Homeಮುಖಪುಟಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

- Advertisement -
- Advertisement -

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದಲ್ಲಿ ಪಾವತಿಸಿದ 70 ಮಿಲಿಯನ್ ಯೂರೋ ಲಂಚದ ನಿಜವಾದ ಫಲಾನುಭವಿಗಳನ್ನು ಹಿಡಿಯಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಪ್ರಯತ್ನಿಸುತ್ತಿದೆ ಎಂದು ಬೆಳವಣಿಗೆಗಳ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಜಾರಿ ನಿರ್ಧೇಶನಾಲಯದಿಂದ ರಿಯಾಲ್ಟಿ ಸಂಸ್ಥೆ ಎಂಜಿಎಫ್ ಎಂಡಿ ಶ್ರವಣ್ ಗುಪ್ತಾ ಅವರ ಮೇಲೆ ಆದ ದಾಳಿಗಳು ಹಣದ ವಿಷಯದಲ್ಲಿ ಕೇಂದ್ರೀಕೃತವಾಗಿದ್ದು, ಇದು ಹಲವಾರು ಕಂಪನಿಗಳ ಮೂಲಕ ಕಾಲಾಂತರದಲ್ಲಿ ಸಾಗಿದೆ ಎಂದು ಅವರು ಹೇಳಿದರು.

ಸಿಬಿಐ ಶೀಘ್ರದಲ್ಲೇ ಐದು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಬ್ರಿಟಿಷ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧವಾಗಿದ್ದು, ಇದಕ್ಕಾಗಿ ಈಗಾಗಲೇ ಸರ್ಕಾರದಿಂದ ಕಾನೂನು ಅನುಮತಿ ಕೋರಿದೆ. ಮುಂದಿನ ಎರಡು ತಿಂಗಳಲ್ಲಿ ಈ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಗಳು ಕಂಡುಬರುತ್ತವೆ ಎಂದು ಎರಡೂ ಏಜೆನ್ಸಿಗಳ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಎಮಾರ್ ಎಂಜಿಎಫ್ ನಿರ್ದೇಶಕರಾಗಿದ್ದ ಗುಪ್ತಾ ಅವರು 2009 ರಲ್ಲಿ ಇನ್ನೊಬ್ಬ ಯುರೋಪಿಯನ್ ಮಧ್ಯವರ್ತಿ ಗೈಡೋ ಹ್ಯಾಶ್ಕೆ ಅವರನ್ನು ಕಂಪನಿಯಲ್ಲಿ ಸ್ವತಂತ್ರ ನಿರ್ದೇಶಕರಾಗಿ ನೇಮಕ ಮಾಡಲು ಸ್ಕ್ಯಾನರ್ನಲ್ಲಿದ್ದಾರೆ ಎಂದು ಹೇಳಿದ್ದರು. ಹ್ಯಾಶ್ಕೆಗಾಗಿ  ಏಜೆನ್ಸಿಗಳು ಹುಡುಕಾಡುತ್ತಿದ್ದು, ಅವರು ಇಟಲಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಗುಪ್ತಾ ಅವರನ್ನು ಈ ಹಿಂದೆ 2016 ರಲ್ಲಿ ಜಾರಿ ನಿರ್ಧೇಶನಾಲಯ ಪ್ರಶ್ನಿಸಿದ್ದವು.

ಈ ಪ್ರಕರಣದಲ್ಲಿ ಈಗಾಗಲೇ ಅರ್ಧ ಡಜನ್ ಚಾರ್ಜ್‌ಶೀಟ್‌ಗಳನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಅದರ ಪ್ರಕಾರ 3,727 ಕೋಟಿ ರೂ.ಗಳ 12 ಹೆಲಿಕಾಪ್ಟರ್ ವಿವಿಐಪಿ ಚಾಪರ್ ಒಪ್ಪಂದದ ಮೇಲೆ ಹೆಚ್ಚಿನ ಪಾವತಿಮಾಡುವಂತೆ ಪ್ರಭಾವ ಬೀರಲು ಆಂಗ್ಲೋ-ಇಟಾಲಿಯನ್ ಸಂಸ್ಥೆ ಅಗುಸ್ಟಾವೆಸ್ಟ್‌ಲ್ಯಾಂಡ್ ಇಬ್ಬರು ಮಧ್ಯವರ್ತಿಗಳಾದ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಮತ್ತು ಗೈಡೋ ರಾಲ್ಫ್ ಹ್ಯಾಶ್ಕೆ ಮೂಲಕ ಒಟ್ಟು 12 ಶೇಕಡಾ ಅಂದರೆ ಸುಮಾರು 70 ಮಿಲಿಯನ್ ಯುರೋಗಳಷ್ಟು ಕಿಕ್‌ಬ್ಯಾಕ್ ನೀಡಿದೆ. 2010 ರಲ್ಲಿ ಎಡಬ್ಲ್ಯೂ -101 ಹೆಲಿಕಾಪ್ಟರ್‌ಗಳ ಒಪ್ಪಂದಕ್ಕೆ ಕಂಪನಿಯು ಅರ್ಹತೆ ಪಡೆಯಲು ಈ ಹಣವನ್ನು ವಿನಿಮಯ ಮಾಡಿದೆ ಎಂದು ಹೇಳಲಾಗಿದೆ.

