Homeಮುಖಪುಟಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

- Advertisement -
- Advertisement -

ನಾನಾಗ ಪಿಯುಸಿ ಓದುತ್ತಿದ್ದೆ. ಮುಂಜಾನೆ 8 ಗಂಟೆಗೆ ಕಾಲೇಜು ಇರುತ್ತಿದ್ದರಿಂದ ಬೇಗನೆ ಎದ್ದು ಹೊರಡಬೇಕಿತ್ತು. ಗೀತಾ ನಾಗಭೂಷಣ ಅವರ ಮನೆ ಮುಂದೆ ಹಾಯ್ದು ಹೋಗುತ್ತಿದ್ದೆವು. ಫಸ್ಟ್ ಪಿಯುಸಿ ಇದ್ದಾಗ ಇವರ್ಯಾರು ಅಂಬೋದು ನಮಗೆ ಗೊತ್ತಿರಲಿಲ್ಲ. ಟಿ.ವಿ ನೋಡುತ್ತಾ ಕುಳಿತುಕೊಂಡಿರುತ್ತಿದ್ದ ವಯಸ್ಸಾದ ಅಜ್ಜಿ ಈ ನಾಡಿನ ಬಹುದೊಡ್ಡ ಬರಹಗಾರ್ತಿ ಅಂತ ಗೊತ್ತಾಗಿದ್ದು, ಪಿಯುಸಿ ಮುಗಿಸುವ ಹೊತ್ತಿಗೆ. ಹೈಸ್ಕೂಲನಲ್ಲಿ ಪಠ್ಯಕ್ಕೆ ಇದ್ದ ಅವರ “ಅವ್ವ” ಕಥೆ ಓದಿದ ನೆನಪು . ಅವರಿಗೆ ಪರಿಚಯವಿಲ್ಲದ ನಾನು ಒಂದು ದಿನ ಅವರ ಮನೆಗೆ ಹೋಗಿ ಮೇಡಂ ಅವರಿಗೆ ನನ್ನ ಹೆಸರು, ಕಾಲೇಜು ಪರಿಚಯ ಮಾಡಿಸಿ “ನಿಮ್ಮ ಬುಕ್ಸ್ ಬೇಕಾಗಿತ್ತು ನಮ್ಮ ಕಾಲೇಜಿನ ಲೈಬ್ರರಿಗೆ ಫ್ರೀಯಾಗಿ ಕೊಡೋಕೆ ಸಾಧ್ಯನಾ?” ಅಂತ ಕೇಳಿದೆ. ಅವರು ತುಸು ಯೋಚಿಸಿ, “ನಿಮ್ಮ ಪ್ರಿನ್ಸಿಪಾಲರಿಂದ ಒಂದು ಲೆಟರ್ ತಗೊಂಡ ಬಾರಪ್ಪ ಕೊಡ್ತೀನಿ” ಅಂದ್ರು. ಮರುದಿನ ಲೆಟರ್ ಬರೆಸಿಕೊಂಡು ಹೋಗಿ ಅವರ ಕೈಗಿಟ್ಟೆ ಅವರು ಮರುಮಾತನಾಡದೆ ಮುಗುಳ್ನಗುತ್ತಲೆ ಪುಸ್ತಕದ ಹೊರೆ ಕೈಗಿಟ್ಟರು. ಅದು ಅವರ ಜೊತೆಗಿನ ನನ್ನ ಮೊದಲ ಭೇಟಿ.

ಮುಂದೆ ಅವರ ‘ಬದುಕು’ ಕಾದಂಬರಿ ಓದಿದೆ. ಆವಾಗ ಅರ್ಥ ಆಯ್ತು – ನಾ ಭೇಟಿ ಮಾಡಿದ್ದು, ನಮ್ಮ ಕಣ್ಣೆದುರೆ ಕೂರುತ್ತಿದ್ದ ಅಜ್ಜಿ ಅಸಾಮಾನ್ಯ ಬರಹಗಾರ್ತಿ ಅಂತ. ಆಮೇಲೆ ನನ್ನಲ್ಲಿ ಇದ್ದ ಬೃಹತ್ ಕಾದಂಬರಿ ‘ಬದುಕು’ ಹೊತ್ತುಕೊಂಡು ಹೋಗಿ, ಅವರಿಂದ ಆ ಪುಸ್ತಕದ ಮೇಲೆ ಆಟೋಗ್ರಾಫ್ ಹಾಕೊಂಡು ಬಂದೆ.

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

“ದಿನಕ್ಕೊಮ್ಮೆ ಹುಟ್ಟು ದಿನಕ್ಕೊಮ್ಮೆ ಸಾವು ಅನ್ನೋಹಂಗ ಸೂರ್ಯ ಚಂದ್ರಾಮರು ಹುಟ್ಟುತ್ತಿದ್ದರು…ಸಾಯುತ್ತಿದ್ದರು. ಹಿಂಗೇ ಹುಟ್ಟು ಸಾವುಗಳ ಕೈ ಹಿಡಿದುಕೊಂಡೇ ಮಂದಿಯ ಬದುಕು ಮುಂದೆ ಮುಂದೆ ನಡೆಯುತ್ತಿತ್ತು. ಎಲ್ಲಿಗೆ ಹೋಗಿ ತಲುಪಬೇಕು ಅನ್ನುವ ಗುರಿ ಗೊತ್ತಿರಲಿಲ್ಲವಾದರೂ ನಡೆಯುವುದೊಂದೇ ತನ್ನ ಗುರಿಯೆನ್ನುವಂತೆ ಹೊತ್ತು ನಡೆಯುತ್ತಲೇ ಇತ್ತು ತನ್ನದೇ ಗತಿಯಿಂದ !” ಬದುಕು (ಕಾದಂಬರಿ) – ಪುಟ ನಂ -517

