Homeಮುಖಪುಟಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ; ನಿಜವಾದ ಫಲಾನುಭವಿಗಳ ತಲಾಶೆಯಲ್ಲಿರುವ ಇ.ಡಿ

- Advertisement -
- Advertisement -

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣದಲ್ಲಿ ಪಾವತಿಸಿದ 70 ಮಿಲಿಯನ್ ಯೂರೋ ಲಂಚದ ನಿಜವಾದ ಫಲಾನುಭವಿಗಳನ್ನು ಹಿಡಿಯಲು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಪ್ರಯತ್ನಿಸುತ್ತಿದೆ ಎಂದು ಬೆಳವಣಿಗೆಗಳ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ.

ಜಾರಿ ನಿರ್ಧೇಶನಾಲಯದಿಂದ ರಿಯಾಲ್ಟಿ ಸಂಸ್ಥೆ ಎಂಜಿಎಫ್ ಎಂಡಿ ಶ್ರವಣ್ ಗುಪ್ತಾ ಅವರ ಮೇಲೆ ಆದ ದಾಳಿಗಳು ಹಣದ ವಿಷಯದಲ್ಲಿ ಕೇಂದ್ರೀಕೃತವಾಗಿದ್ದು, ಇದು ಹಲವಾರು ಕಂಪನಿಗಳ ಮೂಲಕ ಕಾಲಾಂತರದಲ್ಲಿ ಸಾಗಿದೆ ಎಂದು ಅವರು ಹೇಳಿದರು.

ಸಿಬಿಐ ಶೀಘ್ರದಲ್ಲೇ ಐದು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಬ್ರಿಟಿಷ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧವಾಗಿದ್ದು, ಇದಕ್ಕಾಗಿ ಈಗಾಗಲೇ ಸರ್ಕಾರದಿಂದ ಕಾನೂನು ಅನುಮತಿ ಕೋರಿದೆ. ಮುಂದಿನ ಎರಡು ತಿಂಗಳಲ್ಲಿ ಈ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಗಳು ಕಂಡುಬರುತ್ತವೆ ಎಂದು ಎರಡೂ ಏಜೆನ್ಸಿಗಳ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಎಮಾರ್ ಎಂಜಿಎಫ್ ನಿರ್ದೇಶಕರಾಗಿದ್ದ ಗುಪ್ತಾ ಅವರು 2009 ರಲ್ಲಿ ಇನ್ನೊಬ್ಬ ಯುರೋಪಿಯನ್ ಮಧ್ಯವರ್ತಿ ಗೈಡೋ ಹ್ಯಾಶ್ಕೆ ಅವರನ್ನು ಕಂಪನಿಯಲ್ಲಿ ಸ್ವತಂತ್ರ ನಿರ್ದೇಶಕರಾಗಿ ನೇಮಕ ಮಾಡಲು ಸ್ಕ್ಯಾನರ್ನಲ್ಲಿದ್ದಾರೆ ಎಂದು ಹೇಳಿದ್ದರು. ಹ್ಯಾಶ್ಕೆಗಾಗಿ  ಏಜೆನ್ಸಿಗಳು ಹುಡುಕಾಡುತ್ತಿದ್ದು, ಅವರು ಇಟಲಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಗುಪ್ತಾ ಅವರನ್ನು ಈ ಹಿಂದೆ 2016 ರಲ್ಲಿ ಜಾರಿ ನಿರ್ಧೇಶನಾಲಯ ಪ್ರಶ್ನಿಸಿದ್ದವು.

ಈ ಪ್ರಕರಣದಲ್ಲಿ ಈಗಾಗಲೇ ಅರ್ಧ ಡಜನ್ ಚಾರ್ಜ್‌ಶೀಟ್‌ಗಳನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಅದರ ಪ್ರಕಾರ 3,727 ಕೋಟಿ ರೂ.ಗಳ 12 ಹೆಲಿಕಾಪ್ಟರ್ ವಿವಿಐಪಿ ಚಾಪರ್ ಒಪ್ಪಂದದ ಮೇಲೆ ಹೆಚ್ಚಿನ ಪಾವತಿಮಾಡುವಂತೆ ಪ್ರಭಾವ ಬೀರಲು ಆಂಗ್ಲೋ-ಇಟಾಲಿಯನ್ ಸಂಸ್ಥೆ ಅಗುಸ್ಟಾವೆಸ್ಟ್‌ಲ್ಯಾಂಡ್ ಇಬ್ಬರು ಮಧ್ಯವರ್ತಿಗಳಾದ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಮತ್ತು ಗೈಡೋ ರಾಲ್ಫ್ ಹ್ಯಾಶ್ಕೆ ಮೂಲಕ ಒಟ್ಟು 12 ಶೇಕಡಾ ಅಂದರೆ ಸುಮಾರು 70 ಮಿಲಿಯನ್ ಯುರೋಗಳಷ್ಟು ಕಿಕ್‌ಬ್ಯಾಕ್ ನೀಡಿದೆ. 2010 ರಲ್ಲಿ ಎಡಬ್ಲ್ಯೂ -101 ಹೆಲಿಕಾಪ್ಟರ್‌ಗಳ ಒಪ್ಪಂದಕ್ಕೆ ಕಂಪನಿಯು ಅರ್ಹತೆ ಪಡೆಯಲು ಈ ಹಣವನ್ನು ವಿನಿಮಯ ಮಾಡಿದೆ ಎಂದು ಹೇಳಲಾಗಿದೆ.

