Homeಮುಖಪುಟಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

ಮಗು ಸಾಯುತ್ತಿದ್ದರೂ ವೈದ್ಯರು ಮುಟ್ಟಿಲ್ಲವೆಂದು ಆರೋಪ; ಹೃದಯ ವಿದ್ರಾವಕಾರಿ ಘಟನೆ

- Advertisement -
- Advertisement -

ಆಸ್ಪತ್ರೆಯ ಕಟ್ಟಡದೊಳಗೆ ಯುವ ದಂಪತಿಗಳಿಬ್ಬರು ತಮ್ಮ ಒಂದು ವರ್ಷದ ಗಂಡು ಮಗುವನ್ನು ಅಪ್ಪಿ ಹಿಡಿದುಕೊಂಡು ಅಳುತ್ತಿರುವ ಹೃದಯ ವಿದ್ರಾವಕಾರಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅದು ಉತ್ತರ ಪ್ರದೇಶದ ಕನೌಜ್ ಪಟ್ಟಣದ್ದೆಂದು ವರದಿಯಾಗಿದೆ.

ತಮ್ಮ ಒಂದು ವರ್ಷದ ಮಗುವಿಗೆ ಜ್ವರ ಹಾಗೂ ಕತ್ತಿನ ಭಾಗ ಊದಿ ಕೊಂಡಿದ್ದರಿಂದ ಆಸ್ಪತ್ರೆಗೆ ಧಾವಿಸಿದ್ದರು. ಆದರೆ ಆಸ್ಪತ್ರೆಯ ವೈದ್ಯರು ಮಗುವನ್ನು ಮುಟ್ಟಲು ನಿರಾಕರಿಸಿ, ಮಗುವನ್ನು ಆಸ್ಪತ್ರೆಯಿಂದ 90 ಕಿ.ಮಿ. ದೂರದ ಕಾನ್ಪುರಕ್ಕೆ ಕರೆದೊಯ್ಯಲು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆಸ್ಪತ್ರೆಯ ವೈದ್ಯರು ಮತ್ತು ಕನೌಜ್‌ ಜಿಲ್ಲಾಡಳಿತ ಇದನ್ನು ನಿರಾಕರಿಸಿದೆ.

ನಿನ್ನೆ ಸಂಜೆ 4.45 ರ ಸುಮಾರಿಗೆ ಚಿತ್ರೀಕರಿಸಿದ ವೀಡಿಯೊವೊಂದರಲ್ಲಿ ದಂಪತಿಗಳಾದ ಪ್ರೇಮ್‌‌ ಚಂದ್ ಮತ್ತು ಆಶಾ ದೇವಿ ತಮ್ಮ ಮಗು ಅನುಜ್ ಮೃತ ದೇಹವನ್ನು ಹಿಡಿದು ರೋಧಿಸುತ್ತಿರುವುದು ಕಾಣಬಹುದಾಗಿದೆ.

ಮತ್ತೊಂದು ವೀಡಿಯೋ ಕ್ಲಿಪ್ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಯ ಮೇಲೆ ಮಗುವನ್ನು ವೈದ್ಯರು ಪರೀಕ್ಷಿಸುತ್ತಿರುವುದನ್ನು ತೋರಿಸುತ್ತದೆ.

