Homeಬಹುಜನ ಭಾರತಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ಮೋದಿ ಮತ್ತು ಝಿನ್ ಪಿಂಗ್ ಇಬ್ಬರೂ ಸದ್ಯಕ್ಕೆ ಯುದ್ಧವನ್ನು ಒಲ್ಲರು. ಇಬ್ಬರಿಗೂ ತಮ್ಮ ದೇಶಗಳ ಅಸಲಿ ಸಮಸ್ಯೆಗಳಿಂದ ಆಂತರಿಕ ಮತ್ತು ಬಾಹ್ಯ ಗಮನವನ್ನು ಬೇರೆಡೆಗೆ ಸೆಳೆಯುವ ಅನಿವಾರ್ಯವಿದೆ. ಗಾಲ್ವಾನ್ ಕಣಿವೆಯ ವಿವಾದ ಇನ್ನೂ ಕೆಲ ತಿಂಗಳುಗಳ ಕಾಲ ಕುದಿಯಲಿದೆ.

- Advertisement -
- Advertisement -

ಒಂದೊಮ್ಮೆ ಕಮ್ಯೂನಿಸ್ಟ್? ಸಿದ್ಧಾಂತದ ತವರಾಗಿದ್ದ ಈ ದೇಶ ಇಂದು ಬಂಡವಾಳಶಾಹಿ ಅಮೆರಿಕಕ್ಕೂ ಅಸೂಯೆ ಆಗುವಷ್ಟರ ಮಟ್ಟಿಗೆ ಬಂಡವಾಳಶಾಹಿ ಆಗಿದೆ. ಕಮ್ಯೂನಿಸ್ಟ್ ಸಿದ್ಧಾಂತ ಈಗ ಉಳಿದಿರುವುದು ಬರಿಯ ಕಾಗದದ ಮೇಲೆ. ಹೆಚ್ಚೆಂದರೆ ಏಕಪಕ್ಷ ಅಧಿಕಾರ ವ್ಯವಸ್ಥೆಯನ್ನು ಪ್ರಶ್ನಾತೀತವಾಗಿ ಮುಂದುವರೆಸಿಕೊಂಡು ಹೋಗಲು ಚೀನಾದ ಕೇಂದ್ರೀಯ ನಾಯಕತ್ವ ಉಳಿಸಿಕೊಂಡಿರುವ ಅನುಕೂಲಕರ ಸಾಧನ ಮಾತ್ರ.

ನೆಹರೂ ಚಾಚಿದ್ದ ಪಂಚಶೀಲ ತತ್ವದ ಸ್ನೇಹ ಹಸ್ತವನ್ನು ತಿರುಚಿ 1962ರಲ್ಲಿ ದಂಡೆತ್ತಿ ಬಂದು ಹೇರಿದ ಪರಾಭವದ ಅವಹೇಳನ ಭಾರತ ಸುಲಭವಾಗಿ ಮರೆಯುವಂತಹುದಲ್ಲ. ಶಾಂತಿ ಸಹಕಾರ ಹಾಗೂ ಪರಸ್ಪರ ವಿಶ್ವಾಸದ ನೆಹರೂ ಮಂತ್ರವನ್ನು ಮಾವೋ-ಝೌ ಜೋಡಿ ಮುದುಡಿ ಬಿಸುಟಿತ್ತು. ಏಷ್ಯಾದ ಅಧಿಕಾರ ಚದುರಂಗದಾಟದಲ್ಲಿ ಭಾರತವನ್ನು ತನ್ನ ಪ್ರಬಲ ಪ್ರತಿಸ್ಪರ್ಧಿ ಎಂಬುದು ಚೀನಾದ ಭಾವನೆ. ಭಾರತ ಮತ್ತು ಚೀನಾ ದೇಶ ಗಳೆರಡೂ ಎದ್ದು ನಿಲ್ಲಲು ಸಾಲುವಷ್ಟು ಎಡೆ ಇದ್ದೇ ಇದೆ ಎಂಬ ಭಾರತದ ಮಾತುಗಳಿಗೆ ಮಾನ್ಯತೆ ನೀಡಿಲ್ಲ.