ಸಿಬಿಐ, ಸೆಪ್ಟೆಂಬರ್ 2017 ರಲ್ಲಿ ಸಲ್ಲಿಸಿದ ತನ್ನ ಚಾರ್ಜ್‌ಶೀಟ್‌ನಲ್ಲಿ, ಅಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗೆ ಮೈಕೆಲ್ ಎರಡು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ – ಒಂದು ಯುರೋ 42 ಮಿಲಿಯನ್ (ನಂತರ ಅದನ್ನು 30 ಮಿಲಿಯನ್‌ಗೆ ಇಳಿಲಾಯಿತು), ಮತ್ತು 28 ಮಿಲಿಯನ್ ಯುರೋ‌ಗೆ ಎರಡನೇ ಒಪ್ಪಂದವೂ, “ಗೌರವಾನ್ವಿತ ಕುಟುಂಬದೊಂದಿಗೆ” ನಡೆದಿದೆ ಎಂದು ಹೇಳಿದೆ.

ಒಪ್ಪಂದದ ಅಗಸ್ಟಾ ವೆಸ್ಟ್‌ಲ್ಯಾಂಡ್‌ನ ಪ್ರತಿಸ್ಪರ್ಧಿ ಸಿಕೋರ್‌ಸ್ಕಿ 12 ವಿವಿಐಪಿ ಹಾಗೂ ವಿವಿಐಪಿ ಅಲ್ಲದ ಹೆಲಿಕಾಪ್ಟರ್‌ಗಳಿಗೆ ಸುಮಾರು 2,228 ಕೋಟಿ ರೂ. ಬೆಲೆಯನ್ನು ಉಲ್ಲೇಖಿಸಿದ್ದರೆ, ಅಗುಸ್ಟಾವೆಸ್ಟ್‌ಲ್ಯಾಂಡ್ 3,966 ಕೋಟಿ ಹೇಳಿತ್ತು. ಇದು  ಸಿಕೋರ್ಸ್ಕಿ ಉಲ್ಲೇಖಿಸಿದ ದರಕ್ಕಿಂತ ಸುಮಾರು 80 ಶೇಕಡಾ ಹೆಚ್ಚಾಗಿದೆ. ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿಯು ಇದನ್ನು 2010 ರಲ್ಲಿ ಅಂತಿಮ ವೆಚ್ಚವು 3,727 ಕೋಟಿಗೆ ಅಂಗೀಕರಿಸಿತು.

“ಈ ಪ್ರಕರಣದಲ್ಲಿ ನಾವು ಕೆಲವು ಹೊಸ ಪಾತ್ರಗಳನ್ನು ಕಂಡುಕೊಂಡಿದ್ದೇವೆ ಇದಕ್ಕಾಗೆ ಗುಪ್ತಾ ಮತ್ತು ಇತರ ಕೆಲವು ಜನರಿಗೆ ಸಂಬಂಧಿಸಿರುವ ಏಳು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಲು ನಿರ್ಧರಿಸಲಾಯಿತು. ಕೆಲವು ಉದ್ಯಮಿಗಳು ಮತ್ತು ಖಾಸಗಿ ಕಂಪನಿಗಳ ಮೂಲಕ ಲಾಭ ಪಡೆದ ನಿಜವಾದ ಫಲಾನುಭವಿಗಳಾದ ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನು ನಾವು ಮತ್ತಷ್ಟು ತನಿಖೆ ಮಾಡುತ್ತಿದ್ದೇವೆ ”ಎಂದು ಜಾರಿ ನಿರ್ಧೇಶನಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶೀಘ್ರದಲ್ಲೇ ಗುಪ್ತಾ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.


ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...