Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಈಶ್ವರಪ್ಪನವರಿಗೆ ನನ್ನ ಮೇಲೆ ಸಿಟ್ಟು ಏಕೆಂದರೆ… : ಎಚ್.ಎಸ್ ದೊರೆಸ್ವಾಮಿ

ಈಶ್ವರಪ್ಪನವರಿಗೆ ನನ್ನ ಮೇಲೆ ಸಿಟ್ಟು ಏಕೆಂದರೆ… : ಎಚ್.ಎಸ್ ದೊರೆಸ್ವಾಮಿ

ಮುಸ್ಲಿಮರೆ ಅಧಿಕ ಸಂಖ್ಯೆಯಲ್ಲಿರುವ ಕಾಶ್ಮೀರದಲ್ಲಿ ಷೇಕ್ ಅಬ್ದುಲ್ಲಾ ಅಲ್ಲಿನ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೊಂಡ ಗೋಹತ್ಯಾ ನಿಷೇಧ ಕಾಯಿದೆಯಲ್ಲಿ ಗೋಹತ್ಯ ಮಾಡಿದವನಿಗೆ 10 ವರ್ಷ ಸೆರೆವಾಸ ಎಂದು ಹೇಳಿದೆ.

- Advertisement -
- Advertisement -

ನಾನು ಎಡಪಂಥೀಯರ ಜೊತೆ ಗುರುತಿಸುಕೊಳ್ಳುವವನು ಎಂದು ಸಂಘಪರಿವಾರ ಮತ್ತು ಬಿಜೆಪಿ ನನ್ನನ್ನು ಟೀಕಿಸುತ್ತದೆ. ನಾನು ರಾಜಕಾರಣಿ ಎಂದು ಶಾಸಕ ಎಚ್.ಡಿ ರೇವಣ್ಣ ಅಸೆಂಬ್ಲಿಯಲ್ಲಿ ಬಾಯಿತಪ್ಪಿ ಹೇಳಿದ್ದರು. ನಾನು ಎಲ್ಲರ ಜೊಎ ಕೈಜೋಡಿಸುವವನೆಂದು ಹೇಳಿಕೊಳ್ಳಲು ನನಗೆ ಅಳುಕಿಲ್ಲ. ನಾನು ರಾಜಕಾರಣಿಯೂ ಹೌದು. ಆದರೆ ನಾನು ಅಧಿಕಾರ ದಾಹಕ್ಕಾಗಿ ರಾಜಕೀಯ ಮಾಡುವವನ್ನಲ್ಲ. ಪಕ್ಷ ರಾಜಕಾರಣದಲ್ಲಿ ನನಗೆ ನಂಬಿಕೆಯೂ ಇಲ್ಲ.

ನಾನು ಎಲ್ಲರೊಡನೆ ಕೂಡಿಕೊಳ್ಳುವ ಸ್ವಭಾವದವನು. ಅದು ದೇಶದ ಒಳಿತಿಗಾಗಿ, ಭದ್ರತೆಗಾಗಿ, ಪ್ರಜಾಪ್ರಭುತ್ವ ಎತ್ತಿ ಹಿಡಿಯುವುದಕ್ಕಾಗಿ. ಕೋಮು ವಿದ್ವೇಷ, ಸರ್ವಾಧಿಕಾರಿ ಮನೋಭಾವವನ್ನು ಕಿತ್ತೆಸೆಯುವುದಕ್ಕಾಗಿ ನಾನು ರಾಜಕೀಯದವರೊಡನೆ ಕೈಜೋಡಿಸಲು ಸೈ. ಸೇಡಿನ ರಾಜಕೀಯ, ಮತೀಯ, ಧಾರ್ಮಿಕ ರಾಜಕೀಯಗಳನ್ನು ನಾನು ಎಂದೆಂದಿಗೂ ವಿರೋಧಿಸುವವನು. ಎಲ್ಲರೊಡನೆ ನಾನು ಬೆರೆತರೂ ನಾನು ಅವರವನಲ್ಲ. ನಾನು ಸರ್ವೋದಯ ಸಿದ್ಧಾಂತವನ್ನು ನಂಬಿದವನು. ಗಾಂಧೀಜಿಯವರ ಮಾರ್ಗಾನುಯಾಯಿ.

