Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

ಫ್ಯಾಕ್ಟ್‌ಚೆಕ್‌: ಬಿಹಾರದಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ?

- Advertisement -
- Advertisement -

ಇತ್ತೀಚೆಗೆ ಬಿಹಾರದಲ್ಲಿ ವರ್ಚುವಲ್ ಚುನಾವಣಾ ರ್‍ಯಾಲಿ ನಡೆಸಲು ಗೃಹಸಚಿವ ಅಮಿತ್‌ ಶಾರವರು ಬಿಹಾರಕ್ಕೆ ತೆರಳಿದ್ದರು. ಆಗ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು, ಇಟ್ಟಿಗೆಗಳನ್ನು ಎಸೆದು ದಾಳಿ ಮಾಡಲಾಗಿದೆ ಎಂಬ ವಿಡಿಯೋವನ್ನು ಎಲ್ಲಾ ಕಡೆ ಹಂಚಿಕೊಳ್ಳಲಾಗುತ್ತಿದೆ.

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ

Posted by Chandru Chandru on Monday, June 22, 2020

ಬಿಹಾರದಲ್ಲಿ ಬಿಜೆಪಿ Rally ಯ ವಿರುದ್ಧ ಜನಾಕ್ರೋಶ.ಇಂತ ಪರಿಸ್ಥಿತಿ ಯಾವ ಪಕ್ಷಕ್ಕೂ ಬಂದಿಲ್ಲ ಎಂದು ಚಂದ್ರು ಎಂಬುವವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಎರಡು ನಿಮಿಷಗಳ ವೀಡಿಯೊದಲ್ಲಿ ಬೆಂಗಾವಲು ವಾಹನ ಹೋಗುತ್ತಿದ್ದಂತೆಯೇ ಪ್ರೇಕ್ಷಕರು ಇಟ್ಟಿಗೆಗಳನ್ನು ಎಸೆಯುವುದನ್ನು ಕಾಣಬಹುದು. ಇದರಿಂದ ಪೊಲೀಸ್ ವಾಹನವು ಕಂದಕಕ್ಕೆ ಜಾರುವುದನ್ನು ಕಾಣಬಹುದು. ಕಾರಿನಿಂದ ಹೊರಬಂದ ಒಬ್ಬ ಪೋಲೀಸ್ ಸಹ ಗಾಯಗೊಂಡಂತೆ ಕಂಡುಬರುತ್ತದೆ. ಇದರ ನಂತರ ಅವ್ಯವಸ್ಥೆ ಉಂಟಾಗುತ್ತದೆ ಮತ್ತು ದಾಳಿ ಮಾಡಿದ ಜನರನ್ನು ಪೊಲೀಸರು ಲಾಠಿ ಹಿಡಿದು ಪೊಲೀಸರು ಅಟ್ಟಿಸಿಕೊಂಡು ಹೋಗುತ್ತಾರೆ.

ಅದೇ ಮಂಡನೆಯೊಂದಿಗೆ ಆ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಬಹಳಷ್ಟು ಜನರು ಹಂಚಿಕೊಂಡಿದ್ದಾರೆ.

ವಾಸ್ತವವೇನು?

ವೀಡಿಯೊವನ್ನು ಕೂಲಂಕುಷವಾಗಿ ನೋಡಿದಾಗ, ಕಂದಕಕ್ಕೆ ಬೀಳುವ ವಾಹನವು ‘ಬಿಆರ್ 11 ಟಿ’ ಎಂದು ಬರೆದಿರುವ ನಂಬರ್‌ಪ್ಲೇಟ್ ಅನ್ನು ಹೊಂದಿದೆ. ಈ ನೋಂದಣಿ ಸಂಖ್ಯೆ ಬಿಹಾರದ ಪೂರ್ಣಿಯಾಕ್ಕೆ ಸೇರಿದೆ. ಅದರ ಜಾಡು ಹಿಡಿದು ಹುಡುಕಾಡಿದಾಗ ಹಲವು ಸುದ್ದಿವಾಹಿನಿಗಳ ವಿಡಿಯೋಗಳು, ಸುದ್ದಿಗಳು ಸಿಗುತ್ತವೆ. ಅವುಗಳ ಪ್ರಕಾರ ಈ ವಿಡಿಯೋ ಮೊದಲು ಅಪ್‌ಲೋಡ್ ಆಗಿರುವುದು 12 ಜನವರಿ 2018 ಆಗಿದೆ. ಅಂದರೆ ಎರಡು ವರ್ಷಗಳಷ್ಟು ಹಳೆಯ ವಿಡಿಯೋ ಇದಾಗಿದೆ. ಅಲ್ಲದೇ ಇದು ಅಮಿತ್‌ ಶಾ ಬೆಂಗಾವಲು ವಾಹನದ ಮೇಲಿನ ದಾಳಿಯಾಗಿರದೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನ ಮೇಲಿನ ಕಲ್ಲು ತೂರಾಟವಾಗಿದೆ.

