Homeಅಂತರಾಷ್ಟ್ರೀಯಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

- Advertisement -
- Advertisement -

ಇತ್ತೀಚೆಗಿನ ವರ್ಷದಲ್ಲಿ ಅಮೆರಿಕಾ ಸೇರಿದಂತೆ ಇತರ ದೇಶಗಳಲ್ಲಿ ಎಲ್ಜಿಬಿಟಿಕ್ಯು ಸಮುದಾಯಕ್ಕೆ ಬಂಬಲ ಹೆಚ್ಚಾಗುತ್ತಿದೆ ಎಂದು ಪ್ಯೂ ರಿಸರ್ಚ್ ಸೆಂಟರ್ ಬಿಡುಗಡೆ ಮಾಡಿದ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಮೀಕ್ಷೆಯೂ 2019 ರಲ್ಲಿ 34 ದೇಶಗಳಲ್ಲಿ 38,000 ಕ್ಕೂ ಹೆಚ್ಚು ಜನರನ್ನು ಸಲಿಂಗಕಾಮವನ್ನು ಸಮಾಜವು ಒಪ್ಪಿಕೊಳ್ಳಬೇಕು ಎಂದು ಭಾವಿಸಿದ್ದೀರಾ ಎಂದು ಕೇಳಿದೆ. ಅಮೆರಿಕಾದಲ್ಲಿ ಸಲಿಂಗಕಾಮವನ್ನು ಬೆಂಬಲಿಸುವ ಶೇಕಡಾವಾರು ಪ್ರಮಾಣವು 2019 ರಲ್ಲಿ 72% ಕ್ಕೆ ಏರಿದ್ದು, ಇದು 2013 ರಲ್ಲಿ ನಡೆದ ಸಮೀಕ್ಷೆಯಲ್ಲಿ ಅದು 60% ರಷ್ಟಿತ್ತು.

ಭಾರತ ಮತ್ತು ಟರ್ಕಿಯಲ್ಲಿ ಈ ದರಗಳು ಕ್ರಮವಾಗಿ 20 ಮತ್ತು 16 ಕ್ಕಿಂತಲೂ ಹೆಚ್ಚಾಗಿವೆ. ಆದರೆ ಇತರ ದೇಶಗಳಿಗೆ ಹೋಲಿಸಿದರೆ ಈ ಬೆಂಬಲ ಕಡಿಮೆಯಾಗಿಯೇ ಇದೆ. ಇದು ಕ್ರಮವಾಗಿ 37% ಮತ್ತು  25 % ರಷ್ಟು ಇದೆ. 2018 ರಲ್ಲಿ ಭಾರತದ ಹೈಕೋರ್ಟ್ ಸಲಿಂಗಕಾಮವನ್ನು ಕಾನೂನು ಬದ್ದಗೊಳಿಸಿತ್ತು.

ಮಧ್ಯಪ್ರಾಚ್ಯ, ಪೂರ್ವ ಯುರೋಪ್ ಮತ್ತು ಆಗ್ನೇಯ ಏಷ್ಯಾದ ಕೆಲವು ದೇಶಗಳಿಗಿಂತ ಅಮೆರಿಕ ಮತ್ತು ಪಶ್ಚಿಮ ಯುರೋಪಿನ ದೇಶಗಳು ಸಲಿಂಗಕಾಮವನ್ನು ಹೆಚ್ಚು ಒಪ್ಪಿಕೊಳ್ಳುತ್ತಿವೆ ಎಂದು “ಸಲಿಂಗಕಾಮ ನಿರಂತರತೆಯ ಜಾಗತಿಕ ವಿಭಜನೆ” ಎಂಬ ಶೀರ್ಷಿಕೆಯ ಈ ವರದಿ ಹೇಳುತ್ತದೆ.