ಕೈಗಾ ಚಳವಳಿಯಲ್ಲಿ, ತುರ್ತು ಪರಿಸ್ಥಿತಿಯಲ್ಲಿ ನಾನು ಸಂಘಪರಿವಾರದವರೊಡನೆಯೂ ಕೂಡಿಕೊಂಡವನು. ಸಭೆ, ಸಮ್ಮೇಳನ, ಚರ್ಚಾಕೂಟ, ವಿಚಾರ ಸಂಕಿರಣ, ಚಳವಳಿಗೆ ಯಾರೇ ಕರೆದರೂ ನಾನು ಹೋಗುವವನು. ಆದರೆ ಅವುಗಳಲ್ಲೆಲ್ಲ ಸರ್ವೋದಯ ಛಾಪನ್ನು ಮೂಡಿಸಲು ಪ್ರಯತ್ನಿಸುತ್ತೇನೆ. ನಾಡಿನ ಹಿತದೃಷ್ಠಿಯಿಂದ ಏನು ಹೇಳಬೇಕೋ ಅದನ್ನು ನಿರ್ಭೀಡತಯಿಂದ ಹೇಳುತ್ತೇನೆ. ನಾನು ಯಾವ Ism ಗೂ ದಾಸನಲ್ಲ. ನಾನು ನಂಬುವುದು Humanisam ನಲ್ಲಿ.

ಅನೇಕ ಮೂಲಭೂತ ವಿಚಾರಗಳಲ್ಲಿ ನನ್ನ ನಿಲುವು, ರಾಜಕೀಯ ಸಂಸ್ಥೆಯ ನಿಲುವುಗಳಿಗಿಂತ ಭಿನ್ನ. ಆದರೂ ನನ್ನನ್ನು ಎಲ್ಲರೂ ಪ್ರೀತಿ ವಿಶ್ವಾಸದಿಂದ ತಮ್ಮ ಕಾರ್ಯಕ್ರಮಗಳಿಗೆ ಕರೆಯುತ್ತಾರೆ.

ಸರ್ವೋದಯ ಸಿದ್ದಾಂತವೇ ಹಾಗೆ. ಗಾಂಧೀಜಿಯವರ ವಿಚಾರಗಳೇ ಹಾಗೆ. ಸರ್ವೋದಯ ಎಲ್ಲರ ಒಳಿತನ್ನು ಬಯಸುತ್ತದೆ. ಸವೇಜನೋ ಸುಖಿನೋಭವಂತು ಎಂದು ದೇವರ ಮುಂದೆ ಕೂತು ಪ್ರತಿದಿನ ಹೇಳಿದರೆ ಸಾಲದು. ಅದನ್ನು ಕಾರ್ಯಗತ ಮಾಡಬೆಕು. ಇದು ಹಿಂದೂ ಧರ್ಮದ ನಿಲುವು. ಭಾಜಪ ಮೊದಲುಗೊಂಡು ಯಾವ ರಾಜಕೀಯ ಪಕ್ಷವೂ ಸರ್ವೋದಯವನ್ನು ತನ್ನ ರಾಜಕೀಯ ಸಿದ್ಧಾಂತವಾಗಿ ಅಂಗೀಕರಿಸಿಲ್ಲ. ಹಿಂದುತ್ವ ಪ್ರತಿಪಾದಕರು ಡೋಂಗಿಗಳು ಎನ್ನುವುದು ಇದೇನಾ?

