Homeಮುಖಪುಟಬಿಹಾರದಲ್ಲಿ ಗರಿಗೆದರಿದ ಚುನಾವಣಾ ರಂಗು: ಐವರು ಆರ್‌ಜೆಡಿ ಎಂಎಲ್‌ಸಿಗಳ ಪಕ್ಷಾಂತರ!

ಬಿಹಾರದಲ್ಲಿ ಗರಿಗೆದರಿದ ಚುನಾವಣಾ ರಂಗು: ಐವರು ಆರ್‌ಜೆಡಿ ಎಂಎಲ್‌ಸಿಗಳ ಪಕ್ಷಾಂತರ!

- Advertisement -
- Advertisement -

ಎಲ್ಲಾ ರಾಜ್ಯಗಳು ಕೊರೊನಾ ತಡೆಗಟ್ಟುವ ಕುರಿತು ಯೋಚಿಸುತ್ತಿದ್ದಾರೆ ಬಿಹಾರ ಮಾತ್ರ ಚುನಾವಣೆ ಬಗ್ಗೆ ಮಾತಾಡುತ್ತಿದೆ ಎಂದು ಕಳೆದ ವಾರ ಚುನಾವನಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಆರೋಪಿಸಿದ್ದರು. ಅದನ್ನು ನಿಜಮಾಡಲು ಬಿಹಾರದ ಕೆಲ ರಾಜಕಾರಣಿಗಳು ಮುಂದಾಗಿದ್ದಾರೆ. ಕಳೆದ ವಾರವೆಲ್ಲಾ ಬಿಜೆಪಿ ಪಕ್ಷವು ವರ್ಚುವಲ್ ರ್‍ಯಾಲಿಗಳನ್ನು ನಡೆಸಿ ಸದ್ದು ಮಾಡಿದ್ದರೆ ನಂತರ ಬಿಹಾರಿ ರೆಜೆಮೆಂಟ್‌ ಸೈನಿಕರು ಲಡಾಖ್ ಗಡಿಯಲ್ಲಿ ಸಾವನಪ್ಪಿದರೆ ಅವರನ್ನು ಬಿಹಾರ ಸೈನಿಕರು ಎಂದು ಕರೆದು ಬಿಜೆಪಿಗರು ಟ್ರೋಲ್‌ಗೆ ಒಳಗಾಗಿದ್ದರು. ಈಗ ಆರ್‌ಜೆಡಿ ಪಕ್ಷದ ಐವರು ಎಂಎಲ್‌ಸಿಗಳು ಜೆಡಿ(ಯು)ಗೆ ಪಕ್ಷಾಂತರ ಮಾಡಿ ಸುದ್ದಿಯಾಗಿದ್ದಾರೆ.

ಆರ್‌ಜೆಡಿಯ ಸ್ಥಾಪಕ ಸದಸ್ಯರಲ್ಲೊಬ್ಬರಾದ ಮತ್ತು ಸದ್ಯಕ್ಕೆ ಜೈಲುವಾಸದಲ್ಲಿರುವ ಲಾಲು ಪ್ರಸಾದ್ ಅವರ ತೀವ್ರ ಬೆಂಬಲಿಗರಾದ ಮಾಜಿ ಕೇಂದ್ರ ಸಚಿವ ರಘುವನ್ಶ್ ಪ್ರಸಾದ್ ಸಿಂಗ್ ಅವರು ತಮ್ಮ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಂತರ ಈ ಬೆಳವಣಿಗೆ ಸಂಭವಿಸಿದೆ.

ಐದು ಎಂಎಲ್‌ಸಿಗಳಾದ ಎಸ್ಎಂ ಕಮರ್ ಆಲಂ, ಸಂಜಯ್ ಪ್ರಸಾದ್, ರಾಧಾ ಚರಣ್ ಸೇಠ್, ರಣವಿಜಯ್ ಕುಮಾರ್ ಸಿಂಗ್ ಮತ್ತು ದಿಲೀಪ್ ರಾಯ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ದ್ವಿಪಕ್ಷೀಯ ಶಾಸಕಾಂಗದ ಮೇಲ್ಮನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅವರನ್ನು ಪ್ರತ್ಯೇಕ ಗುಂಪು ಎಂದು ಪರಿಗಣಿಸಿ ಜೆಡಿಯು ಜೊತೆ ವಿಲೀನಗೊಳ್ಳಲು ಅವಕಾಶ ನೀಡುವಂತೆ ಅವರು ಸಿಂಗ್ ಅವರನ್ನು ವಿನಂತಿಸಿದರು. ಮೇಲ್ಮನೆಯ ಜೆಡಿಯು ನಾಯಕ ರೀನಾ ಯಾದವ್ ಅವರು ಪಕ್ಷದ ಒಪ್ಪಿಗೆಯ ಪತ್ರದೊಂದಿಗೆ ಆಗಮಿಸಿದರು ಮತ್ತು ಕಾರ್ಯಕಾರಿ ಅಧ್ಯಕ್ಷರು ತಮ್ಮ ತ್ವರಿತ ಅನುಮೋದನೆಯನ್ನು ನೀಡಿದರು ಎನ್ನಲಾಗಿದೆ. ಜೆಡಿಯು ರಾಜ್ಯ ಸರ್ಕಾರದಲ್ಲಿ ಬಿಜೆಪಿ ಮಿತ್ರ ಪಕ್ಷವಾಗಿದೆ.

ಈ ಬೆಳವಣಿಗೆಯಿಂದ 75 ಸದಸ್ಯರ ವಿಧಾನ ಪರಿಷತ್‌ನಲ್ಲಿ ಆರ್‌ಜೆಡಿ ಪಕ್ಷದ ಬಲವನ್ನು ಕೇವಲ ಮೂರಕ್ಕೆ ಇಳಿಸಿತು. ಇದರಿಂದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಪತ್ನಿ ರಾಬ್ರಿ ದೇವಿ ಅವರು ಸದನದಲ್ಲಿ ಪ್ರತಿಪಕ್ಷದ ನಾಯಕರ ತಮ್ಮ ಸ್ಥಾನವನ್ನು ಕಳೆದುಕೊಳ್ಳಬಹುದು ಎಂದು ಎನ್‌ಡಿಎ ಮೂಲಗಳು ಹೇಳಿವೆ.

ನಿಯಮಗಳ ಪ್ರಕಾರ, ಮುಖ್ಯ ವಿರೋಧ ಪಕ್ಷವು ತನ್ನ ನಾಯಕನಿಗೆ ಕ್ಯಾಬಿನೆಟ್ ಮಂತ್ರಿ ಸ್ಥಾನದ ಪ್ರತಿಪಕ್ಷದ ನಾಯಕ ಹುದ್ದೆಗೆ ಅರ್ಹತೆ ಪಡೆಯಲು ಸದನದ ಒಟ್ಟು ಸ್ಥಾನಗಳಲ್ಲಿ ಕನಿಷ್ಠ 10% ಹೊಂದಿರಬೇಕು.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...