Homeಕರ್ನಾಟಕಕುರಿಗಾಹಿಗೆ ಕೊರೊನಾ - ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

- Advertisement -
- Advertisement -

ಕುರಿಗಾಹಿಗೆ ಕೊರೊನಾ ಬಂದ ಕಾರಣಕ್ಕೆ ಅವನ 45 ಕುರಿಗಳನ್ನು ಕ್ವಾರಂಟೈನ್ ಮಾಡಿರುವ ಅಪರೂಪದ ಪ್ರಸಂಗ ತುಮಕೂರು ಜಿಲ್ಲೆಯ ಚಿಕ್ಕನಾಯನಕಹಳ್ಳಿ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಇದು ಅಕ್ಕಪಕ್ಕದ ಗೊಲ್ಲರಹಟ್ಟಿಗಳ ಜನರು ಆತಂಕಗೊಳ್ಳುವಂತೆ ಮಾಡಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತಿದೆ ಈ ಪ್ರಕರಣ. ಅಷ್ಟೇ ಅಲ್ಲದೇ ಸಚಿವ ಮಾಧುಸ್ವಾಮಿಯವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯ ಇಲಾಖೆಯ ಉಪ ನಿರ್ದೇಶಕರೂ ಗ್ರಾಮಕ್ಕೆ ತೆರಳಿ ಕುರಿಗಳ ಗಂಟಲು ಸ್ರಾವವನ್ನು ಪರೀಕ್ಷೆಗೆ ಕಳಿಸಲಾಗಿದೆ.

ಹೌದು! ಇದೊಂದು ವಿಶೇಷ ಪ್ರಕರಣ. ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿ ಯುವಕನಿಗೆ ಕೊರೊನ ಸೋಂಕು ದೃಢಪಟ್ಟು ಆತನನ್ನು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿ ಇಡಲಾಗಿದೆ. ಕುರಿಗಾಹಿಗೆ ಸೋಂಕು ಬಂದಮೇಲೆ ಕುರಿಗಳಿಗೂ ಅಂಟಿರಬಹುದೆಂದು ಜಿಲ್ಲಾಕೇಂದ್ರದಲ್ಲಿ ಕುಳಿತು ಸಚಿವರು ಕುರಿಗಳನ್ನು ಕ್ವಾರಂಟೈನ್ ಮಾಡುವಂತೆ ಆದೇಶಿಸಿದ್ದಾರೆ. ಹಾಗಾಗಿ 45 ಕುರಿಗಳನ್ನು ಪ್ರತ್ಯೇಕವಾಗಿ ಕೂಡಿಡಲಾಗಿದೆ.

ಸಚಿವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ ತಂಡ ಗೋಡೆಕೆರೆ ಗೊಲ್ಲರಹಟ್ಟಿಗೆ ತೆರಳಿ ಕುರಿಗಳ ತಪಾಸಣೆ ನಡೆಸಿದ್ದಾರೆ. ಕುರಿಗಳ ಗಂಟಲು ಸ್ರಾವವನ್ನು ತೆಗೆದ ಪಶುವೈದ್ಯರ ತಂಡ ಭೂಫಾಲ್ ವೈರಾಲಜಿ ಸೆಂಟರ್ ಗೆ ಕಳಿಸಿಕೊಟ್ಟಿದೆ. ಇದರಿಂದ ಜನರೂ ಕೂಡ ಭೀತಿಗೆ ಒಳಗಾಗಿದ್ದು ಏನಾಗುವುದೋ ಏಂಬ ಆತಂಕ ಮನೆ ಮಾಡಿದೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ “ಪ್ರಾಣಿಗಳಿಗೆ ಕೊರೊನಾ ಸೋಂಕು ಹರಡುವುದಿಲ್ಲ. ಆದರೆ ನಾಲ್ಕು ಕುರಿಗಳು ಸತ್ತ ಹಿನ್ನೆಲೆಯಲ್ಲಿ ಜನರು ಭೀತರಾಗಿದ್ದರು. ಆದ್ದರಿಂದ ಕುರಿಗಳ ಸ್ರಾವವನ್ನು ಭೋಪಾಲ್ ಕೇಂದ್ರಕ್ಕೆ ಪರೀಕ್ಷೆಗೆ ಕಳಿಸಿದ್ದೇವೆ. ಬೆಂಗಳೂರಿಗೂ ಕಳಿಸಿದ್ದೇವೆ. ಕುರಿಗಳನ್ನು ಪ್ರತ್ಯೇಕವಾಗಿಡಲಾಗಿದೆ. ಸೋಂಕಿತ ಕುರಿಗಾಹಿ ತುಮಕೂರಿನಲ್ಲಿದ್ದರೆ ತಂದೆ ತಾಯಿ ತಾಲೂಕು ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದಾರೆ.

ಸದ್ಯಕ್ಕೆ ಕುರಿ ನೋಡಿಕೊಳ್ಳಲು ಯಾರೂ ಇಲ್ಲ. ಜೊತೆಗೆ ಕುರಿ ಸಾವನ್ನಪ್ಪಿರುವುದರಿಂದ ಬೇರೆ ಪ್ರಾಣಿಗಳಿಗೆ ರೋಗ ಅಂಟಬಾರದು ಎಂಬ ಉದ್ದೇಶದಿಂದ ಕೊರೊನಾ ಸೋಂಕಿತ ವ್ಯಕ್ತಿಯ ಕುರಿಗಳನ್ನು ಪ್ರತ್ಯೇಕವಾಗಿ ಇರಿಸಿದ್ದೇವೆ. ಅದು ಕ್ವಾರಂಟೈನ್ ಅಲ್ಲ. ಜನರು ಕೂಡ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಮತ್ತು ಕುರಿಗಳನ್ನು ಕ್ವಾರಂಟೈನ್ ಮಾಡುವ ವಿಷಯ ಜನರಲ್ಲಿ ಹಲವು ರೀತಿಯ ಗೊಂದಲ ಹುಟ್ಟುಹಾಕಿದೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ಮುಖಂಡ ಸಾಸಲು ಸತೀಶ್, ನಿಜವಾಗಿಯೂ ಕೊರೊನಾ ಸೋಂಕು ಬಂದಿರುವುದೇ ಬೇರೆ ಯುವಕನಿಗೆ. ಕುರಿಗಳು ಆ ಯುವಕನಿಗೆ ಸೇರಿದವಲ್ಲ. ಕುರಿಗಳನ್ನು ಕ್ವಾರಂಟೈನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳುವ ಮೂಲಕ ಜನರಿಗೆ ತಪ್ಪು ಸಂದೇಶ ಹೋಗುವಂತೆ ಮಾಡಿದ್ದಾರೆ. ಕುರಿ ಮಾಲಿಕರ ಕುಟುಂಬವನ್ನು ಉಳಿದವರು ವಿಲನ್ ಅಂತೆ ನೋಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ ಸೂಕ್ಷ್ಮ ವಿಚಾರಗಳನ್ನು ದೊಡ್ಡದು ಮಾಡುವ ಬದಲು ಗೊತ್ತಿಲ್ಲದೆ ಬಗೆಹರಿಸಬಹುದಿತ್ತು. ಸ್ಥಳಕ್ಕೆ ಬಂದು ನೋಡದ ಸಚಿವ ಮಾಧುಸ್ವಾಮಿ ಮತ್ತು ಜಿಲ್ಲಾಧಿಕಾರಿಗಳು ಹೀಗೆ ಆದೇಶ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...