Homeಕರ್ನಾಟಕಹಿರಿಯ ನಟ 'ವೈಜನಾಥ ಬಿರಾದಾರ' ಅವರ ಹುಟ್ಟುಹಬ್ಬ ಇಂದು!

ಹಿರಿಯ ನಟ ‘ವೈಜನಾಥ ಬಿರಾದಾರ’ ಅವರ ಹುಟ್ಟುಹಬ್ಬ ಇಂದು!

- Advertisement -
- Advertisement -

‘ವೈಜನಾಥ ಬಿರಾದಾರ’ ಎಂದಾಕ್ಷಣ ತೆರೆಯ ಮೇಲಿನ ಶೋಷಿತ ವ್ಯಕ್ತಿಯೊಬ್ಬನ ಚಿತ್ರ ಕಣ್ಮುಂದೆ ಬರುತ್ತದೆ. ಅವಮಾನ, ಬಡತನ, ಸಂಕಟಗಳನ್ನೆಲ್ಲಾ ಹೊಟ್ಟೆಯಲ್ಲಿಟ್ಟುಕೊಂಡು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪಾತ್ರಗಳಲ್ಲೇ ಅವರು ಹೆಚ್ಚಾಗಿ ಕಾಣಿಸಿಕೊಂಡದ್ದು. ಹಿರಿಯ ನಟ ಇಂದು 67ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಕಳೆದ ಮೂರೂವರೆ ದಶಕಗಳಿಂದ ವೃತ್ತಿರಂಗಭೂಮಿ ಮತ್ತು ಕನ್ನಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಟ ‘ವೈಜನಾಥ ಬಿರಾದಾರ’ ಇಂದು 68ಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟೂರು ಬೀದರ್ ಜಿಲ್ಲೆಯ ತೆಗಾಂಪೂರ್. ಎಂ.ಎಸ್.ಸತ್ಯು ನಿರ್ದೇಶನದ ‘ಬರ’ ಚಿತ್ರದೊಂದಿಗೆ ಬೆಳ್ಳಿತೆರೆಗೆ ಪರಿಚಯವಾದ ಬಿರಾದರ ಮೂಲತಃ ವೃತ್ತಿ ರಂಗಭೂಮಿ ಕಲಾವಿದ. ನಟಿಸಿದ ಚಿತ್ರಗಳ ಸಂಖ್ಯೆ ಐನೂರರ ಆಸುಪಾಸಿನಲ್ಲಿದೆ. ತಮ್ಮ ‘ಬಿರಾದಾರ ಮಿತ್ರ ಮಂಡಳಿ’ ತಂಡದೊಂದಿಗೆ ಇಂದಿಗೂ ಅವರು ನಾಟಕಗಳನ್ನು ಪ್ರದರ್ಶಿಸುತ್ತಾರೆ. ಗಿರೀಶ್ ಕಾಸರವಳ್ಳಿಯವರ ‘ಕನಸೆಂಬೋ ಕುದುರೆಯನೇರಿ’ ಬಿರಾದಾರ ಅವರ ಮಹತ್ವದ ಚಿತ್ರಗಳಲ್ಲೊಂದು. ಸ್ಪೇನ್‍ನ ಮ್ಯಾಡ್ರಿಡ್ ‘ಇಂಡಿಯಾ ಇಮ್ಯಾಜಿನ್’ ಚಿತ್ರೋತ್ಸವದಲ್ಲಿ (2011) ಈ ಚಿತ್ರ ಪ್ರದರ್ಶನಗೊಂಡಿತ್ತು. ಚಿತ್ರೋತ್ಸವ ಕೊಡಮಾಡುವ ಅತ್ಯುತ್ತಮ ನಟ ಪುರಸ್ಕಾರ ಬಿರಾದಾರ ಅವರಿಗೆ ಸಂದಿದೆ.

ವೈಜನಾಥ ಬಿರಾದಾರ

ಸದ್ಯ ಕೊರೋನಾ ಸಂಕಟದಿಂದಾಗಿ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದಾಗಿ ತೊಂದರೆಗೀಡಾಗಿರುವುದು ಅವರ ಮಾತುಗಳಲ್ಲಿ ವೇದ್ಯವಾಗುತ್ತದೆ. “ಕಲಾವಿದರಿಗೆ ಸಂಕಷ್ಟ ಯಾವಾಗ ತಪ್ಪಿದೆ? ಕೊರೋನಾ ಕಾಲ ಕಲಾವಿದರಿಗೆ ಸಂಕಷ್ಟ ತಂದಿದೆ. ನಮಗೆ ಕಲೆ ಇದೆ, ಖಾಯಂ ನೆಲೆ ಇಲ್ಲ. ಹೀಗೇ ಜೀವನ ನಡೆಸಿಕೊಂಡು ಹೋಗ್ತಾ ಇರೋದು ಅಷ್ಟೆ” ಎನ್ನುತ್ತಾರವರು.

ಕನ್ನಡಿಗರು ತಮ್ಮ ಮೇಲಿಟ್ಟಿರುವ ಅಭಿಮಾನ, ಪ್ರೀತಿಗೆ ಋಣಿ ಎನ್ನುತ್ತಾರವರು. ಮುಂದೆ ಮತ್ತಷ್ಟು ವೈವಿಧ್ಯಮಯ ಪಾತ್ರಗಳಲ್ಲಿ ತೊಡಗಿಸಿಕೊಳ್ಳುವ ಇರಾದೆ ಅವರದ್ದು. ಹುಟ್ಟುಹಬ್ಬದ ಸಂದರ್ಭದಲ್ಲಿ ಅವರು ತಮ್ಮ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿನ ಎರಡು ಶೂಟಿಂಗ್ ಸೋಜಿಗಗಳನ್ನು ಇಲ್ಲಿ ನೆನಪಿಸಿಕೊಂಡಿದ್ದಾರೆ.

