Homeಅಂತರಾಷ್ಟ್ರೀಯಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆ: ಅಮೆರಿಕಾ

ಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆ: ಅಮೆರಿಕಾ

- Advertisement -
- Advertisement -

ಭಾರತ, ಮಲೇಷ್ಯಾ, ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್‌ನಂತಹ ಏಷ್ಯಾದ ದೇಶಗಳಿಗೆ ಚೀನಾ ಕಡೆಯಿಂದ ಹೆಚ್ಚುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಅದನ್ನು ಎದುರಿಸಲು ಅಮೆರಿಕಾ ತನ್ನ ಜಾಗತಿಕ ಪಡೆಗಳ ನಿಯೋಜನೆಯನ್ನು ಪರಿಶೀಲಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಹೇಳಿದ್ದಾರೆ.

ಜರ್ಮನ್ ಮಾರ್ಷಲ್ ಫಂಡ್‌ನ ವರ್ಚುವಲ್ ಬ್ರಸೆಲ್ಸ್ ಫೋರಂ 2020 ರ ಸಂದರ್ಭದಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಪೊಂಪಿಯೊ ಈ ಹೇಳಿಕೆಗಳನ್ನು ನೀಡಿದ್ದಾರೆ.

“ನಾವು ಪಿಎಲ್‌ಎಯನ್ನು ಎದುರಿಸಲು ಸೂಕ್ತವಾದ ಸ್ಥಿತಿಯಲ್ಲಿದ್ದೇವೆ ಎಂದು ಖಚಿತಪಡಿಸಿಕೊಳ್ಳಲಿದ್ದೇವೆ. ಇದು ನಮ್ಮ ಕಾಲದ ಸವಾಲು ಎಂದು ನಾವು ಭಾವಿಸುತ್ತೇವೆ. ಅದನ್ನು ಮಾಡಲು ನಮ್ಮಲ್ಲಿ ಸಂಪನ್ಮೂಲಗಳಿವೆ ಎಂದು ನಾವು ಖಚಿತಪಡಿಸಿಕೊಳ್ಳಲಿದ್ದೇವೆ” ಎಂದು ಪೊಂಪಿಯೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಸೇನೆಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಇದರ ಭಾಗವಾಗಿ ಅಮೆರಿಕಾವು ಜರ್ಮನಿಯಲ್ಲಿ ತನ್ನ ಸೈನಿಕರ ಸಂಖ್ಯೆಯನ್ನು ಸುಮಾರು 52,000 ದಿಂದ 25,000 ಕ್ಕೆ ಇಳಿಸುತ್ತಿದೆ ಎಂದು ಅವರು ಹೇಳಿದರು.

ಕೆಲವು ಪ್ರದೇಶಗಳಲ್ಲಿ ಅಮೆರಿಕಾದ ಕೆಲವು ಸಂಪನ್ಮೂಲಗಳು ಇರಲಿವೆ ಆದರೆ ಚೀನಾದ ಬೆದರಿಕೆಯ ಬಗ್ಗೆ ಮಾತನಾಡಬೇಕಾದರೆ ಭಾರತ, ವಿಯೇಟ್ನಾಂ, ಮಲೇಶ್ಯಾ, ಇಂಡೋನೇಷಿಯಾ ಹಾಗೂ ಪಿಲಿಫೈನ್ ನ ದಕ್ಷಿಣ ಚೀನಾ ಸಮುದ್ರಗಳ ಬಗೆಗಿನ ಸವಾಲುಗಳಿವೆ ಎಂದು ಹೇಳಿದ್ದಾರೆ.

“ಅಮರಿಕಾ ಮಾಡಲು ನಿರ್ಧರಿಸಿದ ವ್ಯತ್ಯಾಸವು ಕೆಲವು ಸ್ಥಳಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ, ಇತರ ರಾಷ್ಟ್ರಗಳು ತಮ್ಮದೇ ಆದ ರಕ್ಷಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಬಹುದು. ಆದ್ದರಿಂದ, ನಾವು ಇದನ್ನು ಜಗತ್ತಿನ ಎಲ್ಲ ಪಾಲುದಾರರೊಂದಿಗೆ ಪೂರ್ಣ ಸಮಾಲೋಚನೆಯಲ್ಲಿ ಮಾಡಲು ಬಯಸುತ್ತೇವೆ, ಯುರೋಪಿಯನ್ ದೇಶಗಳೊಂದಿಗೆ ಖಂಡಿತವಾಗಿಯೂ” ಎಂದು ಪೊಂಪಿಯೊ ಹೇಳಿದ್ದಾರೆ.

ಮಿತ್ರರಾಷ್ಟ್ರಗಳು ಮತ್ತು ಸ್ನೇಹಿತರೊಂದಿಗೆ ಸಮಾಲೋಚಿಸಿ ಸೈನ್ಯದ ಸ್ಥಿತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪೊಂಪಿಯೊ ಹೇಳಿದ್ದಾರೆ.

ಕಳೆದ ವಾರ ಪೊಂಪಿಯೊ ಚೀನಾದ ಸೈನ್ಯ ಭಾರತದೊಂದಿಗಿನ ಗಡಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ದಕ್ಷಿಣ ಚೀನಾ ಸಮುದ್ರವನ್ನು ಮಿಲಿಟರೀಕರಣಗೊಳಿಸಿದೆ ಎಂದು ಟೀಕಿಸಿದ್ದರು.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾ ಮಿಲಿಟರಿ ಮತ್ತು ಆರ್ಥಿಕ ಪ್ರಭಾವವನ್ನು ವೇಗವಾಗಿ ವಿಸ್ತರಿಸುತ್ತಿರುವುದು ಅಮೆರಿಕಾದ ಕಳವಳಕ್ಕೆ ಕಾರಣವಾಗಿದೆ. ಚೀನಾವು ದಕ್ಷಿಣ ಚೀನಾ ಸಮುದ್ರ ಮತ್ತು ಪೂರ್ವ ಚೀನಾ ಸಮುದ್ರ ಎರಡರಲ್ಲೂ ತೀವ್ರವಾಗಿ ಪ್ರಾದೇಶಿಕ ವಿವಾದಗಳಲ್ಲಿ ತೊಡಗಿದೆ. ಈ ಪ್ರದೇಶದಲ್ಲಿ ಅದು ಅನೇಕ ದ್ವೀಪಗಳನ್ನು ನಿಯಂತ್ರಿಸುತ್ತಿದೆ ಮತ್ತು ಮಿಲಿಟರಿಕರಣಗೊಳಿಸಿದೆ. ಎರಡೂ ಪ್ರದೇಶಗಳು ಖನಿಜಗಳು, ತೈಲ ಮತ್ತು ಇತರ ನೈಸರ್ಗಿಕ ಸಂಪನ್ಮೂಲಗಳಿಂದ ಸಮೃದ್ಧವಾಗಿವೆ ಮತ್ತು ಜಾಗತಿಕ ವ್ಯಾಪಾರಕ್ಕೆ ಪ್ರಮುಖ ಸ್ಥಳವಾಗಿದೆ ಎಂದು ಹೇಳಲಾಗಿದೆ.


ಓದಿ: ಬಾಯ್‍ಕಾಟ್ ಚೈನಾ ಅಬ್ಬರದ ಕೂಗು ವಾಣಿಜ್ಯದಲ್ಲಿ ಕಾರ್ಯಗತ ಸಾಧ್ಯವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...