Homeಮುಖಪುಟತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

ತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

- Advertisement -
- Advertisement -

ಹಲವಾರು ಭಾಷೆಗಳಲ್ಲಿ ರಿಮೇಕ್ ಆಗಿರುವ ಜನಪ್ರಿಯ ಸಿನೆಮಾ ’ಸಿಂಗಂ’ ಇದರ ನಿರ್ದೇಶಕ ಹರಿ ಅವರು ಪೊಲೀಸರನ್ನು ವೈಭವೀಕರಿಸುವ ಚಿತ್ರಗಳನ್ನು ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಹರಿ ಇದುವರೆಗೆ ಪೊಲೀಸ್ ಕಥಾವಸ್ತುಗಳ ಮೇಲೆ ಐದು ಚಲನಚಿತ್ರಗಳನ್ನು ಮಾಡಿದ್ದು, ಈ ಪಾತ್ರಗಳೆಲ್ಲವೂ  ಎನ್ಕೌಂಟರ್‌ಗಳನ್ನು ಸಮರ್ಥಿಸುತ್ತಾ ಪೊಲೀಸ್ ಹಿಂಸಾಚಾರವನ್ನು ವೈಭವೀಕರಿಸುತ್ತವೆ.

ಜೂನ್ 28 ರ ದಿನಾಂಕ ಮತ್ತು ಅವರ ಸಹಿ ಇರುವ ತನ್ನ ಪತ್ರದಲ್ಲಿ, ತಮಿಳುನಾಡಿನ ಯಾವುದೇ ವ್ಯಕ್ತಿಯು ಸಾಥಂಕುಲಂನಲ್ಲಿ ನಡೆದ ಕ್ರೂರತೆಗೆ ಒಳಗಾಗಬಾರದು ಎಂದು ಬರೆದಿದ್ದಾರೆ.

“ಸಾಥಂಕುಲಂ ಘಟನೆ ತಮಿಳುನಾಡಿನಲ್ಲಿ ಬೇರೆಯವರಿಗೆ ಆಗಬಾರದು. ಅದಕ್ಕೆ ಇರುವ ಏಕೈಕ ಮಾರ್ಗವೆಂದರೆ ಅದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗುವುದು. ಪೊಲೀಸ್ ಪಡೆಯಲ್ಲಿ ಕೆಲವರು ನಿಯಮ ಉಲ್ಲಂಘಿಸಿದ್ದು ಇಡೀ ಪಡೆಗೆ ಅಪಮಾನ ತಂದಿದೆ. ಪೊಲೀಸರನ್ನು ವೈಭವೀಕರಿಸುವ ಐದು ಚಲನಚಿತ್ರಗಳನ್ನು ಮಾಡಿದ್ದಕ್ಕಾಗಿ ನಾನು ಇಂದು ತುಂಬಾ ದುಃಖಿತನಾಗಿದ್ದೇನೆ” ಎಂದು ಅವರು ಬರೆದಿದ್ದಾರೆ.

ಜಯರಾಜ್ ಮತ್ತು ಬೆನಿಕ್ಸ್ ಎಂಬವರು ಪೊಲೀಸರ ವಶದಲ್ಲಿ ಸಾವಿಗೀಡಾದ ನಂತರ ಇವರಿಬ್ಬರನ್ನು ಪೊಲೀಸರು ಚಿತ್ರಹಿಂಸೆಗೊಳಪಡಿಸಿದ್ದಾರೆ, ಅದರಿಂದಾಗಿ ಅವರು ಸಾವಿಗೀಡಾದರು ಎಂಬ ಆರೋಪಗಳೆದ್ದು ತಮಿಳುನಾಡಿನಲ್ಲಿ ಭಾರಿ ಆಕ್ರೋಶದ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ನಿರ್ದೇಶಕ ಹರಿ ಅವರ ಹೇಳಿಕೆ ಬಂದಿದೆ.

ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಹಿರಂಗವಾಗಿಲ್ಲ.

ಹರಿ ಇದುವರೆಗೆ ಪೊಲೀಸ್ ಕಥಾವಸ್ತುಗಳನ್ನಿಟ್ಟು ಐದು ಚಲನಚಿತ್ರಗಳನ್ನು ಮಾಡಿದ್ದಾರೆ. ಈ ಎಲ್ಲಾ ಪಾತ್ರಗಳು  ಎನ್ಕೌಂಟರ್ಗಳನ್ನು ಸಮರ್ಥಿಸುತ್ತದೆ ಮತ್ತು ಪೊಲೀಸ್ ಹಿಂಸಾಚಾರವನ್ನು ವೈಭವೀಕರಿಸುತ್ತದೆ.

ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳಿಗೆ ಹಲವಾರು ಆಕ್ಷನ್ ಸನ್ನಿವೇಶಗಳನ್ನು ಹೊಂದಿದ್ದು, ಅಪರಾಧವನ್ನು ನಿಯಂತ್ರಣದಲ್ಲಿಡಲು ಹಿಂಸಾಚಾರದ ಅಗತ್ಯವನ್ನು ವೈಭವೀಕರಿಸುವ ಪಂಚ್ ಡೈಲಾಗ್‌ಗಳನ್ನು ಈ ಪಾತ್ರಗಳು ಹೇಳುತ್ತದೆ.

ಹರಿ ಅವರ ಸಿಂಗಂ ಸಿನಿಮಾ 2010 ರಲ್ಲಿ ಮೊದಲಿಗೆ ತಮಿಳಿನಲ್ಲಿ ಬಿಡುಗಡೆಯಾಗಿ, ನಂತರ ಕನ್ನಡ, ಹಿಂದಿ, ಬಂಗಾಳಿ ಮತ್ತು ಪಂಜಾಬಿ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ ರಿಮೇಕ್ ಮಾಡಲಾಯಿತು. ಹಿಂದಿಯಲ್ಲಿ ನಟ ಅಜಯ್ ದೇವ್‌ಗನ್ ಪ್ರಮುಖ ಪಾತ್ರ ನಿರ್ವಹಿಸಿದ್ದರು.


ಓದಿ: ಅಮ್ಮ ಆರೋಗ್ಯವಾಗಿದ್ದಾರೆ; ಸುಳ್ಳು ಸುದ್ದಿ ಹಬ್ಬಿಸದಿರಿ: ಹಿನ್ನಲೆ ಗಾಯಕಿ ಎಸ್. ಜಾನಕಿ ಪುತ್ರ ಸ್ಪಷ್ಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...