Homeಕರೋನಾ ತಲ್ಲಣಫ್ಯಾಕ್ಟ್‌ಚೆಕ್: ಹೈದರಾಬಾದ್‌ನಲ್ಲಿ ಕೊರೊನಾ ರೋಗಿಗಳು ಹಾಸಿಗೆ ಸಿಗದೆ ರಸ್ತೆಯಲ್ಲಿದ್ದಾರೆಯೆ?

ಫ್ಯಾಕ್ಟ್‌ಚೆಕ್: ಹೈದರಾಬಾದ್‌ನಲ್ಲಿ ಕೊರೊನಾ ರೋಗಿಗಳು ಹಾಸಿಗೆ ಸಿಗದೆ ರಸ್ತೆಯಲ್ಲಿದ್ದಾರೆಯೆ?

- Advertisement -
- Advertisement -

ಆಸ್ಪತ್ರೆಯ ಹೊರಗಿನ ರಸ್ತೆಗಳಲ್ಲಿ ಹಾಸಿಗೆಗಳ ಮೇಲೆ ರೋಗಿಗಳಿರುವ ವೀಡಿಯೊವನ್ನು ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿ ನಡೆದಿದ್ದು ಎಂದು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದು ವೈರಲಾಗುತ್ತಿದೆ.

ಆದರೆ, ಈ ವೀಡಿಯೊ ಹೈದರಾಬಾದ್‌ನ ಓಲ್ಡ್ ಸಿಟಿಯದ್ದಲ್ಲ ಪಾಕಿಸ್ತಾನದ ಲಾಹೋರ್‌ನದ್ದಾಗಿದ್ದು, ಅದೂ ಅಲ್ಲದೆ ಇದು ಕೊರೊನಾ ರೋಗಿಗಳ ವೀಡಿಯೋ ಅಲ್ಲ ಎಂದು ತಿಳಿದು ಬಂದಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ, ಈ ವಿಡಿಯೋವನ್ನು ಹೆಚ್ಚಿನ ಜನರು ನಿಜವೆಂದೇ ನಂಬಿದ್ದಾರೆ, ಯಾಕೆಂದರೆ ವೀಡಿಯೋದಲ್ಲಿ ಕಾಣುವ ರೋಗಿಗಳು ಮತ್ತು ಅವರ ಸಂಬಂಧಿಗಳು ಮಾಸ್ಕ್‌ಗಳನ್ನು ಧರಿಸಿರುವುದನ್ನು ಕಾಣಬಹುದಾಗಿದೆ. ಹಾಸಿಗೆಗಳ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗದ ಕೊರೊನಾ ರೋಗಿಗಳು ರಸ್ತೆಗಳಲ್ಲಿ ಇರುವಂತಾಗಿದೆ ಎಂದು ವೈರಲ್ ಸಂದೇಶದಲ್ಲಿ ಹೇಳಲಾಗಿದೆ.

ಕಟ್ಟಡದ ಹೊರಗೆ ಹೆಚ್ಚಿನ ಸಂಖ್ಯೆಯ ಜನರು ಕಾಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ರೋಗಿಗಳ ಕೆಲವು ಸಂಬಂಧಿಕರು ರೋಗಿಗಳ ಬೆನ್ನನ್ನು ಉಜ್ಜಿಕೊಳ್ಳುವುದು ಕಂಡುಬರುತ್ತದೆ. ಅಷ್ಟೇ ಅಲ್ಲದೆ ಒಬ್ಬ ವ್ಯಕ್ತಿ ಪಿಪಿಇ ಕಿಟ್‌ನಂತೆ ತೋರುವ ದಿರಿಸು ಧರಿಸುವುದನ್ನು ವಿಡಿಯೊದಲ್ಲಿ ಕಾಣಬಹುದು.

“ಓಲ್ಡ್ ಸಿಟಿಯಲ್ಲಿರುವ (ಹೈದರಾಬಾದ್) ಅಪಾಯಕಾರಿ ಪರಿಸ್ಥಿತಿ” ಎಂಬ ಸಂದೇಶದೊಂದಿಗೆ ಅನೇಕ ಜನರು ಈ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳುತ್ತಿದ್ದಾರೆ.

 

ವಿಡಿಯೊವನ್ನು ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ ತಿಳಿದು ಬಂದಿದ್ದೇನೆಂದರೆ, ಪಾಕಿಸ್ತಾನದ ಲಾಹೋರ್‌ನ ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಜನರು ಹೀಗೆ ಹೊರಗೆ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Patients Waited Outside Lahore Hospital Due To Fire – They Are Not COVID Positive

ಪಾಕಿಸ್ತಾನದ ನ್ಯೂಸ್ ಚಾನೆಲ್ ಸಮಾ.ಟಿ.ವಿ ಯ ವರದಿಯು, ಇದು ಜೂನ್ 13 ರ ಶನಿವಾರದಂದು ಲಾಹೋರ್‌ನ ಸರ್ವೀಸಸ್ ಆಸ್ಪತ್ರೆಯ ಶಸ್ತ್ರಚಿಕಿತ್ಸೆಯ ತುರ್ತು ವಾರ್ಡ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದಾಗಿನದ್ದು ಎಂದು ದೃಡಪಡಿಸುತ್ತದೆ.

Patients rescued as fire rages at Lahore’s Services Hospital

ಇದರಿಂದಾಗಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 40 ರೋಗಿಗಳನ್ನು ಸ್ಥಳಾಂತರಿಸಿ ಬೇರೆ ವಾರ್ಡ್‌ಗೆ ಸ್ಥಳಾಂತರಿಸಲಾಯಿತು ಎಂದು ವರದಿ ಉಲ್ಲೇಖಿಸಿದೆ.

ಅಷ್ಟೇ ಅಲ್ಲದೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ ಕೂಡಾ ಈ ಘಟನೆಯ ಬಗ್ಗೆ ಟ್ವೀಟ್ ಮಾಡಿದೆ.

 

ಆದ್ದರಿಂದ, ಲಾಹೋರ್ ಆಸ್ಪತ್ರೆಯೊಂದರ ವಿಡಿಯೋವೊಂದನ್ನು ಭಾರತದ ಹೈದರಾಬಾದ್‌ನ ಪರಿಸ್ಥಿತಿಯೆಂಬತೆ ಚಿತ್ರಿಸಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.


ಓದಿ: PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...