Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಗಡಿ ಉದ್ವಿಗ್ನತೆಯ ಮಧ್ಯೆಯೂ ಭಾರತದಲ್ಲಿ ಮೊದಲ ಶಾಖೆ ತೆರೆದ ಬ್ಯಾಂಕ್ ಆಫ್ ಚೀನಾ?

ಫ್ಯಾಕ್ಟ್‌ಚೆಕ್‌: ಗಡಿ ಉದ್ವಿಗ್ನತೆಯ ಮಧ್ಯೆಯೂ ಭಾರತದಲ್ಲಿ ಮೊದಲ ಶಾಖೆ ತೆರೆದ ಬ್ಯಾಂಕ್ ಆಫ್ ಚೀನಾ?

- Advertisement -
- Advertisement -

ಭಾರತ ಚೀನಾ ಉಭಯ ದೇಶಗಳ ಗಡಿ ಉದ್ವಿಗ್ನತೆಯ ಮಧ್ಯೆಯೂ ಭಾರತದಲ್ಲಿ ಕಾರ್ಯನಿರ್ವಹಿಸಲು ಆರ್‌ಬಿಐ ಬ್ಯಾಂಕ್ ಆಫ್ ಚೀನಾಕ್ಕೆ ಪರವಾನಗಿ ನೀಡಿದೆ ಮತ್ತು ಅದು ಮೊದಲ ಶಾಖೆ ತೆರೆದಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ.

ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ರಕ್ತಸಿಕ್ತ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ನಂತರ ಭಾರತದಲ್ಲಿ ಚೀನಾ ವಿರೋಧಿ ಭಾವನೆ ಹೆಚ್ಚಾಗಿದೆ. ಚೀನಾದ ಉತ್ಪನ್ನಗಳು ಮತ್ತು ಸೇವೆಗಳನ್ನು ಬಹಿಷ್ಕರಿಸುವ ಕರೆಗಳ ಹೊರತಾಗಿಯೂ ಬ್ಯಾಂಕ್ ಆಫ್ ಚೀನಾ ತನ್ನ ಮೊದಲ ಭಾರತೀಯ ಶಾಖೆಯನ್ನು ಮುಂಬೈನಲ್ಲಿ ತೆರೆಯುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಿಡಿ ಕಾರಲಾಗಿದೆ.

ಫೇಸ್‌ಬುಕ್‌ನಲ್ಲಿ “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಆಫ್ ಚೀನಾಕ್ಕೆ ಭಾರತದಲ್ಲಿ ಕಾರ್ಯನಿರ್ವಹಿಸಲು ಪರವಾನಗಿಗಳನ್ನು ನೀಡುತ್ತದೆ. ಇದು ಚೀನಾದ ನಾಯಕತ್ವಕ್ಕೆ ಪಿಎಂ ಮೋದಿ ಕೊಟ್ಟಿದ್ದ ಆಶ್ವಾಸನೆಯಾಗಿದೆ: ಮೂಲಗಳು” ಎಂಬ ಎಎನ್‌ಐ ಟ್ವೀಟ್‌ ಅನ್ನು ಉಲ್ಲೇಖಿಸಿರುವ ಪೋಸ್ಟ್ ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್

ಗಡಿ ಉದ್ವಿಗ್ನತೆಯ ನಡುವೆಯೂ ಚೀನಾ ಬ್ಯಾಂಕ್‌ಗೆ ಅವಕಾಶ ವೈರಲ್‌ ಪೋಸ್ಟ್‌ ಹೇಳಿಕೆಯು ಸುಳ್ಳಾಗಿದೆ. ಏಕೆಂದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2018ರಲ್ಲಿಯೇ ಬ್ಯಾಂಕ್ ಆಫ್ ಚೀನಾಕ್ಕೆ ಪರವಾನಗಿ ನೀಡಿತ್ತು. ಅಲ್ಲದೇ ಬ್ಯಾಂಕ್ ಆಫ್ ಚೀನಾ ತನ್ನ ಮೊದಲ ಭಾರತೀಯ ಶಾಖೆಯನ್ನು ಮುಂಬೈನಲ್ಲಿ ಕಳೆದ ವರ್ಷ ಜೂನ್‌ನಲ್ಲಿಯೇ ತೆರೆದಿದೆ. ವೈರಲ್ ಎಎನ್‌ಐ ಪೋಸ್ಟ್‌ನಲ್ಲಿ ಅವರ ದಿನಾಂಕವನ್ನು ಕತ್ತರಿಸಿ ಪೋಸ್ಟ್‌ ಮಾಡಿದೆ. ಆ ಎಎನ್ಐ ಟ್ವೀಟ್ ಎರಡು ವರ್ಷಗಳಷ್ಟು ಹಳೆಯದಾಗಿದೆ.