‘ಬದುಕು’ ಕಾದಂಬರಿಯಲ್ಲಿ ಹೀಗೆ ಬರೆದಿರುವ ಗೀತಾ ನಾಗಭೂಷಣ ಅವರು ಸಾವಿನ ಕೈಹಿಡಿದು ಎಲ್ಲಿಗೋ ಹೋಗಿದ್ದಾರೆ. ಆದರೆ ಅವರು ನಮ್ಮ ಕೈಗಿತ್ತ ‘ಬದುಕು’ ಓದುವುದು, ಅದರೊಂದಿಗೆ ಸಂವಾದಿಸುವುದು ಈ ಹೊತ್ತಿನ ಜರೂರತ್ತು. ಸದಾ ಅವರು ಜಾತಿಯ ಶೋಷಣೆಗಳನ್ನು, ಸ್ತ್ರೀ ದೌರ್ಜನ್ಯಗಳನ್ನು ತಮ್ಮ ಬರಹದ ಮೂಲಕ ವಿರೋಧಿಸುತ್ತಲೇ ಬಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆಯಲ್ಲಿರುವ ಅನಿಷ್ಟ ಪದ್ಧತಿಗಳಿಗೆ ತಮ್ಮ ಬರಹದ ಮೂಲಕ ಕನ್ನಡಿ ಹಿಡಿದು ಹೊರ ನಾಡಿಗೆ ಪರಿಚಯಿಸುವ ಕೆಲಸ ಸಹ ಮಾಡಿದ್ದಾರೆ. ಮುಖ್ಯವಾಗಿ ಅವರು ಬಳಸಿಕೊಂಡಿರುವ ನೆಲದ ಭಾಷೆ ನಮ್ಮೆಲ್ಲರಿಗೂ ನಿಜವಾಗಿಯೂ ಸ್ಪೂರ್ತಿ ಆಗಬೇಕಿದೆ.

ಕೆಲವು ತಿಂಗಳ ಕೆಳಗೆ ಆತ್ಮೀಯ ಗೆಳೆಯರೊಬ್ಬರು ಹೇಳಿದ ಕಾರಣಕ್ಕೆ ಒಂದಿಷ್ಟು ಪ್ರಶ್ನೆಗಳು ಬರೆದುಕೊಂಡು ಅವರ ಮನೆಗೆ ಒಂದು ಸಣ್ಣ ಸಂದರ್ಶನಕ್ಕಾಗಿ ಹೋಗಿದೆ. ” ಹೆಲ್ತ್ ಸರಿಯಲ್ಲ ಈಗ ಯಾವ ಇಂಟರ್ವ್ಯೂ ಸಹ ಕೊಡ್ತಿಲ್ಲಪ್ಪ” ಅಂದ್ರು. ಆವತ್ತು ತುಸು ಬೇಜಾರು ಮಾಡಿಕೊಂಡೆ ಹೊರ ಬಂದವನ ಕೈಯಲ್ಲಿನ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಸಿ ಹೋದ ಮೇಡಂ ಅವರು ತಮ್ಮ ಕಾದಂಬರಿಯಲ್ಲಿ ಒಂದುದು ಕಡೆ ಹೀಗೆ ಬರೆಯುತ್ತಾರೆ,
“ಹಣ್ಣೆಲಿ ಉದುರಿ ಹೊಸಾ ಎಲಿ ಚಿಗುರೊದು ಆ ಭಗವಂತ ಹಾಕಿದ ನೇಮದಾ. ಸತ್ತಾಗಿನ ದುಕ್ಕ, ಹಡದಾಗಿನ ಬ್ಯಾನಿ ನೆನಪಿಟ್ಟುಕೊಂಡರ ಈ ದುನಿಯಾದಾರೀನೇ ನಡೀತಿರಲಿಲ್ಲ”…. ಬದುಕು(ಕಾದಂಬರಿ) ಪುಟ ನಂ -428.

ಸದಾ ಹೊಸತನಕ್ಕೆ ತುಡಿಯುತ್ತಿದ್ದ ಅವರ ಬರಹ ನಮ್ಮೊಳಗೆ ಇನ್ನಷ್ಟು ಹೊಸ ಬೆಳಕಿಂಡಿಗಳು ತೆರೆದಿದೆ. ಒಬ್ಬ ಬರಹಗಾರ ಎಂದಿಗೂ ಸಾಯುವುದಿಲ್ಲ. ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಉಸಿರಾಡುತ್ತಲೇ ಇರುತ್ತಾರೆ. ಓದುಗರೊಂದಿಗೆ ಮಾತಾಡುತ್ತಲೇ ಇರುತ್ತಾರೆ.


‘ಯುದ್ಧ ಮತ್ತು ಮಕ್ಕಳು’: ಪೋಷಕರು ಓದಬೇಕಾದ ಇಂದಿನ ಕಾಲಕ್ಕೂ ಪ್ರಸ್ತುತ ಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೀತಾ ನಾಗಭೂಷಣರ ‘ಬದುಕು’ ಕನ್ನಡದ ಅತ್ಯುತ್ತಮ ಕಾದಂಬರಿಗಳಲ್ಲಿ ಒಂದು, ಎಂಬುದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...