Homeಕರೋನಾ ತಲ್ಲಣಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ಈ ಹಿಂದೆ ಬಾಬಾ ರಾಮ್‌ದೇವ್ ಹೇಳಿದ್ದರು.

- Advertisement -
- Advertisement -

ತಮ್ಮ ಪತಂಜಲಿ ಔಷಧಿಗಳಿಂದ ಕೊರೊನಾ ಗುಣಪಡಿಸಬಹುದು ಎಂದು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಎಂದಿಗೂ ಹೇಳಿಕೊಂಡಿಲ್ಲ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ. ಕಳದ ವಾರ ಸರ್ಕಾರವು ಪತಂಜಲಿ ಕೊರೊನಾ ಔಷಧಿಗಳನ್ನು ಮಾರಬಾರದು ಎಂದು ಅದರ ಜಾಹೀರಾತುಗಳನ್ನು ನಿಷೇಧಿಸಿತ್ತು.

“ಕರೋನಿಲ್ ಮತ್ತ ಸಸ್ವಾರ ಔ‍ಷಧಿಯು ಕೊರೊನಾವನ್ನು ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು ಎಂದು ನಾವು ಎಂದಿಗೂ ಹೇಳಿಲ್ಲ. ನಾವು ಔಷಧಿಗಳನ್ನು ತಯಾರಿಸಿದ್ದೇವೆ ಮತ್ತು ಕೊರೊನಾ ರೋಗಿಗಳನ್ನು ಗುಣಪಡಿಸುವ ನಿಯಂತ್ರಿತ ಕ್ಲಿನಿಕಲ್  ಪ್ರಯೋಗದಲ್ಲಿ ಬಳಸಿದ್ದೇವೆ ಎಂದು ಮಾತ್ರ ನಾವು ಹೇಳಿದ್ದೇವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ” ಎಂದು ಪತಂಜಲಿಯ ಸಿಇಒ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಔಷಧಿಗಳ ಸಂಯೋಜನೆ, ಅದರ ಸಂಶೋಧನೆಯ ಫಲಿತಾಂಶಗಳು, ಸಂಶೋಧನೆ ನಡೆಸಿದ ಆಸ್ಪತ್ರೆಗಳು, ಕಂಪನಿಯು ಸಾಂಸ್ಥಿಕ ನೈತಿಕ ಸಮಿತಿಯಿಂದ ಅನುಮತಿ ಪಡೆದಿದೆಯೇ ಮತ್ತು ಕ್ಲಿನಿಕಲ್ ಪ್ರಯೋಗ ನಡೆಸಲು ನೋಂದಾಯಿಸಿಕೊಂಡಿದೆಯೇ ಎಂಬ ವಿವರಗಳನ್ನು ಒದಗಿಸುವಂತೆ ಆಯುಷ್ ಸಚಿವಾಲಯ ಪತಂಜಲಿಯನ್ನು ಕೇಳಿದೆ.

ಪರವಾನಗಿ ನೀಡುವ ಅಧಿಕಾರಿಯೊಬ್ಬರು “ಪತಂಜಲಿ ಕಂಪನಿಯು ರೋಗನಿರೋಧಕ ವರ್ಧಕ, ಕೆಮ್ಮು ಮತ್ತು ಜ್ವರ ಗುಣಪಡಿಸುವಿಕೆಗಾಗಿ ಪರವಾನಗಿ ಕೋರಿದ್ದಾರೆ. ಉತ್ಪನ್ನಗಳು ಕೊರೊನಾ ಔಷಧಿ ಕಿಟ್‌ಗಳ ಭಾಗವೆಂದು ಅದು ಎಂದಿಗೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ. ಈ ಕುರಿತು ಕಂಪನಿಗೆ ರಾಜ್ಯ ಸರ್ಕಾರ ನೋಟಿಸ್ ಕಳುಹಿಸಿತ್ತು.

