Homeಮುಖಪುಟಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ

ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ

- Advertisement -
- Advertisement -

ಕಳೆದ ವರ್ಷ ಆಗಸ್ಟ್ 6 ರಿಂದ ಶ್ರೀನಗರದ ಜಮ್ಮುಕಾಶ್ಮೀರ ಹೈಕೋರ್ಟ್‌ಗೆ ಸಲ್ಲಿಸಿದ 600 ಕ್ಕೂ ಹೆಚ್ಚು ಹೇಬಿಯಸ್ ಕಾರ್ಪಸ್ ಅರ್ಜಿಗಳಲ್ಲಿ ಹೆಚ್ಚಿನವು ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ ಎಂದು ಜಮ್ಮುಕಾಶ್ಮೀರ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​(ಎಚ್‌ಸಿಬಿಎ) ತಿಳಿಸಿದೆ.

ಭಾರತದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಎಚ್‌ಸಿಬಿಎ ಸಲ್ಲಿಸಿದ ನಿರೂಪಣದಲ್ಲಿ (representation), ಇಲ್ಲಿಯವರೆಗೆ 1 ಶೇಕಡಾ ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ಕೂಡಾ ಜಮ್ಮುಕಾಶ್ಮೀರ ಹೈಕೋರ್ಟ್ ತೀರ್ಮಾನಿಸಿಲ್ಲ” ಎಂದು ಉಲ್ಲೇಖಿಸಿ ತಮ್ಮ ಬೇಸರವನ್ನು ವ್ಯಕ್ತಪಡಿಸಿದೆ.

ಕಳೆದ ವರ್ಷ ಆಗಸ್ಟ್ 5 ರಂದು 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮುಕಾಶ್ಮೀರದಲ್ಲಿ ಅವರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸುಪ್ರೀಂ ಕೋರ್ಟ್‌ಗೆ ಜೂನ್ 25 ರಂದು 1,500 ಸದಸ್ಯರನ್ನು ಹೊಂದಿರುವ ಎಚ್‌ಸಿಬಿಎ ಬಾರ್ ಅಸೋಸಿಯೇಷನ್ ​​ಈ ನಿರೂಪಣವನ್ನು ಸಲ್ಲಿಸಿದೆ.

“ಈ ಪ್ರಕರಣಗಳನ್ನು ನಡೆಸುವ ವಕೀಲರ ಮೊದಲ ಸಮಸ್ಯೆಯೆಂದರೆ ಮಾನ್ಯ ಮುಖ್ಯ ನ್ಯಾಯಮೂರ್ತಿ ಯಾವುದೇ ನಿರ್ದೇಶನ ನೀಡಿಲ್ಲ, ರಿಜಿಸ್ಟ್ರಾರ್ ನ್ಯಾಯಾಂಗವು ಪ್ರತಿ ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ತಮ್ಮ ದೈನಂದಿನ ಪಟ್ಟಿಯನ್ನು ಲೆಕ್ಕಿಸದೆ ಪ್ರತಿ ನ್ಯಾಯಾಧೀಶರ ಮುಂದೆ ಪಟ್ಟಿ ಮಾಡುವಂತೆ ಕೇಳಿಕೊಳ್ಳುತ್ತದೆ. ಆದ್ದರಿಂದ ಹೇಬಿಯಸ್ ಕಾರ್ಪಸ್ ಅರ್ಜಿಗಳಿಗೆ ಸಂಬಂಧಿಸಿದಂತೆ ಮಾನ್ಯ ಹೈಕೋರ್ಟ್ ರೂಪಿಸಿದ ನಿಯಮಗಳ ಪ್ರಕಾರ ಅರ್ಜಿಗಳನ್ನು 14 ದಿನಗಳಲ್ಲಿ ನಿರ್ಧರಿಸಲಾಗುತ್ತದೆ” ಎಂದು ಬಾರ್ ಅಸೋಸಿಯೇಷನ್ ​​ಪತ್ರದಲ್ಲಿ ಬರೆದಿದೆ.

ಕೊರೊನಾ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಲಾಕ್‌ಡೌನ್‌ಗೆ ಒಳಪಡಿಸಿದ್ದರಿಂದ ವಕೀಲರ ಭ್ರಾತೃತ್ವ, ವಿಶೇಷವಾಗಿ ಜಿಲ್ಲಾ ಶ್ರೀನಗರದಲ್ಲಿ ಈ ವರ್ಷದ ಮಾರ್ಚ್‌ನಿಂದ ಕಷ್ಟಗಳನ್ನು ಎದುರಿಸುತ್ತಿದೆ ಎಂದು ಬಾರ್ ಅಸೋಸಿಯೇಷನ್ ​​ಪತ್ರದಲ್ಲಿ ತಿಳಿಸಿದೆ.

“ಪ್ರಸ್ತುತ ಚಾಲ್ತಿಯಲ್ಲಿರುವ ಸನ್ನಿವೇಶಗಳಲ್ಲಿ ಶ್ರೀನಗರ ಬಾರ್ ಅಸೋಸಿಯೇಷನ್‌ನ ಸದಸ್ಯರು ತಮ್ಮ ವೃತ್ತಿ, ಜೀವನೋಪಾಯ ಮತ್ತು ಇತರ ಮೇಲಾಧಾರ ವಿಷಯಗಳಿಗೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದನ್ನು ಸಾಮಾನ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಸಂಘವು ಯೋಜಿಸಲು ಪ್ರಯತ್ನಿಸಿದೆ, ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ಹೈಕೋರ್ಟ್ ವಿಫಲವಾಗಿದೆ” ಎಂದು ಸಂಘ ಹೇಳಿದೆ.

1990 ರಿಂದ 30,000 ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ಸಲ್ಲಿಸಿದ್ದಾಗಿ ಹೇಳಿಕೊಳ್ಳುವ ಬಾರ್ ಅಸೋಸಿಯೇಷನ್, ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿಯಾದ ನಂತರವೂ ಜಮ್ಮಕಾಶ್ಮೀರ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಸಮಸ್ಯೆಗಳನ್ನು ಪರಿಹರಿಸಲು ಯಾವುದೇ ದೃಡವಾದ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ” ಎಂದು ಹೇಳಿದ್ದಾರೆ.

ಕಾಶ್ಮೀರ ಕಣಿವೆಯ ಸುಮಾರು 13,000 ಜನರನ್ನು ಬಂಧಿಸಲಾಗಿದ್ದು, ಅದರ ನಂತರ ನೂರಾರು ಜನರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ಭಾರತದ ವಿವಿಧ ಜೈಲುಗಳಲ್ಲಿ ಬಂಧಿಸಿ ಇಡಲಾಗಿದೆ ಎಂದು ವಕೀಲರ ಸಂಘವೂ ಗಮನಸೆಳೆದಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಕಾಶ್ಮೀರದ ವಿಶೇಷ ಅಧಿಕಾರ ಮೊಟಕುಗೊಳಿಸಿದ ನಂತರ ಎಚ್‌ಸಿಬಿಎ ಅಧ್ಯಕ್ಷ ಮಿಯಾನ್ ಅಬ್ದುಲ್ ಕಯೂಮ್  ಬಂಧನಕ್ಕೊಳಗಾಗಿ, ಅವರನ್ನು ತಿಹಾರ್ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ.


ಓದಿ: ಮಧ್ಯಪ್ರದೇಶದ ಗೋರಕ್ಷಾದಳದ VHP ಮುಖಂಡನ ಹತ್ಯೆ: ಕ್ಯಾಮರದಲ್ಲಿ ಸೆರೆಯಾಯ್ತು ಘೋರ ಕೊಲೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...