Homeಮುಖಪುಟತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ?. ಇದು ನಮ್ಮ “ವಿಕಾಸ” -  ಸಹಾನುಭೂತಿ, ಕಾಳಜಿ ಮತ್ತು ಕೊಲ್ಲಲ್ಪಟ್ಟ ಸಹ ಭಾರತೀಯರೊಂದಿಗೆ ನಿಲ್ಲುವ ಇಚ್ಛಾಶಕ್ತಿಯ ಸಂಪೂರ್ಣ ನಷ್ಟ ಹೊಂದಿದೆ ಎಂದು ಊನಾ ಚಳುವಳಿಯ ನಾಯಕ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಿಡಿ ಕಾರಿದ್ದಾರೆ.

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ತಂದೆ ಮಗನ ಲಾಕಪ್ ಡೆತ್ ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯೂ ಭಾರತದ ಜಾರ್ಜ್ ಫ್ಲಾಯ್ಡ್ ಪ್ರಕರಣ ಎಂದು ಹೇಳಿ #GeorgeFloydofIndia ಹಾಗೂ #JusticeForJeyarajAndFenix ಹ್ಯಾಶ್ ಟ್ಯಾಗ್ ಮೂಲಕ ತಮ್ಮ ಅಸಮಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ತಿಂಗಳು ಅಮೆರಿಕಾದಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕರಿಯ ಜನಾಂಗದ ವ್ಯಕ್ತಿಯನ್ನು ಪೊಲೀಸರು ನಡುರಸ್ತೆಯಲ್ಲಿ ಕೊಂದಿರುವುದರ ವಿರುದ್ದ ವಿಶ್ವದಾದ್ಯಂತ ಪ್ರತಿಭಟನೆಗಳು ನಡೆದವು. ಅಮೆರಿಕಾದಲ್ಲಂತೂ ವೈಟ್ ಹೌಸ್ ಮುಂದೆ ಭಾರಿ ಪ್ರತಿಭಟನೆ ನಡೆದು ಅಧ್ಯಕ್ಷ ಬಂಕರ್ ನಲ್ಲಿ ಅಡಗಿ ಕುಳಿತ ಘಟನೆ ಕೂಡಾ ನಡೆದಿತ್ತು.

ತೂತುಕುಡಿಯ ಸಾಥನಂಕುಳಂ ಠಾಣೆಯ ಪೊಲೀಸರು ಜಯರಾಜ್ ಹಾಗೂ ಅವರ ಮಗ ಫೆನಿಕ್ಸ್ ಎಂಬವರು ಮೊಬೈಲ್ ಅಂಗಡಿಯನ್ನು ಸಮಯಮೀರಿ ತೆರೆದಿದ್ದಾರೆ ಜೊತೆಗೆ ತಮ್ಮ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಅವರಿಬ್ಬರನ್ನು ಬಂಧಿಸಿ ಮೂರು ದಿನಗಳ ನಂತರ ಪೊಲೀಸ್ ಠಾಣೆಗಿಂತ 100 ಕಿ.ಮೀ. ದೂರದ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದ್ದರು.

