Homeಮುಖಪುಟಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

- Advertisement -
- Advertisement -

ನಾನಾಗ ಪಿಯುಸಿ ಓದುತ್ತಿದ್ದೆ. ಮುಂಜಾನೆ 8 ಗಂಟೆಗೆ ಕಾಲೇಜು ಇರುತ್ತಿದ್ದರಿಂದ ಬೇಗನೆ ಎದ್ದು ಹೊರಡಬೇಕಿತ್ತು. ಗೀತಾ ನಾಗಭೂಷಣ ಅವರ ಮನೆ ಮುಂದೆ ಹಾಯ್ದು ಹೋಗುತ್ತಿದ್ದೆವು. ಫಸ್ಟ್ ಪಿಯುಸಿ ಇದ್ದಾಗ ಇವರ್ಯಾರು ಅಂಬೋದು ನಮಗೆ ಗೊತ್ತಿರಲಿಲ್ಲ. ಟಿ.ವಿ ನೋಡುತ್ತಾ ಕುಳಿತುಕೊಂಡಿರುತ್ತಿದ್ದ ವಯಸ್ಸಾದ ಅಜ್ಜಿ ಈ ನಾಡಿನ ಬಹುದೊಡ್ಡ ಬರಹಗಾರ್ತಿ ಅಂತ ಗೊತ್ತಾಗಿದ್ದು, ಪಿಯುಸಿ ಮುಗಿಸುವ ಹೊತ್ತಿಗೆ. ಹೈಸ್ಕೂಲನಲ್ಲಿ ಪಠ್ಯಕ್ಕೆ ಇದ್ದ ಅವರ “ಅವ್ವ” ಕಥೆ ಓದಿದ ನೆನಪು . ಅವರಿಗೆ ಪರಿಚಯವಿಲ್ಲದ ನಾನು ಒಂದು ದಿನ ಅವರ ಮನೆಗೆ ಹೋಗಿ ಮೇಡಂ ಅವರಿಗೆ ನನ್ನ ಹೆಸರು, ಕಾಲೇಜು ಪರಿಚಯ ಮಾಡಿಸಿ “ನಿಮ್ಮ ಬುಕ್ಸ್ ಬೇಕಾಗಿತ್ತು ನಮ್ಮ ಕಾಲೇಜಿನ ಲೈಬ್ರರಿಗೆ ಫ್ರೀಯಾಗಿ ಕೊಡೋಕೆ ಸಾಧ್ಯನಾ?” ಅಂತ ಕೇಳಿದೆ. ಅವರು ತುಸು ಯೋಚಿಸಿ, “ನಿಮ್ಮ ಪ್ರಿನ್ಸಿಪಾಲರಿಂದ ಒಂದು ಲೆಟರ್ ತಗೊಂಡ ಬಾರಪ್ಪ ಕೊಡ್ತೀನಿ” ಅಂದ್ರು. ಮರುದಿನ ಲೆಟರ್ ಬರೆಸಿಕೊಂಡು ಹೋಗಿ ಅವರ ಕೈಗಿಟ್ಟೆ ಅವರು ಮರುಮಾತನಾಡದೆ ಮುಗುಳ್ನಗುತ್ತಲೆ ಪುಸ್ತಕದ ಹೊರೆ ಕೈಗಿಟ್ಟರು. ಅದು ಅವರ ಜೊತೆಗಿನ ನನ್ನ ಮೊದಲ ಭೇಟಿ.

ಮುಂದೆ ಅವರ ‘ಬದುಕು’ ಕಾದಂಬರಿ ಓದಿದೆ. ಆವಾಗ ಅರ್ಥ ಆಯ್ತು – ನಾ ಭೇಟಿ ಮಾಡಿದ್ದು, ನಮ್ಮ ಕಣ್ಣೆದುರೆ ಕೂರುತ್ತಿದ್ದ ಅಜ್ಜಿ ಅಸಾಮಾನ್ಯ ಬರಹಗಾರ್ತಿ ಅಂತ. ಆಮೇಲೆ ನನ್ನಲ್ಲಿ ಇದ್ದ ಬೃಹತ್ ಕಾದಂಬರಿ ‘ಬದುಕು’ ಹೊತ್ತುಕೊಂಡು ಹೋಗಿ, ಅವರಿಂದ ಆ ಪುಸ್ತಕದ ಮೇಲೆ ಆಟೋಗ್ರಾಫ್ ಹಾಕೊಂಡು ಬಂದೆ.

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

“ದಿನಕ್ಕೊಮ್ಮೆ ಹುಟ್ಟು ದಿನಕ್ಕೊಮ್ಮೆ ಸಾವು ಅನ್ನೋಹಂಗ ಸೂರ್ಯ ಚಂದ್ರಾಮರು ಹುಟ್ಟುತ್ತಿದ್ದರು…ಸಾಯುತ್ತಿದ್ದರು. ಹಿಂಗೇ ಹುಟ್ಟು ಸಾವುಗಳ ಕೈ ಹಿಡಿದುಕೊಂಡೇ ಮಂದಿಯ ಬದುಕು ಮುಂದೆ ಮುಂದೆ ನಡೆಯುತ್ತಿತ್ತು. ಎಲ್ಲಿಗೆ ಹೋಗಿ ತಲುಪಬೇಕು ಅನ್ನುವ ಗುರಿ ಗೊತ್ತಿರಲಿಲ್ಲವಾದರೂ ನಡೆಯುವುದೊಂದೇ ತನ್ನ ಗುರಿಯೆನ್ನುವಂತೆ ಹೊತ್ತು ನಡೆಯುತ್ತಲೇ ಇತ್ತು ತನ್ನದೇ ಗತಿಯಿಂದ !” ಬದುಕು (ಕಾದಂಬರಿ) – ಪುಟ ನಂ -517

