Homeಮುಖಪುಟತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ತಮಿಳುನಾಡಿನ ಪೊಲೀಸ್‌ ದೌರ್ಜನ್ಯಕ್ಕೆ ಮತ್ತೊಬ್ಬ ಆಟೋ ಡ್ರೈವರ್ ಬಲಿ: ಪ್ರತಿಭಟನೆ

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಪೊಲೀಸರು ತಂದೆ-ಮಗನನ್ನು ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಪೊಲೀಸ್‌ ದೌರ್ಜನ್ಯಕ್ಕೆ ತುತ್ತಾಗಿ 25 ವರ್ಷದ ಯುವಕನೊಬ್ಬ ಸಾವನಪ್ಪಿರುವ ದುರ್ಘಟನೆ ಜರುಗಿದೆ.

ತೆಂಕಾಸಿ ಜಿಲ್ಲೆಯ ಆಟೋಡ್ರೈವರ್ ಈ ಶನಿವಾರ ಮೃತಪಟ್ಟಿದ್ದು, ಅವರು 48 ದಿನಗಳ ಮೊದಲು ಇಬ್ಬರು ಪೊಲೀಸರಿಂದ ತೀವ್ರ ಹಲ್ಲೆಗೆ ಒಳಗಾಗಿ ಒಳ ಗಾಯಗಳು, ರಕ್ತಸ್ರಾವದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಹತ್ಯೆಗೊಳಗಾದ ವ್ಯಕ್ತಿಯ ತಂದೆ ನೀಡಿದ ದೂರಿನ ಪ್ರಕಾರ “ಎನ್ ಕುಮರೇಶನ್ ಎಂಬ ಆಟೋ ಡ್ರೈವರ್‌ ಮೇಲೆ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಕುಮಾರ್ ಎಂಬುವವರು ತೀವ್ರ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಸಿಆರ್‌ಪಿಸಿ 174(3)ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತನ ತಂದೆ ನವನೀತಕೃಷ್ಣನ್ ಮಾತನಾಡಿ “ಕುಮರೇಶನ್‌ಗೆ ಸೆಂಥಿಲ್ ಎಂಬುವವರ ಜೊತೆ ಆಸ್ತಿ ವಿಚಾರಕ್ಕೆ ವಿವಾದವುಂಟಾಗಿತ್ತು. ಈ ವಿಚಾರವಾಗಿ ಸೆಂಥಿಲ್ ನೀಡಿದ ದೂರಿನ ಆಧಾರದಲ್ಲಿ ವೀರಕೇರಳಂಪುದುರ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಕುಮರೇಶನ್‌ನನ್ನು ಮೇ 08ರಂದು ಠಾಣೆಗೆ ಕರೆಸಿಕೊಂಡು ಥಳಿಸಿದ್ದಾರೆ. ಅದನ್ನು ನಾವು ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಮತ್ತಷ್ಟು ಥಳಿಸಿದ್ದಾರೆ” ಎಂದು ದೂರಿದ್ದಾರೆ.

ಮೇ 09ರ ಮಧ್ಯಾಹ್ನ ಆಟೋ ಸ್ಟ್ಯಾಂಡ್‌ನಲ್ಲಿದ್ದ ಕುಮರೇಶನ್‌ನನ್ನು ಮತ್ತೆ ಸಬ್‌ ಇನ್ಸ್‌ಪೆಕ್ಟರ್‌ ಕರಸಿಕೊಂಡಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ವಿವಾದವಾಗಿದೆ. ನನ್ನ ಮಗ ಕುಮರೇಶನ್ ನಾನು ಕೂಡ ನಿಮ್ಮಂತೆಯೇ ಖಾಕಿ ಧರಿಸಿದ್ದೇನೆ ಎಂದಿದ್ದರಿಂದ ಕೋಪಗೊಂಡ ಎಸ್‌ಐ ಮೊಬೈಲ್ ಕಿತ್ತುಕೊಂಡು ಕಳಿಸಿದ್ದಾರೆ. ಈ ಕುರಿತು ಮೇ 10ರಂದು ಪೊಲೀಸ್‌ ಠಾಣೆಗೆ ಹೋದ ಕುಮರೇಶನ್ ಮೇಲೆ ಎಸ್‌ಐ ಮತ್ತು ಕಾನ್ಸ್‌ಟೇಬಲ್‌ ಕ್ರೂರವಾಗಿ ಥಳಿಸಿದ್ದಾರೆ. ಆತನನ್ನು ಮೊಣಕಾಲ ಮೇಲೆ ಕುಳ್ಳಿರಿಸಿ ಒದ್ದಿದ್ದಾರೆ ಎಂದು ನವನೀತಕೃಷ್ಣನ್ ಆರೋಪಿಸಿದ್ದಾರೆ.