ಸಿಬಿಐ, ಸೆಪ್ಟೆಂಬರ್ 2017 ರಲ್ಲಿ ಸಲ್ಲಿಸಿದ ತನ್ನ ಚಾರ್ಜ್‌ಶೀಟ್‌ನಲ್ಲಿ, ಅಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗೆ ಮೈಕೆಲ್ ಎರಡು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ – ಒಂದು ಯುರೋ 42 ಮಿಲಿಯನ್ (ನಂತರ ಅದನ್ನು 30 ಮಿಲಿಯನ್‌ಗೆ ಇಳಿಲಾಯಿತು), ಮತ್ತು 28 ಮಿಲಿಯನ್ ಯುರೋ‌ಗೆ ಎರಡನೇ ಒಪ್ಪಂದವೂ, “ಗೌರವಾನ್ವಿತ ಕುಟುಂಬದೊಂದಿಗೆ” ನಡೆದಿದೆ ಎಂದು ಹೇಳಿದೆ.

ಒಪ್ಪಂದದ ಅಗಸ್ಟಾ ವೆಸ್ಟ್‌ಲ್ಯಾಂಡ್‌ನ ಪ್ರತಿಸ್ಪರ್ಧಿ ಸಿಕೋರ್‌ಸ್ಕಿ 12 ವಿವಿಐಪಿ ಹಾಗೂ ವಿವಿಐಪಿ ಅಲ್ಲದ ಹೆಲಿಕಾಪ್ಟರ್‌ಗಳಿಗೆ ಸುಮಾರು 2,228 ಕೋಟಿ ರೂ. ಬೆಲೆಯನ್ನು ಉಲ್ಲೇಖಿಸಿದ್ದರೆ, ಅಗುಸ್ಟಾವೆಸ್ಟ್‌ಲ್ಯಾಂಡ್ 3,966 ಕೋಟಿ ಹೇಳಿತ್ತು. ಇದು  ಸಿಕೋರ್ಸ್ಕಿ ಉಲ್ಲೇಖಿಸಿದ ದರಕ್ಕಿಂತ ಸುಮಾರು 80 ಶೇಕಡಾ ಹೆಚ್ಚಾಗಿದೆ. ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿಯು ಇದನ್ನು 2010 ರಲ್ಲಿ ಅಂತಿಮ ವೆಚ್ಚವು 3,727 ಕೋಟಿಗೆ ಅಂಗೀಕರಿಸಿತು.

“ಈ ಪ್ರಕರಣದಲ್ಲಿ ನಾವು ಕೆಲವು ಹೊಸ ಪಾತ್ರಗಳನ್ನು ಕಂಡುಕೊಂಡಿದ್ದೇವೆ ಇದಕ್ಕಾಗೆ ಗುಪ್ತಾ ಮತ್ತು ಇತರ ಕೆಲವು ಜನರಿಗೆ ಸಂಬಂಧಿಸಿರುವ ಏಳು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಲು ನಿರ್ಧರಿಸಲಾಯಿತು. ಕೆಲವು ಉದ್ಯಮಿಗಳು ಮತ್ತು ಖಾಸಗಿ ಕಂಪನಿಗಳ ಮೂಲಕ ಲಾಭ ಪಡೆದ ನಿಜವಾದ ಫಲಾನುಭವಿಗಳಾದ ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನು ನಾವು ಮತ್ತಷ್ಟು ತನಿಖೆ ಮಾಡುತ್ತಿದ್ದೇವೆ ”ಎಂದು ಜಾರಿ ನಿರ್ಧೇಶನಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶೀಘ್ರದಲ್ಲೇ ಗುಪ್ತಾ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.


ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...