Homeಮುಖಪುಟಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

- Advertisement -
- Advertisement -

ಭೂಸುಧಾರಣೆಯಿಂದ ಉಳುವವರು ಮತ್ತು ದುಡಿಯುವವರ ಭಾರತವಾಗಿದ್ದನ್ನು ಈಗ ಉಳ್ಳವರ ಭಾರತವನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ಆತಂಕ ವ್ಯಕ್ತಪಡಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಮಮನೋಹ ಲೋಹಿಯಾ ಮತ್ತು ಸಮತಾ ವಿದ್ಯಾಲಯ ಟ್ರಸ್ಟ್ ನಿಂದ  2 ಸಾವಿರ ಮಾಸ್ಕ್ ಗಳು ಮತ್ತು ಸ್ಯಾನಿಟೈಜರ್ ವಿತರಿಸಿ ಅವರು ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಳುವವನೇ ಭೂಮಿಯ ಒಡೆಯ ಎಂಬ ಕ್ರಾಂತಿಕಾರಕ ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿದರು. ಪರಿಣಾಮ ಮಠ-ದೇವಾಲಯಗಳು, ದೊಡ್ಡದೊಡ್ಡ ಭೂಮಾಲೀಕರು, ಜಾಗೀರುದಾರರ ಬಳಿಯಿದ್ದ ಲಕ್ಷಾಂತರ ಎಕರೆ ಭೂಮಿ ಗೇಣಿದಾರರು ಮತ್ತು ಉಳುವವರಿಗೆ ಸೇರುವಂತಾಯಿತು. ಇನ್ನೊಂದೆಡೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಬ್ಯಾಂಕುಗಳು, ವಿಮಾಕ್ಷೇತ್ರ, ವಿದ್ಯುಚ್ಛಕ್ತಿ ಕ್ಷೇತ್ರಗಳನ್ನು ರಾಷ್ಟ್ರೀಕರಣಗೊಳಿಸಿದರು. ರಾಜಧನ ರದ್ದುಪಡಿಸಿದರು. ಸಂವಿಧಾನದ ಆಶಯಗಳಡಿ ಕೆಲಸ ಮಾಡಿದರು. ದೇವರಾಜ ಅರಸು ಮತ್ತು ಇಂದಿರಾಗಾಂಧಿ ಕೈಗೊಂಡ ಕಾರ್ಯಗಳಿಂದ ಉಳ್ಳವರ ಭಾರತವಾಗಿದ್ದುದು ಉಳುವವರು ದುಡಿಯುವವರ ಭಾರತವಾಯಿತು ಎಂದರು.

ಆದರೆ ಇಂದು ಉಳ್ಳವರು ಪ್ರಬಲರಾಗಿದ್ದಾರೆ. ಪ್ರತೀಕಾರ ಮನೋಭಾವದಿಂದ ಉಳುವವರಿಂದ ಭೂಮಿ ಕಿತ್ತುಕೊಳ್ಳತೊಡಗಿದ್ದಾರೆ. ಉಳ್ಳವರಿಂದ ಸಂವಿಧಾನವನ್ನು ತಿರುಚುವ ಮತ್ತು ಬುಡಮೇಲು ಮಾಡುವ ಸಂಚು ನಡೆಯುತ್ತಿದೆ. ಸಂವಿಧಾನ ವಿರೋಧಿ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದರು.

ಇಂದು ಉಳುವವರು ಮತ್ತು ದುಡಿಯುವವರಿಂದ ಭೂಮಿಯನ್ನು ಕಿತ್ತುಕೊಂಡು ಉಳ್ಳವರ ಭಾರತವನ್ನಾಗಿ ಮಾಡಲಾಗುತ್ತಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಸಂವಿಧಾನವನ್ನು ನಾಶ ಮಾಡುವ ಕೆಲಸ ವ್ಯಾಪಕವಾಗಿ ನಡೆಯುತ್ತಿದೆ. ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಯಾವುದೇ ಸರ್ಕಾರಕ್ಕೆ ಉತ್ತರದಾಯಿತ್ವ ಇರಬೇಕು. ಸರ್ಕಾರ ತಾನು ತೆಗೆದುಕೊಳ್ಳುವ ತೀರ್ಮಾನಕ್ಕೆ ಹೊಣೆಗಾರನಾಗಬೇಕು. ಆದರೆ ಇಂದು ಸಂವಿಧಾನ ನೋಡುತ್ತಿಲ್ಲ ಮತ್ತು ಪಾಲಿಸುತ್ತಿಲ್ಲ. ಉದಾರಹರಣೆಗೆ ನೋಟು ಅಮಾನ್ಯೀಕರಣವೇ ಸಾಕ್ಷಿಯಾಗಿದೆ ಎಂದರು.

ಸಂವಿಧಾನದ ಪ್ರಕಾರ ನೋಟು ಅಮಾನ್ಯಗೊಳಿಸುವ ಬಗ್ಗೆ ಆರ್.ಬಿ.ಐ ತೀರ್ಮಾನಿಸಬೇಕಿತ್ತು. ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕಿತ್ತು. ಕೇಂದ್ರ ಶಿಫಾರಸ್ಸ ಒಪ್ಪಬೇಕಿತ್ತು. ನಂತರ ರಿಸರ್ವ ಬ್ಯಾಂಕ್ ಜಾರಿಗೊಳಿಸಬೇಕಿತ್ತು. ಈ ಹಂತದಲ್ಲಿ ಆರ್.ಬಿ.ಐ ನೋಟು ಮುದ್ರಣದ ತಯಾರಿ ಮಾಡಿಕೊಂಡು ನೋಟುಗಳನ್ನು ಪ್ರಿಂಟ್ ಮಾಡಬೇಕಿತ್ತು. ಬ್ಯಾಂಕು, ಎಟಿಎಂಗಳಿಗೆ ರವಾನಿಸಬೇಕಿತ್ತು. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಿತ್ತು. ಇದ್ಯಾವ ಪ್ರಕ್ರಿಯೆಯೂ ನಡೆಯಲಿಲ್ಲ ಎಂದು ಅವರು ಹೇಳಿದರು.

ನೋಟು ಅಮಾನ್ಯೀಕರಣದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಿಲ್ಲ. ಹಣಕಾಸು ಸಚಿವರಿಗೆ, ಆರ್.ಬಿ.ಐ ನಿರ್ದೇಶಕರಿಗೂ ತಿಳಿದಿರಲಿಲ್ಲ. ಇಂತಹ ಕ್ರಮದಿಂದ ಆರ್ಥಿಕತೆ ಮತ್ತು ರೈತರು, ಕಾರ್ಮಿಕರು ಜನಸಾಮಾನ್ಯರು ಹೊಡೆತ ತಿಂದರು. ಜಿಎಸ್‌ಟಿಯಿಂದಲೂ ಸಾವಿರರಾರು ಉದ್ದಿಮೆಗಳು ಮುಚ್ಚಿದವು ಎಂದರು.

ಕಾರ್ಯಕ್ರಮದಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ಮಾತನಾಡಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಸ್ವಾಗತಿಸಿ, ವಂದಿಸಿದರು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...