Homeಮುಖಪುಟತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ?. ಇದು ನಮ್ಮ “ವಿಕಾಸ” -  ಸಹಾನುಭೂತಿ, ಕಾಳಜಿ ಮತ್ತು ಕೊಲ್ಲಲ್ಪಟ್ಟ ಸಹ ಭಾರತೀಯರೊಂದಿಗೆ ನಿಲ್ಲುವ ಇಚ್ಛಾಶಕ್ತಿಯ ಸಂಪೂರ್ಣ ನಷ್ಟ ಹೊಂದಿದೆ ಎಂದು ಊನಾ ಚಳುವಳಿಯ ನಾಯಕ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಿಡಿ ಕಾರಿದ್ದಾರೆ.

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ತಂದೆ ಮಗನ ಲಾಕಪ್ ಡೆತ್ ಘಟನೆಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯೂ ಭಾರತದ ಜಾರ್ಜ್ ಫ್ಲಾಯ್ಡ್ ಪ್ರಕರಣ ಎಂದು ಹೇಳಿ #GeorgeFloydofIndia ಹಾಗೂ #JusticeForJeyarajAndFenix ಹ್ಯಾಶ್ ಟ್ಯಾಗ್ ಮೂಲಕ ತಮ್ಮ ಅಸಮಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ತಿಂಗಳು ಅಮೆರಿಕಾದಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕರಿಯ ಜನಾಂಗದ ವ್ಯಕ್ತಿಯನ್ನು ಪೊಲೀಸರು ನಡುರಸ್ತೆಯಲ್ಲಿ ಕೊಂದಿರುವುದರ ವಿರುದ್ದ ವಿಶ್ವದಾದ್ಯಂತ ಪ್ರತಿಭಟನೆಗಳು ನಡೆದವು. ಅಮೆರಿಕಾದಲ್ಲಂತೂ ವೈಟ್ ಹೌಸ್ ಮುಂದೆ ಭಾರಿ ಪ್ರತಿಭಟನೆ ನಡೆದು ಅಧ್ಯಕ್ಷ ಬಂಕರ್ ನಲ್ಲಿ ಅಡಗಿ ಕುಳಿತ ಘಟನೆ ಕೂಡಾ ನಡೆದಿತ್ತು.

ತೂತುಕುಡಿಯ ಸಾಥನಂಕುಳಂ ಠಾಣೆಯ ಪೊಲೀಸರು ಜಯರಾಜ್ ಹಾಗೂ ಅವರ ಮಗ ಫೆನಿಕ್ಸ್ ಎಂಬವರು ಮೊಬೈಲ್ ಅಂಗಡಿಯನ್ನು ಸಮಯಮೀರಿ ತೆರೆದಿದ್ದಾರೆ ಜೊತೆಗೆ ತಮ್ಮ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಅವರಿಬ್ಬರನ್ನು ಬಂಧಿಸಿ ಮೂರು ದಿನಗಳ ನಂತರ ಪೊಲೀಸ್ ಠಾಣೆಗಿಂತ 100 ಕಿ.ಮೀ. ದೂರದ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿದ್ದರು.

