Homeಅಂತರಾಷ್ಟ್ರೀಯಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆ: ಅಮೆರಿಕಾ

ಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆ: ಅಮೆರಿಕಾ

- Advertisement -
- Advertisement -

ಭಾರತ, ಮಲೇಷ್ಯಾ, ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್‌ನಂತಹ ಏಷ್ಯಾದ ದೇಶಗಳಿಗೆ ಚೀನಾ ಕಡೆಯಿಂದ ಹೆಚ್ಚುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಅದನ್ನು ಎದುರಿಸಲು ಅಮೆರಿಕಾ ತನ್ನ ಜಾಗತಿಕ ಪಡೆಗಳ ನಿಯೋಜನೆಯನ್ನು ಪರಿಶೀಲಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಹೇಳಿದ್ದಾರೆ.

ಜರ್ಮನ್ ಮಾರ್ಷಲ್ ಫಂಡ್‌ನ ವರ್ಚುವಲ್ ಬ್ರಸೆಲ್ಸ್ ಫೋರಂ 2020 ರ ಸಂದರ್ಭದಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಪೊಂಪಿಯೊ ಈ ಹೇಳಿಕೆಗಳನ್ನು ನೀಡಿದ್ದಾರೆ.

“ನಾವು ಪಿಎಲ್‌ಎಯನ್ನು ಎದುರಿಸಲು ಸೂಕ್ತವಾದ ಸ್ಥಿತಿಯಲ್ಲಿದ್ದೇವೆ ಎಂದು ಖಚಿತಪಡಿಸಿಕೊಳ್ಳಲಿದ್ದೇವೆ. ಇದು ನಮ್ಮ ಕಾಲದ ಸವಾಲು ಎಂದು ನಾವು ಭಾವಿಸುತ್ತೇವೆ. ಅದನ್ನು ಮಾಡಲು ನಮ್ಮಲ್ಲಿ ಸಂಪನ್ಮೂಲಗಳಿವೆ ಎಂದು ನಾವು ಖಚಿತಪಡಿಸಿಕೊಳ್ಳಲಿದ್ದೇವೆ” ಎಂದು ಪೊಂಪಿಯೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಸೇನೆಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಇದರ ಭಾಗವಾಗಿ ಅಮೆರಿಕಾವು ಜರ್ಮನಿಯಲ್ಲಿ ತನ್ನ ಸೈನಿಕರ ಸಂಖ್ಯೆಯನ್ನು ಸುಮಾರು 52,000 ದಿಂದ 25,000 ಕ್ಕೆ ಇಳಿಸುತ್ತಿದೆ ಎಂದು ಅವರು ಹೇಳಿದರು.

ಕೆಲವು ಪ್ರದೇಶಗಳಲ್ಲಿ ಅಮೆರಿಕಾದ ಕೆಲವು ಸಂಪನ್ಮೂಲಗಳು ಇರಲಿವೆ ಆದರೆ ಚೀನಾದ ಬೆದರಿಕೆಯ ಬಗ್ಗೆ ಮಾತನಾಡಬೇಕಾದರೆ ಭಾರತ, ವಿಯೇಟ್ನಾಂ, ಮಲೇಶ್ಯಾ, ಇಂಡೋನೇಷಿಯಾ ಹಾಗೂ ಪಿಲಿಫೈನ್ ನ ದಕ್ಷಿಣ ಚೀನಾ ಸಮುದ್ರಗಳ ಬಗೆಗಿನ ಸವಾಲುಗಳಿವೆ ಎಂದು ಹೇಳಿದ್ದಾರೆ.

“ಅಮರಿಕಾ ಮಾಡಲು ನಿರ್ಧರಿಸಿದ ವ್ಯತ್ಯಾಸವು ಕೆಲವು ಸ್ಥಳಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ, ಇತರ ರಾಷ್ಟ್ರಗಳು ತಮ್ಮದೇ ಆದ ರಕ್ಷಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಬಹುದು. ಆದ್ದರಿಂದ, ನಾವು ಇದನ್ನು ಜಗತ್ತಿನ ಎಲ್ಲ ಪಾಲುದಾರರೊಂದಿಗೆ ಪೂರ್ಣ ಸಮಾಲೋಚನೆಯಲ್ಲಿ ಮಾಡಲು ಬಯಸುತ್ತೇವೆ, ಯುರೋಪಿಯನ್ ದೇಶಗಳೊಂದಿಗೆ ಖಂಡಿತವಾಗಿಯೂ” ಎಂದು ಪೊಂಪಿಯೊ ಹೇಳಿದ್ದಾರೆ.

ಮಿತ್ರರಾಷ್ಟ್ರಗಳು ಮತ್ತು ಸ್ನೇಹಿತರೊಂದಿಗೆ ಸಮಾಲೋಚಿಸಿ ಸೈನ್ಯದ ಸ್ಥಿತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪೊಂಪಿಯೊ ಹೇಳಿದ್ದಾರೆ.

ಕಳೆದ ವಾರ ಪೊಂಪಿಯೊ ಚೀನಾದ ಸೈನ್ಯ ಭಾರತದೊಂದಿಗಿನ ಗಡಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ದಕ್ಷಿಣ ಚೀನಾ ಸಮುದ್ರವನ್ನು ಮಿಲಿಟರೀಕರಣಗೊಳಿಸಿದೆ ಎಂದು ಟೀಕಿಸಿದ್ದರು.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾ ಮಿಲಿಟರಿ ಮತ್ತು ಆರ್ಥಿಕ ಪ್ರಭಾವವನ್ನು ವೇಗವಾಗಿ ವಿಸ್ತರಿಸುತ್ತಿರುವುದು ಅಮೆರಿಕಾದ ಕಳವಳಕ್ಕೆ ಕಾರಣವಾಗಿದೆ. ಚೀನಾವು ದಕ್ಷಿಣ ಚೀನಾ ಸಮುದ್ರ ಮತ್ತು ಪೂರ್ವ ಚೀನಾ ಸಮುದ್ರ ಎರಡರಲ್ಲೂ ತೀವ್ರವಾಗಿ ಪ್ರಾದೇಶಿಕ ವಿವಾದಗಳಲ್ಲಿ ತೊಡಗಿದೆ. ಈ ಪ್ರದೇಶದಲ್ಲಿ ಅದು ಅನೇಕ ದ್ವೀಪಗಳನ್ನು ನಿಯಂತ್ರಿಸುತ್ತಿದೆ ಮತ್ತು ಮಿಲಿಟರಿಕರಣಗೊಳಿಸಿದೆ. ಎರಡೂ ಪ್ರದೇಶಗಳು ಖನಿಜಗಳು, ತೈಲ ಮತ್ತು ಇತರ ನೈಸರ್ಗಿಕ ಸಂಪನ್ಮೂಲಗಳಿಂದ ಸಮೃದ್ಧವಾಗಿವೆ ಮತ್ತು ಜಾಗತಿಕ ವ್ಯಾಪಾರಕ್ಕೆ ಪ್ರಮುಖ ಸ್ಥಳವಾಗಿದೆ ಎಂದು ಹೇಳಲಾಗಿದೆ.


ಓದಿ: ಬಾಯ್‍ಕಾಟ್ ಚೈನಾ ಅಬ್ಬರದ ಕೂಗು ವಾಣಿಜ್ಯದಲ್ಲಿ ಕಾರ್ಯಗತ ಸಾಧ್ಯವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...