Homeಅಂಕಣಗಳುಕಟ್ಟೆಪುರಾಣ: ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ

ಕಟ್ಟೆಪುರಾಣ: ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ

“ಅದೆ ಕಂಡ್ಳ ನಾನೇಳಿದ್ದು, ಊರಲ್ಲಿ ಪ್ರಾಯಕ್ಕೆ ಬಂದೆದ್ದೆ ಯಲ್ಲ ಹುಡುಗ್ರು ಬೆಂಗಳೂರು ಸೇರಿಕಂಡಿದ್ರು. ನೋಡೀಗ ಯಲ್ಲ ಬಂದವೆ ಯವಸಾಯ ಮಾಡ್ತ ಅವೆ ಊರಿಗೇ ಒಂದು ಕಳೆ ಬಂದದೆ.”

- Advertisement -
- Advertisement -

ವಾಟಿಸ್ಸೆ ಬಂದ ಕೂಡಲೆ ಜುಮ್ಮಿ ಏನೋ ಹೊಳೆದಂತೆ.

“ಲೇ ವಾಟಿಸ್ಸೆ ಕರೋನಾ ಬಂದಿದ್ದು ವಳ್ಳೆದಾಯ್ತು ಕಂಡ್ಳ” ಎಂದಳು.

“ನಿನಿಗೇನಾಯ್ತಕ್ಕ ಇಂತ ಮಾತಾಡ್ತೀ.”

“ಪ್ರಪಂಚನೆ ಹೆದರಿಕಂಡು ಕುಂತದೆ ಇವುಳಿಗೆ ವಳ್ಳೆದಾಯ್ತಂತೆ ಇದಕೇನೇಳ್ತಿಯಪ್ಪ” ಎಂದ ಉಗ್ರಿ.

“ಅಕ್ಕನೆ ಹೇಳ್ತಳೆ ಬುಡು. ಅದೇನೇಳಕ್ಕ.”

“ನಮ್ಮೂರು ಮಂದ್ಲಿದ್ದಂಗಾಯ್ತು ಕಂಡ್ಳ.”

“ಯಂಗೇ ಅಂತ.”

“ಹೆಚ್ಚುಕಮ್ಮಿ ಇಪ್ಪತ್ತು ಮನೆ ಬಾಗಲಾಕಿದ್ದೊ ಕಂಡ್ಳ, ಅವುರ್ಯಲ್ಲ ಬೆಂಗಳೂರು ಸೇರಿಕಂಡಿದ್ರು. ಈಗ್ಯಲ್ಲ ಬಂದು ಬಾಗಲತಗದವುರೆ ಕತ್ಲೆ ಮನೆ ಬೆಳಕಾದೊ.”

“ಓಟರ್‍ಲಿಸ್ಟು ಪಿಲಪ್ಪಾದ ರಾಜಕಾರಣಿಯಂಗೆ ಖುಷಿಯಾಗಿದ್ದಿಯಲ್ಲಕ್ಕ. ಜನಕೆ ಇದ್ದ ಜಾಗದಲ್ಲಿ ಕ್ಯಲಸಿರಲಿಲ್ಲ. ಯಲ್ಲ ಬೆಂಗಳೂರಿಗೋಗಿದ್ರು, ಕರೋನಾ ಕಾಯಿಲಗೆ ಹೆದರಿ ತಿರಗ ಊರಿಗೆ ಬಂದವುರೆ ಅಷ್ಟೆಯ.”

“ಅದೆ ಕಂಡ್ಳ ನಾನೇಳಿದ್ದು, ಊರಲ್ಲಿ ಪ್ರಾಯಕ್ಕೆ ಬಂದೆದ್ದೆ ಯಲ್ಲ ಹುಡುಗ್ರು ಬೆಂಗಳೂರು ಸೇರಿಕಂಡಿದ್ರು. ನೋಡೀಗ ಯಲ್ಲ ಬಂದವೆ ಯವಸಾಯ ಮಾಡ್ತ ಅವೆ ಊರಿಗೇ ಒಂದು ಕಳೆ ಬಂದದೆ.”

“ಊರಿಗೆ ಕಳೆ ಬರದು ದುಡಿಯೋಕೈಗೆ ಕ್ಯಲಸಿದ್ದಾಗ ಕಣಕ್ಕ. ಕ್ಯಲಸಿಲ್ದೊರ ಮಕ ನೋಡಕ್ಕಾದತೆ?”

“ಅಲ್ಲಾ ಕಣೊ ವಾಟಿಸ್ಸೆ ರಾಜಕಾರಣಿಗಳಿಗ್ಯಾವ ಕ್ಯಲಸದೊ ಆದ್ರು ಅವುರ ಮಕ ನೋಡು ಯಂಗೆ ಲಕಲಕ ಅಂತ ವಳಿತದೆ” ಎಂದ ಉಗ್ರಿ.

