Homeಅಂತರಾಷ್ಟ್ರೀಯನವದೆಹಲಿಯ 50% ರಷ್ಟು ಪಾಕಿಸ್ತಾನ್ ಹೈಕಮೀಷನ್ ಸಿಬ್ಬಂದಿಗಳನ್ನು ಕಡಿಮೆಗೊಳಿಸಲಿರುವ ಭಾರತ

ನವದೆಹಲಿಯ 50% ರಷ್ಟು ಪಾಕಿಸ್ತಾನ್ ಹೈಕಮೀಷನ್ ಸಿಬ್ಬಂದಿಗಳನ್ನು ಕಡಿಮೆಗೊಳಿಸಲಿರುವ ಭಾರತ

- Advertisement -
- Advertisement -

ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನ ಸಿಬ್ಬಂದಿಗಳ ಬಲವನ್ನು 50% ರಷ್ಟು ಕಡಿಮೆಗೊಳಿಸುವುದಾಗಿ ಭಾರತ ಮಂಗಳವಾರ ಹೇಳಿದೆ. ಅಲ್ಲದೆ ಉಭಯ ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ವಿವಾದಗಳ ಮಧ್ಯೆ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಅರ್ಧದಷ್ಟು ಅಧಿಕಾರಿಗಳನ್ನು ಕೂಡ ವಾಪಸ್‌ ಕರೆಸಿಕೊಳ್ಳಲಿದೆ.

ವಿದೇಶಾಂಗ ಸಚಿವಾಲಯವು ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ ಅಫೈರ್‌ಗಳಾದ ಸೈಯದ್ ಹೈದರ್ ಷಾ ಅವರನ್ನು ಕರೆದು ತನ್ನ ಕಾರ್ಯಾಚರಣೆಯ ಅಧಿಕಾರಿಗಳ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಮೇ 31 ರಂದು ಬೇಹುಗಾರಿಕೆ ಆರೋಪದ ಮೇಲೆ ಇಬ್ಬರು ಪಾಕಿಸ್ತಾನ ಹೈಕಮಿಷನ್ ನೌಕರರನ್ನು ಕೇಂದ್ರ ಹೊರಹಾಕಿತು. ಅಬಿದ್ ಹುಸೇನ್ ಮತ್ತು ಮೊಹಮ್ಮದ್ ತಾಹಿರ್ ನಡವಳಿಕೆಯ ಆರೋಪವನ್ನು “ರಾಜತಾಂತ್ರಿಕ ಕಾರ್ಯಾಚರಣೆಯ ಸದಸ್ಯರಾಗಿ ಅವರ ಸ್ಥಾನಮಾನಕ್ಕೆ ಹೊಂದಿಕೆಯಾಗುವುದಿಲ್ಲ” ಎಂದು ಹೇಳಿತ್ತು ಹಾಗೂ 24 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಕೇಳಲಾಗಿತ್ತು.

“ಅವರ ಅಧಿಕಾರಿಗಳು ಹೈಕಮಿಷನ್ ನಲ್ಲಿ ತಮ್ಮ ಸವಲತ್ತು ಸ್ಥಾನಮಾನಕ್ಕೆ ಅನುಗುಣವಾಗಿರದ ಕ್ರಮಗಳಲ್ಲಿ ಪಾಲ್ಗೊಂಡಿದ್ದರೆ, ಪಾಕಿಸ್ತಾನವು ಸಮಾನಾಂತರವಾಗಿ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈಕಮಿಷನ್ನ ಅಧಿಕಾರಿಗಳನ್ನು ತಮ್ಮ ನ್ಯಾಯಸಮ್ಮತ ರಾಜತಾಂತ್ರಿಕ ಕಾರ್ಯಗಳನ್ನು ನಿರ್ವಹಿಸದಂತೆ ಬೆದರಿಸುವ ನಿರಂತರ ಅಭಿಯಾನದಲ್ಲಿ ತೊಡಗಿದೆ”ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಉಚ್ಚಾಟನೆಯ ಹದಿನೈದು ದಿನಗಳ ನಂತರ, ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್‌ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಭಾರತೀಯ ಪ್ರಜೆಗಳು ಹಲವಾರು ಗಂಟೆಗಳ ಕಾಲ ನಾಪತ್ತೆಯಾಗಿದ್ದರು. ಆದರೆ ಭಾರತವು ತೀವ್ರ ಪ್ರತಿಭಟನೆ ನಡೆಸಿದ ನಂತರ ಅವರನ್ನು ಪಾಕಿಸ್ತಾನದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು.

ಗನ್‌ಪಾಯಿಂಟ್‌ ಇಟ್ಟು ಅಪಹರಣ ಮಾಡಿದ ಪಾಕಿಸ್ತಾನವು ಭಾರತೀಯ ಅಧಿಕಾರಿಗಳನ್ನು ಬೆದರಿಸಲು ಎಷ್ಟರ ಮಟ್ಟಿಗೆ ಪ್ರಯತ್ನಿಸಿದೆ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ. ಜೂನ್ 22, 2020 ರಂದು ಭಾರತಕ್ಕೆ ಮರಳಿದ ಈ ಅಧಿಕಾರಿಗಳು ಪಾಕಿಸ್ತಾನದ ಏಜೆನ್ಸಿಗಳ ಕೈಯಲ್ಲಿ ಅನುಭವಿಸಿದ ಅನಾಗರಿಕ ನಡೆಯ ಗ್ರಾಫಿಕ್ ವಿವರಗಳನ್ನು ಒದಗಿಸಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಪಾಕಿಸ್ತಾನದ ನಡವಳಿಕೆಯು ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಸಮಾವೇಶ 1961 ಮತ್ತು 1992 ರ ನೀತಿ ಸಂಹಿತೆಗೆ ಅನುಗುಣವಾಗಿಲ್ಲ ಎಂದು ಭಾರತ ಪುನರುಚ್ಚರಿಸಿದೆ. ಇದು ಪ್ರತಿಕೂಲ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ರಾಜತಾಂತ್ರಿಕರ ಸುರಕ್ಷತೆಯನ್ನು ಖಾತ್ರಿಗೊಳಿಸುತ್ತದೆ.


ಓದಿ: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?: ಫ್ಯಾಕ್ಟ್‌ಚೆಕ್‌


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...