Homeರಾಜಕೀಯ56 ಇಂಚು ಎದೆ ಮಾಡಿದ 59 ನಿಮಿಷದ ಹಗರಣ

56 ಇಂಚು ಎದೆ ಮಾಡಿದ 59 ನಿಮಿಷದ ಹಗರಣ

- Advertisement -
- Advertisement -

ಸೋಮಶೇಖರ್ ಚಲ್ಯ |

ಭಾರತದ ಪ್ರಧಾನ ಸೇವಕ ನರೇಂದ್ರ ಮೋದಿಯವರು ಸಾಮಾನ್ಯರ ಸೇವೆಯನ್ನು ಬದಿಗಿಟ್ಟು ಕಾರ್ಪೊರೇಟ್ ಖದೀಮರ ಸೇವೆಯಲ್ಲಿ ನಿರತರಾಗಿದ್ದಾರೆಂಬ ಆರೋಪಕ್ಕೆ ಕಾರಣಗಳಿದ್ದವು. ಆದರೆ ನಿರ್ದಿಷ್ಟ ಹಗರಣಗಳಾಗಿ ಹೊರಬಿದ್ದಿರಲಿಲ್ಲ. ಆದರೆ ಅವು ಈಗ ವಾರಕ್ಕೊಂದರಂತೆ ಎಕ್ಸ್ಪೋಸ್ ಆಗುತ್ತಿವೆ. ಮೋದಿಯವರ ಹಗರಣ ಖಾತೆಗಳಲ್ಲಿರುವ ರಫೇಲ್ ಹಗರಣ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನಾ ಹಗರಣಗಳಂತಹವುಗಳ ಜೊತೆಗೆ ಹೊಸದೊಂದು ಹಗರಣ ಸೇರ್ಪಡೆಯಾಗಿದೆ. ಅದೂ ನಿಮಿಷದ ಲೆಕ್ಕದ್ದು.

ಕೆಲವು ಕಂಪನಿಗಳು ವಿಶೇಷ ಆಫರ್‌ಗಳ ಸ್ಕ್ರಾಚ್‌ ಕಾರ್ಡ್ಗಳನ್ನು ನೀಡುತ್ತವೆ. ಸ್ಕ್ರಾಚ್ ಮಾಡಿ ನೋಡಿದರೆ, ಕೆಲವು ಕಾರ್ಡ್ಗಳಲ್ಲಿ ಬೆಟರ್ ಲಕ್ ನೆಕ್ಸ್ಟ್ ಟೈಮ್ ಎಂದಿರುತ್ತವೆ. ಇದೂ ಸಹಾ ಅಂತಹದೊಂದು ‘ಭರ್ಜರಿ ಆಫರ್’. ಮೋದಿ ಸಾಹೇಬರು ಪ್ರಜೆಗಳಿಗೆ ನವೆಂಬರ್ 2ರಂದು ದೀಪಾವಳಿಯ ಭರ್ಜರಿ ಆಫರ್ ಘೋಷಿಸಿದ್ದಾರೆಂದು ಕೆಲವು ಮಾಧ್ಯಮಗಳು ತಮ್ಮ ಸ್ವಾಮಿನಿಷ್ಟೆಯನ್ನು ಪ್ರದರ್ಶಿಸಿದ್ದವು. ಆದರೆ ಅದೀಗ ಜನರ ಪಾಲಿಗೆ ದೀಪಾವಳಿಯ ಟುಸ್ ಪಟಾಕಿಯಾದಂತಿದ್ದರೂ ಕಾರ್ಪೊರೇಟ್‌ಗಳ ಖಾತೆ ತುಂಬಿ ತುಳುಕುವಂತಾಗಿದೆ.