ಗೋರಕ್ಷಣೆಯ ವಿಷಯಕ್ಕೆ ನನ್ನ ಪೂರ್ಣ ಸಹಮತವಿದೆ. ಆದರೆ ಮತೀಯ ದ್ವೇಷ ಬೆಳೆಸುವ ದೃಷ್ಠಿಯಿಂದ ಗೋಸಂರಕ್ಷಣೆಯ ವಿಷಯ ಕೈಗೆತ್ತಿಕೊಳ್ಳುವುದಕ್ಕೆ ನನ್ನ ಸಹಮತವಿಲ್ಲ. ಗೋವು ಒಂದು ವಿಶೇಷ ಪ್ರಾಣಿ. ಅದನ್ನು ಕೊಲ್ಲದೆ ಅದರ ಹಾಲನ್ನು ಆಹಾರವಾಗಿ ಬಳಸಲುಬರುವ ಏಕೈಕ ಪ್ರಾಣಿ ಗೋವು. ರೈತ ಗೋವನ್ನು ತನ್ನ ಪರಿವಾರದ ಸದಸ್ಯನನ್ನಾಗಿ ಭಾವಿಸುತ್ತಾನೆ. ಆಕಳ ಹಾಲು ಅತ್ಯುತ್ಕ್ರಷ್ಟ ಆಹಾರ. ಹಸುವಿನ ಹಾಲಿನಲ್ಲಿ ದೇಹಪೋಷಣೆಗೆ ಬೇಕಾದ ಎಲ್ಲ ಅಂಸಗಳು ಸಮತೋಲನದಲ್ಲಿರುತ್ತವೆ. ಮಕ್ಕಳಿಗೆ ಅದು ಅಮೃತಸಮಾನ. ಇದಕ್ಕಾಗಿ ಸರ್ವೋದಯದಲ್ಲಿ ಗೋವಿಗೆ ವಿಶಿಷ್ಠ ಸ್ಥಾನಮಾನ ನೀಡಿದೆ. ಗೋವನ್ನು ಕೊಲ್ಲುವುದು ಅನೀತಿ.

ಸ್ವಾತಂತ್ರ್ಯ ಪ್ರಾಪ್ತವಾದ ನಂತರ ಗೋವಧೆ ನಿಷೇಧ ಕಾಯಿದೆ ಅನೇಕ ರಾಜ್ಯಗಳಲ್ಲಿ ಜಾರಿಗೆ ಬಂದಿದೆ. ಯಾವುದೇ ಕಾರಣಕ್ಕೂ ಗೋವನ್ನು, ಅದರ ಕರುವನ್ನು, ಎತ್ತನ್ನು, ಗೂಳಿಯನ್ನು ಕೊಲ್ಲಬಾರದು ಎಂದು ಆ ಕಾನೂನು ಹೇಳುತ್ತದೆ. ಗೋವಧೆ ಮಾಡಿದರೆ 3 ವರ್ಷಗಳ ಸೆರವಾಸ ಎಂದು ಕರ್ನಾಟಕದಲ್ಲಿ ಶಾಸನವಿದೆ.

ಮುಸ್ಲಿಮರೆ ಅಧಿಕ ಸಂಖ್ಯೆಯಲ್ಲಿರುವ ಕಾಶ್ಮೀರದಲ್ಲಿ ಷೇಕ್ ಅಬ್ದುಲ್ಲಾ ಅಲ್ಲಿನ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೊಂಡ ಗೋಹತ್ಯಾ ನಿಷೇಧ ಕಾಯಿದೆಯಲ್ಲಿ ಗೋಹತ್ಯ ಮಾಡಿದವನಿಗೆ 10 ವರ್ಷ ಸೆರೆವಾಸ ಎಂದು ಹೇಳಿದೆ. ಆದ್ದರಿಂದ ಗೋಹತ್ಯೆ ನಿಷೇಧ ಹಿಂದುಗಳಿಗೆ ಮಾತ್ರ ಬೇಕಿದೆ ಎಂಬುದೇನೂ ಇಲ್ಲ. ಇದನ್ನು ಷೇಕ್ ಅಬ್ದುಲ್ಲಾ ಶಾಸನ ತರುವ ಮೂಲಕ ಸಾಬೀತು ಮಾಡಿದ್ದಾರೆ.

