Homeಕರೋನಾ ತಲ್ಲಣಬಡ ರೋಗಿಗಳ ಉಚಿತ ಚಿಕಿತ್ಸೆಗೆ ದಾಖಲೆಗಳನ್ನು ನಿರೀಕ್ಷಿಸಬೇಡಿ: ಬಾಂಬೆ ಹೈಕೋರ್ಟ್

ಬಡ ರೋಗಿಗಳ ಉಚಿತ ಚಿಕಿತ್ಸೆಗೆ ದಾಖಲೆಗಳನ್ನು ನಿರೀಕ್ಷಿಸಬೇಡಿ: ಬಾಂಬೆ ಹೈಕೋರ್ಟ್

- Advertisement -
- Advertisement -

ಆಸ್ಪತ್ರೆಗಳಿಗೆ ದಾಖಲಾಗುವ ಬಡ ಅಥವಾ ಸಾಮಾನ್ಯ ವಿಭಾಗದ ಕೊರೊನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ದಾಖಲೆಗಳನ್ನು ನಿರೀಕ್ಷೆ ಮಾಡಬಾರದು ಎಂದು ಬಾಂಬೆ ಹೈಕೊರ್ಟ್ ಅಭಿಪ್ರಾಯಪಟ್ಟಿದೆ.

ಕೆ ಜೆ ಸೋಮಯ್ಯ ಆಸ್ಪತ್ರೆಯಿಂದ ಏಪ್ರಿಲ್ 11 ಮತ್ತು ಏಪ್ರಿಲ್ 28 ರ ನಡುವೆ ಕೊರೊನಾ ಚಿಕಿತ್ಸೆಗಾಗಿ 12.5 ಲಕ್ಷ ಶುಲ್ಕ ವಿಧಿಸಲಾಗಿದ್ದ ಬಾಂದ್ರಾದಲ್ಲಿನ ಕೊಳೆಗೇರಿ ಪುನರ್ವಸತಿ ಕಟ್ಟಡದ ಏಳು ನಿವಾಸಿಗಳು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ಶುಕ್ರವಾರ ವಿಚಾರಣೆ ನಡೆಸುತ್ತಿತ್ತು.

ಬಿಲ್ಲು ಪಾವತಿಸಲು ವಿಫಲವಾದರೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವುದಿಲ್ಲ ಎಂದು ಹೆದರಿಸಿರುವುದರಿಂದ ಆಸ್ಪತ್ರೆಯೂ ಕೇಳಿದ್ದ 12.5 ಲಕ್ಷ ರುಪಾಯಿಗಳಲ್ಲಿ 10 ಲಕ್ಷ ರುಪಾಯಿಗಳನ್ನು ಸಾಲಮಾಡಿ ಪಾವತಿ ಮಾಡಿದ್ದರು ಎಂದು ಅರ್ಜಿದಾರರ ವಕೀಲರಾಗಿರುವ ವಿವೇಕ್ ಶುಕ್ಲ ಕೋರ್ಟ್‌ಗೆ ಮಾಹಿತಿ ನೀಡಿದರು. ಅದಕ್ಕಾಗಿ ನ್ಯಾಯಮೂರ್ತಿಗಳಾದ ರಮೇಶ್ ಧನುಕಾ ಮತ್ತು ಮಾಧವ್ ಜಮ್ದಾರ್ ಅವರ ನ್ಯಾಯಪೀಠವು 10 ಲಕ್ಷ ರುಪಾಯಿಯನ್ನು ನ್ಯಾಯಾಲಯದಲ್ಲಿ ಠೇವಣಿ ಇಡುವಂತೆ ಆಸ್ಪತ್ರೆಗೆ ನಿರ್ದೇಶಿಸಿತು.

ಮನವಿಯಲ್ಲಿ, ಬಳಕೆಯಾಗದ ಪಿಪಿಇ ಕಿಟ್‌ಗಳು ಹಾಗೂ ಸೇವೆಗಳಿಗೆ ಅರ್ಜಿದಾರರಿಗೆ ಶುಲ್ಕ ವಿಧಿಸಲಾಗಿದೆ ಎಂದು ಆರೋಪಿಸಲಾಗಿದೆ.

ಜೂನ್ 13 ರಂದು ನ್ಯಾಯಾಲಯವು ರಾಜ್ಯ ದತ್ತಿ ಆಯುಕ್ತರಿಗೆ ಆಸ್ಪತ್ರೆಯು ಬಡ ಮತ್ತು ಇತರ ರೋಗಿಗಳಿಗೆ 20% ಹಾಸಿಗೆಗಳನ್ನು ಕಾಯ್ದಿರಿಸಿದೆ ಮತ್ತು ಅವರಿಗೆ ಉಚಿತ ಅಥವಾ ಸಬ್ಸಿಡಿ ಚಿಕಿತ್ಸೆಯನ್ನು ನೀಡಿದೆಯೇ ಎಂದು ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.

ಆಸ್ಪತ್ರೆಯು ಅಂತಹ ಹಾಸಿಗೆಗಳನ್ನು ಕಾಯ್ದಿರಿಸಿದ್ದರೂ, ಲಾಕ್‌ಡೌನ್‌ನಿಂದಾಗಿ ಕೇವಲ ಮೂರು ಬಡ ವ್ಯಕ್ತಿಗಳಿಗೆ ಮಾತ್ರ ಚಿಕಿತ್ಸೆ ನೀಡಿದೆ ಎಂದು ಕಳೆದ ವಾರ ಜಂಟಿ ದತ್ತಿ ಆಯುಕ್ತರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಸಾಂಕ್ರಮಿಕದಂತಹ ಈ ಸಮಯದಲ್ಲಿ ಬಡ ರೋಗಿಗಳಿಗೆ ಮೀಸಲಿಟ್ಟಿದ್ದ 90 ಹಾಸಿಗೆಗೆಳಲ್ಲಿ ಕೇವಲ ಮೂವರು ಬಡ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗಿದೆ ಎಂಬುವುದನ್ನು ಒಪ್ಪಲಾಗದು ಎಂದು ಶುಕ್ಲಾ ಹೇಳಿದ್ದಾರೆ.

ತೊಂದರೆಯಲ್ಲಿರುವ ಕೊರೊನಾ ರೋಗಿಗಳ ಆದಾಯ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ನಿರೀಕ್ಷೆ ಮಾಡಬಾರದು ಎಂದು ಅವರು ವಾದಿಸಿದ್ದರು.


ಓದಿ: ಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...