Homeಅಂಕಣಗಳುಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರಿಗೆ ಎರಡು ತಿಂಗಳು ಊಟ ನೀಡಿದ ಗ್ರಾ.ಪಂ: ಪಿಡಿಓ ರಾಜೇಶ್ ಸಾಧನೆ

ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರಿಗೆ ಎರಡು ತಿಂಗಳು ಊಟ ನೀಡಿದ ಗ್ರಾ.ಪಂ: ಪಿಡಿಓ ರಾಜೇಶ್ ಸಾಧನೆ

- Advertisement -
- Advertisement -

ನೀವು ಫೇಸ್‍ಬುಕ್ ಬಳಕೆದಾರರಾಗಿದ್ದರೆ ರಾಜಾನುಕುಂಟೆ ಗ್ರಾಮ ಪಂಚಾಯ್ತಿ ಎನ್ನುವ ಅಕೌಂಟ್ ಇದೆ. ಈ ಗ್ರಾಮ ಪಂಚಾಯ್ತಿಯಾಗಿ ಕೊರೊನಾ ಸಂದರ್ಭವನ್ನು ನಿಭಾಯಿಸಿದ್ದಂತೂ ಉಳಿದ ಗ್ರಾಮ ಪಂಚಾಯ್ತಿಗಳಿಗೆ ಅತ್ಯುತ್ತಮ ಮಾದರಿ. ಹಾಗಾದರೆ ಇದರ ಹಿಂದಿರುವ ಶಕ್ತಿ ಯಾರೆಂದು ನಿಮಗೆ ಆಸಕ್ತಿ ಕೆರಳಿರಬಹುದು. ಯಲಹಂಕ ತಾಲೂಕಿನ, ಹೆಸರಘಟ್ಟ ಹೋಬಳಿಯ ರಾಜಾನುಕುಂಟೆ ಗ್ರಾಮ ಪಂಚಾಯ್ತಿಯ ಈ ಎಲೆಮರೆಯ ಅಭಿವೃದ್ಧಿ ಅಧಿಕಾರಿ ಹೆಚ್.ಆರ್. ರಾಜೇಶ್ ಅವರೇ ಆ ವ್ಯಕ್ತಿ.

‘ನಾನು ನಿಮ್ಮ ಬಗ್ಗೆ ಬರೆಯಬೇಕು, ಹಾಗಾಗಿ ನಿಮ್ಮ ಬಳಿ ಮಾತನಾಡಬೇಕು ಸಮಯವಿದೆಯೇ’ ಎಂದು ರಾಜೇಶ್ ಅವರನ್ನು ಕೇಳಿದೆ. ಅವರು ‘ನಾವು ಪ್ರಚಾರ ಬಯಸಲ್ಲ ಸರ್, ನಿಮಗೆ ಜಾಹೀರಾತೇನಾದ್ರೂ ಬೇಕಾ? ಅದಕ್ಕೋಸ್ಕರ ನಮ್ಮ ಬಗ್ಗೆ ಬರೀತಿನಿ ಅಂತಿದಿರೇನೋ’ ಎಂದು ಖಾರವಾಗಿಯೇ ನುಡಿದರು. ನಾನು ಸಾವರಿಸಿಕೊಂಡು ನನ್ನ ಮತ್ತು ಗೌರಿಲಂಕೇಶ್ ಹೆಸರಲ್ಲಿ ತರುತ್ತಿರುವ ನ್ಯಾಯಪಥ
ಪತ್ರಿಕೆಯ ಪರಿಚಯಿಸಿ, ಯಾವ ಫಲಾಪೇಕ್ಷೆ ಇಲ್ಲದೆ ದುಡಿಯುವವರನ್ನೂ, ಪ್ರಚಾರವಿಲ್ಲದೆ ತಣ್ಣಗೆ ಸಾಧನೆ ಮಾಡಿದವರನ್ನೂ ಹುಡುಕಿ ಬರೆಯುವುದಾಗಿಯೂ, ಎರಡು ವರ್ಷದಿಂದ ನಿಮ್ಮ ಕೆಲಸಗಳನ್ನು ಗಮನಿಸುತ್ತಿರುವ ಕಾರಣ ನಿಮ್ಮ ಬಗ್ಗೆ ಬರೆಯಬೇಕೆಂದು ಮಾತನಾಡಿಸಿದೆ’ ಎಂದು ತಿಳಿಸಿದೆ. ಆಗ ರಾಜೇಶ್ ಜೊತೆಗೆ ಆಪ್ತವಾಗಿ ಒಂದಷ್ಟು ಮಾತುಕತೆ ನಡೆಯಿತು. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಹೇಮಾಪುರದ ರಾಜೇಶ್ ಪದವೀಧರರಾಗಿದ್ದು, 2010 ರಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸಕ್ಕೆ ಸೇರಿದರು. ಕೆಲಸ ಮಾಡಿದಲ್ಲೆಲ್ಲಾ ಅತ್ಯುತ್ತಮ ಹೆಸರು ಸಂಪಾದಿಸಿದ್ದಾರೆ.

