Homeಕರ್ನಾಟಕಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

- Advertisement -
- Advertisement -

ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ ಉಳುಮೆ ಮಾಡುತ್ತಿದ್ದ ರೈತರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಯು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕು ಸೀಬಿ ದೇವಸ್ಥಾನದ ಸಮೀಪದ ಕೆಂಪರಾಯನ ಹಳ್ಳಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಕಾವಲುಗಾರನೊಬ್ಬ ಮಹಿಳೆಯನ್ನು ಎಳೆದಾಡುತ್ತಿದ್ದ ವೇಳೆ ರಕ್ಷಣೆಗೆ ಹೋದ ಆ ಮಹಿಳೆಯ ಪತಿಯ ಕೈ ಕಚ್ಚಿರುವ ಘಟನೆ ಜರುಗಿದೆ.

ಈ ಸಂಬಂಧ ರೈತ ಮಹಿಳೆ ಮತ್ತು ಆಕೆಯ ಪತಿ ಕೋರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿರುವುದು ಮತ್ತು ಮಾರಾಣಾಂತಿಕ ಹಲ್ಲೆ ಬಗ್ಗೆ FIR ದಾಖಲಾಗಿದೆ.

ತುಮಕೂರು ತಾಲೂಕು ಕೆಂಪರಾಯನಹಳ್ಳಿ ಸಮೀಪ ಸರ್ಕಾರಿ ಗೋಮಾಳ ಇದೆ. ಇಲ್ಲಿ 49 ಎಕರೆ ಭೂಮಿಯಲ್ಲಿ ಹತ್ತಾರು ಕುಟುಂಬಗಳು 1970 ರಿಂದಲೂ ಬಗರ್ ಹುಕುಂ ಸಾಗುವಳಿ ಮಾಡಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ಇತ್ತೀಚಿನ ವರ್ಷಗಳಿಂದ ಅರಣ್ಯ ಇಲಾಖೆ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಲೇ ಇದ್ದಾರೆ.

ತಮಗೆ ಹಂಚಿಕೆ ಮಾಡಿದ ಜಮೀನಿನಲ್ಲಿ ನರಸಿಂಹಮೂರ್ತಿ ಮತ್ತು ಲಕ್ಷ್ಮಮ್ಮ ಕುಟುಂಬ ಶೆಡ್ ನಿರ್ಮಾಣ ಮಾಡಿಕೊಂಡಿತ್ತು. ಜೂನ್ 30ರಂದು ಜಮೀನನ್ನು ಉಳುಮೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶೆಡ್ ಮೇಲೆ ಹಾಕಿದ್ದ ತಗಡುಗಳನ್ನು ಕಿತ್ತುಹಾಕಿದ್ದಾರೆ. ಇದನ್ನು ತಡೆಯಲು ಬಂದ ಲಕ್ಷ್ಮಮ್ಮ ಅವರನ್ನು ಫಾರೆಸ್ಟ್ ಗಾರ್ಡ್ ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಫಾರೆಸ್ಟ್ ಗಾರ್ಡ್ ಬಸವರಾಜು ಎಳೆದಾಡಿದ ರಭಸಕ್ಕೆ ಲಕ್ಷ್ಮಮ್ಮ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದರು. ಈ ವೇಳೆ ಪತ್ನಿಯ ನೆರವಿಗೆ ಬಂದ ನರಸಿಂಹಮೂರ್ತಿ ಬಲಗೈ ಅಂಗೈಗೆ ಫಾರೆಸ್ಟ್ ಗಾರ್ಡ್ ಕಚ್ಚಿ ಗಾಯಗೊಳಿಸಿದ್ದಾರೆ ಎಂದು ಆಪಾದಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕರಾದ ಸಿ. ಅಜ್ಜಪ್ಪ ಮತ್ತು ಬಿ.ಉಮೇಶ್ ಅರಣ್ಯ ಸಿಬ್ಬಂದಿಯ ಕ್ರಮವನ್ನು ಪ್ರಶ್ನಿಸಿದರು. ಹಲ್ಲೆಗೊಳಗಾದ ಲಕ್ಷ್ಮಮ್ಮ ಮತ್ತು ನರಸಿಂಹಮೂರ್ತಿ ಅವರನ್ನು ಕರೆದುಕೊಂಡು ಬಂದು ಕೋರಾ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಸಂಚಾಲಕ ಸಿ.ಅಜ್ಜಪ್ಪ, ಸರ್ಕಾರಿ ಗೋಮಾಳದಲ್ಲಿ ಸಾಗುವಳಿದಾರರಿಗೆ ಭೂಮಿ ಹಂಚಿಕೆ ಮಾಡಲಾಗಿದೆ. ಹತ್ತಕ್ಕೂ ಹೆಚ್ಚು ಕುಟುಂಬಗಳು ಸಾಗುವಳಿ ಮಾಡಿಕೊಂಡು ಬರುತ್ತಿವೆ. 98, 99ರಡಿ ರೈತರ ಹೆಸರಿನಲ್ಲಿ ಪಹಣಿಗಳು ಬರುತ್ತಿವೆ. ಅದರಲ್ಲಿ ಗೋಮಾಳ ಎಂದು ಇದ್ದು ಉಳುಮೆ ಮಾಡಿಕೊಂಡು ಬರುತ್ತಿರುವ ಸಾಗುವಳಿದಾರರ ಹೆಸರುಗಳು ಇವೆ. ಹಾಗಿದ್ದರೂ ಅರಣ್ಯ ಇಲಾಖೆ ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ. ಅರಣ್ಯ ಇಲಾಖೆಯ ಬಳಿ ಯಾವುದೇ ದಾಖಲೆ ಇಲ್ಲ. ಇಲ್ಲಿ ಉಳುಮೆ ಮಾಡುತ್ತಿರುವವರು ಬಡವರು, ಭೂರಹಿತರು, ಅತಿಸಣ್ಣ ರೈತರು. ಅರಣ್ಯ ಇಲಾಖೆ ಅನಗತ್ಯ ಕಿರುಕುಳ ನೀಡುತ್ತಿರುವುದು ಸರಿಯಲ್ಲ ಎಂದರು.

