Homeಮುಖಪುಟವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್...

ವಿಡಿಯೋ: ಇವತ್ತಿನ ದಿನಗಳು 75ರ ತುರ್ತು ಪರಿಸ್ಥಿತಿಗಿಂತ 20 ಪಟ್ಟು ಭೀಕರವಾಗಿವೆ: ಎಸ್. ಆರ್. ಹಿರೇಮಠ್ ಬಿಚ್ಚಿಟ್ಟ ತುರ್ತು ಪರಿಸ್ಥಿತಿಯ ನೆನಪುಗಳು

- Advertisement -
- Advertisement -

ಜೂನ್ ಎಂದರೆ ತುರ್ತು ಪರಿಸ್ಥಿತಿಯ ಕರಾಳ ನೆನಪು. 1975 ಜೂನ್ 25 ರಂದು ಭಾರತದಲ್ಲಿ ಹೇರಿದ್ದ  ತುರ್ತು ಪರಿಸ್ಥಿತಿಯ ವಿರುದ್ಧ ವಾಶಿಂಗ್ಟನ್ ನಲ್ಲಿ ಅಂದು ನೆಲೆಸಿದ್ದ ಸಾಮಾಜಿಕ ಹೋರಾಟಗಾರ, ಸೆಂಟರ್‌ ಫಾರ್ ಡೆಮಾಕ್ರಸಿ ಅಧ್ಯಕ್ಷ ಎಸ್ ಆರ್ ಹಿರೇಮಠ್ ಅವರು ಪ್ರತಿಭಟಿಸಿದ್ದರು. ಈ ಪ್ರತಿಭಟನೆ ನಡೆಸಿದ್ದಕ್ಕೆ ಅಂದಿನ ಭಾರತ ಸರ್ಕಾರ ಹಿರೇಮಠ್ ಅವರ ಪಾಸ್ ಪೋರ್ಟ್ ಅನ್ನು ರದ್ದು ಮಾಡಿತ್ತು.

1975 ರ ಅಧಿಕೃತ ತುರ್ತು ಪರಿಸ್ಥಿತಿಯಲ್ಲಿ ಇದ್ದ ದಿನಗಳಿಗೆ ಹೋಲಿಸಿದರೆ ಇವತ್ತಿನ ದಿನಗಳು ಅದರ 20 ಪಟ್ಟು ಭೀಕರವಾಗಿವೆ ಎನ್ನುವ ಹಿರೇಮಠರ ಮಾತುಗಳು ಎಚ್ಚರಿಕೆ ಘಂಟೆಯಾಗಿವೆ. ಬುದ್ಧ ಬಸವ ಅಂಬೇಡ್ಕರ್ ಅವರ ಕಲ್ಪನೆಯ ಸಮಾನತೆಯ ಸಮಾಜವನ್ನು ನಾವು ಕಟ್ಟಲು ಮತ್ತೆ ಹೋರಾಟಕ್ಕೆ ಸಜ್ಜಾಗಬೇಕು ಅನ್ನುವ ಹಿರೇಮಠ್ ಅವರನ್ನು ಹಿರಿಯ ಲೇಖಕ- ಪ್ರಕಾಶಕ ಬಸವರಾಜ್ ಸೂಳಿಬಾವಿ ಸಂದರ್ಶನ ನಡೆಸಿದ್ದಾರೆ.

ಜಯಪ್ರಕಾಶ್ ನಾರಾಯಣ್ ಅವರು ಕನಸು ಕಂಡಿದ್ದ ಸಂಪೂರ್ಣ ಕ್ರಾಂತಿಗೆ ಮತ್ತೆ ಏನು ಮಾಡಬೇಕು? ಈ ದೇಶವನ್ನು ಹಿಂದಕ್ಕೆ ಒಯ್ಯುತ್ತಿರುವ ಸಂಗತಿಗಳು ಯಾವುವು? ಆರ್ಥಿಕ ಅಸಮಾನತೆಯ ಜನಕರು ಯಾರು? ಇದನ್ನು ಮುಂದುವರೆಸುತ್ತಿರುವವರು ಯಾರು? ಸಿಎಎ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ಇವುಗಳ ಅಪಾಯಗಳು ಏನು? ಶೂಮಾಕರ್ ಮತ್ತು ಗಾಂಧಿ ಆರ್ಥಿಕ ವ್ಯವಸ್ಥೆ – ಅಂಬೇಡ್ಕರ್ – ಜ್ಯೋತಿಭಾ ಫುಲೆ ಇವರ ಸಮಾನತೆಯ ಆಂದೋಲನಗಳನ್ನು ಹೇಗೆ ಮರುಕಟ್ಟಬೇಕು? ಇವೆಲ್ಲವನ್ನೂ ಹಿರೇಮಠ್ ಅವರು ತಮ್ಮ ಅಪಾರ ಹೋರಾಟದ ಅನುಭವ ಮತ್ತು ಚಿಂತನೆಯ ನೆಲೆಯಲ್ಲಿ ಚರ್ಚಿಸಿದ್ದಾರೆ.

ರಾಜಕೀಯ ಪಕ್ಷಗಳು ಜನರ ಭರವಸೆಯನ್ನು ಕಳೆದುಕೊಂಡಿರುವುದದರ ಬಗ್ಗೆ ಕಳವಳ ವ್ಯಕ್ತಪಡಿಸುವ ಹಿರೇಮಠ್ ಅವರು, ಎಲ್ಲ ಪಕ್ಷಗಳೂ ಒಗ್ಗೂಡಿ ಹೋರಾಟ ನಡೆಸುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ನಾಗರಿಕ ಸಮುದಾಯ ಹೋರಾಟ ಮಾಡುವುದು ಮುಖ್ಯ ಎಂದು ವಿವರಿಸುತ್ತಾರೆ. ಇದಕ್ಕೆ ಸಂವಿಧಾನದ ಪೀಠಿಕೆಯನ್ನು ಉದಾಹರಣೆ ಕೊಡುವ ಹಿರೇಮಠ್ ಅವರು ಮಧ್ಯಮ ವರ್ಗ ತಮ್ಮ ಸೌಲಭ್ಯ ಸೌಕರ್ಯಗಳನ್ನು ಕಡೆಗೆ ಮಾತ್ರ ಗಮನಿಸುವುದನ್ನು ಬಿಟ್ಟು ನಾಗರಿಕ ಸಮಾಜವಾಗಿ ಒಟ್ಟಾಗಿ ಹೋರಾಡಬೇಕು ಅನ್ನುತ್ತಾರೆ.

ಥಾಮಸ್ ಪಿಕೆಟ್ಟಿ ಉದಾಹರಣೆ ಕೊಟ್ಟು ಹೆಚ್ಚು ಜನಕ್ಕೆ ಸಂಪನ್ಮೂಲಗಳ ಹಂಚಿಕೆಯಾಗುವುದರ ಬಗ್ಗೆ ಮಾತಾಡುವ ಹಿರೇಮಠ್ ಇನ್ನೂ ಹತ್ತು ಹಲವು ಸಂಗತಿಗಳನ್ನು ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. ಪೂರ್ಣ ವಿಡಿಯೋವನ್ನು ಇಲ್ಲಿ ನೋಡಿ.


ಇದನ್ನೂ ಓದಿ: ಕೇರಳದ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ಹಿಂದುತ್ವವಾದಿಗಳ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಅವರನ್ನೇ ಇಟ್ಟು ಇನ್ನೂ ಮೂರು ಸಿನಿಮಾ ಮಾಡುವುದಾಗಿ ಘೋಷಿಸಿದ ನಿರ್ದೇಶಕರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...