‘ಕೊರೊನಾ ಲಾಕ್‍ಡೌನ್ ಕಾರಣಕ್ಕೆ ಗುಜರಾತ್, ಬಿಹಾರ, ಉತ್ತರ ಕರ್ನಾಟಕ ಭಾಗದಿಂದ ವಲಸೆ ಬಂದ ಪಂಚಾಯ್ತಿ ವ್ಯಾಪ್ತಿಯ ಕಟ್ಟಡ ಕಾರ್ಮಿಕರು ಕೆಲಸವೂ ಇಲ್ಲದೆ, ಊಟಕ್ಕೂ ತೊಂದರೆಯಾಗಿ ಕಷ್ಟಪಡುತ್ತಿದ್ದರು. ಇಂತವರಿಗಾಗಿ ಎರಡು ತಿಂಗಳು ನಮ್ಮ ಗ್ರಾಮಪಂಚಾಯ್ತಿ ಸತತವಾಗಿ ಊಟ ತಿಂಡಿ ನೀಡಿತು. ಈತನಕ ಇದಕ್ಕೆ ಕನಿಷ್ಠ 50 ಲಕ್ಷ ಖರ್ಚಾಗಿರಬಹುದು. ಆದರೆ ಪಂಚಾಯ್ತಿಯ ಒಂದು ಪೈಸೆಯೂ ಖರ್ಚಾಗಿಲ್ಲ. ನಮ್ಮ ಕೆಲಸದ ಬದ್ಧತೆ ಮತ್ತು ಪ್ರಾಮಾಣಿಕತೆ ನೋಡಿ, ನಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ದಾನಿಗಳು ಸಂಘಸಂಸ್ಥೆಗಳು, ವೈಯಕ್ತಿಕವಾಗಿ ಒಬ್ಬೊಬ್ಬರು ಒಂದೊಂದಕ್ಕೆ ದಿನಂಪ್ರತಿ ಸಹಾಯ ಮಾಡಿದ್ದಾರೆ. ಒಂದು ದಿನದ ಖರ್ಚನ್ನು ಭರಿಸಿ ಕೆಲವರು ಹುಟ್ಟಿದ ಹಬ್ಬ ಆಚರಿಸಿಕೊಂಡಿದ್ದಾರೆ. ಇದೀಗ ನಮ್ಮ ಪಂಚಾಯ್ತಿಯ ಸದಸ್ಯರೊಬ್ಬರು ನಿರ್ಗತಿಕರಿಗೆ ಊಟ ತಿಂಡಿ ನಿರಂತರವಾಗಿರಲಿ ಎಂದು ಗ್ರಾಮಪಂಚಾಯ್ತಿ ಕ್ಯಾಂಟೀನ್ ತೆರೆಯುವ ಯೋಚನೆ ಮಾಡಿದ್ದಾರೆ. ಸದ್ಯಕ್ಕೆ ಸಣ್ಣದಾಗಿ ನಡೆಯುತ್ತಿದೆ’ ಎನ್ನುತ್ತಾರೆ ರಾಜೇಶ್.