“ಅದೇನೊ ನಿಜ ಆ ಸಿ.ಟಿ ರವಿ ಅನ್ನೊ ಮಿನಿಸ್ಟ್ರಿಗೆ ಪಾಪ ಏನೂ ಕ್ಯಲಸಿಲ್ಲ ಅದ್ಕೆ ಲೇಖನ ಬರಿತ ಕುಂತವುನೆ.”

“ಏನು ಬರದವುನೆ.”

“ನಾವು ಚೀಣಾ ದೇಸದ ಪದಾರ್ಥ ಬಳಸಬಾರ್ದು ನಾವೇ ತಯಾರು ಮಾಡಿಕಬೇಕು ಅಂತ ಬರದವುನೆ.”

“ಅಲ್ಲಾ ಕಣೊ ವಾಟಿಸ್ಸೆ ಅವುನ ಮನೆಲಿರೊ ಅರ್ದಕ್ಕರ್ದ ಪದಾರ್ಥ ಚೀಣಾ ದೇಸದ ಪದಾರ್ಥ. ಅಂತದ್ರಲ್ಲಿ ಲೇಖನ ಬರಿತನೆ ಅಂದ್ರೆ, ಅವುನ ಮನೆಲಿರೊ ಚೀಣಾ ದೇಸದ ಪದಾರ್ಥವ ವರಿಕಾಕಿ ಬೆಂಕಿ ಹಚ್ಚಿ ಅಮ್ಯಾಲೆ ಲೇಖನ ಪಾಕನ ಬರಿಬೇಕಲವೇನೊ.”

“ಬಿಜೆಪಿಗಳೇ ಅಂಗಲವೇನೊ, ಹೇಳದೊಂದು ಮಾಡದೊಂದು. ಯಲ್ಲಾನು ನಾವೇ ತಯಾರು ಮಾಡಿಕಬೇಕು ಅಂದ್ರೆ ಈ ಚೆಡ್ಡಿಗಳ ಕೈಲಿ ಏನಾಯ್ತದಪ್ಪಾ ಅಂದ್ರೇ, ಅವು ಕುಂಕುಮ ಗಂಧವ ಅವೇ ತಯಾರಿಸತ್ತವೆ? ಮಡಿ ಪಂಚೆ, ಟವಲ್ಲು, ಗಂಟೆ, ಮಂಗಳಾರತಿ ತಟ್ಟೆ ಕರ್ಪೂರನು ಬೇಕಾದ್ರೆ ಮಾಡಿಕತ್ತವೆ. ಇನ್ನುಳದಂಗೆ ಪೂಜಾರಿ ಕೈಲಿರೊ ಮೊಬೈಲು, ಗಡಿಯಾರ, ಮಂಗಳಾರತಿ ತಟ್ಟಿಗೆ ಬಿದ್ದ ಕಾಸಿನ ಲೆಕ್ಕ ಬರಿಯೋ ಪೆನ್ನೂ ಕೂಡ ಚೀಣಾ ದೇಸದ್ದೆಯಪ್ಪ ಅಂತದರಲ್ಲಿ ಚೀಣಾ ದೇಸದಿಂದ ಬರೋ ಪದಾರ್ಥವ ತಾವೇ ತಯಾರಿಸಿಕೊಳಕ್ಕಾದತೆ.”

“ಸಿ.ಟಿ ರವಿ ಅಂದ್ರೆ ಅವುನ್ಯಾರ್ಲ.”

“ಇದೇನಕ್ಕ ಹಿಂಕೇಳ್ತಿ ಅವುನು ಚಿಕ್ಕಮಗಳೂರು ಕಡೆ ರಾಜಕಾರಣಿ. ಬಾಬಾಬುಡನ್‍ಗಿರಿಯ ದತ್ತಪೀಠ ಮಾಡಕ್ಕೊಗಿ ಗಲಾಟೆ ಎಬ್ಬಿಸಿ ಎಮ್ಮೆಲ್ಲೆ ಆದೋನು. ಈಗ ಮಂತ್ರಿಯಾಗ್ಯವುನೆ, ಕರೋನಾ ಕಾಯ್ಲದ ಕಾರಣಕ್ಕೆ ಕ್ಯಲಸಕ್ಕೆ ಬಾರದೋನಂಗಾಗ್ಯವುನೆ.”

“ಅದ್ಯಾಕಂಗಾದ.”

