Homeಮುಖಪುಟಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

- Advertisement -
- Advertisement -

ನಾನಾಗ ಪಿಯುಸಿ ಓದುತ್ತಿದ್ದೆ. ಮುಂಜಾನೆ 8 ಗಂಟೆಗೆ ಕಾಲೇಜು ಇರುತ್ತಿದ್ದರಿಂದ ಬೇಗನೆ ಎದ್ದು ಹೊರಡಬೇಕಿತ್ತು. ಗೀತಾ ನಾಗಭೂಷಣ ಅವರ ಮನೆ ಮುಂದೆ ಹಾಯ್ದು ಹೋಗುತ್ತಿದ್ದೆವು. ಫಸ್ಟ್ ಪಿಯುಸಿ ಇದ್ದಾಗ ಇವರ್ಯಾರು ಅಂಬೋದು ನಮಗೆ ಗೊತ್ತಿರಲಿಲ್ಲ. ಟಿ.ವಿ ನೋಡುತ್ತಾ ಕುಳಿತುಕೊಂಡಿರುತ್ತಿದ್ದ ವಯಸ್ಸಾದ ಅಜ್ಜಿ ಈ ನಾಡಿನ ಬಹುದೊಡ್ಡ ಬರಹಗಾರ್ತಿ ಅಂತ ಗೊತ್ತಾಗಿದ್ದು, ಪಿಯುಸಿ ಮುಗಿಸುವ ಹೊತ್ತಿಗೆ. ಹೈಸ್ಕೂಲನಲ್ಲಿ ಪಠ್ಯಕ್ಕೆ ಇದ್ದ ಅವರ “ಅವ್ವ” ಕಥೆ ಓದಿದ ನೆನಪು . ಅವರಿಗೆ ಪರಿಚಯವಿಲ್ಲದ ನಾನು ಒಂದು ದಿನ ಅವರ ಮನೆಗೆ ಹೋಗಿ ಮೇಡಂ ಅವರಿಗೆ ನನ್ನ ಹೆಸರು, ಕಾಲೇಜು ಪರಿಚಯ ಮಾಡಿಸಿ “ನಿಮ್ಮ ಬುಕ್ಸ್ ಬೇಕಾಗಿತ್ತು ನಮ್ಮ ಕಾಲೇಜಿನ ಲೈಬ್ರರಿಗೆ ಫ್ರೀಯಾಗಿ ಕೊಡೋಕೆ ಸಾಧ್ಯನಾ?” ಅಂತ ಕೇಳಿದೆ. ಅವರು ತುಸು ಯೋಚಿಸಿ, “ನಿಮ್ಮ ಪ್ರಿನ್ಸಿಪಾಲರಿಂದ ಒಂದು ಲೆಟರ್ ತಗೊಂಡ ಬಾರಪ್ಪ ಕೊಡ್ತೀನಿ” ಅಂದ್ರು. ಮರುದಿನ ಲೆಟರ್ ಬರೆಸಿಕೊಂಡು ಹೋಗಿ ಅವರ ಕೈಗಿಟ್ಟೆ ಅವರು ಮರುಮಾತನಾಡದೆ ಮುಗುಳ್ನಗುತ್ತಲೆ ಪುಸ್ತಕದ ಹೊರೆ ಕೈಗಿಟ್ಟರು. ಅದು ಅವರ ಜೊತೆಗಿನ ನನ್ನ ಮೊದಲ ಭೇಟಿ.

ಮುಂದೆ ಅವರ ‘ಬದುಕು’ ಕಾದಂಬರಿ ಓದಿದೆ. ಆವಾಗ ಅರ್ಥ ಆಯ್ತು – ನಾ ಭೇಟಿ ಮಾಡಿದ್ದು, ನಮ್ಮ ಕಣ್ಣೆದುರೆ ಕೂರುತ್ತಿದ್ದ ಅಜ್ಜಿ ಅಸಾಮಾನ್ಯ ಬರಹಗಾರ್ತಿ ಅಂತ. ಆಮೇಲೆ ನನ್ನಲ್ಲಿ ಇದ್ದ ಬೃಹತ್ ಕಾದಂಬರಿ ‘ಬದುಕು’ ಹೊತ್ತುಕೊಂಡು ಹೋಗಿ, ಅವರಿಂದ ಆ ಪುಸ್ತಕದ ಮೇಲೆ ಆಟೋಗ್ರಾಫ್ ಹಾಕೊಂಡು ಬಂದೆ.

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

“ದಿನಕ್ಕೊಮ್ಮೆ ಹುಟ್ಟು ದಿನಕ್ಕೊಮ್ಮೆ ಸಾವು ಅನ್ನೋಹಂಗ ಸೂರ್ಯ ಚಂದ್ರಾಮರು ಹುಟ್ಟುತ್ತಿದ್ದರು…ಸಾಯುತ್ತಿದ್ದರು. ಹಿಂಗೇ ಹುಟ್ಟು ಸಾವುಗಳ ಕೈ ಹಿಡಿದುಕೊಂಡೇ ಮಂದಿಯ ಬದುಕು ಮುಂದೆ ಮುಂದೆ ನಡೆಯುತ್ತಿತ್ತು. ಎಲ್ಲಿಗೆ ಹೋಗಿ ತಲುಪಬೇಕು ಅನ್ನುವ ಗುರಿ ಗೊತ್ತಿರಲಿಲ್ಲವಾದರೂ ನಡೆಯುವುದೊಂದೇ ತನ್ನ ಗುರಿಯೆನ್ನುವಂತೆ ಹೊತ್ತು ನಡೆಯುತ್ತಲೇ ಇತ್ತು ತನ್ನದೇ ಗತಿಯಿಂದ !” ಬದುಕು (ಕಾದಂಬರಿ) – ಪುಟ ನಂ -517

