Homeಮುಖಪುಟಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

- Advertisement -
- Advertisement -

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದಲ್ಲಿ ಪಾವತಿಸಿದ 70 ಮಿಲಿಯನ್ ಯೂರೋ ಲಂಚದ ನಿಜವಾದ ಫಲಾನುಭವಿಗಳನ್ನು ಹಿಡಿಯಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಪ್ರಯತ್ನಿಸುತ್ತಿದೆ ಎಂದು ಬೆಳವಣಿಗೆಗಳ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಜಾರಿ ನಿರ್ಧೇಶನಾಲಯದಿಂದ ರಿಯಾಲ್ಟಿ ಸಂಸ್ಥೆ ಎಂಜಿಎಫ್ ಎಂಡಿ ಶ್ರವಣ್ ಗುಪ್ತಾ ಅವರ ಮೇಲೆ ಆದ ದಾಳಿಗಳು ಹಣದ ವಿಷಯದಲ್ಲಿ ಕೇಂದ್ರೀಕೃತವಾಗಿದ್ದು, ಇದು ಹಲವಾರು ಕಂಪನಿಗಳ ಮೂಲಕ ಕಾಲಾಂತರದಲ್ಲಿ ಸಾಗಿದೆ ಎಂದು ಅವರು ಹೇಳಿದರು.

ಸಿಬಿಐ ಶೀಘ್ರದಲ್ಲೇ ಐದು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಬ್ರಿಟಿಷ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧವಾಗಿದ್ದು, ಇದಕ್ಕಾಗಿ ಈಗಾಗಲೇ ಸರ್ಕಾರದಿಂದ ಕಾನೂನು ಅನುಮತಿ ಕೋರಿದೆ. ಮುಂದಿನ ಎರಡು ತಿಂಗಳಲ್ಲಿ ಈ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಗಳು ಕಂಡುಬರುತ್ತವೆ ಎಂದು ಎರಡೂ ಏಜೆನ್ಸಿಗಳ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಎಮಾರ್ ಎಂಜಿಎಫ್ ನಿರ್ದೇಶಕರಾಗಿದ್ದ ಗುಪ್ತಾ ಅವರು 2009 ರಲ್ಲಿ ಇನ್ನೊಬ್ಬ ಯುರೋಪಿಯನ್ ಮಧ್ಯವರ್ತಿ ಗೈಡೋ ಹ್ಯಾಶ್ಕೆ ಅವರನ್ನು ಕಂಪನಿಯಲ್ಲಿ ಸ್ವತಂತ್ರ ನಿರ್ದೇಶಕರಾಗಿ ನೇಮಕ ಮಾಡಲು ಸ್ಕ್ಯಾನರ್ನಲ್ಲಿದ್ದಾರೆ ಎಂದು ಹೇಳಿದ್ದರು. ಹ್ಯಾಶ್ಕೆಗಾಗಿ  ಏಜೆನ್ಸಿಗಳು ಹುಡುಕಾಡುತ್ತಿದ್ದು, ಅವರು ಇಟಲಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಗುಪ್ತಾ ಅವರನ್ನು ಈ ಹಿಂದೆ 2016 ರಲ್ಲಿ ಜಾರಿ ನಿರ್ಧೇಶನಾಲಯ ಪ್ರಶ್ನಿಸಿದ್ದವು.

ಈ ಪ್ರಕರಣದಲ್ಲಿ ಈಗಾಗಲೇ ಅರ್ಧ ಡಜನ್ ಚಾರ್ಜ್‌ಶೀಟ್‌ಗಳನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಅದರ ಪ್ರಕಾರ 3,727 ಕೋಟಿ ರೂ.ಗಳ 12 ಹೆಲಿಕಾಪ್ಟರ್ ವಿವಿಐಪಿ ಚಾಪರ್ ಒಪ್ಪಂದದ ಮೇಲೆ ಹೆಚ್ಚಿನ ಪಾವತಿಮಾಡುವಂತೆ ಪ್ರಭಾವ ಬೀರಲು ಆಂಗ್ಲೋ-ಇಟಾಲಿಯನ್ ಸಂಸ್ಥೆ ಅಗುಸ್ಟಾವೆಸ್ಟ್‌ಲ್ಯಾಂಡ್ ಇಬ್ಬರು ಮಧ್ಯವರ್ತಿಗಳಾದ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಮತ್ತು ಗೈಡೋ ರಾಲ್ಫ್ ಹ್ಯಾಶ್ಕೆ ಮೂಲಕ ಒಟ್ಟು 12 ಶೇಕಡಾ ಅಂದರೆ ಸುಮಾರು 70 ಮಿಲಿಯನ್ ಯುರೋಗಳಷ್ಟು ಕಿಕ್‌ಬ್ಯಾಕ್ ನೀಡಿದೆ. 2010 ರಲ್ಲಿ ಎಡಬ್ಲ್ಯೂ -101 ಹೆಲಿಕಾಪ್ಟರ್‌ಗಳ ಒಪ್ಪಂದಕ್ಕೆ ಕಂಪನಿಯು ಅರ್ಹತೆ ಪಡೆಯಲು ಈ ಹಣವನ್ನು ವಿನಿಮಯ ಮಾಡಿದೆ ಎಂದು ಹೇಳಲಾಗಿದೆ.