ಕೊರೊನಾ ನಿಂತ್ರಣಕ್ಕೆಂದು ಗ್ರಾಮ ಪಂಚಾಯ್ತಿಗಳಿಗೆ ಸರಕಾರ ಪ್ರತ್ಯೇಕ ಹಣ ನೀಡಿಲ್ಲ. ಆದರೆ ಗ್ರಾಮಪಂಚಾಯ್ತಿಯ ಸದಸ್ಯರು, ಅಧ್ಯಕ್ಷರು, ಪಿಡಿಓಗಳು ಆಸಕ್ತರಾಗಿದ್ದರೆ, ಪಂಚಾಯ್ತಿಯ ಆದಾಯದ ಒಂದಷ್ಟು ಮೊತ್ತವನ್ನು ಬಳಸುತ್ತಲೇ ಸಮುದಾಯದ ಸಹಭಾಗಿತ್ವದಲ್ಲಿ ಕೆಲಸ ಮಾಡಬೇಕಾಗುತ್ತದೆ. ರಾಜೇಶ್ ಅವರು ಇದನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ‘ಸೋಂಕು ಹರಡದಂತೆ ಔಷಧಿ ಸಿಂಪಡನೆ, ಮಾಸ್ಕ್ ವಿತರಣೆ, ವಯಕ್ತಿಕ ಅಂತರದ ಬಗೆಗೆ ಜನರಿಗೆ ತಿಳಿಸುವುದು, ಕೊರೊನಾ ಜಾಗೃತಿಯ ಬಗ್ಗೆ ವ್ಯಾಪಕ ಪ್ರಚಾರ ಮಾಡುವುದು ಈ ಎಲ್ಲವನ್ನೂ, ನಮ್ಮ ಗ್ರಾಮ ಪಂಚಾಯ್ತಿ ಗರಿಷ್ಠ ಮಟ್ಟದಲ್ಲಿ ಮಾಡಿದೆ. ನಮ್ಮ ಜೊತೆ ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಹಗಲು ರಾತ್ರಿ ದುಡಿದಿದ್ದಾರೆ. ನಮ್ಮ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತರಿಗೆ ನಾನು ಎಷ್ಟು ಸಲಾಮ್ ಹೊಡೆದ್ರೂ ಕಡಿಮೆಯೇ’ ಎನ್ನುತ್ತಾರೆ ರಾಜೇಶ್.

ಹೊರರಾಜ್ಯದ ತಮ್ಮ ಊರುಗಳಿಗೆ ಹೋಗುವ ವಲಸೆ ಕಾರ್ಮಿಕರ ವಿವರಗಳನ್ನು ಸೇವಾ ಸಿಂಧು ತಂತ್ರಾಂಶದಲ್ಲಿ ನಮೂದಿಸಿ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿ, ಅವರವರ ಊರುಗಳಿಗೆ ತೆರಳಲು ಯಾವುದೇ ತೊಡಕಾಗದಂತೆ ಗ್ರಾಮ ಪಂಚಾಯ್ತಿ ನಿಭಾಯಿಸಿ. ಪ್ರತಿ ಊರುಗಳಿಗೂ ಗ್ರಾಮಕಾರ್ಯ ಪಡೆಗಳನ್ನು ರಚಿಸಿ, ಪಂಚಾಯ್ತಿ ಕೋವಿಡ್ 19 ಕಾರ್ಯ ಪಡೆಯನ್ನು ರಚನೆ ಮಾಡಿ ಕಾಲಕಾಲಕ್ಕೆ ತರಬೇತಿ ನೀಡಿ, ಸುರಕ್ಷತೆಯ ಬಗ್ಗೆ ನಿರಂತರವಾಗಿ ಸಭೆಗಳನ್ನು ಮಾಡಿ ತಿಳಿವಳಿಕೆ ಮತ್ತು ಜವಾಬ್ದಾರಿಗಳನ್ನು ಪರಸ್ಪರ ಹಂಚಿಕೊಳ್ಳಲಾಗುತ್ತಿತ್ತು. ಡಿ.ವೈ.ಎಸ್.ಪಿ, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಸ್ವಯಂಸೇವಾಸಂಸ್ಥೆಗಳ ಜೊತೆಗೆ ನಿರಂತರ ಸಭೆಗಳನ್ನು ಏರ್ಪಡಿಸಲಾಯಿತು. ಇದೇ ಸಂದರ್ಭಕ್ಕೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ, ವೈಯಕ್ತಿಕ ತಮ್ಮ ಆಸ್ತಿ/ಜಮೀನಿನಲ್ಲಿ ಕೆಲಸ ನಿರ್ವಹಿಸಿ ತಮ್ಮ ಖಾತೆಗೆ ನೇರವಾಗಿ ಹಣ ಪಡೆಯುವಂತೆಯೂ, ಸಮುದಾಯ ನೆಲೆಯ ಕೆಲಸ ಮಾಡಿ ಆಸ್ತಿ ಸೃಜನೆ ಮಾಡಿಕೊಳ್ಳುವಂತೆಯೂ ಜಾಗೃತಿ ಮೂಡಿಸಿ ಯಶಸ್ವಿಯಾಗಿ ಖಾತ್ರಿ ಕೆಲಸವನ್ನು ಹಂಚಲಾಯಿತು. ಹೀಗೆ ಖಾತ್ರಿ ಯೋಜನೆಯಲ್ಲಿ ಕೈಗೊಳ್ಳಬಹುದಾದ 96 ಕೆಲಸಗಳ ಪಟ್ಟಿಯನ್ನು ಪಂಚಾಯ್ತಿಯು ಸಾರ್ವಜನಿಕರಿಗೆ ತಿಳಿಯಪಡಿಸಿತು.