“ನಮ್ಮ ನೋಟಿಸ್‌ಗೆ ಉತ್ತರವಾಗಿ, ಪತಂಜಲಿ ಅವರು ಯಾವುದೇ ಕರೋನಾ ಕಿಟ್ ಅನ್ನು ಪ್ಯಾಕೇಜ್ ಮಾಡಿಲ್ಲ ಎಂದು ಹೇಳಿದೆ. ಕರೋನಿಲ್ ಪ್ಯಾಕೇಜಿಂಗ್‌ನಲ್ಲಿ ಕರೋನವೈರಸ್‌ನ ಪ್ರತಿನಿಧಿ ಚಿತ್ರವನ್ನು ಪತಂಜಲಿ ಮುದ್ರಿಸಿದ್ದಾರೆ. ಕೊರೊನಿಲ್ ಮತ್ತು ಇತರ ಎರಡು ಔಷಧಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ” ಎಂದು ಉತ್ತರಾಖಂಡ ಆಯುರ್ವೇದ ಇಲಾಖೆ ಪರವಾನಗಿ ಅಧಿಕಾರಿ ವೈ.ಎಸ್. ರಾವತ್ ಹೇಳಿದ್ದಾರೆ.

“ನಾವು ಇಂದು ಕೋವಿಡ್‌ ಔಷಧಿಗಳಾದ ಕೊರೊನಿಲ್ ಮತ್ತು ಸ್ವಸರಿಯನ್ನು ಪ್ರಾರಂಭಿಸುತ್ತಿದ್ದೇವೆ. ಇವುಗಳ ಎರಡು ಪ್ರಯೋಗಗಳನ್ನು ನಾವು ನಡೆಸಿದ್ದೇವೆ. ಮೊದಲ ಕ್ಲಿನಿಕಲ್ ನಿಯಂತ್ರಿತ ಅಧ್ಯಯನವು ದೆಹಲಿ, ಅಹಮದಾಬಾದ್ ಇತರ ಅನೇಕ ನಗರಗಳಲ್ಲಿ ನಡೆಯಿತು. ಇದರ ಅಡಿಯಲ್ಲಿ 280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು. ಇದರ ನಂತರ ಎಲ್ಲ ಪ್ರಮುಖ ಕ್ಲಿನಿಕಲ್ ನಿಯಂತ್ರಣ ಪ್ರಯೋಗವನ್ನು ನಡೆಸಲಾಯಿತು” ಎಂದು ಉದ್ಘಾಟನೆ ವೇಳೆ ಬಾಬಾ ರಾಮ್‌ದೇವ್‌ ಹೇಳಿದ್ದರು.

“ಜೈಪುರದ ನಿಮ್ಸ್ ಸಹಾಯದಿಂದ ನಾವು 95 ರೋಗಿಗಳ ಮೇಲೆ ಕ್ಲಿನಿಕಲ್ ನಿಯಂತ್ರಣ ಅಧ್ಯಯನವನ್ನು ನಡೆಸಿದ್ದೇವೆ. ಇದರಿಂದ ಹೊರಬಂದ ದೊಡ್ಡ ವಿಷಯವೆಂದರೆ ಮೂರು ದಿನಗಳಲ್ಲಿ ಶೇಕಡಾ 69 ರಷ್ಟು ರೋಗಿಗಳು ಚೇತರಿಸಿಕೊಂಡರು ಮತ್ತು ಪಾಸಿಟಿವ್ ಪ್ರಕರಣಗಳಿಂದ ನೆಗೆಟಿವ್ ಆದರು. ಏಳು ದಿನಗಳಲ್ಲಿ ಶೇಕಡಾ 100 ಕ್ಕೆ 100 ರಷ್ಟು ಜನರು ನೆಗೆಟಿವ್ ಆದರು ಎಂದು ಅವರು ಹೇಳಿದ್ದರು.

ಈಗ ಅದೇ ಕಂಪನಿಯ ಸಿಇಓ ನಾವು ಕೊರನಾ ಗುಣಪಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂಬ ಹೇಳಿಕೆ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಮತ್ತಷ್ಟು ಸುದ್ದಿಗಳು

ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...