Homeಮುಖಪುಟವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್...

ವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್ ಬಿಚ್ಚಿಟ್ಟ ತುರ್ತು ಪರಿಸ್ಥಿತಿಯ ನೆನಪುಗಳು

- Advertisement -
- Advertisement -

ಜೂನ್ ಎಂದರೆ ತುರ್ತು ಪರಿಸ್ಥಿತಿಯ ಕರಾಳ ನೆನಪು. 1975 ಜೂನ್ 25 ರಂದು ಭಾರತದಲ್ಲಿ ಹೇರಿದ್ದ  ತುರ್ತು ಪರಿಸ್ಥಿತಿಯ ವಿರುದ್ಧ ವಾಶಿಂಗ್ಟನ್ ನಲ್ಲಿ ಅಂದು ನೆಲೆಸಿದ್ದ ಸಾಮಾಜಿಕ ಹೋರಾಟಗಾರ, ಸೆಂಟರ್‌ ಫಾರ್ ಡೆಮಾಕ್ರಸಿ ಅಧ್ಯಕ್ಷ ಎಸ್ ಆರ್ ಹಿರೇಮಠ್ ಅವರು ಪ್ರತಿಭಟಿಸಿದ್ದರು. ಈ ಪ್ರತಿಭಟನೆ ನಡೆಸಿದ್ದಕ್ಕೆ ಅಂದಿನ ಭಾರತ ಸರ್ಕಾರ ಹಿರೇಮಠ್ ಅವರ ಪಾಸ್ ಪೋರ್ಟ್ ಅನ್ನು ರದ್ದು ಮಾಡಿತ್ತು.

1975 ರ ಅಧಿಕೃತ ತುರ್ತು ಪರಿಸ್ಥಿತಿಯಲ್ಲಿ ಇದ್ದ ದಿನಗಳಿಗೆ ಹೋಲಿಸಿದರೆ ಇವತ್ತಿನ ದಿನಗಳು ಅದರ 20 ಪಟ್ಟು ಭೀಕರವಾಗಿವೆ ಎನ್ನುವ ಹಿರೇಮಠರ ಮಾತುಗಳು ಎಚ್ಚರಿಕೆ ಘಂಟೆಯಾಗಿವೆ. ಬುದ್ಧ ಬಸವ ಅಂಬೇಡ್ಕರ್ ಅವರ ಕಲ್ಪನೆಯ ಸಮಾನತೆಯ ಸಮಾಜವನ್ನು ನಾವು ಕಟ್ಟಲು ಮತ್ತೆ ಹೋರಾಟಕ್ಕೆ ಸಜ್ಜಾಗಬೇಕು ಅನ್ನುವ ಹಿರೇಮಠ್ ಅವರನ್ನು ಹಿರಿಯ ಲೇಖಕ- ಪ್ರಕಾಶಕ ಬಸವರಾಜ್ ಸೂಳಿಬಾವಿ ಸಂದರ್ಶನ ನಡೆಸಿದ್ದಾರೆ.

ಜಯಪ್ರಕಾಶ್ ನಾರಾಯಣ್ ಅವರು ಕನಸು ಕಂಡಿದ್ದ ಸಂಪೂರ್ಣ ಕ್ರಾಂತಿಗೆ ಮತ್ತೆ ಏನು ಮಾಡಬೇಕು? ಈ ದೇಶವನ್ನು ಹಿಂದಕ್ಕೆ ಒಯ್ಯುತ್ತಿರುವ ಸಂಗತಿಗಳು ಯಾವುವು? ಆರ್ಥಿಕ ಅಸಮಾನತೆಯ ಜನಕರು ಯಾರು? ಇದನ್ನು ಮುಂದುವರೆಸುತ್ತಿರುವವರು ಯಾರು? ಸಿಎಎ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ಇವುಗಳ ಅಪಾಯಗಳು ಏನು? ಶೂಮಾಕರ್ ಮತ್ತು ಗಾಂಧಿ ಆರ್ಥಿಕ ವ್ಯವಸ್ಥೆ – ಅಂಬೇಡ್ಕರ್ – ಜ್ಯೋತಿಭಾ ಫುಲೆ ಇವರ ಸಮಾನತೆಯ ಆಂದೋಲನಗಳನ್ನು ಹೇಗೆ ಮರುಕಟ್ಟಬೇಕು? ಇವೆಲ್ಲವನ್ನೂ ಹಿರೇಮಠ್ ಅವರು ತಮ್ಮ ಅಪಾರ ಹೋರಾಟದ ಅನುಭವ ಮತ್ತು ಚಿಂತನೆಯ ನೆಲೆಯಲ್ಲಿ ಚರ್ಚಿಸಿದ್ದಾರೆ.

ರಾಜಕೀಯ ಪಕ್ಷಗಳು ಜನರ ಭರವಸೆಯನ್ನು ಕಳೆದುಕೊಂಡಿರುವುದದರ ಬಗ್ಗೆ ಕಳವಳ ವ್ಯಕ್ತಪಡಿಸುವ ಹಿರೇಮಠ್ ಅವರು, ಎಲ್ಲ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ನಾಗರಿಕ ಸಮುದಾಯ ಹೋರಾಟ ಮಾಡುವುದು ಮುಖ್ಯ ಎಂದು ವಿವರಿಸುತ್ತಾರೆ. ಇದಕ್ಕೆ ಸಂವಿಧಾನದ ಪೀಠಿಕೆಯನ್ನು ಉದಾಹರಣೆ ಕೊಡುವ ಹಿರೇಮಠ್ ಅವರು ಮಧ್ಯಮ ವರ್ಗ ತಮ್ಮ ಸೌಲಭ್ಯ ಸೌಕರ್ಯಗಳನ್ನು ಕಡೆಗೆ ಮಾತ್ರ ಗಮನಿಸುವುದನ್ನು ಬಿಟ್ಟು ನಾಗರಿಕ ಸಮಾಜವಾಗಿ ಒಟ್ಟಾಗಿ ಹೋರಾಡಬೇಕು ಅನ್ನುತ್ತಾರೆ.

ಥಾಮಸ್ ಪಿಕೆಟ್ಟಿ ಉದಾಹರಣೆ ಕೊಟ್ಟು ಹೆಚ್ಚು ಜನಕ್ಕೆ ಸಂಪನ್ಮೂಲಗಳ ಹಂಚಿಕೆಯಾಗುವುದರ ಬಗ್ಗೆ ಮಾತಾಡುವ ಹಿರೇಮಠ್ ಇನ್ನೂ ಹತ್ತು ಹಲವು ಸಂಗತಿಗಳನ್ನು ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ಪೂರ್ಣ ವಿಡಿಯೋವನ್ನು ಇಲ್ಲಿ ನೋಡಿ.


ಇದನ್ನೂ ಓದಿ: ಕೇರಳದ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ಹಿಂದುತ್ವವಾದಿಗಳ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಅವರನ್ನೇ ಇಟ್ಟು ಇನ್ನೂ ಮೂರು ಸಿನಿಮಾ ಮಾಡುವುದಾಗಿ ಘೋಷಿಸಿದ ನಿರ್ದೇಶಕರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...