ಅದರಂತೆ ಬಡತನ ನೀಗುವ ಕೆಲಸದಲ್ಲಿಯಾವ Ismಗೂ ಅವಕಾಶವಿಲ್ಲ. ಸ್ವತಂತ್ರ ಭಾರತದಲ್ಲಿ ಬಡತನ, ಅಸಮಾನತೆ ಇರಲೇಬಾರದು. ಸರ್ಕಾರಗಳ ಬಂದು ಹೋದವು. 72 ವರ್ಷಗಳು ಕಳೆದರೂ ಬಡತನ ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯೇ ಹೊರತು, ಕಡಿಮೆಯಾಗುತ್ತಿಲ್ಲ. ಬಡವ ಬಲ್ಲಿದ ಅಂತರ ಹೆಚ್ಚುತ್ತಲೇ ಇದೆ. ಇದರ ವಿರುದ್ಧ ಎಲ್ಲರೂ ಕೂಡಿಕೊಂಡು ಹೋರಾಡಬೇಕಾಗಿದೆ.

ವಿನೋಬಾ ಭಾವೆ ಹಳ್ಳಿಯಲ್ಲಿ ದುಡಿಯುತ್ತಾ ಎಲ್ಲರಿಗೂ 5 ಎಕರೆ ಭೂಮಿ ಹಂಚುತ್ತಾ, ಭೂದಾನ ಯಜ್ಞ ಕಾರ್ಯಕ್ರಮವನ್ನು ಕೈಗೆತ್ತಿಕೊಂಡರು. ಭಾರತದಲ್ಲಿ ಸರ್ವೋದಯ ಪಾದಯಾತ್ರೆ ಕೈಗೊಂಡರು. ಭೂಹೀನರಿಗೆ ತಮ್ಮಲ್ಲಿರುವ ಜಮೀನಿನಲ್ಲಿ ಸ್ವಲ್ಪ ದಾನ ಮಾಡಿ ಎಂದು ಜಮೀನು ಇರುವವರ ಬಳಿ ಬೇಡಿಕೆ ಇಟ್ಟರು. ನಾನು ಭೂಮಿಯ ಭಿಕ್ಷೆ ಬೇಡಲು ಬಂದಿಲ್ಲ, ಬಡವರ ಬದುಕುವ ಹಕ್ಕಿಗಾಗಿ ಭೂದಾನ ಕೇಳಲು ಬಂದಿದ್ದೇನೆ ಎಂದರು. ಅವರಿಗೆ ಉಳ್ಳ ಜನ ಸ್ಪಂದಿಸಿದರು. ಭಾರತದಲ್ಲಿ ಹೊಡೆಯದೆ, ಬಡಿಯದೆ, ಕಾನೂನಿನ ಕತ್ತೆಗೆ ಕಾಯದೆ ಉಳ್ಳವರ ಮನಪರಿವರ್ತನೆ ಮಾಡುವ ಮೂಲಕ 42 ಲಕ್ಷ ಎಕರೆ ಜಮೀನನ್ನು ದಾನವಾಗಿ ಪಡೆದರು. ಭಾರತದಲ್ಲಿ ಗ್ರಾಮೀಣ ಜನರ ಬಡತನ ನೀಗಲು 5 ಕೋಟಿ ಎಕರೆ ಜಮೀನು ಬೇಕು. ಸರ್ಕಾರ ಬಡವರ ಆಶಯವನ್ನು ಪೂರೈಸುವುದು ತಮ್ಮ ಆದ್ಯ ಕರ್ತವ್ಯವೆಂದು ಭಾವಿಸಬೇಕು. ಅದಕ್ಕಾಗಿ ಭೂ ಸುಧಾರಣೆ ಕಾಯ್ದೆಯನ್ನು ಪರಿಶೀಲಿಸಿ ಸರ್ಕಾರ ಭಾರತದ ಎಲ್ಲ ಭೂಹೀನರಿಗೆ ತಲಾ 5 ಎಕರೆ ಜಮೀನು ಹಂಚಬೇಕು.

