Homeಕರ್ನಾಟಕಕುರಿಗಾಹಿಗೆ ಕೊರೊನಾ - ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

- Advertisement -
- Advertisement -

ಕುರಿಗಾಹಿಗೆ ಕೊರೊನಾ ಬಂದ ಕಾರಣಕ್ಕೆ ಅವನ 45 ಕುರಿಗಳನ್ನು ಕ್ವಾರಂಟೈನ್ ಮಾಡಿರುವ ಅಪರೂಪದ ಪ್ರಸಂಗ ತುಮಕೂರು ಜಿಲ್ಲೆಯ ಚಿಕ್ಕನಾಯನಕಹಳ್ಳಿ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಇದು ಅಕ್ಕಪಕ್ಕದ ಗೊಲ್ಲರಹಟ್ಟಿಗಳ ಜನರು ಆತಂಕಗೊಳ್ಳುವಂತೆ ಮಾಡಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತಿದೆ ಈ ಪ್ರಕರಣ. ಅಷ್ಟೇ ಅಲ್ಲದೇ ಸಚಿವ ಮಾಧುಸ್ವಾಮಿಯವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯ ಇಲಾಖೆಯ ಉಪ ನಿರ್ದೇಶಕರೂ ಗ್ರಾಮಕ್ಕೆ ತೆರಳಿ ಕುರಿಗಳ ಗಂಟಲು ಸ್ರಾವವನ್ನು ಪರೀಕ್ಷೆಗೆ ಕಳಿಸಲಾಗಿದೆ.

ಹೌದು! ಇದೊಂದು ವಿಶೇಷ ಪ್ರಕರಣ. ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿ ಯುವಕನಿಗೆ ಕೊರೊನ ಸೋಂಕು ದೃಢಪಟ್ಟು ಆತನನ್ನು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿ ಇಡಲಾಗಿದೆ. ಕುರಿಗಾಹಿಗೆ ಸೋಂಕು ಬಂದಮೇಲೆ ಕುರಿಗಳಿಗೂ ಅಂಟಿರಬಹುದೆಂದು ಜಿಲ್ಲಾಕೇಂದ್ರದಲ್ಲಿ ಕುಳಿತು ಸಚಿವರು ಕುರಿಗಳನ್ನು ಕ್ವಾರಂಟೈನ್ ಮಾಡುವಂತೆ ಆದೇಶಿಸಿದ್ದಾರೆ. ಹಾಗಾಗಿ 45 ಕುರಿಗಳನ್ನು ಪ್ರತ್ಯೇಕವಾಗಿ ಕೂಡಿಡಲಾಗಿದೆ.

ಸಚಿವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ ತಂಡ ಗೋಡೆಕೆರೆ ಗೊಲ್ಲರಹಟ್ಟಿಗೆ ತೆರಳಿ ಕುರಿಗಳ ತಪಾಸಣೆ ನಡೆಸಿದ್ದಾರೆ. ಕುರಿಗಳ ಗಂಟಲು ಸ್ರಾವವನ್ನು ತೆಗೆದ ಪಶುವೈದ್ಯರ ತಂಡ ಭೂಫಾಲ್ ವೈರಾಲಜಿ ಸೆಂಟರ್ ಗೆ ಕಳಿಸಿಕೊಟ್ಟಿದೆ. ಇದರಿಂದ ಜನರೂ ಕೂಡ ಭೀತಿಗೆ ಒಳಗಾಗಿದ್ದು ಏನಾಗುವುದೋ ಏಂಬ ಆತಂಕ ಮನೆ ಮಾಡಿದೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ “ಪ್ರಾಣಿಗಳಿಗೆ ಕೊರೊನಾ ಸೋಂಕು ಹರಡುವುದಿಲ್ಲ. ಆದರೆ ನಾಲ್ಕು ಕುರಿಗಳು ಸತ್ತ ಹಿನ್ನೆಲೆಯಲ್ಲಿ ಜನರು ಭೀತರಾಗಿದ್ದರು. ಆದ್ದರಿಂದ ಕುರಿಗಳ ಸ್ರಾವವನ್ನು ಭೋಪಾಲ್ ಕೇಂದ್ರಕ್ಕೆ ಪರೀಕ್ಷೆಗೆ ಕಳಿಸಿದ್ದೇವೆ. ಬೆಂಗಳೂರಿಗೂ ಕಳಿಸಿದ್ದೇವೆ. ಕುರಿಗಳನ್ನು ಪ್ರತ್ಯೇಕವಾಗಿಡಲಾಗಿದೆ. ಸೋಂಕಿತ ಕುರಿಗಾಹಿ ತುಮಕೂರಿನಲ್ಲಿದ್ದರೆ ತಂದೆ ತಾಯಿ ತಾಲೂಕು ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದಾರೆ.

ಸದ್ಯಕ್ಕೆ ಕುರಿ ನೋಡಿಕೊಳ್ಳಲು ಯಾರೂ ಇಲ್ಲ. ಜೊತೆಗೆ ಕುರಿ ಸಾವನ್ನಪ್ಪಿರುವುದರಿಂದ ಬೇರೆ ಪ್ರಾಣಿಗಳಿಗೆ ರೋಗ ಅಂಟಬಾರದು ಎಂಬ ಉದ್ದೇಶದಿಂದ ಕೊರೊನಾ ಸೋಂಕಿತ ವ್ಯಕ್ತಿಯ ಕುರಿಗಳನ್ನು ಪ್ರತ್ಯೇಕವಾಗಿ ಇರಿಸಿದ್ದೇವೆ. ಅದು ಕ್ವಾರಂಟೈನ್ ಅಲ್ಲ. ಜನರು ಕೂಡ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಮತ್ತು ಕುರಿಗಳನ್ನು ಕ್ವಾರಂಟೈನ್ ಮಾಡುವ ವಿಷಯ ಜನರಲ್ಲಿ ಹಲವು ರೀತಿಯ ಗೊಂದಲ ಹುಟ್ಟುಹಾಕಿದೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ಮುಖಂಡ ಸಾಸಲು ಸತೀಶ್, ನಿಜವಾಗಿಯೂ ಕೊರೊನಾ ಸೋಂಕು ಬಂದಿರುವುದೇ ಬೇರೆ ಯುವಕನಿಗೆ. ಕುರಿಗಳು ಆ ಯುವಕನಿಗೆ ಸೇರಿದವಲ್ಲ. ಕುರಿಗಳನ್ನು ಕ್ವಾರಂಟೈನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳುವ ಮೂಲಕ ಜನರಿಗೆ ತಪ್ಪು ಸಂದೇಶ ಹೋಗುವಂತೆ ಮಾಡಿದ್ದಾರೆ. ಕುರಿ ಮಾಲಿಕರ ಕುಟುಂಬವನ್ನು ಉಳಿದವರು ವಿಲನ್ ಅಂತೆ ನೋಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ ಸೂಕ್ಷ್ಮ ವಿಚಾರಗಳನ್ನು ದೊಡ್ಡದು ಮಾಡುವ ಬದಲು ಗೊತ್ತಿಲ್ಲದೆ ಬಗೆಹರಿಸಬಹುದಿತ್ತು. ಸ್ಥಳಕ್ಕೆ ಬಂದು ನೋಡದ ಸಚಿವ ಮಾಧುಸ್ವಾಮಿ ಮತ್ತು ಜಿಲ್ಲಾಧಿಕಾರಿಗಳು ಹೀಗೆ ಆದೇಶ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...