Homeಅಂತರಾಷ್ಟ್ರೀಯಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

- Advertisement -
- Advertisement -

ಇತ್ತೀಚೆಗಿನ ವರ್ಷದಲ್ಲಿ ಅಮೆರಿಕಾ ಸೇರಿದಂತೆ ಇತರ ದೇಶಗಳಲ್ಲಿ ಎಲ್ಜಿಬಿಟಿಕ್ಯು ಸಮುದಾಯಕ್ಕೆ ಬಂಬಲ ಹೆಚ್ಚಾಗುತ್ತಿದೆ ಎಂದು ಪ್ಯೂ ರಿಸರ್ಚ್ ಸೆಂಟರ್ ಬಿಡುಗಡೆ ಮಾಡಿದ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಮೀಕ್ಷೆಯೂ 2019 ರಲ್ಲಿ 34 ದೇಶಗಳಲ್ಲಿ 38,000 ಕ್ಕೂ ಹೆಚ್ಚು ಜನರನ್ನು ಸಲಿಂಗಕಾಮವನ್ನು ಸಮಾಜವು ಒಪ್ಪಿಕೊಳ್ಳಬೇಕು ಎಂದು ಭಾವಿಸಿದ್ದೀರಾ ಎಂದು ಕೇಳಿದೆ. ಅಮೆರಿಕಾದಲ್ಲಿ ಸಲಿಂಗಕಾಮವನ್ನು ಬೆಂಬಲಿಸುವ ಶೇಕಡಾವಾರು ಪ್ರಮಾಣವು 2019 ರಲ್ಲಿ 72% ಕ್ಕೆ ಏರಿದ್ದು, ಇದು 2013 ರಲ್ಲಿ ನಡೆದ ಸಮೀಕ್ಷೆಯಲ್ಲಿ ಅದು 60% ರಷ್ಟಿತ್ತು.

ಭಾರತ ಮತ್ತು ಟರ್ಕಿಯಲ್ಲಿ ಈ ದರಗಳು ಕ್ರಮವಾಗಿ 20 ಮತ್ತು 16 ಕ್ಕಿಂತಲೂ ಹೆಚ್ಚಾಗಿವೆ. ಆದರೆ ಇತರ ದೇಶಗಳಿಗೆ ಹೋಲಿಸಿದರೆ ಈ ಬೆಂಬಲ ಕಡಿಮೆಯಾಗಿಯೇ ಇದೆ. ಇದು ಕ್ರಮವಾಗಿ 37% ಮತ್ತು  25 % ರಷ್ಟು ಇದೆ. 2018 ರಲ್ಲಿ ಭಾರತದ ಹೈಕೋರ್ಟ್ ಸಲಿಂಗಕಾಮವನ್ನು ಕಾನೂನು ಬದ್ದಗೊಳಿಸಿತ್ತು.

ಮಧ್ಯಪ್ರಾಚ್ಯ, ಪೂರ್ವ ಯುರೋಪ್ ಮತ್ತು ಆಗ್ನೇಯ ಏಷ್ಯಾದ ಕೆಲವು ದೇಶಗಳಿಗಿಂತ ಅಮೆರಿಕ ಮತ್ತು ಪಶ್ಚಿಮ ಯುರೋಪಿನ ದೇಶಗಳು ಸಲಿಂಗಕಾಮವನ್ನು ಹೆಚ್ಚು ಒಪ್ಪಿಕೊಳ್ಳುತ್ತಿವೆ ಎಂದು “ಸಲಿಂಗಕಾಮ ನಿರಂತರತೆಯ ಜಾಗತಿಕ ವಿಭಜನೆ” ಎಂಬ ಶೀರ್ಷಿಕೆಯ ಈ ವರದಿ ಹೇಳುತ್ತದೆ.