ಆದರೆ ಜಯರಾಜ್ ಪತ್ನಿ ಸೆಲ್ವಮಣಿ ಪೊಲೀಸರ ದೌರ್ಜನ್ಯದಿಂದ ತನ್ನ ಪತಿ ಹಾಗೂ ಮಗ ಸಾವಿಗೀಡಾಗಿದ್ದಾರೆ ಎಂದು ದೂರು ನೀಡಿದ್ದು, ಈ ಸಾವಿನ ಬಗ್ಗೆ ತಮಿಳುನಾಡಿನಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮದ್ರಾಸ್ ಹೈಕೋರ್ಟಿನ ಮಧುರೈ ನ್ಯಾಯಪೀಠ ಬುಧವಾರ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅಂಬೇಡ್ಕರ್ ವಾದಿ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇಮಾನಿ, “ಆತ್ಮೀಯ ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ಅಥವಾ ನಿಮ್ಮ ಇನ್ಸ್ಟಾಗ್ರಾಮ್ ಕ್ರಿಯಾಶೀಲತೆ ಇತರ ದೇಶಗಳಿಗೆ ಮಾತ್ರ ಸೀಮಿತವಾಗಿದೆಯೇ ? ಭಾರತದ ಜಾರ್ಜ್ ಫ್ಲಾಯ್ಡ್ ಗಳು ತುಂಬಾ ಹೆಚ್ಚಿದ್ದಾರೆ. ಇಂತಹ ಪೊಲೀಸ್ ಹಿಂಸೆ ಹಾಗೂ ಲೈಂಗಿಕ ಕಿರುಕುಳದ ಕಥೆ ಹೃದಯ ವಿದ್ರಾವಕವಾಗಿದೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಲಕ್ಷಗಳನ್ನು ಬಿಡಿ ಸಾವಿರಾರು ಸಂಖ್ಯೆಯಲ್ಲಿ ಭಾರತೀಯರು ಅಮೆರಿಕದಂತೆಯೇ ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಾರೆಯೇ ? ಅಮೆರಿಕಾದ ಸಂಸದರು ಮಾಡಿದಂತೆ ನಮ್ಮ ಸರ್ಕಾರ ಹೆಚ್ಚು ಮಾನವೀಯ ಕಾನೂನುಗಳನ್ನು ಮಾಡುತ್ತಾರೆಯೇ ? ಇದು ನಮ್ಮ ‘ವಿಕಾಸ’ –  ಸಹಾನುಭೂತಿ, ಕಾಳಜಿ ಮತ್ತು ಕೊಲ್ಲಲ್ಪಟ್ಟ ಸಹ ಭಾರತೀಯರೊಂದಿಗೆ ನಿಲ್ಲುವ ಇಚ್ಛಾಶಕ್ತಿಯ ಸಂಪೂರ್ಣ ನಷ್ಟ ಹೊಂದಿದೆ” ಎಂದು ಅವರು ಟ್ವಿಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ “ಪೊಲೀಸರ ಈ ಕ್ರೌರ್ಯವೂ ಭೀಕರ ಅಪರಾಧವಾಗಿದೆ. ನಮ್ಮ ರಕ್ಷಕರು ದಬ್ಬಾಳಿಕೆಗಾರರಾಗಿ ಬದಲಾದಾ ದುರಂತವಾಗಿದೆ. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ” ಎಂದು ಹೇಳಿದ್ದಾರೆ.

ರೇಡಿಯೊ ಜಾಕಿ ಸುಚಿತ್ರ ಟ್ವೀಟ್ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಿದ್ದಾರ್ಥ್ ಕೆಂಗಡರನ್ ಟ್ವೀಟ್ ಮಾಡಿ “ನಾವು ಈ ವ್ಯವಸ್ಥೆಗಳನ್ನು ನಂಬಲು ಪ್ರಾರಂಭಿಸುವ ದಿನವಿದೆ ಎಂದು ನಾನು ಭಾವಿಸುತ್ತೇನೆ” ಎಂದು ಪೊಲೀಸರು ದೌರ್ಜನ್ಯ  ಎಸಗುವ ಚಿತ್ರಗಳನ್ನು ಹಾಕಿದ್ದಾರೆ.

ಆಟೊನಿ ಎಂಬವರು ಟ್ವೀಟ್ ಮಾಡಿ “ಭಾರತದ ಜಾರ್ಜ್ ಪ್ಲಾಯ್ಡ್ ಗಳಿಗೆ ನ್ಯಾಯ ಬೇಕು” ಎಂದು ಹೇಳಿದ್ದಾರೆ. ಅಮೆರಿಕಾದ ಪೊಲೀಸರ ವಶದಲ್ಲಿ ಜಾರ್ಜ್ ಫ್ಯಾಯ್ಡ್ ಸಾವಿಗೀಡಾದಂತೆ, ಭಾರತದ ತಂದೆ ಹಾಗೂ ಮಗ ಕೂಡಾ ಸತ್ತಿದ್ದಾರೆ ಎಂದು ಅವರು ಚಿತ್ರದಲ್ಲಿ ಬರೆದಿದ್ದಾರೆ.


ಓದಿ: ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...