Homeಅಂತರಾಷ್ಟ್ರೀಯಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆ: ಅಮೆರಿಕಾ

ಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆ: ಅಮೆರಿಕಾ

- Advertisement -
- Advertisement -

ಭಾರತ, ಮಲೇಷ್ಯಾ, ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್‌ನಂತಹ ಏಷ್ಯಾದ ದೇಶಗಳಿಗೆ ಚೀನಾ ಕಡೆಯಿಂದ ಹೆಚ್ಚುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಅದನ್ನು ಎದುರಿಸಲು ಅಮೆರಿಕಾ ತನ್ನ ಜಾಗತಿಕ ಪಡೆಗಳ ನಿಯೋಜನೆಯನ್ನು ಪರಿಶೀಲಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಹೇಳಿದ್ದಾರೆ.

ಜರ್ಮನ್ ಮಾರ್ಷಲ್ ಫಂಡ್‌ನ ವರ್ಚುವಲ್ ಬ್ರಸೆಲ್ಸ್ ಫೋರಂ 2020 ರ ಸಂದರ್ಭದಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಪೊಂಪಿಯೊ ಈ ಹೇಳಿಕೆಗಳನ್ನು ನೀಡಿದ್ದಾರೆ.

“ನಾವು ಪಿಎಲ್‌ಎಯನ್ನು ಎದುರಿಸಲು ಸೂಕ್ತವಾದ ಸ್ಥಿತಿಯಲ್ಲಿದ್ದೇವೆ ಎಂದು ಖಚಿತಪಡಿಸಿಕೊಳ್ಳಲಿದ್ದೇವೆ. ಇದು ನಮ್ಮ ಕಾಲದ ಸವಾಲು ಎಂದು ನಾವು ಭಾವಿಸುತ್ತೇವೆ. ಅದನ್ನು ಮಾಡಲು ನಮ್ಮಲ್ಲಿ ಸಂಪನ್ಮೂಲಗಳಿವೆ ಎಂದು ನಾವು ಖಚಿತಪಡಿಸಿಕೊಳ್ಳಲಿದ್ದೇವೆ” ಎಂದು ಪೊಂಪಿಯೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಸೇನೆಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಇದರ ಭಾಗವಾಗಿ ಅಮೆರಿಕಾವು ಜರ್ಮನಿಯಲ್ಲಿ ತನ್ನ ಸೈನಿಕರ ಸಂಖ್ಯೆಯನ್ನು ಸುಮಾರು 52,000 ದಿಂದ 25,000 ಕ್ಕೆ ಇಳಿಸುತ್ತಿದೆ ಎಂದು ಅವರು ಹೇಳಿದರು.

ಕೆಲವು ಪ್ರದೇಶಗಳಲ್ಲಿ ಅಮೆರಿಕಾದ ಕೆಲವು ಸಂಪನ್ಮೂಲಗಳು ಇರಲಿವೆ ಆದರೆ ಚೀನಾದ ಬೆದರಿಕೆಯ ಬಗ್ಗೆ ಮಾತನಾಡಬೇಕಾದರೆ ಭಾರತ, ವಿಯೇಟ್ನಾಂ, ಮಲೇಶ್ಯಾ, ಇಂಡೋನೇಷಿಯಾ ಹಾಗೂ ಪಿಲಿಫೈನ್ ನ ದಕ್ಷಿಣ ಚೀನಾ ಸಮುದ್ರಗಳ ಬಗೆಗಿನ ಸವಾಲುಗಳಿವೆ ಎಂದು ಹೇಳಿದ್ದಾರೆ.

“ಅಮರಿಕಾ ಮಾಡಲು ನಿರ್ಧರಿಸಿದ ವ್ಯತ್ಯಾಸವು ಕೆಲವು ಸ್ಥಳಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ, ಇತರ ರಾಷ್ಟ್ರಗಳು ತಮ್ಮದೇ ಆದ ರಕ್ಷಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಬಹುದು. ಆದ್ದರಿಂದ, ನಾವು ಇದನ್ನು ಜಗತ್ತಿನ ಎಲ್ಲ ಪಾಲುದಾರರೊಂದಿಗೆ ಪೂರ್ಣ ಸಮಾಲೋಚನೆಯಲ್ಲಿ ಮಾಡಲು ಬಯಸುತ್ತೇವೆ, ಯುರೋಪಿಯನ್ ದೇಶಗಳೊಂದಿಗೆ ಖಂಡಿತವಾಗಿಯೂ” ಎಂದು ಪೊಂಪಿಯೊ ಹೇಳಿದ್ದಾರೆ.

ಮಿತ್ರರಾಷ್ಟ್ರಗಳು ಮತ್ತು ಸ್ನೇಹಿತರೊಂದಿಗೆ ಸಮಾಲೋಚಿಸಿ ಸೈನ್ಯದ ಸ್ಥಿತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪೊಂಪಿಯೊ ಹೇಳಿದ್ದಾರೆ.

ಕಳೆದ ವಾರ ಪೊಂಪಿಯೊ ಚೀನಾದ ಸೈನ್ಯ ಭಾರತದೊಂದಿಗಿನ ಗಡಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ದಕ್ಷಿಣ ಚೀನಾ ಸಮುದ್ರವನ್ನು ಮಿಲಿಟರೀಕರಣಗೊಳಿಸಿದೆ ಎಂದು ಟೀಕಿಸಿದ್ದರು.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾ ಮಿಲಿಟರಿ ಮತ್ತು ಆರ್ಥಿಕ ಪ್ರಭಾವವನ್ನು ವೇಗವಾಗಿ ವಿಸ್ತರಿಸುತ್ತಿರುವುದು ಅಮೆರಿಕಾದ ಕಳವಳಕ್ಕೆ ಕಾರಣವಾಗಿದೆ. ಚೀನಾವು ದಕ್ಷಿಣ ಚೀನಾ ಸಮುದ್ರ ಮತ್ತು ಪೂರ್ವ ಚೀನಾ ಸಮುದ್ರ ಎರಡರಲ್ಲೂ ತೀವ್ರವಾಗಿ ಪ್ರಾದೇಶಿಕ ವಿವಾದಗಳಲ್ಲಿ ತೊಡಗಿದೆ. ಈ ಪ್ರದೇಶದಲ್ಲಿ ಅದು ಅನೇಕ ದ್ವೀಪಗಳನ್ನು ನಿಯಂತ್ರಿಸುತ್ತಿದೆ ಮತ್ತು ಮಿಲಿಟರಿಕರಣಗೊಳಿಸಿದೆ. ಎರಡೂ ಪ್ರದೇಶಗಳು ಖನಿಜಗಳು, ತೈಲ ಮತ್ತು ಇತರ ನೈಸರ್ಗಿಕ ಸಂಪನ್ಮೂಲಗಳಿಂದ ಸಮೃದ್ಧವಾಗಿವೆ ಮತ್ತು ಜಾಗತಿಕ ವ್ಯಾಪಾರಕ್ಕೆ ಪ್ರಮುಖ ಸ್ಥಳವಾಗಿದೆ ಎಂದು ಹೇಳಲಾಗಿದೆ.


ಓದಿ: ಬಾಯ್‍ಕಾಟ್ ಚೈನಾ ಅಬ್ಬರದ ಕೂಗು ವಾಣಿಜ್ಯದಲ್ಲಿ ಕಾರ್ಯಗತ ಸಾಧ್ಯವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...