Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಈ ಟ್ವಿಟ್ಟರ್‌ ಹ್ಯಾಂಡಲ್ ಹಂಚಿಕೊಂಡಿರುವ ಟ್ವೀಟ್ 10,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಮತ್ತು 50,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

- Advertisement -
- Advertisement -

ಒಂದು ತಿಂಗಳೊಳಗೆ 12,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಗಳಿಸಿರುವ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹೆಸರು ಇರುವ ಟ್ವಿಟರ್ ಖಾತೆ ಜೂನ್ 20 ರಂದು ಟ್ವೀಟ್ ಮಾಡಿ, ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಜಿಯೋ ಜಾಹೀರಾತಿನಿಂದ ತೆಗೆದುಹಾಕಲು ನಿರ್ಧರಿಸಿದ್ದಾರೆ ಎಂದು ಬರೆದಿದೆ.

ಈ ಟ್ವಿಟ್ಟರ್‌ ಹ್ಯಾಂಡಲ್ ಹಂಚಿಕೊಂಡಿರುವ ಟ್ವೀಟ್ 10,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಮತ್ತು 50,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಕೇವಲ ಅದೊಂದೆ ಅಲ್ಲದೆ ಮುಕೇಶ್ ಅಂಬಾನಿ ಹೆಸರಿನ ಹಲವಾರು ಟ್ವಿಟ್ಟರ್‌ ಅಕೌಂಟ್‌ಗಳು ”ನಾನು ಜಿಯೊ ಸಿಮ್‌ ಕಾರ್ಡ್‌ನಿಂದ ಶಾರುಖ್ ಖಾನ್‌ನನ್ನು ತೆಗೆದು ಹಾಕುತ್ತಿದ್ದೇನೆ, ನಿಮ್ಮ ಅಭಿಪ್ರಾಯವೇನು?” ಎಂದು ಅದೇ ಪೋಸ್ಟನ್ನು ಬರೆದಿದೆ.

ಫ್ಯಾಕ್ಟ್ ಚೆಕ್

ಮೊದಲನೆಯದಾಗಿ ಮುಖೇಶ್ ಅಂಬಾನಿ ಅವರ ಹಸರಿರುವ ಈ ಖಾತೆಯನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಯಾಕೆಂದರೆ ಈ ಹ್ಯಾಂಡಲ್‌ನಲ್ಲಿ ‘ಬ್ಲೂ ಟಿಕ್’ ಇಲ್ಲ.

ಎರಡನೆಯದಾಗಿ, ಹ್ಯಾಂಡಲ್ ತನ್ನನ್ನು ‘ರಿಯಲ್‌ಮುಕೇಶಂಬನ್’ (Realmukeshamban) ಎಂದು ಉಲ್ಲೇಖಿಸಿದೆ, ಇದರಲ್ಲಿ ‘ಅಂಬಾನಿ’ ಎಂಬೂದನ್ನು ತಪ್ಪಾಗಿ ಬರೆಯಲಾಗಿದೆ.

ಇದಲ್ಲದೆ, ಈ ಖಾತೆಯ ಟ್ವೀಟ್‌ಗಳನ್ನು ಗಾಯಕ ಸೋನು ನಿಗಮ್ ಮತ್ತು ನಟಿ ಕಂಗನಾ ರಾಣಾವತ್ ಅವರ ಹೆಸರಿರುವ ನಕಲಿ ಖಾತೆಗಳು ರಿಟ್ವೀಟ್ ಮಾಡುತ್ತಿರುವುದನ್ನು ಗಮನಿಸಬಹುದಾಗಿದೆ

ಕಂಗನಾ ರನೌತ್ ಅವರ ನಕಲಿ ಖಾತೆ ಅಂಬಾನಿಯನ್ನು ಜಿಯೋ ಜಾಹೀರಾತಿನಿಂದ ಶಾರುಖ್ ಖಾನ್ ಅವರನ್ನು ತೆಗೆದುಹಾಕುವಂತೆ ಕೇಳಿಕೊಂಡಿತ್ತು.

ಈ ಎರಡೂ ಖಾತೆಗಳು ಶಾರುಖ್ ಖಾನ್ ಅವರನ್ನು ಜಿಯೋ ಜಾಹೀರಾತಿನಿಂದ ತೆಗೆದುಹಾಕುವಂತೆ ಅಂಬಾನಿಯನ್ನು ಒತ್ತಾಯಿಸಿದ್ದವು.

ಅಲ್ಲದೆ ಶಾರುಖ್ ಖಾನ್ ಅವರನ್ನು ತೆಗೆದು ಹಾಕಲಾಗಿದೆ ಎಂದು ಬರೆದಿರುವ ಖಾತೆಯ ಬಯೋದಲ್ಲಿ “ಈ ಖಾತೆಯು ಮುಖೇಶ್ ಅಂಬಾನಿ ಅವರ ಮೀಡಿಯಾ ಪ್ಯಾನೆಲ್ ತಂಡ ನಿರ್ವಹಿಸುತ್ತಿದೆ.” ಎಂದು ಬರೆದಿದೆ.

ಖಾತೆಯ ಸ್ಥಳ ನವದೆಹಲಿ ಎಂದು ಉಲ್ಲೇಖಿಸಿದೆ ಆದರೆ ಅಂಬಾನಿ ಮುಂಬೈನಲ್ಲಿ ವಾಸಿಸುತ್ತಿದ್ದಾರೆ.

ಒಟ್ಟಿನಲ್ಲಿ ತಿಳಿದು ಬರುವುದೇನೆಂದರೆ ಪ್ರಸ್ತುತ ಟ್ವಿಟ್ಟರ್ ಖಾತೆ ಹಾಗೂ ಟ್ವೀಟ್ ನಕಲಿಯಾಗಿದ್ದು, ಅಂಬಾನಿ ಅಥವಾ ಅವರ ಕುಟುಂಬದ ಸದಸ್ಯರು ಅಧಿಕೃತ ಟ್ವಿಟರ್ ಖಾತೆಗಳನ್ನು ಹೊಂದಿಲ್ಲ ಎಂದು ”ದಿ ಕ್ವಿಂಟ್ಗೆ” ವರದಿ ಮಾಡಿದೆ.


ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ; ಅವರು ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...