Homeಮುಖಪುಟತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ?. ಇದು ನಮ್ಮ “ವಿಕಾಸ” -  ಸಹಾನುಭೂತಿ, ಕಾಳಜಿ ಮತ್ತು ಕೊಲ್ಲಲ್ಪಟ್ಟ ಸಹ ಭಾರತೀಯರೊಂದಿಗೆ ನಿಲ್ಲುವ ಇಚ್ಛಾಶಕ್ತಿಯ ಸಂಪೂರ್ಣ ನಷ್ಟ ಹೊಂದಿದೆ ಎಂದು ಊನಾ ಚಳುವಳಿಯ ನಾಯಕ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಿಡಿ ಕಾರಿದ್ದಾರೆ.

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ತಂದೆ ಮಗನ ಲಾಕಪ್ ಡೆತ್ ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯೂ ಭಾರತದ ಜಾರ್ಜ್ ಫ್ಲಾಯ್ಡ್ ಪ್ರಕರಣ ಎಂದು ಹೇಳಿ #GeorgeFloydofIndia ಹಾಗೂ #JusticeForJeyarajAndFenix ಹ್ಯಾಶ್ ಟ್ಯಾಗ್ ಮೂಲಕ ತಮ್ಮ ಅಸಮಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ತಿಂಗಳು ಅಮೆರಿಕಾದಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕರಿಯ ಜನಾಂಗದ ವ್ಯಕ್ತಿಯನ್ನು ಪೊಲೀಸರು ನಡುರಸ್ತೆಯಲ್ಲಿ ಕೊಂದಿರುವುದರ ವಿರುದ್ದ ವಿಶ್ವದಾದ್ಯಂತ ಪ್ರತಿಭಟನೆಗಳು ನಡೆದವು. ಅಮೆರಿಕಾದಲ್ಲಂತೂ ವೈಟ್ ಹೌಸ್ ಮುಂದೆ ಭಾರಿ ಪ್ರತಿಭಟನೆ ನಡೆದು ಅಧ್ಯಕ್ಷ ಬಂಕರ್ ನಲ್ಲಿ ಅಡಗಿ ಕುಳಿತ ಘಟನೆ ಕೂಡಾ ನಡೆದಿತ್ತು.

ತೂತುಕುಡಿಯ ಸಾಥನಂಕುಳಂ ಠಾಣೆಯ ಪೊಲೀಸರು ಜಯರಾಜ್ ಹಾಗೂ ಅವರ ಮಗ ಫೆನಿಕ್ಸ್ ಎಂಬವರು ಮೊಬೈಲ್ ಅಂಗಡಿಯನ್ನು ಸಮಯಮೀರಿ ತೆರೆದಿದ್ದಾರೆ ಜೊತೆಗೆ ತಮ್ಮ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಅವರಿಬ್ಬರನ್ನು ಬಂಧಿಸಿ ಮೂರು ದಿನಗಳ ನಂತರ ಪೊಲೀಸ್ ಠಾಣೆಗಿಂತ 100 ಕಿ.ಮೀ. ದೂರದ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದ್ದರು.