“ಅವುನೊಬ್ಬನೆ ಅಂಗಾಗಿಲ್ಲ ಕಣಕ್ಕ ಇಡೀ ಎಡೂರಪ್ಪನ ಸಂಪುಟವೇ ಅಂಗಾಗ್ಯದೆ. ಮಂತ್ರಿಗಳಾಗಿ ಮ್ಯರಿತ ಸನ್ಮಾನ ಮ್ಯರವಣಿಗೆ ದೇಸಭಕ್ತಿ ಬಾಸಣ ಮಾಡಿಕಂಡು ಮೋದಿ ಹೊಗಳಿಕಂಡು ಮ್ಯರಿಯನ ಅಂತ ಇದ್ದೊರಿಗೆ ಶನಿ ವಕ್ರಿಸಿದಂಗೆ ಕರೋನಾ ವಕ್ರಿಸಿಬುಡ್ತು ಹಂಗಾಗಿ ಯಲ್ಲ ಡಲ್ಲಾಗ್ಯವುರೆ.”

“ಎಡೂರಪ್ಪನೆ ಡಲ್ಲಾಗ್ಯವುರೆ.”

“ಅವುನ್ಯಾವತ್ತು ಲವುಲವಿಕೆ ಆಗಿದ್ನೊ ಪಾಪ ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಪೈಲ್ಸ್ ತರ ಶೋಭಾ ಕಾಡಿದ್ಲು, ಈಗ ಕರೋನಾ ಕಾಡ್ತಾ ಅದೆ. ಮುಖ್ಯಮಂತ್ರಿ ಪದವಿಯ ಎಂಜಾಯ್ ಮಾಡಕ್ಕೆ ಆಗಲಿಲ್ಲ.”

“ಮುಖ್ಯಮಂತ್ರಿ ಪದವಿಯ ಎಂಜಾಯ್ ಮಾಡಿದೋರು ಅಂದ್ರೆ ಸಿದ್ದರಾಮಯ್ಯ, ಕುಮಾರಣ್ಣ ಕಣೊ.”

“ಸಿದ್ದರಾಮಯ್ಯನಿಗಿಂತ ಕುಮಾರಣ್ಣ ಕಣೊ ಎಂಜಾಯ್ ಮಾಡಿದ್ದು.”

“ಅದ್ಯಂಗ್ಲಾ ಎಂದಳು ಜುಮ್ಮಿ.”

“ಕುಮಾರಣ್ಣ ಕ್ಯಲಸದ ಒತ್ತಡ ಜಾಸ್ತಿಯಾಯ್ತು ಅಂದ್ರೆ ರಾಧಿಕನ ಮನೆಗೋಗಿ ಮನಗಿಬುಡತಿದ್ದ. ಆಗ ಎಂ.ಪಿ ಪ್ರಕಾಸಿದ್ರು ಯಲ್ಲನು ನೋಡಿಕಳರು. ಈಗ ಹೋಟ್ಳಲ್ಲಿದ್ದ ಕಣಕ್ಕ ಮುಖ್ಯಮಂತ್ರಿಯಾದೊನು ಹೋಟ್ಳಲ್ಲಿರತರೇನಕ್ಕ ಅದ್ಕೆ ಪವರ್ ಕಳಕಂಡ.”

“ಆ ಹೋಟ್ಳು ರೂಮು ದೆಸೆರೂಮಂತೆ ಕಣೊ. ಅದರಲ್ಲಿದ್ದಾಗ ಮುಖ್ಯಮಂತ್ರಿಯಾದೆ ಅದಕೆ ಅದರೊಳಗಿದ್ದಿನಿ ಅಂದಿದ್ದ.”

“ಸರಿಯಪ್ಪ ಆ ರೂಮಲ್ಲೆ ಇದ್ದಾಗ ಮುಖ್ಯಮಂತ್ರಿಗಿರಿ ಕಳಕಂಡನಲ್ಲ ಅದಕೇನೇಳ್ತನೆ.”

“ಅದನ್ನ ತಗದು ಶಾಸಕರ ಮ್ಯಾಲಾಕ್ತನೆ. ಏನೇ ಆಗ್ಲಿ ಕುಮಾರಣ್ಣ ಅವುರ್ಯಲ್ಲ ಈ ಬಿಜೆಪಿಗಳಷ್ಟು ಕ್ಯಟ್ಟೊರಲ್ಲ ಕಣೊ ಈ ಮುಂಡೆ ಮಕ್ಕಳು ಭ್ಯಳೆಮ್ಯಾಲೆ ಎರಗತಾಯಿರೋ ಮಿಡತೆ ದಂಡಿದ್ದಂಗೆ. ಯಲ್ಲನು ವಕ್ಕತಿಂದ ಸರ್ವನಾಶ ಮಾಡ್ತರೆ ನೋಡ್ತಾಯಿರು.”

“ !?


ಇದನ್ನು ಓದಿ:

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...