ಪಂಚಾಯ್ತಿಯ ವಾರ್ಷಿಕ ಆದಾಯ ಸರಿಸುಮಾರು ಎರಡೂವರೆ ಕೋಟಿಯಷ್ಟಿದೆ. ಪಂಚಾಯ್ತಿಯಲ್ಲಿ 38 ಜನ ಸ್ಟಾಫ್ ಇದ್ದು, ಇವರಿಗೆ ವಾರ್ಷಿಕ ತಿಂಗಳ ಸಂಬಳವೇ 55 ಲಕ್ಷದಷ್ಟಾಗುತ್ತದೆ. ಪಂಚಾಯ್ತಿಯ ಆದಾಯ ಹೆಚ್ಚಿದ್ದರೂ, ಈ ಪ್ರದೇಶ ನಗರೀಕರಣವಾದಂತೆ ಗರಿಷ್ಠಮಟ್ಟದ ಸೌಲಭ್ಯಗಳನ್ನು ಉತ್ತಮ ಗುಣಮಟ್ಟದಲ್ಲಿ ಕೊಡಬೇಕಾಗುತ್ತದೆ. ಹಾಗಾಗಿ ಆದಾಯದಂತೆ ಪಂಚಾಯ್ತಿಯ ಖರ್ಚನ್ನೂ ಯೋಜನಾಬದ್ಧವಾಗಿ ನಿರ್ವಹಿಸಲಾಗಿದೆ.

‘ನಾನು ರಾಜಾನುಕುಂಟೆ ಪಂಚಾಯ್ತಿಗೆ ಉಡುಪಿಯಿಂದ ವರ್ಗವಾಗಿ ಬಂದಾಗ ಈ ಭಾಗದ ಜನರಿಗೆ ಗ್ರಾಮ ಪಂಚಾಯ್ತಿ ಅಂದ್ರೆ ಅದು ಕೇವಲ ರಸ್ತೆ, ನೀರು, ಬೀದಿ ದೀಪಕ್ಕೆ ಸೀಮಿತ ಎಂದಷ್ಟೆ ತಿಳಿದಿದ್ದರು. ಒಂದು ಸರಕಾರ ಎಲ್ಲಾ ಇಲಾಖೆಯ ಕೆಲಸಗಳನ್ನು ಹೇಗೆ ಮಾಡುತ್ತೋ, ಹಾಗೆ ಎಲ್ಲಾ ಇಲಾಖೆಗಳ ಕೆಲಸಗಳನ್ನೂ ಗ್ರಾಮ ಪಂಚಾಯ್ತಿ ಮಾಡುತ್ತದೆ. ಆರೋಗ್ಯಕ್ಕೆ ಬೇಕಾದ ಸ್ವಚ್ಛ ವಾತಾವರಣ, ಉತ್ತಮ ಹವಾಮಾನಕ್ಕೆ ಬೇಕಾಗುವ ಅರಣ್ಯೀಕರಣ, ಆರ್ಥಿಕವಾಗಿ ಹಿಂದುಳಿದವರ, ಪರಿಶಿಷ್ಟ ಜಾತಿ ಮತ್ತು ವರ್ಗಗಳ, ಅಂಗವಿಕಲರ, ಬಡತನದಲ್ಲಿರುವ ಗರ್ಭಿಣಿ, ಬಾಣಂತಿ, ಚಿಕ್ಕ ಮಕ್ಕಳಿಗೂ ಗ್ರಾಮ ಪಂಚಾಯ್ತಿ ನೆರವಾಗಲು ಸಾಧ್ಯವಿದೆ ಎಂದು ನಾವು ತೋರಿಸಿಕೊಟ್ಟೆವು’ ಎಂದು ರಾಜೇಶ್ ತಮ್ಮ ಕೆಲಸದ ವೈಖರಿಯನ್ನು ಯಾವುದೇ ಹೆಗ್ಗಳಿಕೆ ಇಲ್ಲದೆ ಹೇಳುತ್ತಾರೆ.