‘ಕೇಂದ್ರ ಸರ್ಕಾರ ಕೈಗೊಂಡಿರುವ 12 ಪ್ರಮುಖ ಯೋಜನೆಗಳು ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ(ಎಂಎಸ್‌ಎಂಇ)ಗಳಿಗೆ ವರದಾನವಾಗಲಿದೆ. ಅದರಲ್ಲಿ ಪ್ರಮುಖವಾದದ್ದು 59 ನಿಮಿಷದಲ್ಲಿ ಒಂದು ಕೋಟಿಯವರೆಗಿನ ಲೋನ್ ಮೇಳದ ಸೌಲಭ್ಯ’ ಎಂದು ಮೋದಿ ಪುಂಗಿ ಊದಿದ್ದರು. ಈ ಯೋಜನೆಯಡಿಯಲ್ಲಿ ಸಾಲ ಪಡೆದವರಿಗೆ ಶೇ.3ರಿಂದ ಶೇ.5 ರಷ್ಟು ಬಡ್ಡಿ ರಿಯಾಯತಿ, ಮಹಿಳಾ ಉದ್ಯಮಿಗಳಿಂದ ಶೇ.3ರಷ್ಟು ಸರ್ಕಾರವೇ ಖರೀದಿಸುತ್ತದೆ. ಈ ಯೋಜನೆಗಾಗಿ 6,000ರೂ ಕೋಟಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಹೇಳಿಕೊಂಡಿದ್ದರು.

ಈ ಯೋಜನೆಯ ಫಲಾನುಭವಿಯಾಗಲು ಪ್ರತ್ಯೇಕ ವೆಬ್‌ಪೇಜ್‌ಯಿದ್ದು www.psbloansin59minutes.com ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಈ ಸೂಚನೆಯಂತೆ ಒಬ್ಬ ವ್ಯಕ್ತಿ ಅಪ್ಲಿಕೇಷನ್ ಹಾಕಿದ್ದು 85 ಲಕ್ಷರೂಗಳ ಅಪ್ರೂವಲ್ ಕೂಡ ಪಡೆದು ವಿಜಯಾ ಬ್ಯಾಂಕಿನಲ್ಲಿ ಲೋನ್ ಕೇಳಲು ಹೋಗಿದ್ದಾರೆ. ಬ್ಯಾಂಕ್‌ನವರು ಹೇಳಿದ್ದು ಕೇಳಿ ಹೌಹಾರಿ ಹೋಗಿದ್ದಾರೆ. ಅಲ್ಲಿ ‘ನೀವೇ ಮೊದಲು 85 ಲಕ್ಷ ರೂ.ಗಳನ್ನು ಕಟ್ಟಬೇಕು. ಆನಂತರ ನಿಮಗೆ ಒಂದು ಕೋಟಿಯ ಲೋನ್ ಕೊಡುತ್ತೇವೆ’ ಎಂದು ಹೇಳಿದ್ದಾರೆ. ಆ ವ್ಯಕ್ತಿ ಬ್ಯಾಂಕಿನವರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದಾರೆ. ಈ ವಿಚಾರ ತಿಳಿದ ಹೆಚ್‌ಡಬ್ಲ್ಯು ನ್ಯೂಸ್ ವರದಿಗಾರರು, ಇದರ ಅಸಲೀಯತ್ತೇನೆಂದು ತಿಳಿಯಲು ತಾವೇ ಒಬ್ಬರಿಂದ ಅಪ್ಲಿಕೇಶನ್ ಹಾಕಿಸಿದ್ದಾರೆ. ಈ ಅಪ್ಲಿಕೇಶನ್ ಮೋದಿ ಸಾಹೇಬರ 59 ನಿಮಿಷದ ಹಗರಣವನ್ನು ಬಯಲು ಮಾಡಿದೆ.