ಉದಾಹರಣೆಗೆ, ಲೆಬನಾನ್‌ನಲ್ಲಿ 85% ರಷ್ಟು ಜನರು ಸಲಿಂಗಕಾಮವನ್ನು ಒಪ್ಪಿಕೊಳ್ಳಬಾರದು ಎಂದು ಹೇಳಿದರೆ, ಟುನೀಶಿಯಾದಲ್ಲಿ 72% ಜನರು ಇದನ್ನು ಹೇಳಿದ್ದಾರೆ. ಮಧ್ಯ ಮತ್ತು ಪೂರ್ವ ಯುರೋಪಿನಲ್ಲಿ ಸಲಿಂಗಕಾಮವನ್ನು ಸ್ವೀಕರಿಸುವ ಸರಾಸರಿ ದರ 46% ಆಗಿತ್ತು.

“ಆರ್ಥಿಕ ಅಭಿವೃದ್ಧಿಯ ಸೂಚಕವಾಗಿರಬಹುದಾದ ಪ್ರದೇಶಗಳಲ್ಲಿನ ವ್ಯತ್ಯಾಸಗಳು ನಿಜವಾಗಿಯೂ ಆಸಕ್ತಿದಾಯಕ ಆವಿಷ್ಕಾರಗಳಾಗಿವೆ, ಒಟ್ಟಾರೆ ಸ್ವೀಕಾರದ ಮಟ್ಟದಲ್ಲಿ ಬದಲಾವಣೆಗಳಾಗಿದ್ದರೂ ಸಹ, ಸ್ಥಿರವಾಗಿ ಉಳಿದಿವೆ” ಎಂದು ವರದಿಯ ಲೇಖಕ ಹಾಗೂ ಪ್ಯೂ ರಿಸರ್ಚ್ ಸೆಂಟರ್ನ ಜಾಗತಿಕ ವರ್ತನೆಗಳ ಸಂಶೋಧನೆಯ ಸಹಾಯಕ ನಿರ್ದೇಶಕರಾದ ಜಾಕೋಬ್ ಪೌಶ್ಟರ್ ಹೇಳಿದ್ದಾರೆ.

ಸಲಿಂಗಕಾಮದ ಬಗೆಗಿನ ವರ್ತನೆಗಳು ದೇಶದ ಸಂಪತ್ತಿನೊಂದಿಗೆ ಸಂಬಂಧ ಹೊಂದಿವೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಬಡ, ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಲ್ಲಿನ ಜನರಿಗಿಂತ ಶ್ರೀಮಂತ ದೇಶಗಳಲ್ಲಿನ ಜನರು ಸಾಮಾನ್ಯವಾಗಿ ಸಲಿಂಗಕಾಮವನ್ನು ಹೆಚ್ಚು ಒಪ್ಪಿಕೊಳ್ಳುತ್ತಿದ್ದಾರೆ.

ರಾಜಕೀಯ ಸಿದ್ಧಾಂತ ಮತ್ತು ಶಿಕ್ಷಣವು ಸಲಿಂಗಕಾಮವನ್ನು ಅಂಗೀಕರಿಸುವುದರೊಂದಿಗೆ ಪರಸ್ಪರ ಸಂಬಂಧ ಹೊಂದಿದೆ, ಎಡ-ಒಲವು ಮತ್ತು ಹೆಚ್ಚು ವಿದ್ಯಾವಂತ ಜನರು ಸಾಮಾಜಿಕ ಸ್ವೀಕಾರಕ್ಕೆ ಹೆಚ್ಚು ಬೆಂಬಲ ನೀಡುತ್ತಾರೆ.

ಕೇವಲ 29 ದೇಶಗಳಲ್ಲಿ ಸಲಿಂಗ ಮದುವೆ ಕಾನೂನುಬದ್ಧವಾಗಿದೆ ಎಂದು ಮಾನವ ಹಕ್ಕುಗಳ ಅಭಿಯಾನ ಉಲ್ಲೇಖಿಸಿದೆ.


ಓದಿ: ದೆಹಲಿಯಿಂದ ಮಂಗಳೂರಿನವರೆಗೆ CAA-NRC ವಿರೋಧಿಗಳನ್ನು ಹಣಿಯಲು ಹಿಂಬಾಗಿಲ ಸಂಚು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....