ಗ್ರಾಮ ಪಂಚಾಯ್ತಿಯದೇ ನರ್ಸರಿ ಇದೆ. ಈ ನರ್ಸರಿಯಲ್ಲಿ ಬೆಳೆಸಿದ ಗಿಡಗಳನ್ನು ಅರಣ್ಯೀಕರಣಕ್ಕೆ ಬಳಸಲಾಗುತ್ತದೆ. 2017-18 ನೇ ಸಾಲಿನಲ್ಲಿ 15 ಸಾವಿರ ಗಿಡಗಳನ್ನು ಬೆಳೆಸಲಾಗಿತ್ತು. ಗ್ರಾಮ ಪಂಚಾಯ್ತಿಯ ಅಂಗನವಾಡಿಗಳ ಮೇಲೆ ಸೋಲಾರ್ ಅಳವಡಿಸಿ, ಸೋಲಾರ್ ವಿದ್ಯುತ್ ಉತ್ಪಾದನೆಯಲ್ಲಿ ಪ್ರಯೋಗ ಮಾಡಿದೆ. 2017-18 ರಲ್ಲಿ `ನಮ್ಮ ಗ್ರಾಮ ನಮ್ಮ ಯೋಜನೆ’ ಪ್ರಶಸ್ತಿ ಈ ಪಂಚಾಯ್ತಿಗೆ ಲಭಿಸಿದೆ. 2018-19 ನೇ ಸಾಲಿನ ಗಾಂಧಿಗ್ರಾಮ ಪ್ರಶಸ್ತಿಯನ್ನು ಈ ಪಂಚಾಯ್ತಿ ಪಡೆದಿದೆ. 2019 ರ ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿಯೆಂದೂ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಪಂಚಾಯ್ತಿ ಎಂದೂ ಹೆಗ್ಗಳಿಕೆಗೆ ಈ ಪಂಚಾಯ್ತಿ ಪಾತ್ರವಾಗಿದೆ. 2019 ರ ದೀನ್ ದಯಾಳ್ ಉಪಧ್ಯಾಯ್ ಪಂಚಾಯ್ತಿ ಸಶಕ್ತೀಕರಣ ಪುರಸ್ಕಾರವೂ ಸಿಕ್ಕಿದೆ. ಹೀಗಾಗಿಯೇ ಬೇರೆ ಬೇರೆ ಭಾಗದ ಶಾಸಕರು, ಗ್ರಾಮಪಂಚಾಯ್ತಿ ಅಧಿಕಾರಿಗಳು ಈ ಗ್ರಾಮ ಪಂಚಾಯ್ತಿಯ ಮಾದರಿಗಳನ್ನು ನೋಡಲೆಂದೇ ಬರುತ್ತಾರೆ.

`ನಮ್ಮ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗ, ಪಂಚಾಯ್ತಿಯ ನಾಗರಿಕರು ಹೀಗೆ ಎಲ್ಲರ ಸಹಕಾರದಿಂದ ಇಷ್ಟೆಲ್ಲಾ ಸಾಧ್ಯವಾಗಿದೆ’ ಎಂದು ವಿನಯದಿಂದಲೇ ಮಾತನಾಡುವ ರಾಜೇಶ್ ಅವರಂಥ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಕಡೆಗೂ ಅಗತ್ಯವಿದೆ


ಇದನ್ನು ಓದಿ: ಜಗಳೂರೆಂಬ ಬರಡು ನೆಲದ ಭಗೀರಥ ಪ್ರತಿಭೆ: ಪ್ರವೀಣ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...