ಅರುಣಾಚಲ ಪ್ರದೇಶದ ತವಾಂಗ್ ಮೇಲೆಯೂ ಚೀನಾ ಬಹುಕಾಲದಿಂದ ಕಣ್ಣು ಹಾಕಿದೆ. ಚೀನಾದ ಪಾಲಿಗೆ ತವಾಂಗ್ ಟಿಬೆಟ್‍ಗೆ ಸೇರಿದ ಭೂಭಾಗ. ಅರ್ಥಾತ್ ದಕ್ಷಿಣ ಟಿಬೆಟ್. ತವಾಂಗ್ ಅನ್ನು ತನ್ನ ಪಾಲಿನ ಅತ್ಯಂತ ಸೂಕ್ಷ್ಮ ಪ್ರದೇಶ ಎಂದು ಚೀನಾ ಭಾವಿಸಿದೆ. ತಾನು ಆಕ್ರಮಿಸಿಕೊಂಡಿರುವ ಟಿಬೆಟ್ಟಿನಲ್ಲಿ ಅರವತ್ತರ ದಶಕದಲ್ಲಿ ಭುಗಿಲೆದ್ದ ಖಾಂಪಾ ಆಂದೋಲನದ ಬೇರುಗಳು ಇದ್ದದ್ದು ತವಾಂಗ್‍ನಲ್ಲೇ ಎಂಬುದು ಚೀನಾದ ದೃಢ ನಂಬಿಕೆ. ಹೀಗಾಗಿ ಟಿಬೆಟ್ಟಿನಲ್ಲಿ ಚೀನೀ ಆಕ್ರಮಣದ ವಿರುದ್ಧ ಭವಿಷ್ಯತ್ತಿನಲ್ಲಿ ಏಳಬಹುದಾದ ಬಂಡಾಯಗಳು ಅಥವಾ ದಂಗೆಗಳ ನೆಲೆ ತವಾಂಗ್ ಆಗುವ ಸಂಭವವನ್ನು ಬೀಜಿಂಗ್ ಕಂಡಿದೆ.