“ಜನರು ತಮ್ಮ ಫೋನ್‌ಗಳಲ್ಲಿ ನಮ್ಮನ್ನು ಚಿತ್ರೀಕರಿಸಲು ಪ್ರಾರಂಭಿಸಿದ ನಂತರವೇ ಆ ಪರೀಕ್ಷೆ ಮಾಡಿದ್ದಾರೆ. ಅದಕ್ಕೂ ಮೊದಲು ಯಾವುದೇ ವೈದ್ಯರು ನನ್ನ ಮಗುವನ್ನು ಮುಟ್ಟಲು ಸಿದ್ಧರಿರಲಿಲ್ಲ. ನಾವು 30 ನಿಮಿಷಗಳ ಕಾಲ ಅಲ್ಲಿದ್ದೆವು. ಅವರು ‘ಕಾನ್ಪುರಕ್ಕೆ ಕರೆದೊಯ್ಯಿರಿ’ ಎಂದು ಹೇಳುತ್ತಲೇ ಇದ್ದರು. ನಾನು ಒಬ್ಬ ಬಡ ವ್ಯಕ್ತಿ ನನ್ನ ಬಳಿ ಹಣವಿಲ್ಲ. ನಾನು ಏನು ಮಾಡಬಹುದಿತ್ತು” ಎಂದು ಪ್ರೇಮ್ ಚಂದ್ ಹೇಳಿದ್ದಾರೆ.

“ಅವನ ಕುತ್ತಿಗೆ ಊದಿಕೊಂಡಿತ್ತು, ಅವರು ನಮ್ಮನ್ನು 30-40 ನಿಮಿಷಗಳ ಕಾಲ ಕಾಯಿಸಿದ್ದರು. ನಂತರ ದಾಖಲಿಸಲಾಯಿತಾದರೂ ಆ ಹೊತ್ತಲ್ಲಿ ಮಗು ಸತ್ತು ಹೋಗಿತ್ತು” ಎಂದು ಮಗುವಿನ ತಾಯಿ ಆಶಾ ದೇವಿ ಹೇಳಿದ್ದಾರೆ.

ಜಿಲ್ಲೆಯ ವೈದ್ಯರು ಮತ್ತು ಅಧಿಕಾರಿಗಳು ಆರೋಪವನ್ನು ನಿರಾಕರಿಸಿ ಯಾವುದೇ ನಿರ್ಲಕ್ಷ್ಯ ನಡೆದಿಲ್ಲ ಎಂದಿದ್ದಾರೆ.

“ನಿನ್ನೆ ಸಂಜೆ 4.15 ಕ್ಕೆ ಬಾಲಕನನ್ನು ಆಸ್ಪತ್ರೆಗೆ ಕರೆತರಲಾಯಿತು. ಮಗುವನ್ನು ತುರ್ತು ವಾರ್ಡ್‌ಗೆ ದಾಖಲಿಸಲಾಗಿದೆ. ಪ್ರಕರಣವು ತುಂಬಾ ಗಂಭೀರವಾಗಿತ್ತು, ಅದಕ್ಕೆ ಮಕ್ಕಳ ತಜ್ಞರನ್ನು ತುರ್ತು ವಾರ್ಡ್‌ಗೆ ಕರೆಸಲಾಯಿತು ಆದರೆ 30 ನಿಮಿಷಗಳ ಅಂತರದಲ್ಲಿ ಮಗು ಸಾವನ್ನಪ್ಪಿತು. ವೈದ್ಯರು ಅವರು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದರು ಆದರೆ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೇಲ್ನೋಟಕ್ಕೆ ಯಾವುದೇ ನಿರ್ಲಕ್ಷ್ಯ ಕಂಡುಬಂದಿಲ್ಲ ಎಂದು ತೋರುತ್ತದೆ ” ಎಂದು ಕನೌಜ್‌ನ ಸರ್ಕಾರಿ ಉನ್ನತ ಅಧಿಕಾರಿ ರಾಜೇಶ್ ಕುಮಾರ್ ಮಿಶ್ರಾ ಮಾಧ್ಯಮಕ್ಕೆ ತಿಳಿಸಿದ್ದಾರೆ.


ಓದಿ: ಉತ್ತರ ಪ್ರದೇಶ: ’ಪರೀಕ್ಷೆ ಇಲ್ಲ-ಕರೋನಾ ಇಲ್ಲ’ ಎಂದ ನಿವೃತ್ತ ಐಎಎಸ್ ಅಧಿಕಾರಿಯ ಮೇಲೆ ಎಫ್‌ಐಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...