ಅಪ್ಲೇ ಮಾಡಿದ ವ್ಯಕ್ತಿಯಿಂದ ಪಾನ್ ನಂಬರ್, ಜಿಎಸ್‌ಟಿ ನಂಬರ್ ಅಷ್ಟೇ ಅಲ್ಲದೆ ಲಾಗಿನ್ ಐಡಿಯ ಪಾಸ್‌ರ‍್ಡ್ ಕೂಡ ಅಪ್ಲಿಕೇಷನ್‌ನಲ್ಲಿ ಪಡೆದುಕೊಂಡಿದ್ದಾರೆ. ಅಪ್ಲೇ ಮಾಡಿದ ಕೇವಲ 47 ನಿಮಿಷದಲ್ಲಿ ಲೋನ್‌ಗೆ 1,48,000ರೂ.ಗಳಿಗೆ ಅಪ್ರೂವಲ್ ಸಿಕ್ಕಿದೆ. ತಮಾಷೆಯೆಂದರೆ ಅಪ್ರುವಲ್‌ನಲ್ಲಿ ಇನ್ ಪ್ರಿನ್ಸಿಪಲ್ ಅಪ್ರೂವಲ್ (ತಾತ್ವಿಕ ಒಪ್ಪಿಗೆ) ಎಂದು ನೀಡಲಾಗಿದ್ದು, ಸಾಲವನ್ನು ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಎಂಬ ಬ್ಯಾಂಕಿನಿಂದ ಪಡೆಯಬೇಕು ಎಂದು ಬ್ಯಾಂಕಿನ ವಿವರಗಳನ್ನೂ ಸಹ ಸೂಚಿಸಲಾಗಿತ್ತು. ಅಷ್ಟೇ ಅಲ್ಲದೆ ಈತ 1,180ರೂ ಗಳ ಡಿಡಿಯನ್ನು ಕ್ಯಾಪಿಟ ವರ್ಲ್ಡ್ ಪ್ಲಾಟ್‌ಫಾರ್ಮ ಪ್ರೈ. ಲಿ. ಎಂಬ ಖಾಸಗೀ ಕಂಪನಿಯ ಹೆಸರಿಗೆ ಕಟ್ಟಬೇಕೆಂದು ಸೂಚಿಸಲಾಗಿತ್ತು. ಸಾಮಾನ್ಯವಾಗಿ ಸರ್ಕಾರಿ ಸೌಲಭ್ಯಗಳನ್ನು ಪಡೆದರೆ ಸರ್ಕಾರಕ್ಕೆ ಡಿಡಿ ಕಟ್ಟುವುದು ಮಾಮೂಲಿ. ಆದರೆ ಈ ಸ್ಕೀಮ್‌ಗೆ ಮಾತ್ರ ಖಾಸಗಿ ಕಂಪನಿ ಹೆಸರಿನಲ್ಲಿ ಕಟ್ಟಬೇಕೆನ್ನುವುದೇ ಈ ಹಗರಣದ ಮೊದಲ ಹಂತ.

ಅಂದರೆ ಮೋದಿ ಸಾಹೇಬರು ಈ ಸ್ಕೀಮ್ ಮೂಲಕ ಖಾಸಗೀ ಕಂಪನಿಯ ಖಜಾನೆ ತುಂಬಿಸುವ ಪ್ಲಾನ್ ಮಾಡಿದ್ದಾರೆ ಎಂಬುದು ಕಣ್ಣೋಟಕ್ಕೆ ಕಾಣುವ ವಿಚಾರ. ಕೇವಲ ಒಂದು ಮಿಲಿಯನ್ ಅರ್ಜಿಗಳು ಬಂದರೂ 118 ಕೋಟಿ ರೂ.ಗಳು ಆ ಖಾಸಗಿ ಕಂಪೆನಿಗೆ ದಕ್ಕುತ್ತವೆ. ಪ್ರಧಾನಿ ಮೋದಿ ಈ ಸ್ಕೀಮ್ ಘೋಷಿಸಿದ ಮಾರನೆಯ ದಿನವೇ 23,582 ಕೋಟಿ ರೂ.ಗಳಷ್ಟು ಸಾಲ ನೀಡುವ 1.69 ಲಕ್ಷ ಅರ್ಜಿಗಳನ್ನು ಅಪ್ರೂವಲ್ ಮಾಡಲಾಗಿದೆ ಎಂದು ಘೋಷಿಸಲಾಗಿತ್ತು. ವಾಸ್ತವವೇನೆಂದರೆ ಅಲ್ಲಿಯವರೆಗೆ ಒಬ್ಬರಿಗೂ ಲೋನ್ ಹಣ ಸಿಕ್ಕಿರಲಿಲ್ಲ. ಈ ಲೆಕ್ಕವನ್ನು ಪ್ರಶ್ನಿಸಿದ ಕ್ಷಣಗಳಲ್ಲಿ ಮಾಹಿತಿಯನ್ನು ಅಳಿಸಿ ಹಾಕಿದ್ದು ಮತ್ತಷ್ಟು ಅನುಮಾನಗಳನ್ನು ಹುಟ್ಟು ಹಾಕಿತ್ತು.

