Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್‌ ಮೇಲೆ ದಾಳಿ?

ಫ್ಯಾಕ್ಟ್‌ಚೆಕ್: ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್‌ ಮೇಲೆ ದಾಳಿ?

ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೆ ಜನ ಸುಮ್ಮನಿರುವರೆ? ಇಲ್ಲಿ ನೋಡಿ ಅವರ ಆಕ್ರೋಶವನ್ನು ಎಂದು ಹಲವಾರು ಜನರು ಈ ವಿಡಿಯೋವನ್ನು ‍ಷೇರ್ ಮಾಡಿದ್ದಾರೆ.

- Advertisement -
- Advertisement -

ಪ್ರತಿನಿತ್ಯ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ಜನರು ತಮ್ಮ ಕೋಪವನ್ನು ತೋರಿಸುತ್ತಿದ್ದಾರೆ ಎಂದು ಹೇಳುವ, ಪೆಟ್ರೋಲ್ ಪಂಪ್ ಅನ್ನು ಧ್ವಂಸ ಮಾಡುವ ವಿಡಿಯೋ ಒಂದು ವೈರಲ್ ಆಗುತ್ತಿದೆ.

#ये_खामोश_मिजाज़ी_तुम्हें_जीने_नहीं_देगी#इज़्ज़त_से_अगर_रहना_है_तो_कोहराम_मचा_दोये देखिये जनता का आक्रोशभड़क चुकी है जनता अब #पेट्रोल #डीज़ल के बढ़ते दाम पे और महंगाई को लेकर कर रही पेट्रोल पंप पर बवाल ,, #_यही_होना_ज़रूरी_है_पूरे_भारत_में_हर_जगह //

Posted by Hansraj Singh Yadav on Wednesday, June 24, 2020

ಜೂನ್ 7 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಏರಿಸುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿದಿದ್ದರೂ ಸಹ ಪೆಟ್ರೋಲ್ ಡೀಸೆಲ್ ಬೆಲೆ ಏರುತ್ತಿರುವುದಕ್ಕೆ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಈ ವಿಡಿಯೋ ನಿಜವಿರಬಹುದು ಎಂದು ಬಹಳಷ್ಟು ಜನರು ನಂಬಿದ್ದಾರೆ.

ಆದರೆ ಈ ಘಟನೆಯು ಒಡಿಶಾದ ಪುರಿಯಲ್ಲಿ 2018 ರಲ್ಲಿ ನಡೆದಿರುವುದನ್ನು ನಾವು ಕಂಡುಕೊಂಡಿದ್ದೇವೆ. ಜೊತೆಗೆ ಜನಸಮೂಹವು ಪೆಟ್ರೋಲ್ ಪಂಪ್ ಅನ್ನು ಧ್ವಂಸಗೊಳಿಸಿದ್ದು ಬೆಲೆಗಳ ಏರಿಕೆಯಿಂದಲ್ಲ. ಬದಲಿಗೆ ಕಡಿಮೆ ಪೆಟ್ರೋಲ್ ಹಾಕಿ ಗ್ರಾಹಕರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜನರು ಪೆಟ್ರೋಲ್ ಪಂಪ್‌ ಮೇಲೆ ದಾಳಿ ನಡೆಸಿದ್ದರು.

ವೀಡಿಯೊವನ್ನು ಎಚ್ಚರಿಕೆಯಿಂದ ನೋಡಿದಾಗ, ಪೆಟ್ರೋಲ್ ಪಂಪ್ ಯಂತ್ರಗಳಲ್ಲಿ ಗೋಚರಿಸುವ ಹಳದಿ ಬ್ಯಾಂಡ್‌ನಲ್ಲಿ ಕೆಲವು ಪಠ್ಯ ಬರೆಯಲಾಗಿದೆ ಎಂದು ನಾವು ಗಮನಿಸಿದ್ದೇವೆ. ಅದನ್ನು ಜೂಮ್ ಮಾಡಿ ನೋಡಿದರೆ, ಅದು ಒರಿಯಾ ಭಾಷೆಯಲ್ಲಿರುವುದು ತಿಳಿಯುತ್ತದೆ.

 

ಅದರ ಆಧಾರದಲ್ಲಿ ಹುಡುಕಾಡಿದಾಗ 29 ಸೆಪ್ಟೆಂಬರ್ 2018 ರಿಂದ ಒಡಿಶಾದ ಪುರಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಹಲವು ಪತ್ರಿಕಾ ವರದಿಗಳು ಲಭ್ಯವಿವೆ.

ವರದಿಯ ಪ್ರಕಾರ, ಗ್ರಾಹಕನು ಪೆಟ್ರೋಲ್ ಪಂಪ್‌ಗೆ ತಾನು ಪಾವತಿಸಿದ್ದಕ್ಕಿಂತ ಕಡಿಮೆ ಪೆಟ್ರೋಲ್ ಹಾಕುತ್ತಿದ್ದರು ಎಂದು ಆರೋಪಿಸಿದ್ದಾನೆ. ಇದು ವಾಗ್ವಾದಕ್ಕೆ ಕಾರಣವಾಗಿ ಅಂತಿಮವಾಗಿ ಸ್ಥಳೀಯರು ಪೆಟ್ರೋಲ್ ಪಂಪ್ ಮೇಲೆ ದಾಳಿ ನಡೆಸಿದ್ದಾರೆ. ಕೊನೆಗೆ ಪೊಲೀಸರು ಬಂದು ಪರಿಸ್ಥಿತಿಯನ್ನು ಶಾಂತಗೊಳಿಸಲು, ಜನಸಮೂಹವನ್ನು ನಿಯಂತ್ರಿಸಲು ಲಾಠಿಚಾರ್ಜ್ ಮಾಡಿದರು ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಕಿತ್ತೆಸೆದರೆ ಮುಖೇಶ್ ಅಂಬಾನಿ ?; ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...