ಇನ್ನೊಂದು ವಿಷಯ. ಕೊಪ್ಪದಲ್ಲಿ ಹತ್ತಾರು ವರ್ಷಗಳಿಂದ ಗುಡಿಸಲುಗಳಲಿದ್ದವರ ಗುಡಿಸಲು ಕೆಡವುವು ಪ್ರಯತ್ನ ತಹಶೀಲ್ದಾರರಿಂದ ನಡೆದಿತ್ತು. ರವಿಕೃಷ್ಣರೆಡ್ಡಿ ನೇತೃತ್ವದಲ್ಲಿ ಗುಡಿಸಲುವಾಸಿಗಳು, ಹೋರಾಟಗಾರರು ಸೇರಿ ತಹಶೀಲ್ದಾರರ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ಮಾಡಿದೆವು. ತಹಶೀಲ್ದಾರರನ್ನು ಕರೆಸಿ ‘ಜನರ ಗುಡಿಸಲುಗಳನ್ನು ತರೆವು ಮಾಡುವ ಮೊದಲು ಅವರಿಗೆ ಬೇರೆಡೆ ಗುಡಿಸಲುಗಳನ್ನು ಹಾಕಿಸಿಕೊಟ್ಟು ಮರ್ಯಾದೆಯಿಂದ ಅವರನ್ನು ನಡೆಸಿಕೊಳ್ಳಿ. ಭಾರತೀಯ ಪ್ರಜೆಗಳನ್ನು ನೆಲೆ ಇಲ್ಲದಂತೆ ಮಾಡಿ, ಬಿಸಿಲಿನಲ್ಲಿ ನಿಲ್ಲಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ನಾನು ಛೇಡಿಸಿದೆ.

ಅಂದು ರಾತ್ರಿ ಉಳಿದುಕೊಳ್ಳಲು ಒಬ್ಬರ ಮನೆಗೆ ಆಹ್ವಾನಿಸಿದರು. ನಾನು ಹೋಗಿ ಉಳಿದಿದ್ದೆ. ಬೆಳಿಗ್ಗೆ ವಾಪಸ್ ಬರುವಾಗ ಅವರು ನನ್ನೊಡನೆ ಫೋಟೊ ತೆಗೆಸಿಕೊಂಡರು. ನಾನು ಯಾವ ಸಭೆಗೆ ಭಾಗವಹಿಸಲು ಹೋದರೂ, ಸಭೆ ಮುಗಿದ ಮೇಲೆ ಹುಡುಗರು, ಊರಿನಪ್ರಮುಖರು, ಸಭೆಗೆ ಬಂದಿದ್ದವರು, ಹೆಣ್ಣು ಮಕ್ಕಳು ನನ್ನ ಜೊತೆ ಫೋಟೊ ತೆಗಿಸಿಕೊಳ್ಳುವುದು ವಾಡಿಕೆ. ಇಂತಹ ಫೋಟೊಗಳು ಸಾವಿರಾರಿರಬಹುದು.