ಅಂದಹಾಗೆ ರಫೇಲ್ ಹಗರಣದ ಮೂಲಕ ಅಂಬಾನಿಯ ಖಜಾನೆ ತುಂಬಿಸಹೊರಟಿದ್ದ ಮೋದಿ ಈ ಸ್ಕೀಮ್‌ಗೆ ಕೈಜೋಡಿಸಿದ್ದು ಇದೇ ಅಂಬಾನಿಯ ಆಪ್ತಮಿತ್ರ ಅಹಮದಾಬಾದ್ ವಿನೋದ್ ಮೋದ, ಜಿನಂದ್ ಶಾ ಮತ್ತು ಚಕ್ರಬೋಟ್ರಿ ಪಾಲುದಾರಿಕೆಯ ಕ್ಯಾಪಿಟಾ ವರ್ಲ್ಡ್ ಕಂಪನಿಯೊಂದಿಗೆ. ಈ ಕಂಪನಿ ಉದ್ಭವವಾಗಿದ್ದು ಮೋದಿ ಅಧಿಕಾರಕ್ಕೇರಿದ ಒಂದು ವರ್ಷದ ನಂತರ 2015ರಲ್ಲಿ. ಈ ಕಂಪನಿ ಆರಂಭಗೊಂಡ ಮೊದಲ ವರ್ಷ ಅಂದರೆ 2016ರಲ್ಲಿ ಇದರ ಆದಾಯ ಸೊನ್ನೆ ಮಾತ್ರ. ನಂತರ 2017ರಲ್ಲಿ 15.680 ರೂ. ಲಾಭ ಗಳಿಸಿತ್ತು. ಇನ್ನೊಂದು ಗಮನಿಸಬೇಕಾದ ವಿಷಯವೆಂದರೆ ಈ ಕಂಪನಿಯ ಶೇರ್‌ನಲ್ಲಿ ಎಸ್‌ಐಡಿಬಿಐ ಬ್ಯಾಂಕ್ ಸೇರಿದಂತೆ 9 ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಒಂದು ಶೇರ್‌ಗೆ 119.39 ರೂ.ಗಳಂತೆ 17.43.371 ಶೇರ್‌ಗಳಿಗೆ 22.5 ಕೋಟಿ ರೂ.ಗಳನ್ನು ಹೂಡಿಕೆ ಮಾಡಿವೆ.

ಇಷ್ಟೆಲ್ಲಾ ಹೂಡಿಕೆ ಮಾಡಿರುವ ಈ ಕಂಪನಿಯ ಲಾಭ 15.680 ಇದ್ದುದರಿಂದ ಮೋದಿ ಸಾಹೇಬರು ಈ ಕಂಪನಿಯನ್ನು ಮೇಲೆತ್ತುವ ಉಸ್ತುವಾರಿ ತೆಗೆದುಕೊಂಡಿದ್ದಾರೆ. ಇನ್ನೊಂದು ವಿಚಾರವೆಂದರೆ ಈ ಕಂಪನಿ ಆರಂಭಗೊಂಡು 3 ವರ್ಷವಾಗಿದ್ದು ಇದರ ಸಿಇಓಗಳು ಮೂರು ಭಾರಿ ಬದಲಾಗಿದ್ದರೆ. ಜಿನಾಬ್ ವೈ ಶಾ, ವಿಕಾಸ್ ಮನಿಲಾಲ್ ಷಾ, ಅಖಿಲ್ ಹಂಡಾ ಈ ಮೂವರೂ ಕ್ಯಾಪಿಟಾವರ್ಲ್ಡ್ನ ಸಿಇಓಗಳಾಗಿದ್ದು, ಇವರು 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಪರ ಪ್ರಚಾರದ ಬ್ಯಾಟಿಂಗ್ ಮಾಡಿದ್ದರು ಎಂಬುದು ವಿಶೇಷ.