ಈ ಘಟನೆ ಬಕ್ಸರ್‌ನ ನಂದನ್‌ನಲ್ಲಿ ನಡೆದಿದ್ದು, ಸಿಎಂಗೆ ಯಾವುದೇ ಗಾಯವಾಗದಿದ್ದರೂ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ಅಪ್‌ಲೋಡ್ ಮಾಡಿರುವ ವಿಡಿಯೋ ವಿವರಣೆಯಲ್ಲಿ ತಿಳಿಸಲಾಗಿದೆ.

ಜನವರಿ 2018 ರಲ್ಲಿ ನಿತೀಶ್‌ ಕುಮಾರ್‌ರವರ “ವಿಕಾಸ್ ಸಮೀಕ್ಷಾ ಯಾತ್ರೆ” ಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾದ ಹಲವಾರು ಸುದ್ದಿ ವರದಿಗಳನ್ನು ನಾವು ಲಭ್ಯವಿವೆ. ಅವರು ಆ ಸಮಯದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಸ್ಥಿತಿಯನ್ನು ತಿಳಯಲು ರಾಜ್ಯವ್ಯಾಪಿ ಪ್ರವಾಸದಲ್ಲಿದ್ದರು ಎಂದು ವರದಿಗಳು ಉಲ್ಲೇಖಿಸಿವೆ.

ಎನ್‌ಡಿಟಿವಿ ವರದಿಯ ಪ್ರಕಾರ, ಆ ಗ್ರಾಮದ ಜನರು ಮುಖ್ಯಮಂತ್ರಿಗಳು ದಲಿತ ಕಾಲೋನಿಗೆ ಭೇಟಿ ನೀಡಬೇಕೆಂದು ಬಯಸಿದ್ದರು. ಆದರೆ ಅವರು ಬಾರದಿದ್ದಾಗ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಮತ್ತು ನಂತರ ಕಲ್ಲು ತೂರಾಟ ನಡೆಯಿತು.

ನಿತೀಶ್‌ ಕುಮಾರ್‌ ಅವರ ಕಾರು ದಲಿತ ಕಾಲೋನಿಯಲ್ಲಿ ನಿಲ್ಲದಿದ್ದಾಗ ಅವರ ಬೆಂಗಾವಲು ವಾಹನಕ್ಕೆ ಕಲ್ಲು ಮತ್ತು ಇಟ್ಟಿಗೆಗಳನ್ನು ಜನರು ತೂರಿದರು ಎಂದು ಹಿಂದೂ ವರದಿ ಮಾಡಿದೆ. ಅಲ್ಲದೇ ನ್ಯೂಸ್‌ 18 ಸುದ್ದಿವಾಹಿನಿಯು ವಿಡಿಯೋ ಮಾಡಿ ಸಂಪೂರ್ಣ ಸುದ್ದಿ ಬಿತ್ತರಿಸಿದೆ. ಅದನ್ನು ನೀವು ಕೆಳಗೆ ನೋಡಬಹುದು.

Bihar CM Nitish Kumar's Convoy Attacked.

WATCH: While Bihar CM Nitish Kumar was on his way to a village in Buxar, some villagers started pelting stones on the CM's convoy.

Posted by News18 on Saturday, January 13, 2018

ಅಲ್ಲಿಗೆ ಈ ವಿಡಿಯೋ ಇತ್ತೀಚೆಗೆ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಅಮಿತ್‌ ಶಾ ಬೆಂಗಾವಲು ವಾಹನದ ಮೇಲೆ ದಾಳಿ ಎಂಬುದು ಸುಳ್ಳಾಗಿದೆ. ಇದು ಎರಡು ವರ್ಷಗಳ ಹಿಂದಿನ ನಿತೀಶ್‌ ಕುಮಾರ್‌ರವರಿಗೆ ಸಂಬಂಧಿಸಿದ ಘಟನೆಯಾಗಿದೆ.


ಇದನ್ನೂ ಓದಿ: ಕೊರೋನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...