Homeಕರ್ನಾಟಕಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

- Advertisement -
- Advertisement -

ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದ ರೈತರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಯು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕು ಸೀಬಿ ದೇವಸ್ಥಾನದ ಸಮೀಪದ ಕೆಂಪರಾಯನ ಹಳ್ಳಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಕಾವಲುಗಾರನೊಬ್ಬ ಮಹಿಳೆಯನ್ನು ಎಳೆದಾಡುತ್ತಿದ್ದ ವೇಳೆ ರಕ್ಷಣೆಗೆ ಹೋದ ಆ ಮಹಿಳೆಯ ಪತಿಯ ಕೈ ಕಚ್ಚಿರುವ ಘಟನೆ ಜರುಗಿದೆ.

ಈ ಸಂಬಂಧ ರೈತ ಮಹಿಳೆ ಮತ್ತು ಆಕೆಯ ಪತಿ ಕೋರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿರುವುದು ಮತ್ತು ಮಾರಾಣಾಂತಿಕ ಹಲ್ಲೆ ಬಗ್ಗೆ FIR ದಾಖಲಾಗಿದೆ.

ತುಮಕೂರು ತಾಲೂಕು ಕೆಂಪರಾಯನಹಳ್ಳಿ ಸಮೀಪ ಸರ್ಕಾರಿ ಗೋಮಾಳ ಇದೆ. ಇಲ್ಲಿ 49 ಎಕರೆ ಭೂಮಿಯಲ್ಲಿ ಹತ್ತಾರು ಕುಟುಂಬಗಳು 1970 ರಿಂದಲೂ ಬಗರ್ ಹುಕುಂ ಸಾಗುವಳಿ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಿಂದ ಅರಣ್ಯ ಇಲಾಖೆ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಲೇ ಇದ್ದಾರೆ.

ತಮಗೆ ಹಂಚಿಕೆ ಮಾಡಿದ ಜಮೀನಿನಲ್ಲಿ ನರಸಿಂಹಮೂರ್ತಿ ಮತ್ತು ಲಕ್ಷ್ಮಮ್ಮ ಕುಟುಂಬ ಶೆಡ್ ನಿರ್ಮಾಣ ಮಾಡಿಕೊಂಡಿತ್ತು. ಜೂನ್ 30ರಂದು ಜಮೀನನ್ನು ಉಳುಮೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶೆಡ್ ಮೇಲೆ ಹಾಕಿದ್ದ ತಗಡುಗಳನ್ನು ಕಿತ್ತುಹಾಕಿದ್ದಾರೆ. ಇದನ್ನು ತಡೆಯಲು ಬಂದ ಲಕ್ಷ್ಮಮ್ಮ ಅವರನ್ನು ಫಾರೆಸ್ಟ್ ಗಾರ್ಡ್ ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕರಾದ ಸಿ. ಅಜ್ಜಪ್ಪ ಮತ್ತು ಬಿ.ಉಮೇಶ್ ಅರಣ್ಯ ಸಿಬ್ಬಂದಿಯ ಕ್ರಮವನ್ನು ಪ್ರಶ್ನಿಸಿದರು. ಹಲ್ಲೆಗೊಳಗಾದ ಲಕ್ಷ್ಮಮ್ಮ ಮತ್ತು ನರಸಿಂಹಮೂರ್ತಿ ಅವರನ್ನು ಕರೆದುಕೊಂಡು ಬಂದು ಕೋರಾ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಸಂಚಾಲಕ ಸಿ.ಅಜ್ಜಪ್ಪ, ಸರ್ಕಾರಿ ಗೋಮಾಳದಲ್ಲಿ ಸಾಗುವಳಿದಾರರಿಗೆ ಭೂಮಿ ಹಂಚಿಕೆ ಮಾಡಲಾಗಿದೆ. ಹತ್ತಕ್ಕೂ ಹೆಚ್ಚು ಕುಟುಂಬಗಳು ಸಾಗುವಳಿ ಮಾಡಿಕೊಂಡು ಬರುತ್ತಿವೆ. 98, 99ರಡಿ ರೈತರ ಹೆಸರಿನಲ್ಲಿ ಪಹಣಿಗಳು ಬರುತ್ತಿವೆ. ಅದರಲ್ಲಿ ಗೋಮಾಳ ಎಂದು ಇದ್ದು ಉಳುಮೆ ಮಾಡಿಕೊಂಡು ಬರುತ್ತಿರುವ ಸಾಗುವಳಿದಾರರ ಹೆಸರುಗಳು ಇವೆ. ಹಾಗಿದ್ದರೂ ಅರಣ್ಯ ಇಲಾಖೆ ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ. ಅರಣ್ಯ ಇಲಾಖೆಯ ಬಳಿ ಯಾವುದೇ ದಾಖಲೆ ಇಲ್ಲ. ಇಲ್ಲಿ ಉಳುಮೆ ಮಾಡುತ್ತಿರುವವರು ಬಡವರು, ಭೂರಹಿತರು, ಅತಿಸಣ್ಣ ರೈತರು. ಅರಣ್ಯ ಇಲಾಖೆ ಅನಗತ್ಯ ಕಿರುಕುಳ ನೀಡುತ್ತಿರುವುದು ಸರಿಯಲ್ಲ ಎಂದರು.