ಸಿಬಿಐ, ಸೆಪ್ಟೆಂಬರ್ 2017 ರಲ್ಲಿ ಸಲ್ಲಿಸಿದ ತನ್ನ ಚಾರ್ಜ್‌ಶೀಟ್‌ನಲ್ಲಿ, ಅಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗೆ ಮೈಕೆಲ್ ಎರಡು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ – ಒಂದು ಯುರೋ 42 ಮಿಲಿಯನ್ (ನಂತರ ಅದನ್ನು 30 ಮಿಲಿಯನ್‌ಗೆ ಇಳಿಲಾಯಿತು), ಮತ್ತು 28 ಮಿಲಿಯನ್ ಯುರೋ‌ಗೆ ಎರಡನೇ ಒಪ್ಪಂದವೂ, “ಗೌರವಾನ್ವಿತ ಕುಟುಂಬದೊಂದಿಗೆ” ನಡೆದಿದೆ ಎಂದು ಹೇಳಿದೆ.

ಒಪ್ಪಂದದ ಅಗಸ್ಟಾ ವೆಸ್ಟ್‌ಲ್ಯಾಂಡ್‌ನ ಪ್ರತಿಸ್ಪರ್ಧಿ ಸಿಕೋರ್‌ಸ್ಕಿ 12 ವಿವಿಐಪಿ ಹಾಗೂ ವಿವಿಐಪಿ ಅಲ್ಲದ ಹೆಲಿಕಾಪ್ಟರ್‌ಗಳಿಗೆ ಸುಮಾರು 2,228 ಕೋಟಿ ರೂ. ಬೆಲೆಯನ್ನು ಉಲ್ಲೇಖಿಸಿದ್ದರೆ, ಅಗುಸ್ಟಾವೆಸ್ಟ್‌ಲ್ಯಾಂಡ್ 3,966 ಕೋಟಿ ಹೇಳಿತ್ತು. ಇದು  ಸಿಕೋರ್ಸ್ಕಿ ಉಲ್ಲೇಖಿಸಿದ ದರಕ್ಕಿಂತ ಸುಮಾರು 80 ಶೇಕಡಾ ಹೆಚ್ಚಾಗಿದೆ. ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿಯು ಇದನ್ನು 2010 ರಲ್ಲಿ ಅಂತಿಮ ವೆಚ್ಚವು 3,727 ಕೋಟಿಗೆ ಅಂಗೀಕರಿಸಿತು.

“ಈ ಪ್ರಕರಣದಲ್ಲಿ ನಾವು ಕೆಲವು ಹೊಸ ಪಾತ್ರಗಳನ್ನು ಕಂಡುಕೊಂಡಿದ್ದೇವೆ ಇದಕ್ಕಾಗೆ ಗುಪ್ತಾ ಮತ್ತು ಇತರ ಕೆಲವು ಜನರಿಗೆ ಸಂಬಂಧಿಸಿರುವ ಏಳು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಲು ನಿರ್ಧರಿಸಲಾಯಿತು. ಕೆಲವು ಉದ್ಯಮಿಗಳು ಮತ್ತು ಖಾಸಗಿ ಕಂಪನಿಗಳ ಮೂಲಕ ಲಾಭ ಪಡೆದ ನಿಜವಾದ ಫಲಾನುಭವಿಗಳಾದ ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನು ನಾವು ಮತ್ತಷ್ಟು ತನಿಖೆ ಮಾಡುತ್ತಿದ್ದೇವೆ ”ಎಂದು ಜಾರಿ ನಿರ್ಧೇಶನಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶೀಘ್ರದಲ್ಲೇ ಗುಪ್ತಾ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.


ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...