 

ಬ್ಯಾಂಕ್ ಆಫ್ ಚೀನಾ ಭಾರತದಲ್ಲಿ ತನ್ನ ಮೊದಲ ಶಾಖೆಯನ್ನು ತೆರೆಯಲು ಸಂಬಂಧಿಸಿದ ಹಲವಾರು ಸುದ್ದಿ ಲೇಖನಗಳು ಲಭ್ಯವಿವೆ. ಈ ಸುದ್ದಿ ವರದಿಗಳ ಪ್ರಕಾರ, 2019 ರ ಜೂನ್‌ನಲ್ಲಿ ಮುಂಬೈನಲ್ಲಿ ಶಾಖೆ ಪ್ರಾರಂಭವಾಯಿತು.

ಜುಲೈ 4, 2018 ರಂದು, ಸುದ್ದಿ ಸಂಸ್ಥೆ ಎಎನ್‌ಐ ಭಾರತದಲ್ಲಿ ಕಾರ್ಯನಿರ್ವಹಿಸಲು ಆರ್‌ಬಿಐ ಬ್ಯಾಂಕ್ ಆಫ್ ಚೀನಾಕ್ಕೆ ಪರವಾನಗಿ ನೀಡಿದೆ ಎಂದು ಟ್ವೀಟ್ ಮಾಡಿದೆ. “ಹಿಂದೂಸ್ತಾನ್ ಟೈಮ್ಸ್” ಕೂಡ ಜುಲೈ 4, 2018 ರಂದು ವರದಿ ಮಾಡಿದೆ.

ಕಳೆದ ತಿಂಗಳು ಚೀನಾದ ನಗರವಾದ ಕಿಂಗ್‌ಡಾವೊದಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಭೇಟಿಯಾದಾಗ ಬ್ಯಾಂಕ್ ಆಫ್ ಚೀನಾ ಭಾರತದಲ್ಲಿ ಶಾಖೆಗಳನ್ನು ಸ್ಥಾಪಿಸಲು ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ಮಾತು ನೀಡಿದ್ದರು ಎಂದು ವರದಿ ಹೇಳಿದೆ.

ಆದ್ದರಿಂದ, ಉಭಯ ದೇಶಗಳ ಗಡಿ ಉದ್ವಿಗ್ನತೆಯ ನಡುವೆ ಬ್ಯಾಂಕ್ ಆಫ್ ಚೀನಾ ತನ್ನ ಮೊದಲ ಭಾರತೀಯ ಶಾಖೆಯನ್ನು ಮುಂಬೈನಲ್ಲಿ ತೆರೆಯುತ್ತಿದೆ ಎಂಬ ವೈರಲ್ ಹಕ್ಕು ತಪ್ಪುದಾರಿಗೆಳೆಯುವಂತಿದೆ. ವಾಸ್ತವದಲ್ಲಿ ಕಳೆದ ವರ್ಷವೆ ಶಾಖೆ ತೆರೆದಿತ್ತು ಮತ್ತು ಎರಡು ವರ್ಷಗಳ ಹಿಂದೆಯೇ ಪರವಾನಗಿ ನೀಡಲಾಗಿದೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ: ವಾಟ್ಸಾಪ್‌ ಮೆಸೇಜನ್ನು ನಂಬಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ’ಟೈಮ್ಸ್ ನೌ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...