ಸಹಸಂಚಾಲಕ ಬಿ.ಉಮೇಶ್ ಮಾತನಾಡಿ ಗೋಮಾಳದಲ್ಲಿ ಒಂದೇ ಒಂದು ಮರಗಿಡ ಇಲ್ಲ. ಸರ್ಕಾರಿ ಗೋಮಾಳದಲ್ಲಿ ಉಳುಮೆ ಮಾಡಬಹುದೆಂಬ ಸರ್ಕಾರದ ಅದೇಶವಿದೆ. ಭೂಮಿ ಹಂಚಿಕೆ ಮಾಡಿದ್ದಾರೆ. ಬೆಳೆಯು ಬೆಳೆಯುತ್ತಿದ್ದಾರೆ. ಆದರೂ ಅರಣ್ಯ ಇಲಾಖೆಯ ಸಿಬ್ಬಂದಿ ರೈತ ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿದ್ದಾರೆ. ಆ ಮಹಿಳೆ ಪ್ರಜ್ಞೆ ತಪ್ಪಿದಾಗ ಪತಿ ನರಸಿಂಹಮೂರ್ತಿ ನೆರವಿಗೆ ಹೋಗಿದ್ದಾರೆ. ಆಗ ಫಾರೆಸ್ಟ್ ಗಾರ್ಡ್ ಬಸವರಾಜು ಕೈಕಚ್ಚಿ ಗಾಯಗೊಳಿಸಿದ್ದು ಇದನ್ನು ಪ್ರಾಂತ ರೈತ ಸಂಘ ಖಂಡಿಸುತ್ತದೆ ಎಂದರು.

ಅರಣ್ಯ ಇಲಾಖೆಯಿಂದ ನಿರಂತರ ಕಿರುಕುಳ ಅನುಭವಿಸುವಂತೆ ಆಗಿದೆ. ನಾವು ಹಿಂದೆ ಹಾಕಿದ್ದ ಗುಡಿಸಲನ್ನು ಸುಟ್ಟುಹಾಕಿದ್ದರು. ಈಗ ಶೆಡ್ ಕೆಡವಿಹಾಕಿದ್ದಾರೆ. ಹೊಲ ಉಳುಮೆ ಮಾಡಲು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ಇದನ್ನು ತಪ್ಪಿಸಬೇಕು ಎಂದು ಬಗರ್ ಹುಕುಂ ಸಾಗುವಳಿದಾರ ರೈತರು ಮನವಿ ಮಾಡಿದ್ದಾರೆ.


ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...