Homeಮುಖಪುಟಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

- Advertisement -
- Advertisement -

ಭೂಸುಧಾರಣೆಯಿಂದ ಉಳುವವರು ಮತ್ತು ದುಡಿಯುವವರ ಭಾರತವಾಗಿದ್ದನ್ನು ಈಗ ಉಳ್ಳವರ ಭಾರತವನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ಆತಂಕ ವ್ಯಕ್ತಪಡಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಮಮನೋಹ ಲೋಹಿಯಾ ಮತ್ತು ಸಮತಾ ವಿದ್ಯಾಲಯ ಟ್ರಸ್ಟ್ ನಿಂದ  2 ಸಾವಿರ ಮಾಸ್ಕ್ ಗಳು ಮತ್ತು ಸ್ಯಾನಿಟೈಜರ್ ವಿತರಿಸಿ ಅವರು ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಳುವವನೇ ಭೂಮಿಯ ಒಡೆಯ ಎಂಬ ಕ್ರಾಂತಿಕಾರಕ ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿದರು. ಪರಿಣಾಮ ಮಠ-ದೇವಾಲಯಗಳು, ದೊಡ್ಡದೊಡ್ಡ ಭೂಮಾಲೀಕರು, ಜಾಗೀರುದಾರರ ಬಳಿಯಿದ್ದ ಲಕ್ಷಾಂತರ ಎಕರೆ ಭೂಮಿ ಗೇಣಿದಾರರು ಮತ್ತು ಉಳುವವರಿಗೆ ಸೇರುವಂತಾಯಿತು. ಇನ್ನೊಂದೆಡೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಬ್ಯಾಂಕುಗಳು, ವಿಮಾಕ್ಷೇತ್ರ, ವಿದ್ಯುಚ್ಛಕ್ತಿ ಕ್ಷೇತ್ರಗಳನ್ನು ರಾಷ್ಟ್ರೀಕರಣಗೊಳಿಸಿದರು. ರಾಜಧನ ರದ್ದುಪಡಿಸಿದರು. ಸಂವಿಧಾನದ ಆಶಯಗಳಡಿ ಕೆಲಸ ಮಾಡಿದರು. ದೇವರಾಜ ಅರಸು ಮತ್ತು ಇಂದಿರಾಗಾಂಧಿ ಕೈಗೊಂಡ ಕಾರ್ಯಗಳಿಂದ ಉಳ್ಳವರ ಭಾರತವಾಗಿದ್ದುದು ಉಳುವವರು ದುಡಿಯುವವರ ಭಾರತವಾಯಿತು ಎಂದರು.

ಆದರೆ ಇಂದು ಉಳ್ಳವರು ಪ್ರಬಲರಾಗಿದ್ದಾರೆ. ಪ್ರತೀಕಾರ ಮನೋಭಾವದಿಂದ ಉಳುವವರಿಂದ ಭೂಮಿ ಕಿತ್ತುಕೊಳ್ಳತೊಡಗಿದ್ದಾರೆ. ಉಳ್ಳವರಿಂದ ಸಂವಿಧಾನವನ್ನು ತಿರುಚುವ ಮತ್ತು ಬುಡಮೇಲು ಮಾಡುವ ಸಂಚು ನಡೆಯುತ್ತಿದೆ. ಸಂವಿಧಾನ ವಿರೋಧಿ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದರು.

ಇಂದು ಉಳುವವರು ಮತ್ತು ದುಡಿಯುವವರಿಂದ ಭೂಮಿಯನ್ನು ಕಿತ್ತುಕೊಂಡು ಉಳ್ಳವರ ಭಾರತವನ್ನಾಗಿ ಮಾಡಲಾಗುತ್ತಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಸಂವಿಧಾನವನ್ನು ನಾಶ ಮಾಡುವ ಕೆಲಸ ವ್ಯಾಪಕವಾಗಿ ನಡೆಯುತ್ತಿದೆ. ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಯಾವುದೇ ಸರ್ಕಾರಕ್ಕೆ ಉತ್ತರದಾಯಿತ್ವ ಇರಬೇಕು. ಸರ್ಕಾರ ತಾನು ತೆಗೆದುಕೊಳ್ಳುವ ತೀರ್ಮಾನಕ್ಕೆ ಹೊಣೆಗಾರನಾಗಬೇಕು. ಆದರೆ ಇಂದು ಸಂವಿಧಾನ ನೋಡುತ್ತಿಲ್ಲ ಮತ್ತು ಪಾಲಿಸುತ್ತಿಲ್ಲ. ಉದಾರಹರಣೆಗೆ ನೋಟು ಅಮಾನ್ಯೀಕರಣವೇ ಸಾಕ್ಷಿಯಾಗಿದೆ ಎಂದರು.

ಸಂವಿಧಾನದ ಪ್ರಕಾರ ನೋಟು ಅಮಾನ್ಯಗೊಳಿಸುವ ಬಗ್ಗೆ ಆರ್.ಬಿ.ಐ ತೀರ್ಮಾನಿಸಬೇಕಿತ್ತು. ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕಿತ್ತು. ಕೇಂದ್ರ ಶಿಫಾರಸ್ಸ ಒಪ್ಪಬೇಕಿತ್ತು. ನಂತರ ರಿಸರ್ವ ಬ್ಯಾಂಕ್ ಜಾರಿಗೊಳಿಸಬೇಕಿತ್ತು. ಈ ಹಂತದಲ್ಲಿ ಆರ್.ಬಿ.ಐ ನೋಟು ಮುದ್ರಣದ ತಯಾರಿ ಮಾಡಿಕೊಂಡು ನೋಟುಗಳನ್ನು ಪ್ರಿಂಟ್ ಮಾಡಬೇಕಿತ್ತು. ಬ್ಯಾಂಕು, ಎಟಿಎಂಗಳಿಗೆ ರವಾನಿಸಬೇಕಿತ್ತು. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಿತ್ತು. ಇದ್ಯಾವ ಪ್ರಕ್ರಿಯೆಯೂ ನಡೆಯಲಿಲ್ಲ ಎಂದು ಅವರು ಹೇಳಿದರು.

ನೋಟು ಅಮಾನ್ಯೀಕರಣದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಿಲ್ಲ. ಹಣಕಾಸು ಸಚಿವರಿಗೆ, ಆರ್.ಬಿ.ಐ ನಿರ್ದೇಶಕರಿಗೂ ತಿಳಿದಿರಲಿಲ್ಲ. ಇಂತಹ ಕ್ರಮದಿಂದ ಆರ್ಥಿಕತೆ ಮತ್ತು ರೈತರು, ಕಾರ್ಮಿಕರು ಜನಸಾಮಾನ್ಯರು ಹೊಡೆತ ತಿಂದರು. ಜಿಎಸ್‌ಟಿಯಿಂದಲೂ ಸಾವಿರರಾರು ಉದ್ದಿಮೆಗಳು ಮುಚ್ಚಿದವು ಎಂದರು.

ಕಾರ್ಯಕ್ರಮದಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ಮಾತನಾಡಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಸ್ವಾಗತಿಸಿ, ವಂದಿಸಿದರು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...