ಉದಾಹರಣೆಗೆ, ಲೆಬನಾನ್‌ನಲ್ಲಿ 85% ರಷ್ಟು ಜನರು ಸಲಿಂಗಕಾಮವನ್ನು ಒಪ್ಪಿಕೊಳ್ಳಬಾರದು ಎಂದು ಹೇಳಿದರೆ, ಟುನೀಶಿಯಾದಲ್ಲಿ 72% ಜನರು ಇದನ್ನು ಹೇಳಿದ್ದಾರೆ. ಮಧ್ಯ ಮತ್ತು ಪೂರ್ವ ಯುರೋಪಿನಲ್ಲಿ ಸಲಿಂಗಕಾಮವನ್ನು ಸ್ವೀಕರಿಸುವ ಸರಾಸರಿ ದರ 46% ಆಗಿತ್ತು.

“ಆರ್ಥಿಕ ಅಭಿವೃದ್ಧಿಯ ಸೂಚಕವಾಗಿರಬಹುದಾದ ಪ್ರದೇಶಗಳಲ್ಲಿನ ವ್ಯತ್ಯಾಸಗಳು ನಿಜವಾಗಿಯೂ ಆಸಕ್ತಿದಾಯಕ ಆವಿಷ್ಕಾರಗಳಾಗಿವೆ, ಒಟ್ಟಾರೆ ಸ್ವೀಕಾರದ ಮಟ್ಟದಲ್ಲಿ ಬದಲಾವಣೆಗಳಾಗಿದ್ದರೂ ಸಹ, ಸ್ಥಿರವಾಗಿ ಉಳಿದಿವೆ” ಎಂದು ವರದಿಯ ಲೇಖಕ ಹಾಗೂ ಪ್ಯೂ ರಿಸರ್ಚ್ ಸೆಂಟರ್ನ ಜಾಗತಿಕ ವರ್ತನೆಗಳ ಸಂಶೋಧನೆಯ ಸಹಾಯಕ ನಿರ್ದೇಶಕರಾದ ಜಾಕೋಬ್ ಪೌಶ್ಟರ್ ಹೇಳಿದ್ದಾರೆ.

ಸಲಿಂಗಕಾಮದ ಬಗೆಗಿನ ವರ್ತನೆಗಳು ದೇಶದ ಸಂಪತ್ತಿನೊಂದಿಗೆ ಸಂಬಂಧ ಹೊಂದಿವೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಬಡ, ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಲ್ಲಿನ ಜನರಿಗಿಂತ ಶ್ರೀಮಂತ ದೇಶಗಳಲ್ಲಿನ ಜನರು ಸಾಮಾನ್ಯವಾಗಿ ಸಲಿಂಗಕಾಮವನ್ನು ಹೆಚ್ಚು ಒಪ್ಪಿಕೊಳ್ಳುತ್ತಿದ್ದಾರೆ.

ರಾಜಕೀಯ ಸಿದ್ಧಾಂತ ಮತ್ತು ಶಿಕ್ಷಣವು ಸಲಿಂಗಕಾಮವನ್ನು ಅಂಗೀಕರಿಸುವುದರೊಂದಿಗೆ ಪರಸ್ಪರ ಸಂಬಂಧ ಹೊಂದಿದೆ, ಎಡ-ಒಲವು ಮತ್ತು ಹೆಚ್ಚು ವಿದ್ಯಾವಂತ ಜನರು ಸಾಮಾಜಿಕ ಸ್ವೀಕಾರಕ್ಕೆ ಹೆಚ್ಚು ಬೆಂಬಲ ನೀಡುತ್ತಾರೆ.

ಕೇವಲ 29 ದೇಶಗಳಲ್ಲಿ ಸಲಿಂಗ ಮದುವೆ ಕಾನೂನುಬದ್ಧವಾಗಿದೆ ಎಂದು ಮಾನವ ಹಕ್ಕುಗಳ ಅಭಿಯಾನ ಉಲ್ಲೇಖಿಸಿದೆ.


ಓದಿ: ದೆಹಲಿಯಿಂದ ಮಂಗಳೂರಿನವರೆಗೆ CAA-NRC ವಿರೋಧಿಗಳನ್ನು ಹಣಿಯಲು ಹಿಂಬಾಗಿಲ ಸಂಚು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....