ಆನಂತರ ಕುಮರೇಶನ್‌ನನ್ನು ಮನೆಗೆ ಕಳುಹಿಸಲಾಯಿತಾದರೂ ಹಲ್ಲೆಯ ಕುರಿತು ಎಲ್ಲಾದರೂ ಬಾಯಿಬಿಟ್ಟರೆ ಅಪ್ಪ ಮಗನ ವಿರುದ್ಧ ತೀವ್ರ ಕೇಸ್‌ಗಳನ್ನು ಹಾಕಬೇಕಾಗುತ್ತದೆ ಎಂದು ಬೆದರಿಸಿದ್ದಾರೆ. ಇದರಿಂದ ಕುಮರೇಶನ್ ತನ್ನ ಕುಟುಂಬ ಸೇರಿದಂತೆ‌ ಎಲ್ಲಿಯೂ ಸಹ ಹೇಳಿಕೊಂಡಿಲ್ಲ. ಆದರೆ  ದಿನೇ ದಿನೇ ಆತ ಊಟ ಮಾಡುವುದು ಕಡಿಮೆಯಾಗುತ್ತಾ, ವಾಂತಿ ಶುರುವಾಗಿದೆ. ಕೆಲವೊಮ್ಮೆ ರಕ್ತವಾಂತಿಯಾಗುತ್ತಿತ್ತು ಎಂದು ಅವರ ತಂದೆ ಹೇಳಿದ್ದಾರೆ.

ಜೂನ್ 10ರಂದು ಕುಮರೇಶನ್‌ ರಕ್ತವಾಂತಿ ಮಾಡಿಕೊಂಡಿದ್ದಲ್ಲದೇ ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಆಗ ಆತನನ್ನು ಆಸ್ಪತ್ತೆಗೆ ದಾಖಲು ಮಾಡಿದ್ದು ಅಲ್ಲಿಯೂ ಸಹ ಆತ ತನ್ನ ಮೇಲಾದ ಹಲ್ಲೆಯ ಕುರಿತು ಮಾಹಿತಿ ನೀಡಿಲ್ಲ. ಆದರೆ ಮೂರು ದಿನಗಳ ನಂತರ ಆತನ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಾಗ ಅವರನ್ನು ತಿರುನೆಲ್ವೆಲಿ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ಅಲ್ಲಿ ವೈದ್ಯರು ಚಿಕಿತ್ಸೆ ನೀಡುವ ವೇಳೆ ಒಳಗಾಯಗಳು, ಕರುಳು, ಕಿಡ್ನಿಗೆ ತೊಂದರೆ ಮತ್ತು ರಕ್ತಸ್ರಾವ ಉಂಟಾಗಿರುವುದಾಗಿ ತಿಳಿಸಿದ್ದಾರೆ. ಆಗ ಕುಮರೇಶನ್ ತನ್ನ ಮೇಲಾದ ಪೊಲೀಸ್‌ ಹಲ್ಲೆಯ ಕುರಿತು ಬಾಯ್ಬಿಟ್ಟಿದ್ದಾನೆ ಎಂದು ಅವರ ತಂದೆ ತಿಳಿಸಿದ್ದಾರೆ. ಆನಂತರ ಪೊಲೀಸರು ಬಂದು ದೂರು ದಾಖಲಿಸಿಕೊಂಡಿದ್ದರು ಸಹ ಕ್ರೂರ ಹಲ್ಲೆಯ ಕುರಿತು ಯಾವುದೇ ಹೇಳಿಕೆ ಪಡೆದಿಲ್ಲ ಎಂದು ಅವರ ತಂದೆ ದೂರಿದ್ದಾರೆ.

ಆನಂತರ ನವನೀತಕೃಷ್ಣನ್ ತೆಂಕಾಸಿ ಎಸ್‌ಪಿ ಸುಗಣ ಸಿಂಗ್ ಬಳಿ ದೂರು ದಾಖಲಿಸಿದ್ದಾರೆ. ಆದರೆ ಆರೋಪಿ ಪೊಲೀಸರ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆಸ್ಪತ್ರೆಗೆ ದಾಖಲಿಸಿದ 16 ದಿನದ ನಂತರ ನಮ್ಮ ಮಗ ಸಾವನಪ್ಪಿದ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಸಾವಿನ ವಿಷಯ ತಿಳಿಯುತ್ತಿದ್ದಲೇ ಸಂತ್ರಸ್ತನ ಸ್ನೇಹಿತರು ಮತ್ತು ಸಂಬಂಧಿಗಳು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳಾದ ಎಸ್‌ಯ ಚಂದ್ರಶೇಖರ್ ಮತ್ತು ಕಾನ್ಸ್‌ಟೇಬಲ್ ಮೇಲೆ ಕೊಲೆ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಆನಂತರ ಪೊಲೀಸರು ಅನುಮಾನಸ್ಪದ ಸಾವಿನ ದೂರು ದಾಖಲಿಸಿಕೊಂಡಿದ್ದಾರೆ.

ಮೃತನ ಮರಣೋತ್ತರ ಪರೀಕ್ಷೆಯನ್ನು ತಿರುನೆಲ್ವೆಲಿ ಮೆಡಿಕಲ್ ಕಾಲೇಜಿನಲ್ಲಿ ಭಾನುವಾರ ನಡೆಸಿದ್ದು ಅದನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಸುರಕ್ಷಿತವಾಗಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.


ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...