ಆದರೆ ಜಯರಾಜ್ ಪತ್ನಿ ಸೆಲ್ವಮಣಿ ಪೊಲೀಸರ ದೌರ್ಜನ್ಯದಿಂದ ತನ್ನ ಪತಿ ಹಾಗೂ ಮಗ ಸಾವಿಗೀಡಾಗಿದ್ದಾರೆ ಎಂದು ದೂರು ನೀಡಿದ್ದು, ಈ ಸಾವಿನ ಬಗ್ಗೆ ತಮಿಳುನಾಡಿನಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮದ್ರಾಸ್ ಹೈಕೋರ್ಟಿನ ಮಧುರೈ ನ್ಯಾಯಪೀಠ ಬುಧವಾರ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅಂಬೇಡ್ಕರ್ ವಾದಿ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇಮಾನಿ, “ಆತ್ಮೀಯ ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ಅಥವಾ ನಿಮ್ಮ ಇನ್ಸ್ಟಾಗ್ರಾಮ್ ಕ್ರಿಯಾಶೀಲತೆ ಇತರ ದೇಶಗಳಿಗೆ ಮಾತ್ರ ಸೀಮಿತವಾಗಿದೆಯೇ ? ಭಾರತದ ಜಾರ್ಜ್ ಫ್ಲಾಯ್ಡ್ ಗಳು ತುಂಬಾ ಹೆಚ್ಚಿದ್ದಾರೆ. ಇಂತಹ ಪೊಲೀಸ್ ಹಿಂಸೆ ಹಾಗೂ ಲೈಂಗಿಕ ಕಿರುಕುಳದ ಕಥೆ ಹೃದಯ ವಿದ್ರಾವಕವಾಗಿದೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಲಕ್ಷಗಳನ್ನು ಬಿಡಿ ಸಾವಿರಾರು ಸಂಖ್ಯೆಯಲ್ಲಿ ಭಾರತೀಯರು ಅಮೆರಿಕದಂತೆಯೇ ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಾರೆಯೇ ? ಅಮೆರಿಕಾದ ಸಂಸದರು ಮಾಡಿದಂತೆ ನಮ್ಮ ಸರ್ಕಾರ ಹೆಚ್ಚು ಮಾನವೀಯ ಕಾನೂನುಗಳನ್ನು ಮಾಡುತ್ತಾರೆಯೇ ? ಇದು ನಮ್ಮ ‘ವಿಕಾಸ’ –  ಸಹಾನುಭೂತಿ, ಕಾಳಜಿ ಮತ್ತು ಕೊಲ್ಲಲ್ಪಟ್ಟ ಸಹ ಭಾರತೀಯರೊಂದಿಗೆ ನಿಲ್ಲುವ ಇಚ್ಛಾಶಕ್ತಿಯ ಸಂಪೂರ್ಣ ನಷ್ಟ ಹೊಂದಿದೆ” ಎಂದು ಅವರು ಟ್ವಿಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ “ಪೊಲೀಸರ ಈ ಕ್ರೌರ್ಯವೂ ಭೀಕರ ಅಪರಾಧವಾಗಿದೆ. ನಮ್ಮ ರಕ್ಷಕರು ದಬ್ಬಾಳಿಕೆಗಾರರಾಗಿ ಬದಲಾದಾ ದುರಂತವಾಗಿದೆ. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ” ಎಂದು ಹೇಳಿದ್ದಾರೆ.

ರೇಡಿಯೊ ಜಾಕಿ ಸುಚಿತ್ರ ಟ್ವೀಟ್ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಿದ್ದಾರ್ಥ್ ಕೆಂಗಡರನ್ ಟ್ವೀಟ್ ಮಾಡಿ “ನಾವು ಈ ವ್ಯವಸ್ಥೆಗಳನ್ನು ನಂಬಲು ಪ್ರಾರಂಭಿಸುವ ದಿನವಿದೆ ಎಂದು ನಾನು ಭಾವಿಸುತ್ತೇನೆ” ಎಂದು ಪೊಲೀಸರು ದೌರ್ಜನ್ಯ  ಎಸಗುವ ಚಿತ್ರಗಳನ್ನು ಹಾಕಿದ್ದಾರೆ.

ಆಟೊನಿ ಎಂಬವರು ಟ್ವೀಟ್ ಮಾಡಿ “ಭಾರತದ ಜಾರ್ಜ್ ಪ್ಲಾಯ್ಡ್ ಗಳಿಗೆ ನ್ಯಾಯ ಬೇಕು” ಎಂದು ಹೇಳಿದ್ದಾರೆ. ಅಮೆರಿಕಾದ ಪೊಲೀಸರ ವಶದಲ್ಲಿ ಜಾರ್ಜ್ ಫ್ಯಾಯ್ಡ್ ಸಾವಿಗೀಡಾದಂತೆ, ಭಾರತದ ತಂದೆ ಹಾಗೂ ಮಗ ಕೂಡಾ ಸತ್ತಿದ್ದಾರೆ ಎಂದು ಅವರು ಚಿತ್ರದಲ್ಲಿ ಬರೆದಿದ್ದಾರೆ.


ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...