ಸಹಸಂಚಾಲಕ ಬಿ.ಉಮೇಶ್ ಮಾತನಾಡಿ ಗೋಮಾಳದಲ್ಲಿ ಒಂದೇ ಒಂದು ಮರಗಿಡ ಇಲ್ಲ. ಸರ್ಕಾರಿ ಗೋಮಾಳದಲ್ಲಿ ಉಳುಮೆ ಮಾಡಬಹುದೆಂಬ ಸರ್ಕಾರದ ಅದೇಶವಿದೆ. ಭೂಮಿ ಹಂಚಿಕೆ ಮಾಡಿದ್ದಾರೆ. ಬೆಳೆಯು ಬೆಳೆಯುತ್ತಿದ್ದಾರೆ. ಆದರೂ ಅರಣ್ಯ ಇಲಾಖೆಯ ಸಿಬ್ಬಂದಿ ರೈತ ಮಹಿಳೆಯನ್ನು ಎಳೆದಾಡಿ ಅವಮಾನ ಮಾಡಿದ್ದಾರೆ. ಆ ಮಹಿಳೆ ಪ್ರಜ್ಞೆ ತಪ್ಪಿದಾಗ ಪತಿ ನರಸಿಂಹಮೂರ್ತಿ ನೆರವಿಗೆ ಹೋಗಿದ್ದಾರೆ. ಆಗ ಫಾರೆಸ್ಟ್ ಗಾರ್ಡ್ ಬಸವರಾಜು ಕೈಕಚ್ಚಿ ಗಾಯಗೊಳಿಸಿದ್ದು ಇದನ್ನು ಪ್ರಾಂತ ರೈತ ಸಂಘ ಖಂಡಿಸುತ್ತದೆ ಎಂದರು.

ಅರಣ್ಯ ಇಲಾಖೆಯಿಂದ ನಿರಂತರ ಕಿರುಕುಳ ಅನುಭವಿಸುವಂತೆ ಆಗಿದೆ. ನಾವು ಹಿಂದೆ ಹಾಕಿದ್ದ ಗುಡಿಸಲನ್ನು ಸುಟ್ಟುಹಾಕಿದ್ದರು. ಈಗ ಶೆಡ್ ಕೆಡವಿಹಾಕಿದ್ದಾರೆ. ಹೊಲ ಉಳುಮೆ ಮಾಡಲು ಅಡ್ಡಿಪಡಿಸುತ್ತಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ಇದನ್ನು ತಪ್ಪಿಸಬೇಕು ಎಂದು ಬಗರ್ ಹುಕುಂ ಸಾಗುವಳಿದಾರ ರೈತರು ಮನವಿ ಮಾಡಿದ್ದಾರೆ.


ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...