ಅತಿಕ್ರಮಣವಾದಿ ಚೀನಾದೊಂದಿಗೆ ಭಾರತದ ಗಡಿ ಸಂಕಟಗಳು ತೀವ್ರಗೊಂಡದ್ದು 1950ರ ನಂತರ. ಭಾರತದ ಗೆಳೆಯನಾಗಿದ್ದ ಟಿಬೆಟ್ ಅನ್ನು ಚೀನಾ ಆಕ್ರಮಿಸಿ ನುಂಗಿದ್ದು 1950ರಲ್ಲೇ. ಭಾರತ ಮತ್ತು ಚೀನಾ ನಡುವಣ ತಟಸ್ಥ ತಡೆಗೋಡೆಯಂತಿದ್ದ ಟಿಬೆಟ್ ಚೀನಾದ ಭೂಭಾಗವೇ ಆಗಿ ಹೋಗಿತ್ತು. ನೆಹರೂ ನೇತೃತ್ವದ ಭಾರತ ಸರ್ಕಾರ ಟಿಬೆಟ್ ನೆರವಿಗೆ ಧಾವಿಸಲಿಲ್ಲ. ಕೇವಲ ಪ್ರತಿಭಟನಾ ಪತ್ರ ಬರೆದು ಕುಳಿತಿತು. ಮೈತ್ರಿ ಮತ್ತು ಸದ್ಭಾವನೆಯ ಹೆಸರಿನಲ್ಲಿ ನಿಷ್ಕ್ರಿಯರಾದ ನೆಹರೂ, ಸರ್ದಾರ್ ಪಟೇಲ್ ಅವರ ಎಚ್ಚರಿಕೆಯನ್ನು ಲೆಕ್ಕಿಸಲಿಲ್ಲ. ವಿಸ್ತರಣಾವಾದಿ ಚೀನಾ ಭಾರತದ ಬಾಗಿಲು ತಲುಪಿದ್ದು ಉತ್ತರ ಮತ್ತು ಈಶಾನ್ಯದ ಗಡಿಗಳ ಭದ್ರತೆ ಅಪಾಯಕ್ಕೆ ಸಿಲುಕಿದ್ದು ಸಭೆ ಸೇರಬೇಕೆಂದು ನೆಹರೂ ಅವರಿಗೆ ಪಟೇಲ್ ಪತ್ರ ಬರೆದಿದ್ದರು. ಈ ಸಭೆ ನಡೆಯುವುದೇ ಇಲ್ಲ. ಅಸ್ಸಾಮಿನ ಮುಖ್ಯ ಭಾಗಗಳ ಮೇಲೂ ಚೀನೀಯರು ಕಣ್ಣು ಹಾಕಿರುವ ಪ್ರಸ್ತಾಪವೂ ಈ ಪತ್ರದಲ್ಲಿತ್ತು. ಚೀನಾದ ವಿಸ್ತರಣಾವಾದವನ್ನು ನೆಹರೂ ಮುಂದಾಗಿಯೇ ಅಂದಾಜು ಮಾಡುವಲ್ಲಿ ವಿಫಲರಾದರು. ಟಿಬೆಟ್ ಚೀನಾದ ಅವಿಭಾಜ್ಯ ಅಂಗ ಎಂದು ಭಾರತ ಒಪ್ಪಿಕೊಂಡಿತು. ಟಿಬೆಟ್ ಅಸ್ತಿತ್ವ ಕಳೆದಕೊಂಡು ಚೀನಾದ ಟಿಬೆಟನ್ ಸೀಮೆಯಾಗಿತ್ತು. ಟಿಬೆಟ್ ಮೇಲೆ ಚೀನಾದ ಸಾರ್ವಭೌಮತೆಯನ್ನು ಅಂಗೀಕರಿಸುವ ಒಪ್ಪಂದಕ್ಕೆ ಭಾರತ 1954ರಲ್ಲಿ ಸಹಿ ಹಾಕಿತು. ಹಿಂದೀ ಚೀನೀ ಭಾಯೀ ಭಾಯೀ ಎಂದರು ನೆಹರೂ. ಜಾಗತಿಕ ವೇದಿಕೆಗಳಲ್ಲಿ ಪೀಪಲ್ಸ್ ರಿಪಬ್ಲಿಕ್ ಅಫ್ ಚೀನಾವನ್ನು ಸಮರ್ಥಿಸಿ ಮಾತನಾಡಿದರು. ಭಾರತದ ಈ ಸಮರ್ಥನೆ ಮತ್ತು ಬೆಂಬಲಗಳಿಗೆ ಪ್ರತಿಯಾಗಿ ಭಾರತದೊಂದಿಗೆ ಕೈ ಜೋಡಿಸಿ ‘ಏಷ್ಯನ್ ಕೂಟ’ ರಚಿಸಲು ಚೀನಾ ಒಪ್ಪಿಕೊಳ್ಳುವುದೆಂಬ ನಿರೀಕ್ಷೆ ನೆಹರೂ ಅವರಿಗೆ ಇತ್ತು. 1956ರಲ್ಲಿ ಚೀನಾದ ಭೂಪಟಗಳು ಭಾರತಕ್ಕೆ ಸೇರಿದ್ದ 1.20 ಲಕ್ಷ ಚದರ ಕಿ.ಮೀ.ಗಳಷ್ಟು ವಿಸ್ತೀರ್ಣದ ಗಡಿ ಪ್ರದೇಶವನ್ನು ಚೀನಾಕ್ಕೆ ಸೇರಿದ್ದೆಂದು ತೋರಿಸಿದವು. ನೆಹರೂ ಅವರ ಆಕ್ಷೇಪಣೆಗೆ ಓಗೊಟ್ಟ ಚೀನಾ ಈ ನಕಾಶೆಗಳು ಲೆಕ್ಕಕ್ಕಿಲ್ಲ ಎಂದು ಆಶ್ವಾಸನೆ ನೀಡಿತು. ಆದರೆ ದಲಾಯಿಲಾಮಾ ಮತ್ತು ಟಿಬೆಟನ್ನರಿಗೆ ಭಾರತ ನೀಡಿದ ಆಶ್ರಯ ಕುರಿತು ತೀವ್ರ ತಪ್ಪು ತಿಳಿವಳಿಕೆಗಳು ಉದ್ಭವಿಸಿದವು. ಟಿಬೆಟ್ ಅನ್ನು ಭಾರತ ವಶಪಡಿಸಿಕೊಂಡು ಮಹಾಸಾಮ್ರಾಜ್ಯ ಕಟ್ಟುವ ಉದ್ದೇಶ ಭಾರತಕ್ಕಿದೆ ಎಂದು ಚೀನಾ ಅನುಮಾನಿಸಿತ್ತು.