ಹಾಗಾಗಿ ಮೋದಿ ಪರ ಬ್ಯಾಟಿಂಗ್ ಮಾಡಿದ್ದ ಸಿಇಓಗಳು, ಮಿತ್ರ ಅಂಬಾನಿಯ ಸ್ನೇಹಿತರ ಕಂಪನಿಯನ್ನು ಉಳಿಸುವ ಸಲುವಗಿ 59 ನಿಮಿಷದಲ್ಲಿ ಸಾಲ ಸೌಲಭ್ಯದ ಮೋದಿಯ ಸ್ಕೀಮ್‌ಗೆ ಲಕ್ಷಾಂತರ ಜನ ಅಪ್ಲಿಕೇಷನ್ ಹಾಕಿದ್ದು ತಲಾ 1.180ರೂ ಡಿಡಿಯಂತೆ ಬಿಲಿಯನ್‌ಗಟ್ಟಲೆ ಸಾರ್ವಜನಿಕರ ಹಣ ಕ್ಯಾಪಿಟಾವರ್ಲ್ಡ್ನ ಪಾಲಿಗೆ ದಯಪಾಲಿಸಿದೆ, ಅಷ್ಟೇ ಅಲ್ಲದೆ ಅಪ್ಲೇ ಮಾಡಿದವರ ವ್ಯವಹಾರದ ಎಲ್ಲಾ ಡಿಟೈಲ್ಸ್ಗಳನ್ನು ಈ ಕಂಪನಿ ಪಡೆದುಕೊಂಡಿದೆ. ಅಪ್ರುವಲ್‌ನಲ್ಲಿಯೇ ಇರುವಂತೆ ಅದು ತಾತ್ವಿಕ ಒಪ್ಪಿಗೆಯಾಗಿದ್ದು, ಸಾಲ ನೀಡಬಹುದೆಂದಷ್ಟೇ ಸೂಚಿಸಿದ್ದು ಸಾಲ ದೊರೆತೇಬಿಡುತ್ತದೆ ಎಂದೇನೂ ಇಲ್ಲವಾದ್ದರಿಂದ ಲೋನ್‌ನ ಆಸೆಯನ್ನು ಮರೆಯುವುದೇ ಸೂಕ್ತವೆಂಬಂತೆ ಪರೋಕ್ಷವಾಗಿ ಕಂಪನಿ ತಿಳಿಸಿದೆ. ಒಟ್ಟಿನಲ್ಲಿ ಇದುವರೆಗೂ ಸರ್ಕಾರದ ಹಣದಿಂದ ಕಾರ್ಪೊರೇಟ್‌ಗಳನ್ನು ಬೆಳೆಸುತ್ತಿದ್ದ ದಾರಿಗಿಂತ ಭಿನ್ನವಾಗಿ ನೇರವಾಗಿ ಸಾರ್ವಜನಿಕರ ಜೇಬಿನಿಂದ ಕಾರ್ಪೊರೇಟ್ ಖಜಾನೆ ತುಂಬಿಸಿರುವ ಮೊದಲ ಹಗರಣ ಪ್ರಧಾನ ಕಾರ್ಪೊರೇಟ್ ಸೇವಕ ಮೋದಿಯದ್ದು. ಮುದ್ರಾ, ಫಸಲ್ ಬಿಮಾ ಯೋಜನೆಗಳಿಂದ ಜನರನ್ನು ಯಾಮಾರಿಸಿದ್ದ ಮೋದಿ ಈ ಹಗರಣದಲ್ಲಿ ನೇರವಾಗಿ ಜನರ ಜೇಬಿಗೆ ಕತ್ತರಿಹಾಕಿ ಯಾಮಾರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...