ಆದರೆ ಜಯರಾಜ್ ಪತ್ನಿ ಸೆಲ್ವಮಣಿ ಪೊಲೀಸರ ದೌರ್ಜನ್ಯದಿಂದ ತನ್ನ ಪತಿ ಹಾಗೂ ಮಗ ಸಾವಿಗೀಡಾಗಿದ್ದಾರೆ ಎಂದು ದೂರು ನೀಡಿದ್ದು, ಈ ಸಾವಿನ ಬಗ್ಗೆ ತಮಿಳುನಾಡಿನಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮದ್ರಾಸ್ ಹೈಕೋರ್ಟಿನ ಮಧುರೈ ನ್ಯಾಯಪೀಠ ಬುಧವಾರ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅಂಬೇಡ್ಕರ್ ವಾದಿ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇಮಾನಿ, “ಆತ್ಮೀಯ ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ಅಥವಾ ನಿಮ್ಮ ಇನ್ಸ್ಟಾಗ್ರಾಮ್ ಕ್ರಿಯಾಶೀಲತೆ ಇತರ ದೇಶಗಳಿಗೆ ಮಾತ್ರ ಸೀಮಿತವಾಗಿದೆಯೇ ? ಭಾರತದ ಜಾರ್ಜ್ ಫ್ಲಾಯ್ಡ್ ಗಳು ತುಂಬಾ ಹೆಚ್ಚಿದ್ದಾರೆ. ಇಂತಹ ಪೊಲೀಸ್ ಹಿಂಸೆ ಹಾಗೂ ಲೈಂಗಿಕ ಕಿರುಕುಳದ ಕಥೆ ಹೃದಯ ವಿದ್ರಾವಕವಾಗಿದೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಲಕ್ಷಗಳನ್ನು ಬಿಡಿ ಸಾವಿರಾರು ಸಂಖ್ಯೆಯಲ್ಲಿ ಭಾರತೀಯರು ಅಮೆರಿಕದಂತೆಯೇ ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಾರೆಯೇ ? ಅಮೆರಿಕಾದ ಸಂಸದರು ಮಾಡಿದಂತೆ ನಮ್ಮ ಸರ್ಕಾರ ಹೆಚ್ಚು ಮಾನವೀಯ ಕಾನೂನುಗಳನ್ನು ಮಾಡುತ್ತಾರೆಯೇ ? ಇದು ನಮ್ಮ ‘ವಿಕಾಸ’ –  ಸಹಾನುಭೂತಿ, ಕಾಳಜಿ ಮತ್ತು ಕೊಲ್ಲಲ್ಪಟ್ಟ ಸಹ ಭಾರತೀಯರೊಂದಿಗೆ ನಿಲ್ಲುವ ಇಚ್ಛಾಶಕ್ತಿಯ ಸಂಪೂರ್ಣ ನಷ್ಟ ಹೊಂದಿದೆ” ಎಂದು ಅವರು ಟ್ವಿಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ “ಪೊಲೀಸರ ಈ ಕ್ರೌರ್ಯವೂ ಭೀಕರ ಅಪರಾಧವಾಗಿದೆ. ನಮ್ಮ ರಕ್ಷಕರು ದಬ್ಬಾಳಿಕೆಗಾರರಾಗಿ ಬದಲಾದಾ ದುರಂತವಾಗಿದೆ. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ” ಎಂದು ಹೇಳಿದ್ದಾರೆ.

ರೇಡಿಯೊ ಜಾಕಿ ಸುಚಿತ್ರ ಟ್ವೀಟ್ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಿದ್ದಾರ್ಥ್ ಕೆಂಗಡರನ್ ಟ್ವೀಟ್ ಮಾಡಿ “ನಾವು ಈ ವ್ಯವಸ್ಥೆಗಳನ್ನು ನಂಬಲು ಪ್ರಾರಂಭಿಸುವ ದಿನವಿದೆ ಎಂದು ನಾನು ಭಾವಿಸುತ್ತೇನೆ” ಎಂದು ಪೊಲೀಸರು ದೌರ್ಜನ್ಯ  ಎಸಗುವ ಚಿತ್ರಗಳನ್ನು ಹಾಕಿದ್ದಾರೆ.

ಆಟೊನಿ ಎಂಬವರು ಟ್ವೀಟ್ ಮಾಡಿ “ಭಾರತದ ಜಾರ್ಜ್ ಪ್ಲಾಯ್ಡ್ ಗಳಿಗೆ ನ್ಯಾಯ ಬೇಕು” ಎಂದು ಹೇಳಿದ್ದಾರೆ. ಅಮೆರಿಕಾದ ಪೊಲೀಸರ ವಶದಲ್ಲಿ ಜಾರ್ಜ್ ಫ್ಯಾಯ್ಡ್ ಸಾವಿಗೀಡಾದಂತೆ, ಭಾರತದ ತಂದೆ ಹಾಗೂ ಮಗ ಕೂಡಾ ಸತ್ತಿದ್ದಾರೆ ಎಂದು ಅವರು ಚಿತ್ರದಲ್ಲಿ ಬರೆದಿದ್ದಾರೆ.


ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...