‘ಬದುಕು’ ಕಾದಂಬರಿಯಲ್ಲಿ ಹೀಗೆ ಬರೆದಿರುವ ಗೀತಾ ನಾಗಭೂಷಣ ಅವರು ಸಾವಿನ ಕೈಹಿಡಿದು ಎಲ್ಲಿಗೋ ಹೋಗಿದ್ದಾರೆ. ಆದರೆ ಅವರು ನಮ್ಮ ಕೈಗಿತ್ತ ‘ಬದುಕು’ ಓದುವುದು, ಅದರೊಂದಿಗೆ ಸಂವಾದಿಸುವುದು ಈ ಹೊತ್ತಿನ ಜರೂರತ್ತು. ಸದಾ ಅವರು ಜಾತಿಯ ಶೋಷಣೆಗಳನ್ನು, ಸ್ತ್ರೀ ದೌರ್ಜನ್ಯಗಳನ್ನು ತಮ್ಮ ಬರಹದ ಮೂಲಕ ವಿರೋಧಿಸುತ್ತಲೇ ಬಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆಯಲ್ಲಿರುವ ಅನಿಷ್ಟ ಪದ್ಧತಿಗಳಿಗೆ ತಮ್ಮ ಬರಹದ ಮೂಲಕ ಕನ್ನಡಿ ಹಿಡಿದು ಹೊರ ನಾಡಿಗೆ ಪರಿಚಯಿಸುವ ಕೆಲಸ ಸಹ ಮಾಡಿದ್ದಾರೆ. ಮುಖ್ಯವಾಗಿ ಅವರು ಬಳಸಿಕೊಂಡಿರುವ ನೆಲದ ಭಾಷೆ ನಮ್ಮೆಲ್ಲರಿಗೂ ನಿಜವಾಗಿಯೂ ಸ್ಪೂರ್ತಿ ಆಗಬೇಕಿದೆ.

ಕೆಲವು ತಿಂಗಳ ಕೆಳಗೆ ಆತ್ಮೀಯ ಗೆಳೆಯರೊಬ್ಬರು ಹೇಳಿದ ಕಾರಣಕ್ಕೆ ಒಂದಿಷ್ಟು ಪ್ರಶ್ನೆಗಳು ಬರೆದುಕೊಂಡು ಅವರ ಮನೆಗೆ ಒಂದು ಸಣ್ಣ ಸಂದರ್ಶನಕ್ಕಾಗಿ ಹೋಗಿದೆ. ” ಹೆಲ್ತ್ ಸರಿಯಲ್ಲ ಈಗ ಯಾವ ಇಂಟರ್ವ್ಯೂ ಸಹ ಕೊಡ್ತಿಲ್ಲಪ್ಪ” ಅಂದ್ರು. ಆವತ್ತು ತುಸು ಬೇಜಾರು ಮಾಡಿಕೊಂಡೆ ಹೊರ ಬಂದವನ ಕೈಯಲ್ಲಿನ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಸಿ ಹೋದ ಮೇಡಂ ಅವರು ತಮ್ಮ ಕಾದಂಬರಿಯಲ್ಲಿ ಒಂದುದು ಕಡೆ ಹೀಗೆ ಬರೆಯುತ್ತಾರೆ,
“ಹಣ್ಣೆಲಿ ಉದುರಿ ಹೊಸಾ ಎಲಿ ಚಿಗುರೊದು ಆ ಭಗವಂತ ಹಾಕಿದ ನೇಮದಾ. ಸತ್ತಾಗಿನ ದುಕ್ಕ, ಹಡದಾಗಿನ ಬ್ಯಾನಿ ನೆನಪಿಟ್ಟುಕೊಂಡರ ಈ ದುನಿಯಾದಾರೀನೇ ನಡೀತಿರಲಿಲ್ಲ”…. ಬದುಕು(ಕಾದಂಬರಿ) ಪುಟ ನಂ -428.

ಸದಾ ಹೊಸತನಕ್ಕೆ ತುಡಿಯುತ್ತಿದ್ದ ಅವರ ಬರಹ ನಮ್ಮೊಳಗೆ ಇನ್ನಷ್ಟು ಹೊಸ ಬೆಳಕಿಂಡಿಗಳು ತೆರೆದಿದೆ. ಒಬ್ಬ ಬರಹಗಾರ ಎಂದಿಗೂ ಸಾಯುವುದಿಲ್ಲ. ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಉಸಿರಾಡುತ್ತಲೇ ಇರುತ್ತಾರೆ. ಓದುಗರೊಂದಿಗೆ ಮಾತಾಡುತ್ತಲೇ ಇರುತ್ತಾರೆ.


‘ಯುದ್ಧ ಮತ್ತು ಮಕ್ಕಳು’: ಪೋಷಕರು ಓದಬೇಕಾದ ಇಂದಿನ ಕಾಲಕ್ಕೂ ಪ್ರಸ್ತುತ ಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೀತಾ ನಾಗಭೂಷಣರ ‘ಬದುಕು’ ಕನ್ನಡದ ಅತ್ಯುತ್ತಮ ಕಾದಂಬರಿಗಳಲ್ಲಿ ಒಂದು, ಎಂಬುದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...