ಅದರಂತೆಯೇ ಅಮೂಲ್ಯ ಎನ್ನುವ ಈ ಹುಡುಗಿಯೂ ನನ್ನ ಜೊತೆ ಫೋಟೊ ತೆಗಿಸಿಕೊಂಡಳು ಎಂದು ನಾನು ಭಾವಿಸುತ್ತೇನೆ. ಅವಳು ನಾಲ್ಕು ವರ್ಷಗಳ ಹಿಂದೆ ಚಿಕ್ಕ ವಯಸ್ಸಿನಲ್ಲಿ ನನ್ನೊಡನೆ ತೆಗಿಸಿಕೊಂಡ ಆ ಫೋಟೊವನ್ನು ಎಲ್ಲಿಂದಲೋ ತಂದು ವಿಧಾನಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಶಾಸನ ಸಭೆಯಲ್ಲಿ ತೋರಿಸಿ ನನ್ನನ್ನು Anti National ಎಂದು ಬಿಂಬಿಸಲು ಹೊರಟರು. ಒಟ್ಟಿನಲ್ಲಿ ನನ್ನ ಚಾರಿತ್ರ್ಯವಧೆ ಮಾಡುವುದು ಅವರ ಉದ್ದೇಶವಾಗಿತ್ತು. ನನ್ನ ಮೇಲೆ ಅವರಿಗಿರಬಹುದಾದ ಸಿಟ್ಟೆಂದರೆ ಜ್ವಾಲಾಮುಖಿ ಪತ್ರಿಕೆಯ ಅಂಕಣಕಾರನಾಗಿ ‘ನಮ್ಮಲ್ಲಿ ಒಬ್ಬ ಹಿರಣ್ಯಾಕ್ಷ ಎಂಬ ಶೀರ್ಷಿಕೆಯ ಒಂದು ಲೇಖನ ಬರೆದಿದ್ದೆ. ಅದರಲ್ಲಿ ಈಶ್ವರಪ್ಪನವರು ಶಿವಮೊಗ್ಗದ ಮೂಲೆ ಮೂಲೆಯಲ್ಲಿ ಸೈಟುಗಳನ್ನು , ಮನೆಗಳನ್ನು ಅವರ ಹೆಂಡತಿ, ಮಗ, ಸೋಸೆ, ಮಗಳು, ಅಳಿಯ ಎಲ್ಲರ ಹೆಸರಿನಲ್ಲಿಯೂ ಕೊಂಡಿರುವುದನ್ನು ಬಡಾವಣೆಗಳ ಹೆಸರು, ಕೊಂಡಿರತಕ್ಕ ಮನೆಯ ಅಥವಾ ಸೈಟಿನ ಸರ್ವೇ ನಂಬರ್, ವಿಸ್ತೀರ್ಣಗಳನ್ನೊಳಗೊಂಡ ವಿವರಗಳನ್ನು ದಾಖಲೆ ಸಮೇತ ನಮೂದಿಸಿ ಬರೆದಿದ್ದೆ. ಹಿಂದೆ ಹಿರಣ್ಯಾಕ್ಷ ಎಂಬ ರಾಕ್ಷಸ ಇದ್ದು, ಭೂಮಂಡಲವನ್ನು ತನ್ನದಾಗಿ ಮಾಡಿಕೊಳ್ಳಲು ಭೂಮಿಯನ್ನು ಚಾಪೆಯಂತೆ ಸುತ್ತಿ ತೆಗೆದುಕೊಂಡುಹೋಗಿ ಸಮುದ್ರದ ಒಳಗಡೆ ಬಚ್ಚಿಟ್ಟಿದ್ದ. ವಿಷ್ಣು ಕೂರ್ಮಾವತಾರದಲ್ಲಿ ಬಂದು ಸಮುದ್ರದಾಳದಲ್ಲಿ ಬಚ್ಚಿಟ್ಟಿದ್ದ ಭೂಮಿಯನ್ನು ತೆಗೆದುಕೊಂಡು ಹೋಗಿ ಹರಡಿ ಭೂಮಂಡಲಕ್ಎಕ ಮರುಜೀವ ಕೊಟ್ಟ.

ಅದರಂತೆ ಈಶ್ವರಪ್ಪನವರು ಶಿವಮೊಗ್ಗದ ಭೂಮಿಯನ್ನೆಲ್ಲ ಕೊಂಡುಕೊಂಡು ತಮ್ಮದಾಗಿಸಿಕೊಳ್ಳುತ್ತಾರೋ ಎಂಬ ಭಯ ನನ್ನದು. ಅದಕ್ಕಾಗಿ ಆ ಲೇಖನ ಬರೆದೆ. ಆ ಕಾರಣದಿಂದ ಈಶ್ವರಪ್ಪನವರಿಗೆ ನನ್ನ ಮೇಲೆ ಸಿಟ್ಟಿರಬಹುದು. ಆ ಸಿಟ್ಟನ್ನು ಅಸೆಂಬ್ಲಿಯಲ್ಲಿ ಈ ಫೋಟೊ ತೋರಿಸುವ ಮೂಲಕ ವ್ಯಕ್ತಪಡಿಸಿರಬಹುದೆಂಬುದು ನನ್ನ ಅನಿಸಿಕೆ.


ಇದನ್ನು ಓದಿ: ತಮಿಳುನಾಡು ಲಾಕಪ್‌ ಡೆತ್: ಪೊಲೀಸ್ ದೌರ್ಜನ್ಯಕ್ಕೆ ಕೊನೆಯೆಂದು? ಮಾತು ಸೋತ ಭಾರತ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...