ್ಮ ಯಂತ್ರಾತ್ಮಕ್ಕೆ ಅಂಜದೇ ಇದ್ದರೂ ಜನರಿಗೆ, ಮಾಧ್ಯಮಗಳಿಗೆ, ನ್ಯಾಯಾಲಯಕ್ಕೆ, ಹೆದರುತ್ತಿದ್ದರು.

ಇವು ಯಾವುದಕ್ಕೂ ಹೆದರದೇ ಇರೋದು ಅಂದ್ರ ಅದು ಯಾ ಪರಿ ಧೈರ್ಯ ಇರಬೇಕು ನಮ್ಮ ಸಚಿವರಿಗೆ ಇರಬೇಕು? ನೀವೇ ನೋಡ್ರಿ.

ಈ 41 ಗಣಿಗಳು, ಐದು ರಾಜ್ಯಗಳ ಹಸಿರು ಪಟ್ಟಿಗಳಲ್ಲಿ ಬರತಾವು. ಅಲ್ಲಿ ಅರಣ್ಯ ಅಭಿವೃದ್ಧಿ ಚಟುವಟಿಕೆ ಬಿಟ್ಟು ಬೇರೆ ಏನೂ ಮಾಡಬಾರದು ಅಂತ ಒಂದು ತೀರ್ಪು ಐತಿ. ಸರ್ಕಾರವಾಗಲಿ, ಖಾಸಗಿ ಕಂಪನಿ ಆಗಲಿ, ಯಾವ ಕೆಲಸ ಮಾಡಿದರೂ ಕೂಡ, ಆದಿವಾಸಿಗಳ ಭಾಗೀದಾರಿಕೆಯಲ್ಲಿಯೇ ಮಾಡಬೇಕು ಅಂತ ಒಂದು ತೀರ್ಪು ಐತಿ. ಪರಿಸರ ಅಂದ್ರ ಬರೇ ಮಣ್ಣು, ನೀರು ಅಲ್ಲ, ಅಲ್ಲಿನ ಜನರ ಹಿತರಕ್ಷಣೆಯೂ ಆದರಾಗ ಸೇರೇತಿ ಅಂತ ಮತ್ತೊಂದು ತೀರ್ಪು ಐತಿ. ಅರಣ್ಯ, ಸಹಜ ಬೆಳೆ ಅಥವಾ ಬಹು ಬೆಳೆ ಜಮೀನನ್ನು ಭೂ ಸ್ವಾಧೀನ ಕಾಯಿದೆಯೊಳಗೆ ಸರಕಾರ ತೊಗೊಳಿಕ್ಕೆ ಬರೋದಿಲ್ಲ ಅಂತ ಇನ್ನೊಂದು ಐತಿ.

ಇವು ಯಾವುವೂ ಕೇಂದ್ರದ ಕಲ್ಲಿದ್ದಲು ಹಾಗೂ ಸಂಸದೀಯ ಖಾತೆ ಸಚಿವರಿಗೆ ನೆನಪು ಬರಲಿಲ್ಲ. ಬಂದರೂ ಸಹಿತ ತಮ್ಮ ಅಗಾಧ ಮರೆವಿನ ಶಕ್ತಿಯಿಂದ ಅದನ್ನು ಅವರು ಗೆದ್ದಿರಬಹುದು.

ಪರಿಶಿಷ್ಟ ಪಂಗಡಗಳ ರಕ್ಷಣೆಗಾಗಿ ಇರೋ ಸಂವಿಧಾನದ ಏಳನೇ ಭಾಗದ ಕಲಂಗಳಾಗಲಿ, ಪೆಸಾ ಕಾಯಿದೆಯಾಗಲಿ, ಸುಪ್ರೀಂ ಕೋರ್ಟಿನ ಸಮಾತಾ ತೀರ್ಪು, ಆದಿವಾಸಿ ಸಲಹಾ ಸಮಿತಿ ರಚನೆ, ಅಥವಾ ನೆಲದ ಒಡೆಯನೇ ನೆಲದಾಳದ ಅದಿರಿನ ಒಡೆಯ ಎನ್ನುವ 2013ರ ತೀರ್ಪು ಆಗಲಿ, ಅವರಿಗೆ ಮುಖ್ಯ ಅನ್ನಿಸಲಿಲ್ಲ.

ಇಷ್ಟು ದಿನ ಅರಣ್ಯ ಅಧಿಕಾರಿಗಳು ಯಾವುದು ಯಾವುದೋ ತೀರ್ಪಿನ ಹೆಸರು ಹೇಳಿ ಅಡವಿಯಲ್ಲಿ ಅಡುಗೆ ಮನೆಗೆ ಬೇಕಾದ ಕಟ್ಟಿಗೆ ತರಲು ಹೋಗುತ್ತಿದ್ದವರನ್ನು ಜೈಲಿಗೆ ಹಾಕುತ್ತಿದ್ದರು. ಅಂತಾದ್ದರಲ್ಲಿ ಇಷ್ಟು ಧಾಡಸಿತನದಿಂದ, ಪರಿಸರಕ್ಕೆ ಆಗಬಹುದಾದ ಹಾನಿಯನ್ನು ಕಲ್ಲು ಮನಸಿನಿಂದ ಸಹಿಸಿಕೊಂಡು ರಾಷ್ಟ್ರದ ಆರ್ಥಿಕತೆಗೆ ಕುಮ್ಮಕ್ಕು ಕೊಡೋ ದೃಷ್ಟಿಯಿಂದ ಕಲ್ಲಿದ್ದಲು ಗಣಿಗಾರಿಕೆಗೆ ಅನುವು ಮಾಡಿಕೊಡೋದು ಅಂದರೆ ಸುಮ್ಮನೇ ಏನು?

ಅದಕ್ಕೇ ಅವರು ಅವರನ್ನ ಅಭಿನಂದಿಸಿದ್ದು.


ಇದನ್ನು ಓದಿ: ದಲಿತ ಚಿಂತಕರನ್ನು ಮುಗಿಸಲು ಎಲ್ಗರ್ ಪರಿಷತ್ ಪ್ರಕರಣ ವರ್ಗಾವಣೆ: ಬಾಂಬೆ ಹೈಕೋರ್ಟ್‌‌ನಲ್ಲಿ ಅರ್ಜಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...