ಚೀನಾ ವಶಪಡಿಸಿಕೊಳ್ಳುವ ಮುನ್ನ ಪೂರ್ವಕ್ಕೆ ಚೀನಾ, ದಕ್ಷಿಣಕ್ಕೆ ನೇಪಾಳ, ಭೂತಾನ ಹಾಗೂ ಭಾರತ ಮತ್ತು ಪಶ್ಚಿಮದಲ್ಲಿ ಭಾರತದ ಕಾಶ್ಮೀರ ರಾಜ್ಯಗಳಿಂದ ಸುತ್ತುವರೆಯಲ್ಪಟ್ಟಿತ್ತು ಟಿಬೆಟ್. ಭಾರತ ಉಪಖಂಡ ಮತ್ತು ಟಿಬೆಟನ್ನು ಬೇರ್ಪಡಿಸಿದ್ದು ಹಿಮಾಲಯ ಪರ್ವತಶ್ರೇಣಿಗಳು. ಭಾರತದ ಉತ್ತರ ಮತ್ತು ಈಶಾನ್ಯ ಗಡಿಗಳ ರಕ್ಷಣೋಪಾಯದಲ್ಲಿ ಟಿಬೆಟ್‍ಗೆ ಬಹುಮುಖ್ಯ ಪಾತ್ರವಿತ್ತು. ಹಿಮಾಲಯದ ಆಚೆಗೆ ಜಗತ್ತಿನ ಸಂಪರ್ಕದಿಂದ ಕಡಿದು ಹೋಗಿದ್ದ ಬಂಜರು ವಿಸ್ತಾರವಿತ್ತು. ಹೀಗಾಗಿ ಉತ್ತರದ ಎರಡು ಸಾವಿರ ಮೈಲಿಗಳಷ್ಟು ಗಡಿಯನ್ನು ಕಾಯುವ ಭಾರತದ ಭಾರವನ್ನು ಈ ಬಂಜರು ವಿಸ್ತಾರ ಹಗುರಾಗಿಸಿತ್ತು. ಚೀನೀಯರು ಟಿಬೆಟನ್ನು ಆಕ್ರಮಿಸಿಕೊಳ್ಳುವುದರೊಂದಿಗೆ ಈ ತಟಸ್ಥ ಬಂಜರು ವಿಸ್ತಾರ ಭಾರತದ ಪಾಲಿಗೆ ಕಳೆದು ಹೋಯಿತು. ಹಿಮಾಲಯದಂತಹ ಮಹಾನ್ ರಕ್ಷಣಾ ತಡೆಗೋಡೆಯ ಪ್ರಭಾವ ಕೂಡ ಕುಗ್ಗಿ ಹೋಯಿತು.