(ಬಿರಾದಾರ್ ಅವರು ಹೇಳಿಕೊಂಡಂತೆ…)

ಅದೇ ಡಬ್ಬಿಂಗ್ ಕಣೋ!

‘ಶಂಖನಾದ’ ಚಿತ್ರದಲ್ಲಿ ನಟಿಸಿದ ನಂತರ ನಿರ್ದೇಶಕ ಉಮೇಶ್ ಕುಲಕರ್ಣಿ, ‘ಏನ್ ಬ್ರದರ್ ಡಬ್ಬಿಂಗ್ ಮಾಡ್ತಿಯೇನಪ್ಪ?’ ಎಂದು ಕೇಳಿದರು. ಅದಿನ್ನೂ ನನಗೆ ಎರಡನೇ ಸಿನಿಮಾ ಆದ್ದರಿಂದ ಡಬ್ಬಿಂಗ್ ಏನೆಂದೇ ಗೊತ್ತಿರಲಿಲ್ಲ. ಹಾಗಾಗಿ, ‘ಇಲ್ಲ ಸಾರ್’ ಅಂದೆ. ‘ಆಯ್ತು, ಬೆಳಗ್ಗೆ ಚಾಮುಂಡೇಶ್ವರಿ ಸ್ಟುಡಿಯೋಗೆ ಬಾ. ಅಲ್ಲಿ ನೋಡ್ಕೋವಂತೆ’ ಎಂದರು ಕುಲಕರ್ಣಿ. ಬೆಳಕ್ಕೆ 8ಕ್ಕೆ ಹೋಗಿ ತಿಂಡಿ ತಿಂದು ಸ್ಟುಡಿಯೋದಲ್ಲಿ ಕುಳಿತುಕೊಂಡೆ. ಮಧ್ಯಾಹ್ನ ಒಂದೂವರೆಗೆ ಊಟವೂ ಆಯ್ತು. ‘ಏನಪ್ಪಾ, ಡಬ್ಬಿಂಗ್ ನೋಡಿಕೊಂಡ್ಯಾ?’ ಅಂತ ಕೇಳಿದರು ಕುಲಕರ್ಣಿ. ನಾನು ಇಲ್ಲವೆಂದೆ. ‘ಮತ್ತೆ, ಬೆಳಗ್ಗೆಯಿಂದ ಇಲ್ಲಿ ಏನು ಮಾಡಿದೆ?’ ಎಂದರು ನಿರ್ದೇಶಕರು. ‘ನೀವು ಏನೇನೋ ಮಾಡ್ತಿದ್ರಲ್ಲಾ, ನೋಡ್ತಾ ಕುಳಿತಿದ್ದೆ’ ಎಂದೆ. ‘ಏ ದಡ್ಡಾ ಅದೇ ಡಬ್ಬಿಂಗ್ ಕಣೋ!’ ಅಂದ್ರು ಉಮೇಶ್ ಕುಲಕರ್ಣಿ.

ವೈಜನಾಥ ಬಿರಾದಾರ

ಮೆಜಸ್ಟಿಕ್‍ನಲ್ಲಿ ತಗ್ಲಾಕ್ಕೊಂಡ ಕುಡುಕರು!

ಉತ್ತರ ಕರ್ನಾಟಕದಲ್ಲೊಂದು ನಾಟಕ ಮುಗಿಸಿಕೊಂಡು ಬಸ್‍ನಲ್ಲಿ ಬೆಂಗಳೂರಿಗೆ ಬಂದಿಳಿದೆ. ಮೆಜಸ್ಟಿಕ್‍ನಲ್ಲಿ ಬಸ್ ಇಳಿದು ಬಿಎಂಟಿಸಿ ಬಸ್‍ಸ್ಟ್ಯಾಂಡ್ ಕಡೆಗೆ ಬರ್ತಾ ಇದ್ದೆ. ಫುಲ್ ಟೈಟಾಗಿದ್ದ ಇಬ್ಬರು ಕುಡುಕರು ತೂರಾಡುತ್ತಾ ಎದುರಾದರು. `ಸಾರ್, ನೀವು! ನಾವು ನಿಮ್ ಅಭಿಮಾನಿಗುಳು. ಬನ್ನಿ ನಮ್ಗೆ ಕಂಪನಿ ಕೊಡಿ..’ ಎಂದು ಕೈಹಿಡಿದುಕೊಂಡರು. ಇದೇನು ಅಭಿಮಾನವೋ, ಕುಚೇಷ್ಟೆಯೋ ಒಂದೂ ಗೊತ್ತಾಗಲಿಲ್ಲ. `ಇಲ್ರಪ್ಪಾ, ನಾನು ಕುಡುಕನ ಪಾತ್ರ ಮಾಡ್ತೀನಷ್ಟೆ, ಕುಡಿಯೋಲ್ಲ’ ಅಂದೆ. `ಲೇಯ್, ಸುಳ್ಳು ಹೇಳ್ಬೇಡ! ಕುಡೀದೇ ಹೆಂಗಲೆ ನಿಶೆ ಏರ್ತದೆ? ಈಗ ಸುಮ್ನೆ ಬತ್ತಿಯೋ, ಇಲ್ವೋ!?’ ಎಂದು ಎಳೆದಾಡತೊಡಗಿದರು. ಅಷ್ಟರಲ್ಲಿ ನನ್ನನ್ನು ಗುರುತು ಹಿಡಿದ ಮೂರ್ನಾಲ್ಕು ಮಂದಿ ಸಂಕಷ್ಟದಿಂದ ಪಾರು ಮಾಡಿದರು!


ಓದಿ: ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...