‘ಬದುಕು’ ಕಾದಂಬರಿಯಲ್ಲಿ ಹೀಗೆ ಬರೆದಿರುವ ಗೀತಾ ನಾಗಭೂಷಣ ಅವರು ಸಾವಿನ ಕೈಹಿಡಿದು ಎಲ್ಲಿಗೋ ಹೋಗಿದ್ದಾರೆ. ಆದರೆ ಅವರು ನಮ್ಮ ಕೈಗಿತ್ತ ‘ಬದುಕು’ ಓದುವುದು, ಅದರೊಂದಿಗೆ ಸಂವಾದಿಸುವುದು ಈ ಹೊತ್ತಿನ ಜರೂರತ್ತು. ಸದಾ ಅವರು ಜಾತಿಯ ಶೋಷಣೆಗಳನ್ನು, ಸ್ತ್ರೀ ದೌರ್ಜನ್ಯಗಳನ್ನು ತಮ್ಮ ಬರಹದ ಮೂಲಕ ವಿರೋಧಿಸುತ್ತಲೇ ಬಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆಯಲ್ಲಿರುವ ಅನಿಷ್ಟ ಪದ್ಧತಿಗಳಿಗೆ ತಮ್ಮ ಬರಹದ ಮೂಲಕ ಕನ್ನಡಿ ಹಿಡಿದು ಹೊರ ನಾಡಿಗೆ ಪರಿಚಯಿಸುವ ಕೆಲಸ ಸಹ ಮಾಡಿದ್ದಾರೆ. ಮುಖ್ಯವಾಗಿ ಅವರು ಬಳಸಿಕೊಂಡಿರುವ ನೆಲದ ಭಾಷೆ ನಮ್ಮೆಲ್ಲರಿಗೂ ನಿಜವಾಗಿಯೂ ಸ್ಪೂರ್ತಿ ಆಗಬೇಕಿದೆ.

ಕೆಲವು ತಿಂಗಳ ಕೆಳಗೆ ಆತ್ಮೀಯ ಗೆಳೆಯರೊಬ್ಬರು ಹೇಳಿದ ಕಾರಣಕ್ಕೆ ಒಂದಿಷ್ಟು ಪ್ರಶ್ನೆಗಳು ಬರೆದುಕೊಂಡು ಅವರ ಮನೆಗೆ ಒಂದು ಸಣ್ಣ ಸಂದರ್ಶನಕ್ಕಾಗಿ ಹೋಗಿದೆ. ” ಹೆಲ್ತ್ ಸರಿಯಲ್ಲ ಈಗ ಯಾವ ಇಂಟರ್ವ್ಯೂ ಸಹ ಕೊಡ್ತಿಲ್ಲಪ್ಪ” ಅಂದ್ರು. ಆವತ್ತು ತುಸು ಬೇಜಾರು ಮಾಡಿಕೊಂಡೆ ಹೊರ ಬಂದವನ ಕೈಯಲ್ಲಿನ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಸಿ ಹೋದ ಮೇಡಂ ಅವರು ತಮ್ಮ ಕಾದಂಬರಿಯಲ್ಲಿ ಒಂದುದು ಕಡೆ ಹೀಗೆ ಬರೆಯುತ್ತಾರೆ,
“ಹಣ್ಣೆಲಿ ಉದುರಿ ಹೊಸಾ ಎಲಿ ಚಿಗುರೊದು ಆ ಭಗವಂತ ಹಾಕಿದ ನೇಮದಾ. ಸತ್ತಾಗಿನ ದುಕ್ಕ, ಹಡದಾಗಿನ ಬ್ಯಾನಿ ನೆನಪಿಟ್ಟುಕೊಂಡರ ಈ ದುನಿಯಾದಾರೀನೇ ನಡೀತಿರಲಿಲ್ಲ”…. ಬದುಕು(ಕಾದಂಬರಿ) ಪುಟ ನಂ -428.

ಸದಾ ಹೊಸತನಕ್ಕೆ ತುಡಿಯುತ್ತಿದ್ದ ಅವರ ಬರಹ ನಮ್ಮೊಳಗೆ ಇನ್ನಷ್ಟು ಹೊಸ ಬೆಳಕಿಂಡಿಗಳು ತೆರೆದಿದೆ. ಒಬ್ಬ ಬರಹಗಾರ ಎಂದಿಗೂ ಸಾಯುವುದಿಲ್ಲ. ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಉಸಿರಾಡುತ್ತಲೇ ಇರುತ್ತಾರೆ. ಓದುಗರೊಂದಿಗೆ ಮಾತಾಡುತ್ತಲೇ ಇರುತ್ತಾರೆ.


‘ಯುದ್ಧ ಮತ್ತು ಮಕ್ಕಳು’: ಪೋಷಕರು ಓದಬೇಕಾದ ಇಂದಿನ ಕಾಲಕ್ಕೂ ಪ್ರಸ್ತುತ ಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೀತಾ ನಾಗಭೂಷಣರ ‘ಬದುಕು’ ಕನ್ನಡದ ಅತ್ಯುತ್ತಮ ಕಾದಂಬರಿಗಳಲ್ಲಿ ಒಂದು, ಎಂಬುದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...