ಭಾರತ ಮತ್ತು ನೇಪಾಳದಿಂದ ಟಿಬೆಟ್ ಅನ್ನು ಮುಟ್ಟುವುದು ದುಸ್ಸಾಧ್ಯ. ವರ್ಷದಲ್ಲಿ ಆರರಿಂದ ಎಂಟು ತಿಂಗಳ ಕಾಲ ಹಿಮವನ್ನು ಹೊದ್ದು ನಿಂತ ಕಡಿದಾದ ಉನ್ನತ ಪರ್ವತಶ್ರೇಣಿಗಳನ್ನು ಹಾಯುವುದು ಹಿಮಾಲಯದಷ್ಟೇ ಎತ್ತರದ ಸವಾಲು. ಆದರೆ ಟಿಬೆಟಿನಿಂದ ಭಾರತವನ್ನು ತಲುಪುವುದು ಸುಲಭ. 14,000 ಅಡಿಗಳ ಎತ್ತರದಿಂದ 6000 ಅಡಿಗಳ ತನಕ ಕ್ರಮೇಣ ಇಳಿಜಾರು. ಟಿಬೆಟ್‍ನ ಪಶ್ಚಿಮ ಭೂಭಾಗದ ಮೂರು ವಿಭಾಗಗಳು ಭಾರತದ ಲದ್ದಾಖ್, ಹಿಮಾಚಲ ಪ್ರದೇಶ ಹಾಗೂ ಉತ್ತರಪ್ರದೇಶದ ವಾಯುವ್ಯ ಸರಹದ್ದುಗಳನ್ನು ಮುಟ್ಟುತ್ತವೆ. ಹಿಂದೂಗಳು ಮತ್ತು ಬೌದ್ಧರ ಪಾಲಿಗೆ ಪವಿತ್ರವೆನಿಸಿದ ಕೈಲಾಶ ಮಾನಸ ಸರೋವರ ಇರುವುದು ಈ ಮೂರು ವಿಭಾಗಗಳಲ್ಲಿ ಒಂದಾದ ಎಂಗಾರಿಯಲ್ಲಿ. ಇಂಡಸ್, ಸಟ್ಲೆಜ್, ಬ್ರಹ್ಮಪುತ್ರ ನದಿಗಳ ಉಗಮವೂ ಇದೇ ಮಾನಸ ಸರೋವರ ಸೀಮೆ.ಇತಿಹಾಸಕಾರ ಪ್ರೊ. ಜಾರ್ಜ್ ಜಿನ್ಸ್ ಬರ್ಗ್ ಅವರ ಪ್ರಕಾರ ಟಿಬೆಟ್‍ಅನ್ನು ನಿಯಂತ್ರಿಸುವವರು ಹಿಮಾಲಯದ ತಪ್ಪಲನ್ನು ನಿಯಂತ್ರಿಸುತ್ತಾರೆ, ಹಿಮಾಲಯದ ತಪ್ಪಲನ್ನು ನಿಯಂತ್ರಿಸುವವರು ಭಾರತ ಉಪಖಂಡದ ಭದ್ರತೆಗೆ ಬೆದರಿಕೆ ಒಡ್ಡಬಲ್ಲರು, ಭಾರತದ ಭದ್ರತೆಯನ್ನು ಬಾಧಿಸಬಲ್ಲವರು ಇಡೀ ಆಗ್ನೇಯ ಏಷ್ಯಾವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಲ್ಲರು, ಅದರೊಂದಿಗೆ ಅಖಂಡ ಏಷ್ಯಾದ ಮೇಲೆ ನಿಯಂತ್ರಣ ಸಾಧಿಸಬಲ್ಲರು.

ಮಧ್ಯ ಏಷ್ಯಾದ ಗಡಿಸೀಮೆಗಳನ್ನು ರಾಜಕೀಯ ಕ್ರಿಯೆಯ ಆಧಾರವನ್ನಾಗಿ ಮಾಡಿಕೊಳ್ಳಲು ಟಿಬೆಟ್ ಪ್ರಶಸ್ತ ನೆಲ. ಪರಮಾಣು ಯುಗದಲ್ಲಿ ಬಾಂಬರ್ ವಿಮಾನಗಳು ದಾಳಿಗೆ ಮುನ್ನ ಆಗಸಕ್ಕೆ ಚಿಮ್ಮಲು ಮತ್ತು ಕ್ಷಿಪಣಿಗಳನ್ನು ಹಾರಿಸುವ ಅಪಾಯಕಾರಿ ಸಾಮರ್ಥ್ಯ ಹೊಂದಿದ ನೆಲವಿದು ಎಂದು ಮತ್ತೊಬ್ಬ ತಜ್ಞ ಜಾನ್ ರೋಲ್ಯಾಂಡ್ ಹೇಳುತ್ತಾರೆ.

ಮೋದಿ ಮತ್ತು ಝಿನ್ ಪಿಂಗ್ ಇಬ್ಬರೂ ಸದ್ಯಕ್ಕೆ ಯುದ್ಧವನ್ನು ಒಲ್ಲರು. ಇಬ್ಬರಿಗೂ ತಮ್ಮ ದೇಶಗಳ ಅಸಲಿ ಸಮಸ್ಯೆಗಳಿಂದ ಆಂತರಿಕ ಮತ್ತು ಬಾಹ್ಯ ಗಮನವನ್ನು ಬೇರೆಡೆಗೆ ಸೆಳೆಯುವ ಅನಿವಾರ್ಯವಿದೆ. ಗಾಲ್ವಾನ್ ಕಣಿವೆಯ ವಿವಾದ ಇನ್ನೂ ಕೆಲ ತಿಂಗಳುಗಳ ಕಾಲ ಕುದಿಯಲಿದೆ.


ಇದನ್ನು ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್ 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...